ರಾಜಕಾರಣಿಗಳ‌ ಜೊತೆ ಅಧಿಕಾರಿಗಳು ಕೈಜೋಡಿಸಿ ಜನಸಾಮಾನ್ಯರಿಗೆ ತೊಂದರೆ- ಬಿಎಸ್ ಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ನರಸಿಂಹಯ್ಯ ಕಿಡಿ

ಬಿಎಸ್ ಪಿಯನ್ನು ಇಡೀ ಕರ್ನಾಟಕದಲ್ಲಿ ಸದೃಢವಾಗಿ ಬಲಪಡಿಸಲು ಕರ್ನಾಟಕದಲ್ಲಿ ಆರು ವಲಯಗಳನ್ನಾಗಿ ಮಾಡಲಾಗಿದೆ. ಬೂತ್ ಮಟ್ಟದಿಂದ ಪಕ್ಷವನ್ನು ಬಲಪಡಿಸಲು ನಿರ್ಧಾರ ಮಾಡಲಾಗಿದೆ. ಪ್ರತಿ ಹಳ್ಳಿ ಹಳ್ಳಿಗೂ ಹೋಗಿ ಮತದಾನದ ಮಹತ್ವ, ಬಿಎಸ್ ಪಿ ಪಕ್ಷದ ಬಗ್ಗೆ ಜನರಿಗೆ ಅರಿವು ಮೂಡಿಸುವ ಕಾರ್ಯ ಮಾಡಲಾಗುವುದು ಎಂದು ಬಿಎಸ್ ಪಿ ರಾಜ್ಯ ಸಂಯೋಜಕ ಆಶೋಕ್ ಚಕ್ರವರ್ತಿ‌ ಹೇಳಿದರು.

ನಗರದ ಪ್ರವಾಸಿ ಮಂದಿರದಲ್ಲಿ ನಡೆದ ಜಿಲ್ಲಾ‌ ಮಟ್ಟದ ಬಿಎಸ್ ಪಿ ಕಾರ್ಯಕಾರಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ರಾಜ್ಯ ಹಾಗೂ ಕೇಂದ್ರದಲ್ಲಿ ಸ್ವಂತ ಶಕ್ತಿಯಿಂದ ಅಧಿಕಾರ ಪಡೆಯಲು ಹೇಗೆ ಸಿದ್ಧತೆ ಮಾಡಿಕೊಳ್ಳಬೇಕು ಎಂಬುದನ್ನು ಕಾರ್ಯಕರ್ತರಿಗೆ ತಿಳಿಸಿಕೊಡಲಾಗಿದೆ. ಪ್ರಸ್ತುತ ವಿದ್ಯಾವಂತರಿಗೆ ಉದ್ಯೋಗವಿಲ್ಲ. ಈಗಿನ ಸರ್ಕಾರಗಳು ಉದ್ಯೋಗ ಸೃಷ್ಟಿ ಮಾಡುತ್ತಿಲ್ಲ.‌ ಇರುವ ನೌಕರಿಗಳನ್ನು ಸ್ಥಗಿತಗೊಳಿಸುತ್ತಿದ್ದಾರೆ. ಇದರಿಂದ ನಿರುದ್ಯೋಗ ತಾಂಡವಾಡುತ್ತಿದೆ. ಎಲ್ಲವನ್ನೂ ಖಾಸಗಿತನ ಮಾಡಲು ಮುಂದಾಗುತ್ತಿದ್ದಾರೆ.‌ ಖಾಸಗಿಯವರು ಮೀಸಲಾತಿಯನ್ನು ಒಪ್ಪುವುದಿಲ್ಲ. ಇದರಿಂದ‌ ಎಸ್ ಸಿ, ಎಸ್ ಟಿ, ಓಬಿಸಿಯವರಿಗೆ ಉದ್ಯೋಗ ಸಿಗದೇ ಹಾಗೇ ಇರಬೇಕಾಗುತ್ತದೆ‌ ಎಂದು ಹೇಳಿದರು.

ನಮ್ಮನ್ನು ಆಳಿದ ಆಳುತ್ತಿರುವ ಸರ್ಕಾರಗಳು ಎಸ್ ಸಿ, ಎಸ್ ಟಿ, ಓಬಿಸಿಯವರನ್ನು ವೋಟ್ ಬ್ಯಾಂಕ್ ಆಗಿ ಬಳಸಿಕೊಂಡಿವೆ. ಆದರೆ ಬಿಎಸ್ ಪಿ ಅವರಂತೆ ಮಾಡಲ್ಲ. ಎಸ್ ಸಿ, ಎಸ್ ಟಿ, ಓಬಿಸಿಯವರಿಗೆ ಬೇಕಾಗುವಂತ ಸವಲತ್ತುಗಳನ್ನು ಒದಗಿಸಲು ಪ್ರಯತ್ನಿಸುತ್ತದೆ ಎಂದರು.

ಬಿಎಸ್ ಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ನರಸಿಂಹಯ್ಯ ಮಾತನಾಡಿ, ಪಕ್ಷವನ್ನು ಬಲವರ್ಧನೆಗೊಳಿಸಿ, ಮನೆ, ಮನಸ್ಸು, ಮತಗಳ ಪರಿರ್ವತನೆಗೆ ಪಕ್ಷದ ಕಾರ್ಯಕರ್ತರನ್ನು ಸಿದ್ಧಗೊಳಿಸಲಾಗುತ್ತಿದೆ. ಮುಂಬರುವ ಚುನಾವಣೆಗಳಲ್ಲಿ ಸ್ವಂತ ಶಕ್ತಿಯಿಂದ‌ ಸ್ಪರ್ಧಿಸಿ ಅಧಿಕಾರದ ಚುಕ್ಕಾಣಿ‌ ಹಿಡಿಯುತ್ತೇವೆ ಎಂದರು.

ಪ್ರಸ್ತುತ ಸಂದರ್ಭದಲ್ಲಿ ಸರ್ಕಾರಿ ಕಚೇರಿಗಳಲ್ಲಿ ಸಾಮಾನ್ಯಜನರಿಗೆ ಕೆಲಸಗಳು ಮಾಡಿಕೊಡುತ್ತಿಲ್ಲ. ಕೇವಲ ಉಳ್ಳವರಿಗೆ ಮಾತ್ರ ಸರ್ಕಾರಿ ಕಚೇರಿಗಳು ಕೆಲಸ ಮಾಡುತ್ತಿವೆ. ರಾಜಕಾರಣಿಗಳ‌ ಜೊತೆ ಅಧಿಕಾರಿಗಳು ಕೈ ಜೋಡಿಸಿ ಜನರಿಗೆ ತೊಂದರೆ ನೀಡಲಾಗುತ್ತಿದೆ‌. ಇದನ್ನು ಬಿಎಸ್ ಪಿ ಖಂಡಿಸುತ್ತದೆ ಎಂದರು.

ಬಿಎಸ್ ಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಹನುಮಂತರಾಯಪ್ಪ, ಬಿಎಸ್ ಪಿ ರಾಜ್ಯ ಕಾರ್ಯದರ್ಶಿ ಬಂಗಾರಪ್ಪ, ಜಿಲ್ಲಾ‌ ಉಪಾಧ್ಯಕ್ಷ ದೊಡ್ಡಯ್ಯ,‌ ಹೊಸಕೋಟೆ ಬಲರಾಮಚಂದ್ರ, ದೊಡ್ಡಬಳ್ಳಾಪುರ ಪಿಳ್ಳಪ್ಪ, ನೆಲಮಂಗಲ ಮೂರ್ತಿ, ದೇವನಹಳ್ಳಿ ಎಂ.ಡಿ ರಾಮಾನಂಜಿನಪ್ಪ,‌‌ ತಾಲೂಕು ಉಸ್ತುವಾರಿಗಳಾದ ನಂಜಪ್ಪ, ಆರ್.ಸೋಮಶೇಖರ್, ನಾರಾಯಣಸ್ವಾಮಿ‌, ಗಂಗಧಾರಪ್ಪ, ಮಹಿಳಾ‌ ಕಾರ್ಯದರ್ಶಿಗಳಾದ ಸೌಭಾಗ್ಯ, ನಾಗಮಣಿ, ವಿಜಯಲಕ್ಷ್ಮಿ, ಸುವರ್ಣಮ್ಮ ಸೇರಿದಂತೆ ಇತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಗೂಡ್ಸ್ ವಾಹನ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…

59 minutes ago

ಮದ್ಯಪಾನ, ಡ್ರಗ್ಸ್ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ- ಸಚಿವ ಕೆ.ಎಚ್ ಮುನಿಯಪ್ಪ

ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…

1 hour ago

ಅನ್ನದಾಸೋಹ ಮಾಡುವ ಮೂಲಕ ಸಂದೀಪ್ ಹುಟ್ಟುಹಬ್ಬ ಆಚರಿಸಿದ ಅಭಿಮಾನಿಗಳು

ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್‌ಬುಕ್, ಸಿಹಿ,…

4 hours ago

ರೈಲ್ವೆ ನಿಲ್ದಾಣದ ಬಳಿ ನವಜಾತ ಶಿಶುವಿನ ಮೃತದೇಹ ಪತ್ತೆ; ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ

ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…

5 hours ago

ರಾಹುಲ್ ಗಾಂಧಿ ಕುರಿತು ಅವಹೇಳನಕಾರಿ ಹೇಳಿಕೆ ಖಂಡನೆ: ಶಾಸಕ ಯಶ್ ಪಾಲ್ ಆನಂದ್ ಸುವರ್ಣ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…

9 hours ago

ಮಳೆ ಕೈಕೊಟ್ಟು ಮುಂಗಾರು ಬಿತ್ತನೆ ಕುಂಠಿತ: ಶೇ.66ರಷ್ಟು ಮಳೆ ಕೊರತೆ; ಗುರಿಯ ಶೇ.3ರಷ್ಟು ಮಾತ್ರ ಬಿತ್ತನೆ ಪೂರ್ಣ

ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…

13 hours ago