ಬಿಎಸ್ ಪಿಯನ್ನು ಇಡೀ ಕರ್ನಾಟಕದಲ್ಲಿ ಸದೃಢವಾಗಿ ಬಲಪಡಿಸಲು ಕರ್ನಾಟಕದಲ್ಲಿ ಆರು ವಲಯಗಳನ್ನಾಗಿ ಮಾಡಲಾಗಿದೆ. ಬೂತ್ ಮಟ್ಟದಿಂದ ಪಕ್ಷವನ್ನು ಬಲಪಡಿಸಲು ನಿರ್ಧಾರ ಮಾಡಲಾಗಿದೆ. ಪ್ರತಿ ಹಳ್ಳಿ ಹಳ್ಳಿಗೂ ಹೋಗಿ ಮತದಾನದ ಮಹತ್ವ, ಬಿಎಸ್ ಪಿ ಪಕ್ಷದ ಬಗ್ಗೆ ಜನರಿಗೆ ಅರಿವು ಮೂಡಿಸುವ ಕಾರ್ಯ ಮಾಡಲಾಗುವುದು ಎಂದು ಬಿಎಸ್ ಪಿ ರಾಜ್ಯ ಸಂಯೋಜಕ ಆಶೋಕ್ ಚಕ್ರವರ್ತಿ ಹೇಳಿದರು.
ನಗರದ ಪ್ರವಾಸಿ ಮಂದಿರದಲ್ಲಿ ನಡೆದ ಜಿಲ್ಲಾ ಮಟ್ಟದ ಬಿಎಸ್ ಪಿ ಕಾರ್ಯಕಾರಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ರಾಜ್ಯ ಹಾಗೂ ಕೇಂದ್ರದಲ್ಲಿ ಸ್ವಂತ ಶಕ್ತಿಯಿಂದ ಅಧಿಕಾರ ಪಡೆಯಲು ಹೇಗೆ ಸಿದ್ಧತೆ ಮಾಡಿಕೊಳ್ಳಬೇಕು ಎಂಬುದನ್ನು ಕಾರ್ಯಕರ್ತರಿಗೆ ತಿಳಿಸಿಕೊಡಲಾಗಿದೆ. ಪ್ರಸ್ತುತ ವಿದ್ಯಾವಂತರಿಗೆ ಉದ್ಯೋಗವಿಲ್ಲ. ಈಗಿನ ಸರ್ಕಾರಗಳು ಉದ್ಯೋಗ ಸೃಷ್ಟಿ ಮಾಡುತ್ತಿಲ್ಲ. ಇರುವ ನೌಕರಿಗಳನ್ನು ಸ್ಥಗಿತಗೊಳಿಸುತ್ತಿದ್ದಾರೆ. ಇದರಿಂದ ನಿರುದ್ಯೋಗ ತಾಂಡವಾಡುತ್ತಿದೆ. ಎಲ್ಲವನ್ನೂ ಖಾಸಗಿತನ ಮಾಡಲು ಮುಂದಾಗುತ್ತಿದ್ದಾರೆ. ಖಾಸಗಿಯವರು ಮೀಸಲಾತಿಯನ್ನು ಒಪ್ಪುವುದಿಲ್ಲ. ಇದರಿಂದ ಎಸ್ ಸಿ, ಎಸ್ ಟಿ, ಓಬಿಸಿಯವರಿಗೆ ಉದ್ಯೋಗ ಸಿಗದೇ ಹಾಗೇ ಇರಬೇಕಾಗುತ್ತದೆ ಎಂದು ಹೇಳಿದರು.
ನಮ್ಮನ್ನು ಆಳಿದ ಆಳುತ್ತಿರುವ ಸರ್ಕಾರಗಳು ಎಸ್ ಸಿ, ಎಸ್ ಟಿ, ಓಬಿಸಿಯವರನ್ನು ವೋಟ್ ಬ್ಯಾಂಕ್ ಆಗಿ ಬಳಸಿಕೊಂಡಿವೆ. ಆದರೆ ಬಿಎಸ್ ಪಿ ಅವರಂತೆ ಮಾಡಲ್ಲ. ಎಸ್ ಸಿ, ಎಸ್ ಟಿ, ಓಬಿಸಿಯವರಿಗೆ ಬೇಕಾಗುವಂತ ಸವಲತ್ತುಗಳನ್ನು ಒದಗಿಸಲು ಪ್ರಯತ್ನಿಸುತ್ತದೆ ಎಂದರು.
ಬಿಎಸ್ ಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ನರಸಿಂಹಯ್ಯ ಮಾತನಾಡಿ, ಪಕ್ಷವನ್ನು ಬಲವರ್ಧನೆಗೊಳಿಸಿ, ಮನೆ, ಮನಸ್ಸು, ಮತಗಳ ಪರಿರ್ವತನೆಗೆ ಪಕ್ಷದ ಕಾರ್ಯಕರ್ತರನ್ನು ಸಿದ್ಧಗೊಳಿಸಲಾಗುತ್ತಿದೆ. ಮುಂಬರುವ ಚುನಾವಣೆಗಳಲ್ಲಿ ಸ್ವಂತ ಶಕ್ತಿಯಿಂದ ಸ್ಪರ್ಧಿಸಿ ಅಧಿಕಾರದ ಚುಕ್ಕಾಣಿ ಹಿಡಿಯುತ್ತೇವೆ ಎಂದರು.
ಪ್ರಸ್ತುತ ಸಂದರ್ಭದಲ್ಲಿ ಸರ್ಕಾರಿ ಕಚೇರಿಗಳಲ್ಲಿ ಸಾಮಾನ್ಯಜನರಿಗೆ ಕೆಲಸಗಳು ಮಾಡಿಕೊಡುತ್ತಿಲ್ಲ. ಕೇವಲ ಉಳ್ಳವರಿಗೆ ಮಾತ್ರ ಸರ್ಕಾರಿ ಕಚೇರಿಗಳು ಕೆಲಸ ಮಾಡುತ್ತಿವೆ. ರಾಜಕಾರಣಿಗಳ ಜೊತೆ ಅಧಿಕಾರಿಗಳು ಕೈ ಜೋಡಿಸಿ ಜನರಿಗೆ ತೊಂದರೆ ನೀಡಲಾಗುತ್ತಿದೆ. ಇದನ್ನು ಬಿಎಸ್ ಪಿ ಖಂಡಿಸುತ್ತದೆ ಎಂದರು.
ಬಿಎಸ್ ಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಹನುಮಂತರಾಯಪ್ಪ, ಬಿಎಸ್ ಪಿ ರಾಜ್ಯ ಕಾರ್ಯದರ್ಶಿ ಬಂಗಾರಪ್ಪ, ಜಿಲ್ಲಾ ಉಪಾಧ್ಯಕ್ಷ ದೊಡ್ಡಯ್ಯ, ಹೊಸಕೋಟೆ ಬಲರಾಮಚಂದ್ರ, ದೊಡ್ಡಬಳ್ಳಾಪುರ ಪಿಳ್ಳಪ್ಪ, ನೆಲಮಂಗಲ ಮೂರ್ತಿ, ದೇವನಹಳ್ಳಿ ಎಂ.ಡಿ ರಾಮಾನಂಜಿನಪ್ಪ, ತಾಲೂಕು ಉಸ್ತುವಾರಿಗಳಾದ ನಂಜಪ್ಪ, ಆರ್.ಸೋಮಶೇಖರ್, ನಾರಾಯಣಸ್ವಾಮಿ, ಗಂಗಧಾರಪ್ಪ, ಮಹಿಳಾ ಕಾರ್ಯದರ್ಶಿಗಳಾದ ಸೌಭಾಗ್ಯ, ನಾಗಮಣಿ, ವಿಜಯಲಕ್ಷ್ಮಿ, ಸುವರ್ಣಮ್ಮ ಸೇರಿದಂತೆ ಇತರರು ಉಪಸ್ಥಿತರಿದ್ದರು.
ದೊಡ್ಡಬಳ್ಳಾಪುರ: ಒಂದೇ ರಾತ್ರಿ ಎರಡು ಸ್ಥಳಗಳಲ್ಲಿ ಶ್ರೀಗಂಧದ ಮರಗಳನ್ನು ಕಳ್ಳರು ಕತ್ತರಿಸಿ ಕದ್ದೊಯ್ದಿರುವ ಘಟನೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ…
ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಓಬದೇನಹಳ್ಳಿ ರಸ್ತೆಯ ಕಾಂತಿ ಸ್ವೀಟ್ಸ್ ಮುಂಭಾಗ ಸೋಮವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ…
ಬಾಶೆಟ್ಟಿಹಳ್ಳಿ ಬಳಿ ಭೀಕರ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ…
ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹೆಣ್ಣು ಕೊಟ್ಟ ಮಾವನನ್ನೇ ಅಳಿಯ ಕೊಲೆಗೈದ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೇರಳೇಘಟ್ಟ…
ಗೌರವಾನ್ವಿತ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರೇ, ಪ್ರಜಾಪ್ರಭುತ್ವ ಎಂಬ ಪರಿಕಲ್ಪನೆಯ ಅತ್ಯದ್ಭುತ ಫಲಿತಾಂಶವೆಂದರೆ ಯಾವುದೋ ಹಳ್ಳಿಯಲ್ಲಿ, ಎಲ್ಲಿಯೋ ಹುಟ್ಟಿದ…
ದೇವನಹಳ್ಳಿ: ಭಾರತಮಾಲಾ ಪರಿಯೋಜನೆಯಡಿ ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ನಿರ್ಮಾಣಗೊಳ್ಳುತ್ತಿರುವ ಬೆಂಗಳೂರು–ಚೆನ್ನೈ ಎಕ್ಸ್ಪ್ರೆಸ್ವೇ ದೇಶದ ಎರಡು ಪ್ರಮುಖ ಆರ್ಥಿಕ ಶಕ್ತಿ ಕೇಂದ್ರಗಳಾದ ಬೆಂಗಳೂರು…