ರಾಜಕಾರಣಿಗಳ‌ ಜೊತೆ ಅಧಿಕಾರಿಗಳು ಕೈಜೋಡಿಸಿ ಜನಸಾಮಾನ್ಯರಿಗೆ ತೊಂದರೆ- ಬಿಎಸ್ ಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ನರಸಿಂಹಯ್ಯ ಕಿಡಿ

ಬಿಎಸ್ ಪಿಯನ್ನು ಇಡೀ ಕರ್ನಾಟಕದಲ್ಲಿ ಸದೃಢವಾಗಿ ಬಲಪಡಿಸಲು ಕರ್ನಾಟಕದಲ್ಲಿ ಆರು ವಲಯಗಳನ್ನಾಗಿ ಮಾಡಲಾಗಿದೆ. ಬೂತ್ ಮಟ್ಟದಿಂದ ಪಕ್ಷವನ್ನು ಬಲಪಡಿಸಲು ನಿರ್ಧಾರ ಮಾಡಲಾಗಿದೆ. ಪ್ರತಿ ಹಳ್ಳಿ ಹಳ್ಳಿಗೂ ಹೋಗಿ ಮತದಾನದ ಮಹತ್ವ, ಬಿಎಸ್ ಪಿ ಪಕ್ಷದ ಬಗ್ಗೆ ಜನರಿಗೆ ಅರಿವು ಮೂಡಿಸುವ ಕಾರ್ಯ ಮಾಡಲಾಗುವುದು ಎಂದು ಬಿಎಸ್ ಪಿ ರಾಜ್ಯ ಸಂಯೋಜಕ ಆಶೋಕ್ ಚಕ್ರವರ್ತಿ‌ ಹೇಳಿದರು.

ನಗರದ ಪ್ರವಾಸಿ ಮಂದಿರದಲ್ಲಿ ನಡೆದ ಜಿಲ್ಲಾ‌ ಮಟ್ಟದ ಬಿಎಸ್ ಪಿ ಕಾರ್ಯಕಾರಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ರಾಜ್ಯ ಹಾಗೂ ಕೇಂದ್ರದಲ್ಲಿ ಸ್ವಂತ ಶಕ್ತಿಯಿಂದ ಅಧಿಕಾರ ಪಡೆಯಲು ಹೇಗೆ ಸಿದ್ಧತೆ ಮಾಡಿಕೊಳ್ಳಬೇಕು ಎಂಬುದನ್ನು ಕಾರ್ಯಕರ್ತರಿಗೆ ತಿಳಿಸಿಕೊಡಲಾಗಿದೆ. ಪ್ರಸ್ತುತ ವಿದ್ಯಾವಂತರಿಗೆ ಉದ್ಯೋಗವಿಲ್ಲ. ಈಗಿನ ಸರ್ಕಾರಗಳು ಉದ್ಯೋಗ ಸೃಷ್ಟಿ ಮಾಡುತ್ತಿಲ್ಲ.‌ ಇರುವ ನೌಕರಿಗಳನ್ನು ಸ್ಥಗಿತಗೊಳಿಸುತ್ತಿದ್ದಾರೆ. ಇದರಿಂದ ನಿರುದ್ಯೋಗ ತಾಂಡವಾಡುತ್ತಿದೆ. ಎಲ್ಲವನ್ನೂ ಖಾಸಗಿತನ ಮಾಡಲು ಮುಂದಾಗುತ್ತಿದ್ದಾರೆ.‌ ಖಾಸಗಿಯವರು ಮೀಸಲಾತಿಯನ್ನು ಒಪ್ಪುವುದಿಲ್ಲ. ಇದರಿಂದ‌ ಎಸ್ ಸಿ, ಎಸ್ ಟಿ, ಓಬಿಸಿಯವರಿಗೆ ಉದ್ಯೋಗ ಸಿಗದೇ ಹಾಗೇ ಇರಬೇಕಾಗುತ್ತದೆ‌ ಎಂದು ಹೇಳಿದರು.

ನಮ್ಮನ್ನು ಆಳಿದ ಆಳುತ್ತಿರುವ ಸರ್ಕಾರಗಳು ಎಸ್ ಸಿ, ಎಸ್ ಟಿ, ಓಬಿಸಿಯವರನ್ನು ವೋಟ್ ಬ್ಯಾಂಕ್ ಆಗಿ ಬಳಸಿಕೊಂಡಿವೆ. ಆದರೆ ಬಿಎಸ್ ಪಿ ಅವರಂತೆ ಮಾಡಲ್ಲ. ಎಸ್ ಸಿ, ಎಸ್ ಟಿ, ಓಬಿಸಿಯವರಿಗೆ ಬೇಕಾಗುವಂತ ಸವಲತ್ತುಗಳನ್ನು ಒದಗಿಸಲು ಪ್ರಯತ್ನಿಸುತ್ತದೆ ಎಂದರು.

ಬಿಎಸ್ ಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ನರಸಿಂಹಯ್ಯ ಮಾತನಾಡಿ, ಪಕ್ಷವನ್ನು ಬಲವರ್ಧನೆಗೊಳಿಸಿ, ಮನೆ, ಮನಸ್ಸು, ಮತಗಳ ಪರಿರ್ವತನೆಗೆ ಪಕ್ಷದ ಕಾರ್ಯಕರ್ತರನ್ನು ಸಿದ್ಧಗೊಳಿಸಲಾಗುತ್ತಿದೆ. ಮುಂಬರುವ ಚುನಾವಣೆಗಳಲ್ಲಿ ಸ್ವಂತ ಶಕ್ತಿಯಿಂದ‌ ಸ್ಪರ್ಧಿಸಿ ಅಧಿಕಾರದ ಚುಕ್ಕಾಣಿ‌ ಹಿಡಿಯುತ್ತೇವೆ ಎಂದರು.

ಪ್ರಸ್ತುತ ಸಂದರ್ಭದಲ್ಲಿ ಸರ್ಕಾರಿ ಕಚೇರಿಗಳಲ್ಲಿ ಸಾಮಾನ್ಯಜನರಿಗೆ ಕೆಲಸಗಳು ಮಾಡಿಕೊಡುತ್ತಿಲ್ಲ. ಕೇವಲ ಉಳ್ಳವರಿಗೆ ಮಾತ್ರ ಸರ್ಕಾರಿ ಕಚೇರಿಗಳು ಕೆಲಸ ಮಾಡುತ್ತಿವೆ. ರಾಜಕಾರಣಿಗಳ‌ ಜೊತೆ ಅಧಿಕಾರಿಗಳು ಕೈ ಜೋಡಿಸಿ ಜನರಿಗೆ ತೊಂದರೆ ನೀಡಲಾಗುತ್ತಿದೆ‌. ಇದನ್ನು ಬಿಎಸ್ ಪಿ ಖಂಡಿಸುತ್ತದೆ ಎಂದರು.

ಬಿಎಸ್ ಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಹನುಮಂತರಾಯಪ್ಪ, ಬಿಎಸ್ ಪಿ ರಾಜ್ಯ ಕಾರ್ಯದರ್ಶಿ ಬಂಗಾರಪ್ಪ, ಜಿಲ್ಲಾ‌ ಉಪಾಧ್ಯಕ್ಷ ದೊಡ್ಡಯ್ಯ,‌ ಹೊಸಕೋಟೆ ಬಲರಾಮಚಂದ್ರ, ದೊಡ್ಡಬಳ್ಳಾಪುರ ಪಿಳ್ಳಪ್ಪ, ನೆಲಮಂಗಲ ಮೂರ್ತಿ, ದೇವನಹಳ್ಳಿ ಎಂ.ಡಿ ರಾಮಾನಂಜಿನಪ್ಪ,‌‌ ತಾಲೂಕು ಉಸ್ತುವಾರಿಗಳಾದ ನಂಜಪ್ಪ, ಆರ್.ಸೋಮಶೇಖರ್, ನಾರಾಯಣಸ್ವಾಮಿ‌, ಗಂಗಧಾರಪ್ಪ, ಮಹಿಳಾ‌ ಕಾರ್ಯದರ್ಶಿಗಳಾದ ಸೌಭಾಗ್ಯ, ನಾಗಮಣಿ, ವಿಜಯಲಕ್ಷ್ಮಿ, ಸುವರ್ಣಮ್ಮ ಸೇರಿದಂತೆ ಇತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಜನರನ್ನು ತಾಲೂಕು ಕಚೇರಿಗೆ ಅಲೆದಾಟ ತಪ್ಪಿಸಿ ಸ್ಥಳದಲ್ಲೇ ಸಮಸ್ಯೆ ಪರಿಹರಿಸಿ- ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…

13 hours ago

ಭಾರತಕ್ಕೆ ಕ್ಸಿ ಜಿನ್‌ಪಿಂಗ್ ಭೇಟಿ: ಮೋದಿ–ಕ್ಸಿ ದ್ವಿಪಕ್ಷೀಯ ಮಾತುಕತೆ ಇಂದು

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…

16 hours ago

ಮಧುರೆ ದೇವಾಲಯದ ಬಳಿ ಮೇಲ್ಸೇತುವೆ ಅವ್ಯವಸ್ಥೆ: ಮೇಲಕ್ಕೆ ಚಾಚಿರುವ ಕಂಬಿಗಳಿಂದ ವಾಹನ ಸವಾರರಿಗೆ ತೊಂದರೆ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…

23 hours ago

ನಾಯಿ ಕಡಿತದ ಆತಂಕಕ್ಕೆ ಲಸಿಕೆಯ ಕವಚ: ರೇಬೀಸ್ ನಿಯಂತ್ರಣಕ್ಕೆ 32 ಸಾವಿರ ಲಸಿಕೆ

ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…

1 day ago

2028ರ ಚುನಾವಣೆಗೆ ಜಾಲತಾಣವೇ ಅಸ್ತ್ರ- ಸಿಎಂಆರ್ ಶ್ರೀನಾಥ್

ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…

2 days ago

ಗಣೇಶ ವಿಸರ್ಜನೆ ವೇಳೆ ಮುಂಜಾಗ್ರತೆ ವಹಿಸಲು ರೈತ ಸಂಘ ಒತ್ತಾಯ: ಕೃಷಿ ಹೊಂಡ, ಕೆರೆ-ಕುಂಟೆಗಳಲ್ಲಿ ವಿಸರ್ಜನೆಗೆ ಕಡಿವಾಣ ಹಾಕಿ: ಜಿಲ್ಲಾಧಿಕಾರಿಗೆ ಮನವಿ

ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…

2 days ago