Categories: ಕೋಲಾರ

ರಾಜಕಾರಣ ದಂಧೆಯಾಗಿದೆ: ಹಣ ಹೆಂಡ ಇಲ್ಲದ ರಾಜಕಾರಣ ಬರಬೇಕಾಗಿದೆ- ಮಹಿಮಾ ಜೆ ಪಟೇಲ್

ಕೋಲಾರ: ಇವತ್ತಿನ ಚುನಾವಣೆ ಎಂಬುದು ಈಗ ದಂಧೆಯಾಗಿ ಮಾರ್ಪಟ್ಟಿದೆ. ದುಡ್ಡಿಲ್ಲದೆ ರಾಜಕಾರಣ ಇಲ್ಲ ಎಂಬಂಥ ಪರಿಸ್ಥಿತಿಗೆ ತಂದಿಟ್ಟಿದ್ದಾರೆ. ದುಡ್ಡು ಹಾಕಿ ದುಡ್ಡು ತೆಗೆಯುವ ಕೆಲಸವಾಗಿದೆ. ಜಾತಿ, ಧರ್ಮದ ಹೆಸರಿನಲ್ಲಿ ರಾಜಕಾರಣ ಮಾಡಲಾಗುತ್ತಿದೆ ಎಂದು ಜೆಡಿಯು ರಾಜ್ಯ ಅಧ್ಯಕ್ಷ ಹಾಗೂ ಮಾಜಿ ಶಾಸಕ ಮಹಿಮಾ ಜೆ ಪಟೇಲ್ ಬೇಸರ ವ್ಯಕ್ತಪಡಿಸಿದರು.

ತಾಲ್ಲೂಕಿನ‌ ಕಲ್ಲಂಡೂರು ಗ್ರಾಮದಲ್ಲಿರುವ ಡಾ.ನಾಗರಾಜ್ ಅವರ ನಿವಾಸದಲ್ಲಿ ಭಾನುವಾರ ಡಾ.ನಾಗರಾಜ್ ಗೆಳೆಯರ ಬಳಗ ಉದ್ಘಾಟಿಸಿ ಮಾತನಾಡಿದ ಅವರು, ರಾಜಕಾರಣ ಎಂದರೆ ಬರೀ ಚುನಾವಣೆ ಅಲ್ಲ. ಉತ್ತಮ ಆಡಳಿತ ಬರಬೇಕು. ಹಣ, ಹೆಂಡ ಇಲ್ಲದೆ ಚುನಾವಣೆ ಗೆಲ್ಲಬಹುದು ಎಂಬ ಸಾಧ್ಯತೆ ಇದೆ ಎಂಬುದನ್ನು ತೋರಿಸಬೇಕು ಎಂದರು.

ದೇಶದಲ್ಲಿ 1947ರಲ್ಲಿ ಸ್ವಾತಂತ್ರ್ಯ ಸಿಕ್ಕಿದ್ದರೂ ಒಂದು ರೀತಿಯ ಬಂಧನವನ್ನು ಅನುಭವಿಸುತ್ತಿದ್ದೇವೆ. ಕೃಷಿಗೆ ವಿಪರೀತ ರಾಸಾಯನಿಕ ಗೊಬ್ಬರ ಬಳಸುತ್ತಿದ್ದೇವೆ, ಪರಿಸರ ಹಾಳಾಗುತ್ತಿದೆ. ಗ್ಲೋಬಲ್ ವಾರ್ಮಿಂಗ್ ( ಜಾಗತಿಕ ತಾಪಮಾನ) ಹೋಗಿ ಗ್ಲೋಬಲ್ ಬರ್ನಿಂಗ್‌ (ಜಾಗತಿಕ ಸುಡುವಿಕೆ) ಆಗಿದೆ. ಈ ಸಂಬಂಧ ಈಗಲೇ ಎಚ್ಚೆತ್ತುಕೊಳ್ಳದಿದ್ದರೆ ಮುಂದೆ ಅಪಾಯ ಕಾದಿದೆ ಎಂದು ಎಚ್ಚರಿಸಿದರು.

ವಿಕಾಸ ಕ್ರಾಂತಿ ಮಾಡಬೇಕು ಸಂಪೂರ್ಣ ಸಾವಯವ ರಾಜ್ಯ ಆಗಬೇಕು. ಆಡಳಿತ, ಶಿಕ್ಷಣ, ಕೃಷಿ ಆರೋಗ್ಯ, ಪರಿಸರ ಕ್ಷೇತ್ರದಲ್ಲಿ ಹೊಸ ಚಳವಳಿ ಆರಂಭಿಸಬೇಕು. ರಾಜ್ಯದಲ್ಲಿ ಮೂರು ಸಾವಿರ ಮಠಗಳಿವೆ. ಅವರು ನಮ್ಮ ಜೊತೆ ಬರುತ್ತಾರೆ ಎಂಬ ವಿಶ್ವಾಸವಿದೆ ಎಂದು ಹೇಳಿದರು.

ಮಾರ್ಚ್ 24ಕ್ಕೆ ಕೊಟ್ಟೂರಿನಲ್ಲಿ ಪಾದಯಾತ್ರೆ ಮಾಡುತ್ತಿದ್ದು, ಸ್ವಾಮೀಜಿಗಳು ಭಾಗವಹಿಸುತ್ತಿದ್ದಾರೆ‌. ರಾಜ್ಯದಲ್ಲಿ ಸೂಕ್ಷ್ಮತೆ ಉಳಿಸಿಕೊಂಡ ಶಾಸಕರು ಇದ್ದು, ಅವರ ಸಮ್ಮುಖದಲ್ಲಿ ಏಪ್ರಿಲ್ 3, 4ರಂದು ಸಾಣೇಹಳ್ಳಿಯಲ್ಲಿ ಪಕ್ಷಾತೀತವಾಗಿ ಚುನಾವಣಾ ಸುಧಾರಣೆ ಬಗ್ಗೆ ಚರ್ಚೆ ಹಮ್ಮಿಕೊಳ್ಳಲಾಗಿದೆ ಎಂದರು.

ಮುಂಬರಲಿರುವ 2025 ರ ಅಗ್ನೇಯ ಪದವೀಧರ ಕ್ಷೇತ್ರದ ವಿಧಾನ ಪರಿಷತ್ ಗೆ ನಡೆಯಲಿರುವ ಚುನಾವಣೆಯಲ್ಲಿ ಜೆಡಿಯು ಪಕ್ಷದಿಂದ ಅಭ್ಯರ್ಥಿಯಾಗಿ ಡಾ.ನಾಗರಾಜ್ ಅವರಂಥವರನ್ನು ಮಾಡಲಾಗಿದೆ ಅವರನ್ನು ಗೆಲ್ಲಿಸಬೇಕು‌ ಇದಕ್ಕೆ ಸಮಾನ ಮನಸ್ಕ ಗೆಳೆಯರು ಎಲ್ಲರೂ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಕಲ್ಲಂಡೂರು ಡಾ.ಕೆ.ನಾಗರಾಜ್ ಮಾತನಾಡಿ, ಜೆಡಿಯು ಪಕ್ಷದಿಂದ
ವಿಧಾನ ಪರಿಷತ್ ಹೋಗಲು ಪದವೀಧರ ಕ್ಷೇತ್ರದಿಂದ ಟಿಕೆಟ್ ನೀಡಿ ಅವಕಾಶ ‌ಮಾಡಿಕೊಟ್ಡಿದ್ದಾರೆ. ಹಣ ಇಲ್ಲದ ಚುನಾವಣೆ ಗೆಲ್ಲಬಹುದು ಎಂಬುದನ್ನು ತೋರಿಸಿಕೊಡುತ್ತೇವೆ. ಹಣ ಖರ್ಚು ಮಾಡದೆ ಎದುರಿಸಿದಾಗ ಯಾವುದೇ ಭಯ ಇರುವುದಿಲ್ಲ. ಪಾರದರ್ಶಕ ರಾಜಕಾರಣ‌ಕ್ಕೆ ಒತ್ತು ನೀಡಲಾಗುವುದು ಎಂದರು.

ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಲಕ್ಷ್ಮೀನಾರಾಯಣ್, ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ತಬಲ ನಾರಾಯಣಪ್ಪ, ದಕ್ಷಿಣ ಭಾರತ ಕುಂಬಾರ ಕುಲಾಲ್ ಫೆಡರೇಶನ್ ಅಧ್ಯಕ್ಷ ಶಿವಕುಮಾರ್ ಚೌಡಶೆಟ್ಟಿ, ಕಸ್ತೂರಿ ಜನಪರ ವೇದಿಕೆ ರಾಜ್ಯ ಅಧ್ಯಕ್ಷ ನಿಲೇಶ್ ಗೌಡ, ಕಸಾಪ ಮಾಜಿ ಅಧ್ಯಕ್ಷ ನಾಗನಂದ್ ಕೆಂಪರಾಜು, ಮಾಜಿ ಗೌರವ ಕಾರ್ಯದರ್ಶಿ ರತ್ನಪ್ಪ, ಸಿನಿಮಾ ನಟ ವಿಧ್ಯಾಬಾರಣ್, ಹೈಕೋರ್ಟ್ ವಕೀಲ ನಟರಾಜ್, ಲಕ್ಷ್ಮೀ ಗ್ರೂಪ್‌ ಆಫ್ ಹಾಸ್ಪಿಟಲ್ ಮುಖ್ಯಸ್ಥ ಡಾ.ಸಾಂಭಶಿವ, ಬಿಜೆಪಿ ಮುಖಂಡ ಪ್ರಕಾಶ್ ಮುಖಂಡರಾದ ಲಕನ್, ಗಂಗಾರಾಜು, ರಂಗನಾಥ್ ಮುಂತಾದವರು ಇದ್ದರು

 

Ramesh Babu

Journalist

Recent Posts

ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ 4 ತಾಲ್ಲೂಕುಗಳ ಸಮಗ್ರ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿಯಿರುವ 56…

4 hours ago

ಮಹತ್ವಾಕಾಂಕ್ಷಿ ಕ್ವಿನ್ ಸಿಟಿಗೆ ಮೊದಲ ಬೃಹತ್ ಹೂಡಿಕೆ ಒಪ್ಪಂದ

ಬೆಂಗಳೂರು ಗ್ರಾಮಾಂತರ: ಡಾಬಸಪೇಟೆ-ದೊಡ್ಡಬಳ್ಳಾಪುರ ನಡುವೆ ರಾಜ್ಯ ಸರ್ಕಾರ ಅಭಿವೃದ್ಧಿಪಡಿಸುತ್ತಿರುವ ಮಹತ್ವಾಕಾಂಕ್ಷಿ ‘ಕ್ವಿನ್ ಸಿಟಿ’ (KWINCity) ಯೋಜನೆಗೆ ಮೊದಲ ಬೃಹತ್ ಹೂಡಿಕೆ…

14 hours ago

108 ಅರೋಗ್ಯ ಕವಚ ಕೇಂದ್ರೀಕೃತ ಕಮಾಂಡ್ ಮತ್ತು ಕಂಟ್ರೋಲ್ ಕೇಂದ್ರ ಉದ್ಘಾಟನೆ

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಆ್ಯಂಬುಲೆನ್ಸ್ ಸೇವೆ ಲಭ್ಯವಾಗಲಿದ್ದು, ಈ ಸೇವೆ ಪರಿಣಾಮಕಾರಿಯಾಗಿ ಜನರಿಗೆ ತಲುಪಬೇಕು ಎನ್ನುವುದು ನನ್ನ…

14 hours ago

SIR ಜಾಗೃತಿ ಹಾಗೂ ಮತದಾರರ ಪಟ್ಟಿಯ ಸಂರಕ್ಷಣೆ ಕಾರ್ಯಕ್ಕೆ ಆದ್ಯತೆ: ಡಿಸಿಎಂ ಡಿ.ಕೆ. ಶಿವಕುಮಾರ್

ದೇವನಹಳ್ಳಿ: ಮತದಾರರ ವಿಶೇಷ ತೀವ್ರ ಪಟ್ಟಿ ಪರಿಷ್ಕರಣೆ (SIR) ಹಾಗೂ ಜಿಬಿಎ ಚುನಾವಣೆ ಸಂಬಂಧ ಪಕ್ಷದ ಎಲ್ಲಾ ಮುಖಂಡರು ಮತ್ತು…

1 day ago

ಸಚಿವ ಸ್ಥಾನ ತ್ಯಾಗ ಮಾಡುವ ವಿಚಾರ “ಹೈಕಮಾಂಡ್ ತೀರ್ಮಾನಕ್ಕೆ ಬದ್ದ”- ಸಚಿವ ಕೆ.ಎಚ್ ಮುನಿಯಪ್ಪ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಕೆ.ಎಚ್ ಮುನಿಯಪ್ಪ ಮಹತ್ವದ ರಾಜಕೀಯ ಹಾಗೂ ಅನ್ನಭಾಗ್ಯ ಯೋಜನೆ…

1 day ago

ಬಿಜೆಪಿ – ಕಾಂಗ್ರೆಸ್ ನಡುವೆ SIR ಫೈಟ್: ಕಾಂಗ್ರೆಸ್ ನಾಯಕರ ವಿರುದ್ಧ ಸಂಸದ ಡಾ.ಕೆ.ಸುಧಾಕರ್ ಕಿಡಿ

ಬೆಂಗಳೂರು ಗ್ರಾಮಾಂತರ: ಮತದಾರರ ವಿಶೇಷ ತೀವ್ರ ಪಟ್ಟಿ ಪರಿಷ್ಕರಣೆ (SIR) ವಿಚಾರವಾಗಿ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳ ನಡುವೆ ರಾಜಕೀಯ…

1 day ago