ರಾಜಕೀಯದಿಂದ ಸಿನಿಮಾದವರೆಗೂ ವ್ಯಾಪಿಸಿದ ಔರಂಗಜೇಬನ ವಿಚಾರ – ವಿವಾದ

ಬೆಂಗಳೂರು : ಕಳೆದು ಮೂರ್ನಾಲ್ಕು ದಿನದಿಂದ ಔರಂಗಜ಼ೇಬ್ ವಿಚಾರ ರಾಜಕೀಯ ಪಡಸಾಲೆಯಲ್ಲಿ ಮತ್ತು ಸೋಷಿಯಲ್ ಮೀಡಿಯಾದಲ್ಲಿ ಮಾತ್ರ ಚರ್ಚೆಯಾಗುತ್ತಿತ್ತು. ಈಗ ಈ ಕಲಹ ರಾಜಕೀಯದಿಂದ  ಸಿನೆಮಾ ರಂಗಕ್ಕೂ ಕಾಲಿಟ್ಟಿದೆ.ನೆನ್ನೆ ಶಿವಾಜಿ ವಂಶಜರ ಕಥಾ ಹಂದರವುಳ್ಳ ಇನಾಮ್ದಾರ ಸಿನೆಮಾದ ಟ್ರೈಲರ್ ಬಿಡುಗಡೆ ಸಂದರ್ಭದಲ್ಲಿ ಔರಂಗಜೇಬ್ ವರ್ಸಸ್ ಶಿವಾಜಿ ವಿಚಾರ ಮುನ್ನೆಲೆಗೆ ಬಂತು.

ಸಿನೆಮಾದ ಕುರಿತು ಮಾತನಾಡುತ್ತ ಪಯ್ರಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಿದ ರಾಜಕುಮಾರ ಖ್ಯಾತಿಯ ಹಿರಿಯ ನಟ ಎಮ್.ಕೆ ಮಠ, ಔರಂಗಜ಼ೇಬ ಯಾವನ್ರಿ ಅವನೊಬ್ಬ ಮತಾಂಧ ಅಂತ ಹರಿಹಾಯ್ದಿದ್ದಾರೆ.

ತದನಂತರ ಖ್ಯಾತ ನಟರಾದ ಪ್ರಮೋದ್ ಶೆಟ್ಟಿ ಮಾತನಾಡಿ, ಸಮಾನತೆ ಬೇಕು ಆದರೆ ಇವತ್ತು ಯಾವ ತರಹದ ಸಮಾನತೆ ಇದೆ ಒಂದು ಕಣ್ಣಿಗೆ ಬೆಣ್ಣೆ ಮತ್ತೊಂದು ಕಣ್ಣಿಗೆ ಸುಣ್ಣ ಅನ್ನೋ ರೀತಿ ಜನರ ನಿಲುವುಗಳಿಗೆ ಚಾಟಿ ಬೀಸಿದರು.

ನಿರ್ದೇಶಕ ಸಂದೇಶ್ ಶೆಟ್ಟಿ ಆಜ್ರಿ ಮಾತನಾಡಿ, ಔರಂಗಜ಼ೇಬನ ಬ್ಯಾನರ್ ಹಾಕೋಕೆ ಅಡ್ಡಿ ಇಲ್ಲ ಆದರೆ ಮೊನ್ನೆ ಸಂಘಟನೆಯೊಂದು ಶಿವಾಜಿ ಕುರಿತು ಕಾರ್ಯಕ್ರಮ ಮಾಡಲು ಹೊರಟಾಗ ಪುತ್ಥಳಿ ಇಡಲು ಬಿಡಲಿಲ್ಲ. ಇವೆಲ್ಲಾ ಯಾವ ರೀತಿಯ ಧೋರಣೆ ಎಂದು ಪ್ರಶ್ನೆ ಮಾಡುತ್ತಲೆ ಶಿವಾಜಿ ಕನ್ನಡಿಗ ಎಂದು ಹೇಳುವ ಮೂಲಕ ಹೊಸದೊಂದು ವಿವಾದ ಶುರು ಮಾಡಿದ್ದಾರೆ.

ಬರೀ ಮಾತಿನಲ್ಲಷ್ಟೆ ಇದೇ ತಿಂಗಳು 27ನೇ ತಾರೀಖು ಬಿಡುಗಡೆಗೊಳ್ಳಲಿರುವ ಇನಾಮ್ದಾರ್ ಸಿನೆಮಾ ಟ್ರೈಲರ್ ನಲ್ಲೂ ಕೂಡ ಶಿವಾಜಿಯನ್ನ ಕನ್ನಡದ ಕುಲ ತಿಲಕ ಅಂತ ಕರೆದಿರೋದು ಶಿವಾಜಿ ಕನ್ನಡಿಗನ ಅಲ್ವ ಅನ್ನೋ ವಾದ-ವಿವಾದವನ್ನು ಹುಟ್ಟು ಹಾಕಿದೆ.

ಈ ಹಿಂದೆಯೂ ಕೂಡ ಶಿವಾಜಿ ಕನ್ನಡಿಗ ಎಂದ ರಾಜಕಾರಣಿಗಳ ವಿರುದ್ಧ ಕನ್ನಡಪರ ಸಂಘಟನೆಗಳು ಗರಂ ಆಗಿದ್ವು ಇದೀಗ ಮತ್ತೆ ಅದೇ ಹೇಳಿಕೆ ಸಿನೆಮಾದಲ್ಲಿ ಬಳಸಿರೋದ್ರಿಂದ ಪರ-ವಿರೋಧ ಚರ್ಚೆಗಳು ಈಗಾಗಲೆ ಶುರುವಾಗಿವೆ ಇದಕ್ಕೆಲ್ಲ ಚಿತ್ರ ತಂಡ ಯಾವ ಸಮಜಾಯಿಷಿ ಕೊಡುತ್ತೆ ಕಾದು ನೋಡಬೇಕಿದೆ.

Ramesh Babu

Journalist

Recent Posts

ಕಾನೂನು ತೊಡಕಿಲ್ಲದ ಅರ್ಜಿಗಳು ನಿಗದಿತ ಕಾಲಮಿತಿಯೊಳಗೆ ವಿಲೇವಾರಿ- ಸಚಿವ ಕೆ.ಎಚ್ ಮುನಿಯಪ್ಪ

ಪ್ರಜಾ ಸೇವಾ ಆಂದೋಲದ ಮೂಲಕ ಜನರಿಂದ ಸ್ವೀಕರಿಸುವ ಅರ್ಜಿಗಳಿಗೆ ಕಾನೂನು ವ್ಯಾಪ್ತಿ ಹೊರತುಪಡಿಸಿ ಉಳಿದ ಅರ್ಜಿಗಳಿಗೆ ನಿಗದಿತ ಕಾಲಮಿತಿಯೊಳಗೆ ಪರಿಹಾರ…

14 minutes ago

ಸಾಹಿತ್ಯ ಪರಿಷತ್ ಚುನಾವಣೆ…..

ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…

11 hours ago

ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಬೆಂಗಳೂರು ಗ್ರಾಮಾಂತರದ ಇಬ್ಬರು ಶಿಕ್ಷಕರು ಆಯ್ಕೆ

ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…

21 hours ago

ಮೇಕೆದಾಟು ಯೋಜನೆ ಶೀಘ್ರ ಜಾರಿಗೆ ಸಚಿವರ ದೃಢ ಸಂಕಲ್ಪ: ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ

ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…

23 hours ago

ಶ್ರೀರಂಗವನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ

ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…

23 hours ago

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ-2026: ಹಕ್ಕು,ಆಕ್ಷೇಪಣೆ ಸಲ್ಲಿಕೆಗೆ ಸೆ. 23 ವರೆಗೆ ಅವಕಾಶ-ಡಿಸಿ ಅನುರಾಧ

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…

1 day ago