ಬೆಂಗಳೂರು : ಕಳೆದು ಮೂರ್ನಾಲ್ಕು ದಿನದಿಂದ ಔರಂಗಜ಼ೇಬ್ ವಿಚಾರ ರಾಜಕೀಯ ಪಡಸಾಲೆಯಲ್ಲಿ ಮತ್ತು ಸೋಷಿಯಲ್ ಮೀಡಿಯಾದಲ್ಲಿ ಮಾತ್ರ ಚರ್ಚೆಯಾಗುತ್ತಿತ್ತು. ಈಗ ಈ ಕಲಹ ರಾಜಕೀಯದಿಂದ ಸಿನೆಮಾ ರಂಗಕ್ಕೂ ಕಾಲಿಟ್ಟಿದೆ.ನೆನ್ನೆ ಶಿವಾಜಿ ವಂಶಜರ ಕಥಾ ಹಂದರವುಳ್ಳ ಇನಾಮ್ದಾರ ಸಿನೆಮಾದ ಟ್ರೈಲರ್ ಬಿಡುಗಡೆ ಸಂದರ್ಭದಲ್ಲಿ ಔರಂಗಜೇಬ್ ವರ್ಸಸ್ ಶಿವಾಜಿ ವಿಚಾರ ಮುನ್ನೆಲೆಗೆ ಬಂತು.
ಸಿನೆಮಾದ ಕುರಿತು ಮಾತನಾಡುತ್ತ ಪಯ್ರಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಿದ ರಾಜಕುಮಾರ ಖ್ಯಾತಿಯ ಹಿರಿಯ ನಟ ಎಮ್.ಕೆ ಮಠ, ಔರಂಗಜ಼ೇಬ ಯಾವನ್ರಿ ಅವನೊಬ್ಬ ಮತಾಂಧ ಅಂತ ಹರಿಹಾಯ್ದಿದ್ದಾರೆ.
ತದನಂತರ ಖ್ಯಾತ ನಟರಾದ ಪ್ರಮೋದ್ ಶೆಟ್ಟಿ ಮಾತನಾಡಿ, ಸಮಾನತೆ ಬೇಕು ಆದರೆ ಇವತ್ತು ಯಾವ ತರಹದ ಸಮಾನತೆ ಇದೆ ಒಂದು ಕಣ್ಣಿಗೆ ಬೆಣ್ಣೆ ಮತ್ತೊಂದು ಕಣ್ಣಿಗೆ ಸುಣ್ಣ ಅನ್ನೋ ರೀತಿ ಜನರ ನಿಲುವುಗಳಿಗೆ ಚಾಟಿ ಬೀಸಿದರು.
ನಿರ್ದೇಶಕ ಸಂದೇಶ್ ಶೆಟ್ಟಿ ಆಜ್ರಿ ಮಾತನಾಡಿ, ಔರಂಗಜ಼ೇಬನ ಬ್ಯಾನರ್ ಹಾಕೋಕೆ ಅಡ್ಡಿ ಇಲ್ಲ ಆದರೆ ಮೊನ್ನೆ ಸಂಘಟನೆಯೊಂದು ಶಿವಾಜಿ ಕುರಿತು ಕಾರ್ಯಕ್ರಮ ಮಾಡಲು ಹೊರಟಾಗ ಪುತ್ಥಳಿ ಇಡಲು ಬಿಡಲಿಲ್ಲ. ಇವೆಲ್ಲಾ ಯಾವ ರೀತಿಯ ಧೋರಣೆ ಎಂದು ಪ್ರಶ್ನೆ ಮಾಡುತ್ತಲೆ ಶಿವಾಜಿ ಕನ್ನಡಿಗ ಎಂದು ಹೇಳುವ ಮೂಲಕ ಹೊಸದೊಂದು ವಿವಾದ ಶುರು ಮಾಡಿದ್ದಾರೆ.
ಬರೀ ಮಾತಿನಲ್ಲಷ್ಟೆ ಇದೇ ತಿಂಗಳು 27ನೇ ತಾರೀಖು ಬಿಡುಗಡೆಗೊಳ್ಳಲಿರುವ ಇನಾಮ್ದಾರ್ ಸಿನೆಮಾ ಟ್ರೈಲರ್ ನಲ್ಲೂ ಕೂಡ ಶಿವಾಜಿಯನ್ನ ಕನ್ನಡದ ಕುಲ ತಿಲಕ ಅಂತ ಕರೆದಿರೋದು ಶಿವಾಜಿ ಕನ್ನಡಿಗನ ಅಲ್ವ ಅನ್ನೋ ವಾದ-ವಿವಾದವನ್ನು ಹುಟ್ಟು ಹಾಕಿದೆ.
ಈ ಹಿಂದೆಯೂ ಕೂಡ ಶಿವಾಜಿ ಕನ್ನಡಿಗ ಎಂದ ರಾಜಕಾರಣಿಗಳ ವಿರುದ್ಧ ಕನ್ನಡಪರ ಸಂಘಟನೆಗಳು ಗರಂ ಆಗಿದ್ವು ಇದೀಗ ಮತ್ತೆ ಅದೇ ಹೇಳಿಕೆ ಸಿನೆಮಾದಲ್ಲಿ ಬಳಸಿರೋದ್ರಿಂದ ಪರ-ವಿರೋಧ ಚರ್ಚೆಗಳು ಈಗಾಗಲೆ ಶುರುವಾಗಿವೆ ಇದಕ್ಕೆಲ್ಲ ಚಿತ್ರ ತಂಡ ಯಾವ ಸಮಜಾಯಿಷಿ ಕೊಡುತ್ತೆ ಕಾದು ನೋಡಬೇಕಿದೆ.
ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…
ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…
ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ? ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು…
ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಸಂಬಂಧ ಎಸ್ಪಿ ಗುಂಜನ್…
ದೆಹಲಿ ವಾಯು ಮಾಲಿನ್ಯ...... ನಮ್ಮ ನಗರ ಯಾವಾಗ ?...... ಎಚ್ಚರಿಕೆಯ ಗಂಟೆ ನಿರಂತರವಾಗಿ ಹೊಡೆದುಕೊಳ್ಳುತ್ತಿರುವಾಗ ನಾವು ನಿದ್ದೆ ಮಾಡುವುದಾದರೂ ಹೇಗೆ…
ಡಾ. ಬಿ.ಆರ್ ಅಂಬೇಡ್ಕರ್ ಸ್ನೇಹದ ಬಳಗದವರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ 5ನೇ ವಾರ್ಡ್ ಸಿದ್ದೇನಾಯಕನಹಳ್ಳಿಯಲ್ಲಿ ನಿರ್ಮಿಸಿರುವ ಬಾಬಾಸಾಹೇಬ್…