Categories: ಕೋಲಾರ

ರಾಜಕಾರಣ ದಂಧೆಯಾಗಿದೆ: ಹಣ ಹೆಂಡ ಇಲ್ಲದ ರಾಜಕಾರಣ ಬರಬೇಕಾಗಿದೆ- ಮಹಿಮಾ ಜೆ ಪಟೇಲ್

ಕೋಲಾರ: ಇವತ್ತಿನ ಚುನಾವಣೆ ಎಂಬುದು ಈಗ ದಂಧೆಯಾಗಿ ಮಾರ್ಪಟ್ಟಿದೆ. ದುಡ್ಡಿಲ್ಲದೆ ರಾಜಕಾರಣ ಇಲ್ಲ ಎಂಬಂಥ ಪರಿಸ್ಥಿತಿಗೆ ತಂದಿಟ್ಟಿದ್ದಾರೆ. ದುಡ್ಡು ಹಾಕಿ ದುಡ್ಡು ತೆಗೆಯುವ ಕೆಲಸವಾಗಿದೆ. ಜಾತಿ, ಧರ್ಮದ ಹೆಸರಿನಲ್ಲಿ ರಾಜಕಾರಣ ಮಾಡಲಾಗುತ್ತಿದೆ ಎಂದು ಜೆಡಿಯು ರಾಜ್ಯ ಅಧ್ಯಕ್ಷ ಹಾಗೂ ಮಾಜಿ ಶಾಸಕ ಮಹಿಮಾ ಜೆ ಪಟೇಲ್ ಬೇಸರ ವ್ಯಕ್ತಪಡಿಸಿದರು.

ತಾಲ್ಲೂಕಿನ‌ ಕಲ್ಲಂಡೂರು ಗ್ರಾಮದಲ್ಲಿರುವ ಡಾ.ನಾಗರಾಜ್ ಅವರ ನಿವಾಸದಲ್ಲಿ ಭಾನುವಾರ ಡಾ.ನಾಗರಾಜ್ ಗೆಳೆಯರ ಬಳಗ ಉದ್ಘಾಟಿಸಿ ಮಾತನಾಡಿದ ಅವರು, ರಾಜಕಾರಣ ಎಂದರೆ ಬರೀ ಚುನಾವಣೆ ಅಲ್ಲ. ಉತ್ತಮ ಆಡಳಿತ ಬರಬೇಕು. ಹಣ, ಹೆಂಡ ಇಲ್ಲದೆ ಚುನಾವಣೆ ಗೆಲ್ಲಬಹುದು ಎಂಬ ಸಾಧ್ಯತೆ ಇದೆ ಎಂಬುದನ್ನು ತೋರಿಸಬೇಕು ಎಂದರು.

ದೇಶದಲ್ಲಿ 1947ರಲ್ಲಿ ಸ್ವಾತಂತ್ರ್ಯ ಸಿಕ್ಕಿದ್ದರೂ ಒಂದು ರೀತಿಯ ಬಂಧನವನ್ನು ಅನುಭವಿಸುತ್ತಿದ್ದೇವೆ. ಕೃಷಿಗೆ ವಿಪರೀತ ರಾಸಾಯನಿಕ ಗೊಬ್ಬರ ಬಳಸುತ್ತಿದ್ದೇವೆ, ಪರಿಸರ ಹಾಳಾಗುತ್ತಿದೆ. ಗ್ಲೋಬಲ್ ವಾರ್ಮಿಂಗ್ ( ಜಾಗತಿಕ ತಾಪಮಾನ) ಹೋಗಿ ಗ್ಲೋಬಲ್ ಬರ್ನಿಂಗ್‌ (ಜಾಗತಿಕ ಸುಡುವಿಕೆ) ಆಗಿದೆ. ಈ ಸಂಬಂಧ ಈಗಲೇ ಎಚ್ಚೆತ್ತುಕೊಳ್ಳದಿದ್ದರೆ ಮುಂದೆ ಅಪಾಯ ಕಾದಿದೆ ಎಂದು ಎಚ್ಚರಿಸಿದರು.

ವಿಕಾಸ ಕ್ರಾಂತಿ ಮಾಡಬೇಕು ಸಂಪೂರ್ಣ ಸಾವಯವ ರಾಜ್ಯ ಆಗಬೇಕು. ಆಡಳಿತ, ಶಿಕ್ಷಣ, ಕೃಷಿ ಆರೋಗ್ಯ, ಪರಿಸರ ಕ್ಷೇತ್ರದಲ್ಲಿ ಹೊಸ ಚಳವಳಿ ಆರಂಭಿಸಬೇಕು. ರಾಜ್ಯದಲ್ಲಿ ಮೂರು ಸಾವಿರ ಮಠಗಳಿವೆ. ಅವರು ನಮ್ಮ ಜೊತೆ ಬರುತ್ತಾರೆ ಎಂಬ ವಿಶ್ವಾಸವಿದೆ ಎಂದು ಹೇಳಿದರು.

ಮಾರ್ಚ್ 24ಕ್ಕೆ ಕೊಟ್ಟೂರಿನಲ್ಲಿ ಪಾದಯಾತ್ರೆ ಮಾಡುತ್ತಿದ್ದು, ಸ್ವಾಮೀಜಿಗಳು ಭಾಗವಹಿಸುತ್ತಿದ್ದಾರೆ‌. ರಾಜ್ಯದಲ್ಲಿ ಸೂಕ್ಷ್ಮತೆ ಉಳಿಸಿಕೊಂಡ ಶಾಸಕರು ಇದ್ದು, ಅವರ ಸಮ್ಮುಖದಲ್ಲಿ ಏಪ್ರಿಲ್ 3, 4ರಂದು ಸಾಣೇಹಳ್ಳಿಯಲ್ಲಿ ಪಕ್ಷಾತೀತವಾಗಿ ಚುನಾವಣಾ ಸುಧಾರಣೆ ಬಗ್ಗೆ ಚರ್ಚೆ ಹಮ್ಮಿಕೊಳ್ಳಲಾಗಿದೆ ಎಂದರು.

ಮುಂಬರಲಿರುವ 2025 ರ ಅಗ್ನೇಯ ಪದವೀಧರ ಕ್ಷೇತ್ರದ ವಿಧಾನ ಪರಿಷತ್ ಗೆ ನಡೆಯಲಿರುವ ಚುನಾವಣೆಯಲ್ಲಿ ಜೆಡಿಯು ಪಕ್ಷದಿಂದ ಅಭ್ಯರ್ಥಿಯಾಗಿ ಡಾ.ನಾಗರಾಜ್ ಅವರಂಥವರನ್ನು ಮಾಡಲಾಗಿದೆ ಅವರನ್ನು ಗೆಲ್ಲಿಸಬೇಕು‌ ಇದಕ್ಕೆ ಸಮಾನ ಮನಸ್ಕ ಗೆಳೆಯರು ಎಲ್ಲರೂ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಕಲ್ಲಂಡೂರು ಡಾ.ಕೆ.ನಾಗರಾಜ್ ಮಾತನಾಡಿ, ಜೆಡಿಯು ಪಕ್ಷದಿಂದ
ವಿಧಾನ ಪರಿಷತ್ ಹೋಗಲು ಪದವೀಧರ ಕ್ಷೇತ್ರದಿಂದ ಟಿಕೆಟ್ ನೀಡಿ ಅವಕಾಶ ‌ಮಾಡಿಕೊಟ್ಡಿದ್ದಾರೆ. ಹಣ ಇಲ್ಲದ ಚುನಾವಣೆ ಗೆಲ್ಲಬಹುದು ಎಂಬುದನ್ನು ತೋರಿಸಿಕೊಡುತ್ತೇವೆ. ಹಣ ಖರ್ಚು ಮಾಡದೆ ಎದುರಿಸಿದಾಗ ಯಾವುದೇ ಭಯ ಇರುವುದಿಲ್ಲ. ಪಾರದರ್ಶಕ ರಾಜಕಾರಣ‌ಕ್ಕೆ ಒತ್ತು ನೀಡಲಾಗುವುದು ಎಂದರು.

ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಲಕ್ಷ್ಮೀನಾರಾಯಣ್, ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ತಬಲ ನಾರಾಯಣಪ್ಪ, ದಕ್ಷಿಣ ಭಾರತ ಕುಂಬಾರ ಕುಲಾಲ್ ಫೆಡರೇಶನ್ ಅಧ್ಯಕ್ಷ ಶಿವಕುಮಾರ್ ಚೌಡಶೆಟ್ಟಿ, ಕಸ್ತೂರಿ ಜನಪರ ವೇದಿಕೆ ರಾಜ್ಯ ಅಧ್ಯಕ್ಷ ನಿಲೇಶ್ ಗೌಡ, ಕಸಾಪ ಮಾಜಿ ಅಧ್ಯಕ್ಷ ನಾಗನಂದ್ ಕೆಂಪರಾಜು, ಮಾಜಿ ಗೌರವ ಕಾರ್ಯದರ್ಶಿ ರತ್ನಪ್ಪ, ಸಿನಿಮಾ ನಟ ವಿಧ್ಯಾಬಾರಣ್, ಹೈಕೋರ್ಟ್ ವಕೀಲ ನಟರಾಜ್, ಲಕ್ಷ್ಮೀ ಗ್ರೂಪ್‌ ಆಫ್ ಹಾಸ್ಪಿಟಲ್ ಮುಖ್ಯಸ್ಥ ಡಾ.ಸಾಂಭಶಿವ, ಬಿಜೆಪಿ ಮುಖಂಡ ಪ್ರಕಾಶ್ ಮುಖಂಡರಾದ ಲಕನ್, ಗಂಗಾರಾಜು, ರಂಗನಾಥ್ ಮುಂತಾದವರು ಇದ್ದರು

 

Ramesh Babu

Journalist

Recent Posts

ಯುವ ಆಪದ್ ಮಿತ್ರ ಯೋಜನೆ: ವಿಪತ್ತು ನಿರ್ವಹಣೆ ಕುರಿತು ಒಂದು ವಾರ ತರಬೇತಿ ಶಿಬಿರ

ಯುವ ಆಪದ್ ಮಿತ್ರ ಯೋಜನೆಯ ಅಂಗವಾಗಿ ಕಾಲೇಜಿನ ವಿದ್ಯಾರ್ಥಿಗಳು ದೊಡ್ಡಬಳ್ಳಾಪುರದ ಅನಿಬೆಸೆಂಟ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ತರಬೇತಿ ಮತ್ತು…

5 hours ago

ಮಹಿಳೆಯರನ್ನು ಮಂಚಕ್ಕೆ ಕರೆದ ಆರೋಪ: ಮೂಡುಬಿದಿರೆ ಪೊಲೀಸ್ ಇನ್ಸ್‌ಪೆಕ್ಟರ್ ಸಂದೇಶ್ ಪಿ.ಜಿ ಅಮಾನತು

ಪೊಲೀಸ್ ಠಾಣೆಗೆ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ದೂರು ಕೊಡಲು ಬಂದ ಮಹಿಳೆಯರನ್ನು ಮಂಚಕ್ಕೆ ಕರೆಯುತ್ತಾರೆ ಎಂಬ ಆರೋಪದ ಮೇರೆಗೆ ಮೂಡುಬಿದಿರೆ…

6 hours ago

ಮುಂಗಾರು ಪೂರ್ವ ಮಳೆ: ಮಳೆಯಲ್ಲಿ ಸಾಲುಗಟ್ಟಿ ನಿಂತ ರಾಗಿ‌ ಮಾರಾಟ ಮಾಡಲು ಬಂದ ಟ್ರ್ಯಾಕ್ಟರ್ ಗಳು

ಇಂದು ಸಂಜೆ ಸುಮಾರು 4:30ರಲ್ಲಿ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಪ್ರಾರಂಭವಾದ ಮಳೆಯು ಸತತವಾಗಿ 7ಗಂಟೆಯವರೆಗೆ ಬಿದ್ದಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿತು. ಅದೇರೀತಿ…

7 hours ago

ರಣ ಬಿಸಿಲಿನಿಂದ ಕಂಗೆಟ್ಟಿದ್ದ ಜನ: ಧರೆಗಿಳಿದ ವರ್ಷದ ಮೊದಲ ಮಳೆ: ಬಿಸಿಲಿನ ಬೇಗೆಗೆ ಬೆಂದಿದ್ದ ಭೂಮಿ ತಂಪು ತಂಪು: ಗುಡುಗು ಸಹಿತ ಬಿದ್ದ ಮಳೆ ಹನಿಗೆ ಜನ ಫುಲ್ ಖುಷ್

ಬಿಸಿಲಿನ ತಾಪ ಹೆಚ್ಚಾಗುತ್ತಿದ್ದ ಸಂದರ್ಭದಲ್ಲಿ ದೊಡ್ಡಬಳ್ಳಾಪುರ ನಗರದ ಕೆಲವು ಪ್ರದೇಶಗಳಲ್ಲಿ ಮಂಗಳವಾರ ಸಂಜೆ ವರ್ಷದ ಮೊದಲ ಮಳೆ ಸುರಿಯಿತು. ಬಂಗಾಳ…

8 hours ago

ನಾಳೆ (ಮಾ.18) ಎಸ್.ಎಸ್.ಎಲ್.ಸಿ ಪರೀಕ್ಷೆ -01: ಬೆಂ. ಗ್ರಾ ಜಿಲ್ಲೆಯಲ್ಲಿ 14,314 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ

2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಮಾರ್ಚ್ 18 ಬುಧವಾರದಿಂದ ಏಪ್ರಿಲ್ 02 ಗುರುವಾರದ ವರೆಗೆ ಬೆಳಿಗ್ಗೆ 10:15 ಗಂಟೆಯಿಂದ ಮಧ್ಯಾಹ್ನ…

10 hours ago

ನೂತನ ಶಾಲಾ ಕಟ್ಟಡ ಮತ್ತು ಅಂಗನವಾಡಿ ಕೇಂದ್ರ ಉದ್ಘಾಟನೆ

ದೊಡ್ಡಬಳ್ಳಾಪುರ: ನಗರದ 4 ನೇ ವಾರ್ಡ್‌ನ ವಿನಾಯಕ ನಗರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಅಸ್ಟಿಮೊ ಫೈ ಕಂಪನಿಯ…

16 hours ago