ರಾಜಕಾರಣಿಗಳ‌ ಜೊತೆ ಅಧಿಕಾರಿಗಳು ಕೈಜೋಡಿಸಿ ಜನಸಾಮಾನ್ಯರಿಗೆ ತೊಂದರೆ- ಬಿಎಸ್ ಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ನರಸಿಂಹಯ್ಯ ಕಿಡಿ

ಬಿಎಸ್ ಪಿಯನ್ನು ಇಡೀ ಕರ್ನಾಟಕದಲ್ಲಿ ಸದೃಢವಾಗಿ ಬಲಪಡಿಸಲು ಕರ್ನಾಟಕದಲ್ಲಿ ಆರು ವಲಯಗಳನ್ನಾಗಿ ಮಾಡಲಾಗಿದೆ. ಬೂತ್ ಮಟ್ಟದಿಂದ ಪಕ್ಷವನ್ನು ಬಲಪಡಿಸಲು ನಿರ್ಧಾರ ಮಾಡಲಾಗಿದೆ. ಪ್ರತಿ ಹಳ್ಳಿ ಹಳ್ಳಿಗೂ ಹೋಗಿ ಮತದಾನದ ಮಹತ್ವ, ಬಿಎಸ್ ಪಿ ಪಕ್ಷದ ಬಗ್ಗೆ ಜನರಿಗೆ ಅರಿವು ಮೂಡಿಸುವ ಕಾರ್ಯ ಮಾಡಲಾಗುವುದು ಎಂದು ಬಿಎಸ್ ಪಿ ರಾಜ್ಯ ಸಂಯೋಜಕ ಆಶೋಕ್ ಚಕ್ರವರ್ತಿ‌ ಹೇಳಿದರು.

ನಗರದ ಪ್ರವಾಸಿ ಮಂದಿರದಲ್ಲಿ ನಡೆದ ಜಿಲ್ಲಾ‌ ಮಟ್ಟದ ಬಿಎಸ್ ಪಿ ಕಾರ್ಯಕಾರಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ರಾಜ್ಯ ಹಾಗೂ ಕೇಂದ್ರದಲ್ಲಿ ಸ್ವಂತ ಶಕ್ತಿಯಿಂದ ಅಧಿಕಾರ ಪಡೆಯಲು ಹೇಗೆ ಸಿದ್ಧತೆ ಮಾಡಿಕೊಳ್ಳಬೇಕು ಎಂಬುದನ್ನು ಕಾರ್ಯಕರ್ತರಿಗೆ ತಿಳಿಸಿಕೊಡಲಾಗಿದೆ. ಪ್ರಸ್ತುತ ವಿದ್ಯಾವಂತರಿಗೆ ಉದ್ಯೋಗವಿಲ್ಲ. ಈಗಿನ ಸರ್ಕಾರಗಳು ಉದ್ಯೋಗ ಸೃಷ್ಟಿ ಮಾಡುತ್ತಿಲ್ಲ.‌ ಇರುವ ನೌಕರಿಗಳನ್ನು ಸ್ಥಗಿತಗೊಳಿಸುತ್ತಿದ್ದಾರೆ. ಇದರಿಂದ ನಿರುದ್ಯೋಗ ತಾಂಡವಾಡುತ್ತಿದೆ. ಎಲ್ಲವನ್ನೂ ಖಾಸಗಿತನ ಮಾಡಲು ಮುಂದಾಗುತ್ತಿದ್ದಾರೆ.‌ ಖಾಸಗಿಯವರು ಮೀಸಲಾತಿಯನ್ನು ಒಪ್ಪುವುದಿಲ್ಲ. ಇದರಿಂದ‌ ಎಸ್ ಸಿ, ಎಸ್ ಟಿ, ಓಬಿಸಿಯವರಿಗೆ ಉದ್ಯೋಗ ಸಿಗದೇ ಹಾಗೇ ಇರಬೇಕಾಗುತ್ತದೆ‌ ಎಂದು ಹೇಳಿದರು.

ನಮ್ಮನ್ನು ಆಳಿದ ಆಳುತ್ತಿರುವ ಸರ್ಕಾರಗಳು ಎಸ್ ಸಿ, ಎಸ್ ಟಿ, ಓಬಿಸಿಯವರನ್ನು ವೋಟ್ ಬ್ಯಾಂಕ್ ಆಗಿ ಬಳಸಿಕೊಂಡಿವೆ. ಆದರೆ ಬಿಎಸ್ ಪಿ ಅವರಂತೆ ಮಾಡಲ್ಲ. ಎಸ್ ಸಿ, ಎಸ್ ಟಿ, ಓಬಿಸಿಯವರಿಗೆ ಬೇಕಾಗುವಂತ ಸವಲತ್ತುಗಳನ್ನು ಒದಗಿಸಲು ಪ್ರಯತ್ನಿಸುತ್ತದೆ ಎಂದರು.

ಬಿಎಸ್ ಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ನರಸಿಂಹಯ್ಯ ಮಾತನಾಡಿ, ಪಕ್ಷವನ್ನು ಬಲವರ್ಧನೆಗೊಳಿಸಿ, ಮನೆ, ಮನಸ್ಸು, ಮತಗಳ ಪರಿರ್ವತನೆಗೆ ಪಕ್ಷದ ಕಾರ್ಯಕರ್ತರನ್ನು ಸಿದ್ಧಗೊಳಿಸಲಾಗುತ್ತಿದೆ. ಮುಂಬರುವ ಚುನಾವಣೆಗಳಲ್ಲಿ ಸ್ವಂತ ಶಕ್ತಿಯಿಂದ‌ ಸ್ಪರ್ಧಿಸಿ ಅಧಿಕಾರದ ಚುಕ್ಕಾಣಿ‌ ಹಿಡಿಯುತ್ತೇವೆ ಎಂದರು.

ಪ್ರಸ್ತುತ ಸಂದರ್ಭದಲ್ಲಿ ಸರ್ಕಾರಿ ಕಚೇರಿಗಳಲ್ಲಿ ಸಾಮಾನ್ಯಜನರಿಗೆ ಕೆಲಸಗಳು ಮಾಡಿಕೊಡುತ್ತಿಲ್ಲ. ಕೇವಲ ಉಳ್ಳವರಿಗೆ ಮಾತ್ರ ಸರ್ಕಾರಿ ಕಚೇರಿಗಳು ಕೆಲಸ ಮಾಡುತ್ತಿವೆ. ರಾಜಕಾರಣಿಗಳ‌ ಜೊತೆ ಅಧಿಕಾರಿಗಳು ಕೈ ಜೋಡಿಸಿ ಜನರಿಗೆ ತೊಂದರೆ ನೀಡಲಾಗುತ್ತಿದೆ‌. ಇದನ್ನು ಬಿಎಸ್ ಪಿ ಖಂಡಿಸುತ್ತದೆ ಎಂದರು.

ಬಿಎಸ್ ಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಹನುಮಂತರಾಯಪ್ಪ, ಬಿಎಸ್ ಪಿ ರಾಜ್ಯ ಕಾರ್ಯದರ್ಶಿ ಬಂಗಾರಪ್ಪ, ಜಿಲ್ಲಾ‌ ಉಪಾಧ್ಯಕ್ಷ ದೊಡ್ಡಯ್ಯ,‌ ಹೊಸಕೋಟೆ ಬಲರಾಮಚಂದ್ರ, ದೊಡ್ಡಬಳ್ಳಾಪುರ ಪಿಳ್ಳಪ್ಪ, ನೆಲಮಂಗಲ ಮೂರ್ತಿ, ದೇವನಹಳ್ಳಿ ಎಂ.ಡಿ ರಾಮಾನಂಜಿನಪ್ಪ,‌‌ ತಾಲೂಕು ಉಸ್ತುವಾರಿಗಳಾದ ನಂಜಪ್ಪ, ಆರ್.ಸೋಮಶೇಖರ್, ನಾರಾಯಣಸ್ವಾಮಿ‌, ಗಂಗಧಾರಪ್ಪ, ಮಹಿಳಾ‌ ಕಾರ್ಯದರ್ಶಿಗಳಾದ ಸೌಭಾಗ್ಯ, ನಾಗಮಣಿ, ವಿಜಯಲಕ್ಷ್ಮಿ, ಸುವರ್ಣಮ್ಮ ಸೇರಿದಂತೆ ಇತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ತಿಪ್ಪೂರು ವಿಎಸ್ ಎಸ್ ಎನ್ ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ

ದೊಡ್ಡಬಳ್ಳಾಪುರ ತಾಲೂಕಿನ ತಿಪ್ಪೂರು ವ್ಯವಸಾಯ ಸೇವಾ ಸಹಕಾರ ಸಂಘ(ವಿಎಸ್ಎಸ್ ಎನ್) ಚುನಾವಣೆ ನಡೆದಿದ್ದು, ವಿಎಸ್ಎಸ್ ಎನ್ ನ ನೂತನ ಅಧ್ಯಕ್ಷರಾಗಿ…

4 hours ago

ಹಕ್ಕಿಜ್ವರ ಶಂಕೆ: ನವಿಲುಗಳ ಮಾರಣ ಹೋಮ…

ನೆಲಮಂಗಲ: ನೆಲಮಂಗಲದಲ್ಲಿ ನವಿಲುಗಳ ಸಾಮೂಹಿಕ ಸಾವು ಪ್ರಕರಣ ಬೆಳಕಿಗೆ ಬಂದಿದೆ. ಹಕ್ಕಿಜ್ವರ (Bird Flu)ಶಂಕೆಯಿಂದ ಸುಮಾರು 10-15 ನವಿಲುಗಳು ಸಾವನ್ನಪ್ಪಿದ…

5 hours ago

ಮೇ.21ಕ್ಕೆ ಭೂಸ್ವಾಧೀನ ವಿರೋಧಿಸಿ ಡಿಸಿ ಕಚೇರಿಗೆ ಟ್ರ್ಯಾಕರ್ ಮೆರವಣಿಗೆ

ದೊಡ್ಡಬೆಳವಂಗಲ ಹೋಬಳಿಯ 2100 ಎಕರೆಯ ಭೂಸ್ವಾಧೀನ ವಿರೋಧಿಸಿ ಜಿಲ್ಲಾಧಿಕಾರಿ ಕಚೇರಿಗೆ ದೊಡ್ಡಬೆಳವಂಗಲ,‌ ಚಿಕ್ಕಬೆಳವಂಗಲ, ಸೊಣ್ಣೇನಹಳ್ಳಿ, ರಾಂಪುರ, ನಾರನಹಳ್ಳಿ ಗ್ರಾಮಗಳ ರೈತರಿಂದ…

6 hours ago

ಸ್ನೇಹಿತನ ಬರ್ತಡೇ ಪಾರ್ಟಿಗೆ ಬಂದಿದ್ದ ಯುವಕ ಈಜುಕೊಳಕ್ಕೆ ಬಿದ್ದು ಸಾವು

ದೊಡ್ಡಬಳ್ಳಾಪುರ: ಸ್ನೇಹಿತನ ಬರ್ತಡೇ ಪಾರ್ಟಿಗೆಂದು ಖಾಸಗಿ ರೆಸಾರ್ಟ್‌ಗೆ ಬಂದಿದ್ದ ಯುವಕನೊಬ್ಬ ನಿದ್ದೆಗಣ್ಣಿನಲ್ಲಿ ಈಜುಕೊಳಕ್ಕೆ ಬಿದ್ದು ಮೃತಪಟ್ಟ ಘಟನೆ ದೊಡ್ಡಬಳ್ಳಾಪುರ ತಾಲೂಕಿನ…

8 hours ago

ದಶಕಗಳುರುಳಿದರೂ ಬೆಂಗಳೂರು ಗ್ರಾಮಾಂತರ ಜಿಲ್ಲೆಗಿಲ್ಲ ಜಿಲ್ಲಾ ಕೇಂದ್ರ

ರಾಜ್ಯ ರಾಜಧಾನಿ ಬೆಂಗಳೂರಿಗೆ ಪಕ್ಕದಲ್ಲೇ ಇರುವ ಜಿಲ್ಲೆ ಎಂದರೆ ಅದು ಬೆಂಗಳೂರು ಗ್ರಾಮಾಂತರ ಜಿಲ್ಲೆ. ಕೈಗಾರಿಕಾ ಬೆಳವಣಿಗೆ, ವೇಗವಾದ ನಗರೀಕರಣ,…

18 hours ago

ದೇವೇಗೌಡರ ವ್ಯಕ್ತಿತ್ವವನ್ನು ವಿಮರ್ಶೆಗೆ ಒಳಪಡಿಸುವುದು ಸಹ ಅಷ್ಟೇ ಸಂಕೀರ್ಣ….

ಸನ್ಮಾನ್ಯ ಶ್ರೀ ಎಚ್. ಡಿ. ದೇವೇಗೌಡ,... 94, ನಾಟ್ ಔಟ್, ಶತಕಕ್ಕೆ 6 ಮಾತ್ರ ಬಾಕಿ, ಅವರು ಶತಕವನ್ನು ಪೂರೈಸಲಿ…

18 hours ago