Categories: ಕೋಲಾರ

ರಾಜಕಾರಣ ದಂಧೆಯಾಗಿದೆ: ಹಣ ಹೆಂಡ ಇಲ್ಲದ ರಾಜಕಾರಣ ಬರಬೇಕಾಗಿದೆ- ಮಹಿಮಾ ಜೆ ಪಟೇಲ್

ಕೋಲಾರ: ಇವತ್ತಿನ ಚುನಾವಣೆ ಎಂಬುದು ಈಗ ದಂಧೆಯಾಗಿ ಮಾರ್ಪಟ್ಟಿದೆ. ದುಡ್ಡಿಲ್ಲದೆ ರಾಜಕಾರಣ ಇಲ್ಲ ಎಂಬಂಥ ಪರಿಸ್ಥಿತಿಗೆ ತಂದಿಟ್ಟಿದ್ದಾರೆ. ದುಡ್ಡು ಹಾಕಿ ದುಡ್ಡು ತೆಗೆಯುವ ಕೆಲಸವಾಗಿದೆ. ಜಾತಿ, ಧರ್ಮದ ಹೆಸರಿನಲ್ಲಿ ರಾಜಕಾರಣ ಮಾಡಲಾಗುತ್ತಿದೆ ಎಂದು ಜೆಡಿಯು ರಾಜ್ಯ ಅಧ್ಯಕ್ಷ ಹಾಗೂ ಮಾಜಿ ಶಾಸಕ ಮಹಿಮಾ ಜೆ ಪಟೇಲ್ ಬೇಸರ ವ್ಯಕ್ತಪಡಿಸಿದರು.

ತಾಲ್ಲೂಕಿನ‌ ಕಲ್ಲಂಡೂರು ಗ್ರಾಮದಲ್ಲಿರುವ ಡಾ.ನಾಗರಾಜ್ ಅವರ ನಿವಾಸದಲ್ಲಿ ಭಾನುವಾರ ಡಾ.ನಾಗರಾಜ್ ಗೆಳೆಯರ ಬಳಗ ಉದ್ಘಾಟಿಸಿ ಮಾತನಾಡಿದ ಅವರು, ರಾಜಕಾರಣ ಎಂದರೆ ಬರೀ ಚುನಾವಣೆ ಅಲ್ಲ. ಉತ್ತಮ ಆಡಳಿತ ಬರಬೇಕು. ಹಣ, ಹೆಂಡ ಇಲ್ಲದೆ ಚುನಾವಣೆ ಗೆಲ್ಲಬಹುದು ಎಂಬ ಸಾಧ್ಯತೆ ಇದೆ ಎಂಬುದನ್ನು ತೋರಿಸಬೇಕು ಎಂದರು.

ದೇಶದಲ್ಲಿ 1947ರಲ್ಲಿ ಸ್ವಾತಂತ್ರ್ಯ ಸಿಕ್ಕಿದ್ದರೂ ಒಂದು ರೀತಿಯ ಬಂಧನವನ್ನು ಅನುಭವಿಸುತ್ತಿದ್ದೇವೆ. ಕೃಷಿಗೆ ವಿಪರೀತ ರಾಸಾಯನಿಕ ಗೊಬ್ಬರ ಬಳಸುತ್ತಿದ್ದೇವೆ, ಪರಿಸರ ಹಾಳಾಗುತ್ತಿದೆ. ಗ್ಲೋಬಲ್ ವಾರ್ಮಿಂಗ್ ( ಜಾಗತಿಕ ತಾಪಮಾನ) ಹೋಗಿ ಗ್ಲೋಬಲ್ ಬರ್ನಿಂಗ್‌ (ಜಾಗತಿಕ ಸುಡುವಿಕೆ) ಆಗಿದೆ. ಈ ಸಂಬಂಧ ಈಗಲೇ ಎಚ್ಚೆತ್ತುಕೊಳ್ಳದಿದ್ದರೆ ಮುಂದೆ ಅಪಾಯ ಕಾದಿದೆ ಎಂದು ಎಚ್ಚರಿಸಿದರು.

ವಿಕಾಸ ಕ್ರಾಂತಿ ಮಾಡಬೇಕು ಸಂಪೂರ್ಣ ಸಾವಯವ ರಾಜ್ಯ ಆಗಬೇಕು. ಆಡಳಿತ, ಶಿಕ್ಷಣ, ಕೃಷಿ ಆರೋಗ್ಯ, ಪರಿಸರ ಕ್ಷೇತ್ರದಲ್ಲಿ ಹೊಸ ಚಳವಳಿ ಆರಂಭಿಸಬೇಕು. ರಾಜ್ಯದಲ್ಲಿ ಮೂರು ಸಾವಿರ ಮಠಗಳಿವೆ. ಅವರು ನಮ್ಮ ಜೊತೆ ಬರುತ್ತಾರೆ ಎಂಬ ವಿಶ್ವಾಸವಿದೆ ಎಂದು ಹೇಳಿದರು.

ಮಾರ್ಚ್ 24ಕ್ಕೆ ಕೊಟ್ಟೂರಿನಲ್ಲಿ ಪಾದಯಾತ್ರೆ ಮಾಡುತ್ತಿದ್ದು, ಸ್ವಾಮೀಜಿಗಳು ಭಾಗವಹಿಸುತ್ತಿದ್ದಾರೆ‌. ರಾಜ್ಯದಲ್ಲಿ ಸೂಕ್ಷ್ಮತೆ ಉಳಿಸಿಕೊಂಡ ಶಾಸಕರು ಇದ್ದು, ಅವರ ಸಮ್ಮುಖದಲ್ಲಿ ಏಪ್ರಿಲ್ 3, 4ರಂದು ಸಾಣೇಹಳ್ಳಿಯಲ್ಲಿ ಪಕ್ಷಾತೀತವಾಗಿ ಚುನಾವಣಾ ಸುಧಾರಣೆ ಬಗ್ಗೆ ಚರ್ಚೆ ಹಮ್ಮಿಕೊಳ್ಳಲಾಗಿದೆ ಎಂದರು.

ಮುಂಬರಲಿರುವ 2025 ರ ಅಗ್ನೇಯ ಪದವೀಧರ ಕ್ಷೇತ್ರದ ವಿಧಾನ ಪರಿಷತ್ ಗೆ ನಡೆಯಲಿರುವ ಚುನಾವಣೆಯಲ್ಲಿ ಜೆಡಿಯು ಪಕ್ಷದಿಂದ ಅಭ್ಯರ್ಥಿಯಾಗಿ ಡಾ.ನಾಗರಾಜ್ ಅವರಂಥವರನ್ನು ಮಾಡಲಾಗಿದೆ ಅವರನ್ನು ಗೆಲ್ಲಿಸಬೇಕು‌ ಇದಕ್ಕೆ ಸಮಾನ ಮನಸ್ಕ ಗೆಳೆಯರು ಎಲ್ಲರೂ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಕಲ್ಲಂಡೂರು ಡಾ.ಕೆ.ನಾಗರಾಜ್ ಮಾತನಾಡಿ, ಜೆಡಿಯು ಪಕ್ಷದಿಂದ
ವಿಧಾನ ಪರಿಷತ್ ಹೋಗಲು ಪದವೀಧರ ಕ್ಷೇತ್ರದಿಂದ ಟಿಕೆಟ್ ನೀಡಿ ಅವಕಾಶ ‌ಮಾಡಿಕೊಟ್ಡಿದ್ದಾರೆ. ಹಣ ಇಲ್ಲದ ಚುನಾವಣೆ ಗೆಲ್ಲಬಹುದು ಎಂಬುದನ್ನು ತೋರಿಸಿಕೊಡುತ್ತೇವೆ. ಹಣ ಖರ್ಚು ಮಾಡದೆ ಎದುರಿಸಿದಾಗ ಯಾವುದೇ ಭಯ ಇರುವುದಿಲ್ಲ. ಪಾರದರ್ಶಕ ರಾಜಕಾರಣ‌ಕ್ಕೆ ಒತ್ತು ನೀಡಲಾಗುವುದು ಎಂದರು.

ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಲಕ್ಷ್ಮೀನಾರಾಯಣ್, ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ತಬಲ ನಾರಾಯಣಪ್ಪ, ದಕ್ಷಿಣ ಭಾರತ ಕುಂಬಾರ ಕುಲಾಲ್ ಫೆಡರೇಶನ್ ಅಧ್ಯಕ್ಷ ಶಿವಕುಮಾರ್ ಚೌಡಶೆಟ್ಟಿ, ಕಸ್ತೂರಿ ಜನಪರ ವೇದಿಕೆ ರಾಜ್ಯ ಅಧ್ಯಕ್ಷ ನಿಲೇಶ್ ಗೌಡ, ಕಸಾಪ ಮಾಜಿ ಅಧ್ಯಕ್ಷ ನಾಗನಂದ್ ಕೆಂಪರಾಜು, ಮಾಜಿ ಗೌರವ ಕಾರ್ಯದರ್ಶಿ ರತ್ನಪ್ಪ, ಸಿನಿಮಾ ನಟ ವಿಧ್ಯಾಬಾರಣ್, ಹೈಕೋರ್ಟ್ ವಕೀಲ ನಟರಾಜ್, ಲಕ್ಷ್ಮೀ ಗ್ರೂಪ್‌ ಆಫ್ ಹಾಸ್ಪಿಟಲ್ ಮುಖ್ಯಸ್ಥ ಡಾ.ಸಾಂಭಶಿವ, ಬಿಜೆಪಿ ಮುಖಂಡ ಪ್ರಕಾಶ್ ಮುಖಂಡರಾದ ಲಕನ್, ಗಂಗಾರಾಜು, ರಂಗನಾಥ್ ಮುಂತಾದವರು ಇದ್ದರು

 

Ramesh Babu

Journalist

Recent Posts

ಈ ಬಾರಿಯ ದಸರಾ ಉದ್ಘಾಟನೆ ಯಾರು ಮಾಡಿದರೆ ಉತ್ತಮ…..

ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…

1 hour ago

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಗೂಡ್ಸ್ ವಾಹನ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…

14 hours ago

ಮದ್ಯಪಾನ, ಡ್ರಗ್ಸ್ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ- ಸಚಿವ ಕೆ.ಎಚ್ ಮುನಿಯಪ್ಪ

ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…

14 hours ago

ಅನ್ನದಾಸೋಹ ಮಾಡುವ ಮೂಲಕ ಸಂದೀಪ್ ಹುಟ್ಟುಹಬ್ಬ ಆಚರಿಸಿದ ಅಭಿಮಾನಿಗಳು

ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್‌ಬುಕ್, ಸಿಹಿ,…

17 hours ago

ರೈಲ್ವೆ ನಿಲ್ದಾಣದ ಬಳಿ ನವಜಾತ ಶಿಶುವಿನ ಮೃತದೇಹ ಪತ್ತೆ; ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ

ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…

18 hours ago

ರಾಹುಲ್ ಗಾಂಧಿ ಕುರಿತು ಅವಹೇಳನಕಾರಿ ಹೇಳಿಕೆ ಖಂಡನೆ: ಶಾಸಕ ಯಶ್ ಪಾಲ್ ಆನಂದ್ ಸುವರ್ಣ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…

22 hours ago