ಬೆಂಗಳೂರು : ಕಳೆದು ಮೂರ್ನಾಲ್ಕು ದಿನದಿಂದ ಔರಂಗಜ಼ೇಬ್ ವಿಚಾರ ರಾಜಕೀಯ ಪಡಸಾಲೆಯಲ್ಲಿ ಮತ್ತು ಸೋಷಿಯಲ್ ಮೀಡಿಯಾದಲ್ಲಿ ಮಾತ್ರ ಚರ್ಚೆಯಾಗುತ್ತಿತ್ತು. ಈಗ ಈ ಕಲಹ ರಾಜಕೀಯದಿಂದ ಸಿನೆಮಾ ರಂಗಕ್ಕೂ ಕಾಲಿಟ್ಟಿದೆ.ನೆನ್ನೆ ಶಿವಾಜಿ ವಂಶಜರ ಕಥಾ ಹಂದರವುಳ್ಳ ಇನಾಮ್ದಾರ ಸಿನೆಮಾದ ಟ್ರೈಲರ್ ಬಿಡುಗಡೆ ಸಂದರ್ಭದಲ್ಲಿ ಔರಂಗಜೇಬ್ ವರ್ಸಸ್ ಶಿವಾಜಿ ವಿಚಾರ ಮುನ್ನೆಲೆಗೆ ಬಂತು.
ಸಿನೆಮಾದ ಕುರಿತು ಮಾತನಾಡುತ್ತ ಪಯ್ರಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಿದ ರಾಜಕುಮಾರ ಖ್ಯಾತಿಯ ಹಿರಿಯ ನಟ ಎಮ್.ಕೆ ಮಠ, ಔರಂಗಜ಼ೇಬ ಯಾವನ್ರಿ ಅವನೊಬ್ಬ ಮತಾಂಧ ಅಂತ ಹರಿಹಾಯ್ದಿದ್ದಾರೆ.
ತದನಂತರ ಖ್ಯಾತ ನಟರಾದ ಪ್ರಮೋದ್ ಶೆಟ್ಟಿ ಮಾತನಾಡಿ, ಸಮಾನತೆ ಬೇಕು ಆದರೆ ಇವತ್ತು ಯಾವ ತರಹದ ಸಮಾನತೆ ಇದೆ ಒಂದು ಕಣ್ಣಿಗೆ ಬೆಣ್ಣೆ ಮತ್ತೊಂದು ಕಣ್ಣಿಗೆ ಸುಣ್ಣ ಅನ್ನೋ ರೀತಿ ಜನರ ನಿಲುವುಗಳಿಗೆ ಚಾಟಿ ಬೀಸಿದರು.
ನಿರ್ದೇಶಕ ಸಂದೇಶ್ ಶೆಟ್ಟಿ ಆಜ್ರಿ ಮಾತನಾಡಿ, ಔರಂಗಜ಼ೇಬನ ಬ್ಯಾನರ್ ಹಾಕೋಕೆ ಅಡ್ಡಿ ಇಲ್ಲ ಆದರೆ ಮೊನ್ನೆ ಸಂಘಟನೆಯೊಂದು ಶಿವಾಜಿ ಕುರಿತು ಕಾರ್ಯಕ್ರಮ ಮಾಡಲು ಹೊರಟಾಗ ಪುತ್ಥಳಿ ಇಡಲು ಬಿಡಲಿಲ್ಲ. ಇವೆಲ್ಲಾ ಯಾವ ರೀತಿಯ ಧೋರಣೆ ಎಂದು ಪ್ರಶ್ನೆ ಮಾಡುತ್ತಲೆ ಶಿವಾಜಿ ಕನ್ನಡಿಗ ಎಂದು ಹೇಳುವ ಮೂಲಕ ಹೊಸದೊಂದು ವಿವಾದ ಶುರು ಮಾಡಿದ್ದಾರೆ.
ಬರೀ ಮಾತಿನಲ್ಲಷ್ಟೆ ಇದೇ ತಿಂಗಳು 27ನೇ ತಾರೀಖು ಬಿಡುಗಡೆಗೊಳ್ಳಲಿರುವ ಇನಾಮ್ದಾರ್ ಸಿನೆಮಾ ಟ್ರೈಲರ್ ನಲ್ಲೂ ಕೂಡ ಶಿವಾಜಿಯನ್ನ ಕನ್ನಡದ ಕುಲ ತಿಲಕ ಅಂತ ಕರೆದಿರೋದು ಶಿವಾಜಿ ಕನ್ನಡಿಗನ ಅಲ್ವ ಅನ್ನೋ ವಾದ-ವಿವಾದವನ್ನು ಹುಟ್ಟು ಹಾಕಿದೆ.
ಈ ಹಿಂದೆಯೂ ಕೂಡ ಶಿವಾಜಿ ಕನ್ನಡಿಗ ಎಂದ ರಾಜಕಾರಣಿಗಳ ವಿರುದ್ಧ ಕನ್ನಡಪರ ಸಂಘಟನೆಗಳು ಗರಂ ಆಗಿದ್ವು ಇದೀಗ ಮತ್ತೆ ಅದೇ ಹೇಳಿಕೆ ಸಿನೆಮಾದಲ್ಲಿ ಬಳಸಿರೋದ್ರಿಂದ ಪರ-ವಿರೋಧ ಚರ್ಚೆಗಳು ಈಗಾಗಲೆ ಶುರುವಾಗಿವೆ ಇದಕ್ಕೆಲ್ಲ ಚಿತ್ರ ತಂಡ ಯಾವ ಸಮಜಾಯಿಷಿ ಕೊಡುತ್ತೆ ಕಾದು ನೋಡಬೇಕಿದೆ.
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…
ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…
ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…
80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…
ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…