ರಾಜಕೀಯದಿಂದ ಸಿನಿಮಾದವರೆಗೂ ವ್ಯಾಪಿಸಿದ ಔರಂಗಜೇಬನ ವಿಚಾರ – ವಿವಾದ

ಬೆಂಗಳೂರು : ಕಳೆದು ಮೂರ್ನಾಲ್ಕು ದಿನದಿಂದ ಔರಂಗಜ಼ೇಬ್ ವಿಚಾರ ರಾಜಕೀಯ ಪಡಸಾಲೆಯಲ್ಲಿ ಮತ್ತು ಸೋಷಿಯಲ್ ಮೀಡಿಯಾದಲ್ಲಿ ಮಾತ್ರ ಚರ್ಚೆಯಾಗುತ್ತಿತ್ತು. ಈಗ ಈ ಕಲಹ ರಾಜಕೀಯದಿಂದ  ಸಿನೆಮಾ ರಂಗಕ್ಕೂ ಕಾಲಿಟ್ಟಿದೆ.ನೆನ್ನೆ ಶಿವಾಜಿ ವಂಶಜರ ಕಥಾ ಹಂದರವುಳ್ಳ ಇನಾಮ್ದಾರ ಸಿನೆಮಾದ ಟ್ರೈಲರ್ ಬಿಡುಗಡೆ ಸಂದರ್ಭದಲ್ಲಿ ಔರಂಗಜೇಬ್ ವರ್ಸಸ್ ಶಿವಾಜಿ ವಿಚಾರ ಮುನ್ನೆಲೆಗೆ ಬಂತು.

ಸಿನೆಮಾದ ಕುರಿತು ಮಾತನಾಡುತ್ತ ಪಯ್ರಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಿದ ರಾಜಕುಮಾರ ಖ್ಯಾತಿಯ ಹಿರಿಯ ನಟ ಎಮ್.ಕೆ ಮಠ, ಔರಂಗಜ಼ೇಬ ಯಾವನ್ರಿ ಅವನೊಬ್ಬ ಮತಾಂಧ ಅಂತ ಹರಿಹಾಯ್ದಿದ್ದಾರೆ.

ತದನಂತರ ಖ್ಯಾತ ನಟರಾದ ಪ್ರಮೋದ್ ಶೆಟ್ಟಿ ಮಾತನಾಡಿ, ಸಮಾನತೆ ಬೇಕು ಆದರೆ ಇವತ್ತು ಯಾವ ತರಹದ ಸಮಾನತೆ ಇದೆ ಒಂದು ಕಣ್ಣಿಗೆ ಬೆಣ್ಣೆ ಮತ್ತೊಂದು ಕಣ್ಣಿಗೆ ಸುಣ್ಣ ಅನ್ನೋ ರೀತಿ ಜನರ ನಿಲುವುಗಳಿಗೆ ಚಾಟಿ ಬೀಸಿದರು.

ನಿರ್ದೇಶಕ ಸಂದೇಶ್ ಶೆಟ್ಟಿ ಆಜ್ರಿ ಮಾತನಾಡಿ, ಔರಂಗಜ಼ೇಬನ ಬ್ಯಾನರ್ ಹಾಕೋಕೆ ಅಡ್ಡಿ ಇಲ್ಲ ಆದರೆ ಮೊನ್ನೆ ಸಂಘಟನೆಯೊಂದು ಶಿವಾಜಿ ಕುರಿತು ಕಾರ್ಯಕ್ರಮ ಮಾಡಲು ಹೊರಟಾಗ ಪುತ್ಥಳಿ ಇಡಲು ಬಿಡಲಿಲ್ಲ. ಇವೆಲ್ಲಾ ಯಾವ ರೀತಿಯ ಧೋರಣೆ ಎಂದು ಪ್ರಶ್ನೆ ಮಾಡುತ್ತಲೆ ಶಿವಾಜಿ ಕನ್ನಡಿಗ ಎಂದು ಹೇಳುವ ಮೂಲಕ ಹೊಸದೊಂದು ವಿವಾದ ಶುರು ಮಾಡಿದ್ದಾರೆ.

ಬರೀ ಮಾತಿನಲ್ಲಷ್ಟೆ ಇದೇ ತಿಂಗಳು 27ನೇ ತಾರೀಖು ಬಿಡುಗಡೆಗೊಳ್ಳಲಿರುವ ಇನಾಮ್ದಾರ್ ಸಿನೆಮಾ ಟ್ರೈಲರ್ ನಲ್ಲೂ ಕೂಡ ಶಿವಾಜಿಯನ್ನ ಕನ್ನಡದ ಕುಲ ತಿಲಕ ಅಂತ ಕರೆದಿರೋದು ಶಿವಾಜಿ ಕನ್ನಡಿಗನ ಅಲ್ವ ಅನ್ನೋ ವಾದ-ವಿವಾದವನ್ನು ಹುಟ್ಟು ಹಾಕಿದೆ.

ಈ ಹಿಂದೆಯೂ ಕೂಡ ಶಿವಾಜಿ ಕನ್ನಡಿಗ ಎಂದ ರಾಜಕಾರಣಿಗಳ ವಿರುದ್ಧ ಕನ್ನಡಪರ ಸಂಘಟನೆಗಳು ಗರಂ ಆಗಿದ್ವು ಇದೀಗ ಮತ್ತೆ ಅದೇ ಹೇಳಿಕೆ ಸಿನೆಮಾದಲ್ಲಿ ಬಳಸಿರೋದ್ರಿಂದ ಪರ-ವಿರೋಧ ಚರ್ಚೆಗಳು ಈಗಾಗಲೆ ಶುರುವಾಗಿವೆ ಇದಕ್ಕೆಲ್ಲ ಚಿತ್ರ ತಂಡ ಯಾವ ಸಮಜಾಯಿಷಿ ಕೊಡುತ್ತೆ ಕಾದು ನೋಡಬೇಕಿದೆ.

Ramesh Babu

Journalist

Recent Posts

ಹಾಡಹಗಲೇ ಮನೆ ಬೀಗ ಮುರಿದು ಲಕ್ಷ ಲಕ್ಷ ಬೆಲೆ ಬಾಳುವ ಚಿನ್ನ, ನಗದು ಕಳ್ಳತನ

ಹಾಡಹಗಲೇ ಮನೆ ಬೀಗ ಮುರಿದು ಲಕ್ಷ ಲಕ್ಷ ಬೆಲೆ ಬಾಳುವ ಚಿನ್ನ, ನಗದು ಕಳ್ಳತನ ಮಾಡಿರುವ ಘಟನೆ ಏ.20ರಂದು ದೊಡ್ಡಬಳ್ಳಾಪುರ…

4 hours ago

ಬೆಳ್ಳಂಬೆಳಗ್ಗೆ ಮಾಂಗಲ್ಯ ಸರ ಕದ್ದ ಕಳ್ಳ: ಮಹಿಳೆ ವಾಕಿಂಗ್ ಮಾಡುವ ವೇಳೆ ಘಟನೆ

ಇಂದು ಬೆಳ್ಳಬೆಳಗ್ಗೆ ಸರಗಳನ್ನ ಕೈಚಳಕ ಕಂಡುಬಂದಿದೆ. ಬೆಳಗ್ಗೆ ಸುಮಾರು 5:30ರ‌ ಸಮಯದಲ್ಲಿ ಮಹಿಳೆ ವಾಕಿಂಗ್ ಮಾಡುವ ವೇಳೆ ಕಳ್ಳನೋರ್ವ ಏಕಾಏಕಿ…

5 hours ago

ಭಾರತದ ಜಾತಿ ವ್ಯವಸ್ಥೆಗೆ ಚಲನೆಯಿಲ್ಲ- ಸಿಎಂ ಸಿದ್ದರಾಮಯ್ಯ

ಬಸವಣ್ಣನವರ ಆದರ್ಶಗಳನ್ನು ಪಾಲಿಸಿದ ಡಾ.ಸಿದ್ಧರಾಮ ಶರಣರು 2025-26ನೇ ಸಾಲಿನ ಬಸವ ಪುರಸ್ಕಾರ ರಾಷ್ಟ್ರೀಯ ಪ್ರಶಸ್ತಿಗೆ ಭಾಜನರಾಗಿದ್ದು, ಅವರಿಗೆ ಅಭಿನಂದನೆಗಳು ಎಂದು…

19 hours ago

ಹೀಟ್ ಸ್ಟ್ರೋಕ್​: ಯುವಕ ಸಾವು: ಬಿಸಿಲಿಗೆ ಬರುವ ಮುನ್ನ ಇರಲಿ ಎಚ್ಚರ

ಹೀಟ್ ಸ್ಟ್ರೋಕ್​ನಿಂದಾಗಿ ಯುವಕನೊಬ್ಬ ಮೃತಪಟ್ಟಿರುವ ಘಟನೆ ಬೀದರ್​ನ ಕಮಲನಗರ ಪಟ್ಟಣದ ಹೊರವಲಯದಲ್ಲಿ ನಡೆದಿದೆ... ಮೃತರನ್ನು ಉತ್ತರ ಪ್ರದೇಶ ಮೂಲದ ಮೊಹಮ್ಮದ್…

1 day ago

‘ಅಯ್ಯಾ ಬಸವಣ್ಣ ಸಮಾಜದ ನೆಮ್ಮದಿಗಾಗಿ ಮತ್ತೊಮ್ಮೆ ಹುಟ್ಟಿ ಬಾ’

ಬಸವ ಜಯಂತಿಯೋ, ಅಕ್ಷಯ ತೃತೀಯವೋ...... ಅದೃಷ್ಟವಂತರಲ್ಲವೇ ನಾವು,..... ನಮ್ಮ ಹಿಂದಿನ ತಲೆಮಾರಿನವರಿಗೆ ಹೋಲಿಸಿಕೊಂಡರೆ ಎಷ್ಟೊಂದು ಅದೃಷ್ಟವಂತರು ನಾವು. ಎಲ್ಲ ವಿಷಯದಲ್ಲೂ…

1 day ago

ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿ ಕೊಲೆ: ಪತ್ನಿ, ಪ್ರಿಯಕರ ಅರೆಸ್ಟ್

ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿಯನ್ನು ಕೊಲೆ ಮಾಡಿದ್ದ ಪತ್ನಿ, ಪ್ರಿಯಕರನನ್ನು‌ ಇದೀಗ ಬಂಧನ ಮಾಡಲಾಗಿದೆ. ಮೈಸೂರು ತಾಲೂಕಿನ ಮಾವಿನಹಳ್ಳಿ ಗ್ರಾಮದ…

2 days ago