Categories: ಕೋಲಾರ

ರಾಜಕಾರಣ ದಂಧೆಯಾಗಿದೆ: ಹಣ ಹೆಂಡ ಇಲ್ಲದ ರಾಜಕಾರಣ ಬರಬೇಕಾಗಿದೆ- ಮಹಿಮಾ ಜೆ ಪಟೇಲ್

ಕೋಲಾರ: ಇವತ್ತಿನ ಚುನಾವಣೆ ಎಂಬುದು ಈಗ ದಂಧೆಯಾಗಿ ಮಾರ್ಪಟ್ಟಿದೆ. ದುಡ್ಡಿಲ್ಲದೆ ರಾಜಕಾರಣ ಇಲ್ಲ ಎಂಬಂಥ ಪರಿಸ್ಥಿತಿಗೆ ತಂದಿಟ್ಟಿದ್ದಾರೆ. ದುಡ್ಡು ಹಾಕಿ ದುಡ್ಡು ತೆಗೆಯುವ ಕೆಲಸವಾಗಿದೆ. ಜಾತಿ, ಧರ್ಮದ ಹೆಸರಿನಲ್ಲಿ ರಾಜಕಾರಣ ಮಾಡಲಾಗುತ್ತಿದೆ ಎಂದು ಜೆಡಿಯು ರಾಜ್ಯ ಅಧ್ಯಕ್ಷ ಹಾಗೂ ಮಾಜಿ ಶಾಸಕ ಮಹಿಮಾ ಜೆ ಪಟೇಲ್ ಬೇಸರ ವ್ಯಕ್ತಪಡಿಸಿದರು.

ತಾಲ್ಲೂಕಿನ‌ ಕಲ್ಲಂಡೂರು ಗ್ರಾಮದಲ್ಲಿರುವ ಡಾ.ನಾಗರಾಜ್ ಅವರ ನಿವಾಸದಲ್ಲಿ ಭಾನುವಾರ ಡಾ.ನಾಗರಾಜ್ ಗೆಳೆಯರ ಬಳಗ ಉದ್ಘಾಟಿಸಿ ಮಾತನಾಡಿದ ಅವರು, ರಾಜಕಾರಣ ಎಂದರೆ ಬರೀ ಚುನಾವಣೆ ಅಲ್ಲ. ಉತ್ತಮ ಆಡಳಿತ ಬರಬೇಕು. ಹಣ, ಹೆಂಡ ಇಲ್ಲದೆ ಚುನಾವಣೆ ಗೆಲ್ಲಬಹುದು ಎಂಬ ಸಾಧ್ಯತೆ ಇದೆ ಎಂಬುದನ್ನು ತೋರಿಸಬೇಕು ಎಂದರು.

ದೇಶದಲ್ಲಿ 1947ರಲ್ಲಿ ಸ್ವಾತಂತ್ರ್ಯ ಸಿಕ್ಕಿದ್ದರೂ ಒಂದು ರೀತಿಯ ಬಂಧನವನ್ನು ಅನುಭವಿಸುತ್ತಿದ್ದೇವೆ. ಕೃಷಿಗೆ ವಿಪರೀತ ರಾಸಾಯನಿಕ ಗೊಬ್ಬರ ಬಳಸುತ್ತಿದ್ದೇವೆ, ಪರಿಸರ ಹಾಳಾಗುತ್ತಿದೆ. ಗ್ಲೋಬಲ್ ವಾರ್ಮಿಂಗ್ ( ಜಾಗತಿಕ ತಾಪಮಾನ) ಹೋಗಿ ಗ್ಲೋಬಲ್ ಬರ್ನಿಂಗ್‌ (ಜಾಗತಿಕ ಸುಡುವಿಕೆ) ಆಗಿದೆ. ಈ ಸಂಬಂಧ ಈಗಲೇ ಎಚ್ಚೆತ್ತುಕೊಳ್ಳದಿದ್ದರೆ ಮುಂದೆ ಅಪಾಯ ಕಾದಿದೆ ಎಂದು ಎಚ್ಚರಿಸಿದರು.

ವಿಕಾಸ ಕ್ರಾಂತಿ ಮಾಡಬೇಕು ಸಂಪೂರ್ಣ ಸಾವಯವ ರಾಜ್ಯ ಆಗಬೇಕು. ಆಡಳಿತ, ಶಿಕ್ಷಣ, ಕೃಷಿ ಆರೋಗ್ಯ, ಪರಿಸರ ಕ್ಷೇತ್ರದಲ್ಲಿ ಹೊಸ ಚಳವಳಿ ಆರಂಭಿಸಬೇಕು. ರಾಜ್ಯದಲ್ಲಿ ಮೂರು ಸಾವಿರ ಮಠಗಳಿವೆ. ಅವರು ನಮ್ಮ ಜೊತೆ ಬರುತ್ತಾರೆ ಎಂಬ ವಿಶ್ವಾಸವಿದೆ ಎಂದು ಹೇಳಿದರು.

ಮಾರ್ಚ್ 24ಕ್ಕೆ ಕೊಟ್ಟೂರಿನಲ್ಲಿ ಪಾದಯಾತ್ರೆ ಮಾಡುತ್ತಿದ್ದು, ಸ್ವಾಮೀಜಿಗಳು ಭಾಗವಹಿಸುತ್ತಿದ್ದಾರೆ‌. ರಾಜ್ಯದಲ್ಲಿ ಸೂಕ್ಷ್ಮತೆ ಉಳಿಸಿಕೊಂಡ ಶಾಸಕರು ಇದ್ದು, ಅವರ ಸಮ್ಮುಖದಲ್ಲಿ ಏಪ್ರಿಲ್ 3, 4ರಂದು ಸಾಣೇಹಳ್ಳಿಯಲ್ಲಿ ಪಕ್ಷಾತೀತವಾಗಿ ಚುನಾವಣಾ ಸುಧಾರಣೆ ಬಗ್ಗೆ ಚರ್ಚೆ ಹಮ್ಮಿಕೊಳ್ಳಲಾಗಿದೆ ಎಂದರು.

ಮುಂಬರಲಿರುವ 2025 ರ ಅಗ್ನೇಯ ಪದವೀಧರ ಕ್ಷೇತ್ರದ ವಿಧಾನ ಪರಿಷತ್ ಗೆ ನಡೆಯಲಿರುವ ಚುನಾವಣೆಯಲ್ಲಿ ಜೆಡಿಯು ಪಕ್ಷದಿಂದ ಅಭ್ಯರ್ಥಿಯಾಗಿ ಡಾ.ನಾಗರಾಜ್ ಅವರಂಥವರನ್ನು ಮಾಡಲಾಗಿದೆ ಅವರನ್ನು ಗೆಲ್ಲಿಸಬೇಕು‌ ಇದಕ್ಕೆ ಸಮಾನ ಮನಸ್ಕ ಗೆಳೆಯರು ಎಲ್ಲರೂ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಕಲ್ಲಂಡೂರು ಡಾ.ಕೆ.ನಾಗರಾಜ್ ಮಾತನಾಡಿ, ಜೆಡಿಯು ಪಕ್ಷದಿಂದ
ವಿಧಾನ ಪರಿಷತ್ ಹೋಗಲು ಪದವೀಧರ ಕ್ಷೇತ್ರದಿಂದ ಟಿಕೆಟ್ ನೀಡಿ ಅವಕಾಶ ‌ಮಾಡಿಕೊಟ್ಡಿದ್ದಾರೆ. ಹಣ ಇಲ್ಲದ ಚುನಾವಣೆ ಗೆಲ್ಲಬಹುದು ಎಂಬುದನ್ನು ತೋರಿಸಿಕೊಡುತ್ತೇವೆ. ಹಣ ಖರ್ಚು ಮಾಡದೆ ಎದುರಿಸಿದಾಗ ಯಾವುದೇ ಭಯ ಇರುವುದಿಲ್ಲ. ಪಾರದರ್ಶಕ ರಾಜಕಾರಣ‌ಕ್ಕೆ ಒತ್ತು ನೀಡಲಾಗುವುದು ಎಂದರು.

ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಲಕ್ಷ್ಮೀನಾರಾಯಣ್, ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ತಬಲ ನಾರಾಯಣಪ್ಪ, ದಕ್ಷಿಣ ಭಾರತ ಕುಂಬಾರ ಕುಲಾಲ್ ಫೆಡರೇಶನ್ ಅಧ್ಯಕ್ಷ ಶಿವಕುಮಾರ್ ಚೌಡಶೆಟ್ಟಿ, ಕಸ್ತೂರಿ ಜನಪರ ವೇದಿಕೆ ರಾಜ್ಯ ಅಧ್ಯಕ್ಷ ನಿಲೇಶ್ ಗೌಡ, ಕಸಾಪ ಮಾಜಿ ಅಧ್ಯಕ್ಷ ನಾಗನಂದ್ ಕೆಂಪರಾಜು, ಮಾಜಿ ಗೌರವ ಕಾರ್ಯದರ್ಶಿ ರತ್ನಪ್ಪ, ಸಿನಿಮಾ ನಟ ವಿಧ್ಯಾಬಾರಣ್, ಹೈಕೋರ್ಟ್ ವಕೀಲ ನಟರಾಜ್, ಲಕ್ಷ್ಮೀ ಗ್ರೂಪ್‌ ಆಫ್ ಹಾಸ್ಪಿಟಲ್ ಮುಖ್ಯಸ್ಥ ಡಾ.ಸಾಂಭಶಿವ, ಬಿಜೆಪಿ ಮುಖಂಡ ಪ್ರಕಾಶ್ ಮುಖಂಡರಾದ ಲಕನ್, ಗಂಗಾರಾಜು, ರಂಗನಾಥ್ ಮುಂತಾದವರು ಇದ್ದರು

 

Ramesh Babu

Journalist

Recent Posts

ದೊಡ್ಡಬಳ್ಳಾಪುರದಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ

ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…

46 minutes ago

ಘಾಟಿ ಕ್ಷೇತ್ರದಲ್ಲಿ ವರಮಹಾಲಕ್ಷ್ಮಿ ಸಂಭ್ರಮ; ಮಹಿಳೆಯರಿಗೆ ಬಳೆ, ಅರಶಿನ–ಕುಂಕುಮ ವಿತರಣೆ

ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…

1 hour ago

ವರಮಹಾಲಕ್ಷ್ಮಿ ಹಬ್ಬ…..

ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…

14 hours ago

ಸುಮಾರು 500 ಕೋಟಿ ಮೌಲ್ಯದ ಜಮೀನು ಖಾತೆ ಬದಲಾವಣೆ ಆರೋಪ: ದೊಡ್ಡಬಳ್ಳಾಪುರ ಉಪವಿಭಾಗದ ಹಿಂದಿನ ಎಸಿ ದುರ್ಗಾಶ್ರೀ ಹಾಗೂ ಕಚೇರಿ ಸಿಬ್ಬಂದಿ ವಿರುದ್ದ ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲು

ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…

1 day ago

ಹೂ ಕೀಳುವಾಗ ಹಾವು ಕಚ್ಚಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…

1 day ago

ದೇವರಾಜ ಅರಸು ಅವರ ಆಶಯಗಳಿಗೆ ಧ್ವನಿಯಾಗೋಣ-ಡಿಸಿ ಡಾ. ಕೆ.ಎನ್ ಅನುರಾಧ

ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…

1 day ago