Categories: ಕೋಲಾರ

ರಾಜಕಾರಣ ದಂಧೆಯಾಗಿದೆ: ಹಣ ಹೆಂಡ ಇಲ್ಲದ ರಾಜಕಾರಣ ಬರಬೇಕಾಗಿದೆ- ಮಹಿಮಾ ಜೆ ಪಟೇಲ್

ಕೋಲಾರ: ಇವತ್ತಿನ ಚುನಾವಣೆ ಎಂಬುದು ಈಗ ದಂಧೆಯಾಗಿ ಮಾರ್ಪಟ್ಟಿದೆ. ದುಡ್ಡಿಲ್ಲದೆ ರಾಜಕಾರಣ ಇಲ್ಲ ಎಂಬಂಥ ಪರಿಸ್ಥಿತಿಗೆ ತಂದಿಟ್ಟಿದ್ದಾರೆ. ದುಡ್ಡು ಹಾಕಿ ದುಡ್ಡು ತೆಗೆಯುವ ಕೆಲಸವಾಗಿದೆ. ಜಾತಿ, ಧರ್ಮದ ಹೆಸರಿನಲ್ಲಿ ರಾಜಕಾರಣ ಮಾಡಲಾಗುತ್ತಿದೆ ಎಂದು ಜೆಡಿಯು ರಾಜ್ಯ ಅಧ್ಯಕ್ಷ ಹಾಗೂ ಮಾಜಿ ಶಾಸಕ ಮಹಿಮಾ ಜೆ ಪಟೇಲ್ ಬೇಸರ ವ್ಯಕ್ತಪಡಿಸಿದರು.

ತಾಲ್ಲೂಕಿನ‌ ಕಲ್ಲಂಡೂರು ಗ್ರಾಮದಲ್ಲಿರುವ ಡಾ.ನಾಗರಾಜ್ ಅವರ ನಿವಾಸದಲ್ಲಿ ಭಾನುವಾರ ಡಾ.ನಾಗರಾಜ್ ಗೆಳೆಯರ ಬಳಗ ಉದ್ಘಾಟಿಸಿ ಮಾತನಾಡಿದ ಅವರು, ರಾಜಕಾರಣ ಎಂದರೆ ಬರೀ ಚುನಾವಣೆ ಅಲ್ಲ. ಉತ್ತಮ ಆಡಳಿತ ಬರಬೇಕು. ಹಣ, ಹೆಂಡ ಇಲ್ಲದೆ ಚುನಾವಣೆ ಗೆಲ್ಲಬಹುದು ಎಂಬ ಸಾಧ್ಯತೆ ಇದೆ ಎಂಬುದನ್ನು ತೋರಿಸಬೇಕು ಎಂದರು.

ದೇಶದಲ್ಲಿ 1947ರಲ್ಲಿ ಸ್ವಾತಂತ್ರ್ಯ ಸಿಕ್ಕಿದ್ದರೂ ಒಂದು ರೀತಿಯ ಬಂಧನವನ್ನು ಅನುಭವಿಸುತ್ತಿದ್ದೇವೆ. ಕೃಷಿಗೆ ವಿಪರೀತ ರಾಸಾಯನಿಕ ಗೊಬ್ಬರ ಬಳಸುತ್ತಿದ್ದೇವೆ, ಪರಿಸರ ಹಾಳಾಗುತ್ತಿದೆ. ಗ್ಲೋಬಲ್ ವಾರ್ಮಿಂಗ್ ( ಜಾಗತಿಕ ತಾಪಮಾನ) ಹೋಗಿ ಗ್ಲೋಬಲ್ ಬರ್ನಿಂಗ್‌ (ಜಾಗತಿಕ ಸುಡುವಿಕೆ) ಆಗಿದೆ. ಈ ಸಂಬಂಧ ಈಗಲೇ ಎಚ್ಚೆತ್ತುಕೊಳ್ಳದಿದ್ದರೆ ಮುಂದೆ ಅಪಾಯ ಕಾದಿದೆ ಎಂದು ಎಚ್ಚರಿಸಿದರು.

ವಿಕಾಸ ಕ್ರಾಂತಿ ಮಾಡಬೇಕು ಸಂಪೂರ್ಣ ಸಾವಯವ ರಾಜ್ಯ ಆಗಬೇಕು. ಆಡಳಿತ, ಶಿಕ್ಷಣ, ಕೃಷಿ ಆರೋಗ್ಯ, ಪರಿಸರ ಕ್ಷೇತ್ರದಲ್ಲಿ ಹೊಸ ಚಳವಳಿ ಆರಂಭಿಸಬೇಕು. ರಾಜ್ಯದಲ್ಲಿ ಮೂರು ಸಾವಿರ ಮಠಗಳಿವೆ. ಅವರು ನಮ್ಮ ಜೊತೆ ಬರುತ್ತಾರೆ ಎಂಬ ವಿಶ್ವಾಸವಿದೆ ಎಂದು ಹೇಳಿದರು.

ಮಾರ್ಚ್ 24ಕ್ಕೆ ಕೊಟ್ಟೂರಿನಲ್ಲಿ ಪಾದಯಾತ್ರೆ ಮಾಡುತ್ತಿದ್ದು, ಸ್ವಾಮೀಜಿಗಳು ಭಾಗವಹಿಸುತ್ತಿದ್ದಾರೆ‌. ರಾಜ್ಯದಲ್ಲಿ ಸೂಕ್ಷ್ಮತೆ ಉಳಿಸಿಕೊಂಡ ಶಾಸಕರು ಇದ್ದು, ಅವರ ಸಮ್ಮುಖದಲ್ಲಿ ಏಪ್ರಿಲ್ 3, 4ರಂದು ಸಾಣೇಹಳ್ಳಿಯಲ್ಲಿ ಪಕ್ಷಾತೀತವಾಗಿ ಚುನಾವಣಾ ಸುಧಾರಣೆ ಬಗ್ಗೆ ಚರ್ಚೆ ಹಮ್ಮಿಕೊಳ್ಳಲಾಗಿದೆ ಎಂದರು.

ಮುಂಬರಲಿರುವ 2025 ರ ಅಗ್ನೇಯ ಪದವೀಧರ ಕ್ಷೇತ್ರದ ವಿಧಾನ ಪರಿಷತ್ ಗೆ ನಡೆಯಲಿರುವ ಚುನಾವಣೆಯಲ್ಲಿ ಜೆಡಿಯು ಪಕ್ಷದಿಂದ ಅಭ್ಯರ್ಥಿಯಾಗಿ ಡಾ.ನಾಗರಾಜ್ ಅವರಂಥವರನ್ನು ಮಾಡಲಾಗಿದೆ ಅವರನ್ನು ಗೆಲ್ಲಿಸಬೇಕು‌ ಇದಕ್ಕೆ ಸಮಾನ ಮನಸ್ಕ ಗೆಳೆಯರು ಎಲ್ಲರೂ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಕಲ್ಲಂಡೂರು ಡಾ.ಕೆ.ನಾಗರಾಜ್ ಮಾತನಾಡಿ, ಜೆಡಿಯು ಪಕ್ಷದಿಂದ
ವಿಧಾನ ಪರಿಷತ್ ಹೋಗಲು ಪದವೀಧರ ಕ್ಷೇತ್ರದಿಂದ ಟಿಕೆಟ್ ನೀಡಿ ಅವಕಾಶ ‌ಮಾಡಿಕೊಟ್ಡಿದ್ದಾರೆ. ಹಣ ಇಲ್ಲದ ಚುನಾವಣೆ ಗೆಲ್ಲಬಹುದು ಎಂಬುದನ್ನು ತೋರಿಸಿಕೊಡುತ್ತೇವೆ. ಹಣ ಖರ್ಚು ಮಾಡದೆ ಎದುರಿಸಿದಾಗ ಯಾವುದೇ ಭಯ ಇರುವುದಿಲ್ಲ. ಪಾರದರ್ಶಕ ರಾಜಕಾರಣ‌ಕ್ಕೆ ಒತ್ತು ನೀಡಲಾಗುವುದು ಎಂದರು.

ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಲಕ್ಷ್ಮೀನಾರಾಯಣ್, ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ತಬಲ ನಾರಾಯಣಪ್ಪ, ದಕ್ಷಿಣ ಭಾರತ ಕುಂಬಾರ ಕುಲಾಲ್ ಫೆಡರೇಶನ್ ಅಧ್ಯಕ್ಷ ಶಿವಕುಮಾರ್ ಚೌಡಶೆಟ್ಟಿ, ಕಸ್ತೂರಿ ಜನಪರ ವೇದಿಕೆ ರಾಜ್ಯ ಅಧ್ಯಕ್ಷ ನಿಲೇಶ್ ಗೌಡ, ಕಸಾಪ ಮಾಜಿ ಅಧ್ಯಕ್ಷ ನಾಗನಂದ್ ಕೆಂಪರಾಜು, ಮಾಜಿ ಗೌರವ ಕಾರ್ಯದರ್ಶಿ ರತ್ನಪ್ಪ, ಸಿನಿಮಾ ನಟ ವಿಧ್ಯಾಬಾರಣ್, ಹೈಕೋರ್ಟ್ ವಕೀಲ ನಟರಾಜ್, ಲಕ್ಷ್ಮೀ ಗ್ರೂಪ್‌ ಆಫ್ ಹಾಸ್ಪಿಟಲ್ ಮುಖ್ಯಸ್ಥ ಡಾ.ಸಾಂಭಶಿವ, ಬಿಜೆಪಿ ಮುಖಂಡ ಪ್ರಕಾಶ್ ಮುಖಂಡರಾದ ಲಕನ್, ಗಂಗಾರಾಜು, ರಂಗನಾಥ್ ಮುಂತಾದವರು ಇದ್ದರು

 

Ramesh Babu

Journalist

Recent Posts

ನಾಯಕರಣ್ಣ ನಾಯಕರು, ಇವರೇ ನಮ್ಮ ನಾಯಕರು…..

ನಮ್ಮ ನಾಯಕರು ಮತ್ತು ಉಗ್ರ ಧರ್ಮ ಹಾಗು ರಾಷ್ಟ್ರೀಯವಾದ..... ನಾಯಕರಣ್ಣ ನಾಯಕರು, ಇವರೇ ನಮ್ಮ ನಾಯಕರು..... ತಾವೇ ಸೃಷ್ಟಿಸಿಕೊಂಡ, ನಾವೇ…

28 minutes ago

“ದೊಡ್ಡಬಳ್ಳಾಪುರ ಸ್ಯಾರಿ ಸಂತೆ” ರಘು ದೀಕ್ಷಿತ್ ಸಂಗೀತದೊಂದಿಗೆ ತೆರೆ: ಮಹಿಳೆಯರ ಮನ ಗೆದ್ದ ಸ್ಯಾರಿ ಸಂತೆ: 2 ಕೋಟಿಗೂ ಅಧಿಕ ವಹಿವಾಟು

ಕಳೆದ ಮೂರು ದಿನಗಳಿಂದ ನಡೆದ "ದೊಡ್ಡಬಳ್ಳಾಪುರ ಸ್ಯಾರಿ ಸಂತೆ"ಗೆ ಭಾನುವಾರ ಅದ್ಧೂರಿಯಾಗಿ ತೆರೆ ಕಂಡಿತು. ಮೂರು ದಿನಗಳ ಕಾಲ ಲಕ್ಷಾಂತರ…

11 hours ago

ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿ ವಿಡಿಯೋ ಮಾಡಿ ಮಾರಾಟ ಮಾಡುತ್ತಿದ್ದ ದಂಪತಿಗೆ ಮರಣದಂಡನೆ ವಿಧಿಸಿದ ನ್ಯಾಯಾಲಯ.!

ಉತ್ತರಪ್ರದೇಶ : ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ…

18 hours ago

ಲೋಕಸೇವಾನಿರತ ಡಿ. ಕೊಂಗಾಡಿಯಪ್ಪ ದೊಡ್ಡಬಳ್ಳಾಪುರ ನಗರದ ಸಮಗ್ರ ಅಭಿವೃದ್ಧಿಯ ಹರಿಕಾರ- ಡಿ.ಪಿ.ಆಂಜನೇಯ

ಪ್ರಾಥಮಿಕ ಶಾಲಾ ಶಿಕ್ಷಕರಾಗಿದ್ದ ಲೋಕಸೇವಾನಿರತ ಡಿ.ಕೊಂಗಾಡಿಯಪ್ಪ ಅವರು ತಮ್ಮ ಸೇವಾ ಮನೋಭಾವದಿಂದ ಸರ್ವಜನ ಮಾನ್ಯರಾಗಿದ್ದರು ಎಂದು ಕನ್ನಡ ಜಾಗೃತ ಪರಿಷತ್ತು…

19 hours ago

ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ‘ಅನ್ನಭಾಗ್ಯ’ ಯೋಜನೆಯ ಅಕ್ಕಿ ಜಪ್ತಿ

ಕುಮಟಾ: ಬಡವರ ಹಸಿವು ನೀಗಿಸಲು ಸರ್ಕಾರ ನೀಡುವ 'ಅನ್ನಭಾಗ್ಯ' ಯೋಜನೆಯ ಅಕ್ಕಿಯನ್ನು ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಗೋಡೌನ್ ಮೇಲೆ ಕುಮಟಾ ತಹಶೀಲ್ದಾರ್…

20 hours ago

ವಿರೋಧ ಲೆಕ್ಕಿಸದೆ ಪ್ರೀತಿಸಿ ಮದುವೆಯಾದ ಯುವತಿ…ಅಳಿಯನ ಮನೆಗೆ ಬೆಂಕಿ ಹಚ್ಚಿದ ಮಾವ…

ಮನೆಯವರ ವಿರೋಧ ಲೆಕ್ಕಿಸದೆ ಪ್ರೀತಿಸಿದ ಯುವಕನ ಮದುವೆ ಆದ ಹಿನ್ನಲೆ ಸಿಡಿದೆದ್ದ ಯುವತಿ ತಂದೆ ಅಳಿಯನ ಮನೆಗೆ ಬೆಂಕಿ ಹಚ್ಚಿ…

21 hours ago