Categories: ರಾಜ್ಯ

ರಾಜಕೀಯವಾಗಿ ದಿವಾಳಿಯಾದ ಬಿಜೆಪಿಯಿಂದ ‘ಬಾತ್ ರೂಮ್’ ರಾಜಕಾರಣ- ಬಿಜೆಪಿ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಕಾಂಗ್ರೆಸ್ ಕಿಡಿ

ಚುನಾವಣೆಗೂ ಮೊದಲು ಕಾಂಗ್ರೆಸ್ ಪಕ್ಷ ಘೋಷಿಸಿದ್ದ ಗ್ಯಾರಂಟಿ ಯೋಜನೆಗಳು ರಾಜ್ಯದಲ್ಲಿ ಜಾರಿಯಾಗಿದ್ದು, ಜನರು ಇವುಗಳನ್ನು ಆತ್ಮೀಯವಾಗಿ ಬರ ಮಾಡಿಕೊಂಡಿದ್ದಾರೆ. ಹಾದಿ-ಬೀದಿಗಳಲ್ಲಿ ಇವುಗಳ ಬಗ್ಗೆಯೇ ಚರ್ಚಿಸುತ್ತಿದ್ದಾರೆ. ಯೋಜನೆಯ ಪ್ರಯೋಜನ ಪಡೆಯಲು ಪರಸ್ಪರ ನೆರವಾಗುತ್ತಿದ್ದಾರೆ. ಬಿಜೆಪಿಯ ಕೋಮು ರಾಜಕಾರಣದ ನೋವಿಗೆ, ಬೆಲೆ ಏರಿಕೆಯ ಬರೆಯಿಂದಾದ ಗಾಯಕ್ಕೆ ಕಾಂಗ್ರೆಸ್, ಗ್ಯಾರಂಟಿಗಳ ಮುಲಾಮು ಹಚ್ಚಿದೆ. ಸದಾ ನೋವು ನಿರಾಸೆ, ಹತಾಶೆಯಲ್ಲಿದ್ದ ಸಾರ್ವಜನಿಕರು ಗೃಹ ಜ್ಯೋತಿ, ಶಕ್ತಿ, ಅನ್ನ ಭಾಗ್ಯ, ಗೃಹ ಲಕ್ಷ್ಮಿ ಯೋಜನೆಗಳ ಲಾಭ ಪಡೆಯುವ ಮೂಲಕ ನೆಮ್ಮದಿಯ ನಿಟ್ಟುಸಿರು ಬಿಡುತ್ತಿದ್ದಾರೆ. ಗ್ಯಾರಂಟಿ ಕಾರ್ಯಕ್ರಮಗಳ ವಿರುದ್ಧ ಬಿಜೆಪಿ ಸೃಷ್ಟಿಸುತ್ತಿರುವ ಅಪ ಪ್ರಚಾರಗಳಿಗೆ ಅವರು ಕಿವಿಗೊಡದೆ, ತಮ್ಮ ಬದುಕಿನ ನಿರ್ವಹಣೆಯ ಕಡೆಗೆ ಗಮನಹರಿಸುತ್ತಿದ್ದಾರೆ. ಇದರಿಂದ ಬಿಜೆಪಿ ಸಂಪೂರ್ಣವಾಗಿ ವಿಚಲಿತಗೊಂಡು ಇಂಗು ತಿಂದ ಮಂಗನಂತೆ ಆಡುತ್ತಿದೆ ಎಂದು ಬಿಜೆಪಿ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಕಾಂಗ್ರೆಸ್ ಕಿಡಿಕಾರಿದೆ.

ತಲೆಯ ತುಂಬಾ ಕೋಮು ವಿಷವನ್ನೇ ತುಂಬಿಕೊಂಡಿರುವ ಅವರಿಗೆ ಚರ್ಚೆ ಮಾಡುವುದಕ್ಕೆ, ಹೋರಾಟ ಮಾಡುವುದಕ್ಕೆ ವಿಚಾರಗಳೇ ಸಿಗುತ್ತಿಲ್ಲ. ಈ ಕಾರಣದಿಂದಾಗಿಯೇ ಉಡುಪಿಯ ಕಾಲೇಜಿನ ಮಕ್ಕಳ ಹುಡುಗಾಟದ ವಿಚಾರವನ್ನು ‘ಬಾತ್ ರೂಮ್ ರಾಜಕಾರಣ’ವನ್ನಾಗಿ ಪರಿವರ್ತಿಸಿ, ರಾಜ್ಯದ ಜನರ ಮನಸಿನಲ್ಲೂ ಕೋಮು ವಿಷಬೀಜ ಬಿತ್ತಲು ಯತ್ನಿಸುತ್ತಿದೆ. ಇದನ್ನ ಬಿಜೆಪಿಗರ ಮುಖಕ್ಕೆ ರಾಚುವಂತೆ ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ, ಬಿಜೆಪಿ ನಾಯಕಿ ಖುಷ್ಬು ಅವರೇ ಹೇಳಿದ್ದಾರೆ. “ಉಡುಪಿ ಕಾಲೇಜಿನ ಘಟನೆಯು ಷಡ್ಯಂತ್ರವಲ್ಲ, ವಿದ್ಯಾರ್ಥಿನೀಯರ ಮೊಬೈಲ್ ಗಳಲ್ಲಿ ಯಾವುದೇ ವಿಡಿಯೋಗಳು ಪತ್ತೆಯಾಗಿಲ್ಲ, ಸಾಮಾಜಿಕ ಜಾಲತಾಣದಲ್ಲಿ ನಕಲಿ ವಿಡಿಯೋ ಹರಿಬಿಡಲಾಗಿದೆ” ಎಂದು. ಈ ಹೇಳಿಕೆಯ ಮೂಲಕ ಖುಷ್ಬು ಅವರು ಬಿಜೆಪಿಯ ಬಾತ್ ರೂಮ್ ರಾಜಕೀಯವನ್ನು ಬಯಲು ಮಾಡಿದ್ದಾರೆ.

ಬಿಜೆಪಿಗೆ ತಮ್ಮ ಪಕ್ಷಕ್ಕೆ ಸೂಕ್ತ ಅಧ್ಯಕ್ಷರನ್ನು ನೇಮಕ ಮಾಡಿಕೊಳ್ಳಲು ಆಗುತ್ತಿಲ್ಲ, ವಿರೋಧ ಪಕ್ಷದ ನಾಯಕರ ನೇಮಕದ ವಿಚಾರ ಬಂದಾಗಲೆಲ್ಲ ಜೆಡಿಎಸ್ ಕಡೆಗೆ ತಿರುಗಿ ನೋಡುತ್ತಾರೆ, ಹೋರಾಟ-ಚರ್ಚೆ ಎಂದಾಗಲೆಲ್ಲ ಶಾಲಾ ಮಕ್ಕಳ ಹುಡುಗಾಟದಲ್ಲಿ ಬಾತ್ ರೂಮ್ ರಾಜಕಾರಣ ಮಾಡುತ್ತಾರೆ. ಇದೆಲ್ಲವೂ ‘ಬಿಜೆಪಿ ರಾಜಕೀಯವಾಗಿ ಸಂಪೂರ್ಣವಾಗಿ ದಿವಾಳಿಯಾಗಿದೆ’ ಎಂಬುದನ್ನು ಸಾಬೀತು ಮಾಡುತ್ತಿವೆ ಎಂದು ಬಿಜೆಪಿ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ.

Ramesh Babu

Journalist

Recent Posts

ಗುರುಭವನದಲ್ಲಿ ಅದ್ಧೂರಿ ವಿಶ್ವ ಮಹಿಳಾ ದಿನಾಚರಣೆ

ಸೇವೆಗಾಗಿ ಬಾಳು ಭಾರತ ಸೇವಾದಳ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಭಾರತ ಸೇವಾದಳ ದೇವನಹಳ್ಳಿ ತಾಲೂಕು ಘಟಕ, ಕರ್ನಾಟಕ ರಾಜ್ಯ ಪ್ರಾಥಮಿಕ…

8 hours ago

ಭೂದಾಖಲೆಗಳ ತಿದ್ದುಪಡಿಗಾಗಿ ಸಾರ್ವಜನಿಕರಿಂದ ಲಂಚಕ್ಕೆ ಬೇಡಿಕೆ: ಲೋಕಾ ಬಲೆಗೆ ಬಿದ್ದ ಭ್ರಷ್ಟ ಗ್ರಾಮ ಆಡಳಿತಾಧಿಕಾರಿ

ಭೂದಾಖಲೆಗಳ ತಿದ್ದುಪಡಿಗಾಗಿ ಸಾರ್ವಜನಿಕರಿಂದ ಹಣಕ್ಕೆ ಬೇಡಿಕೆಯಿಟ್ಟಿದ್ದ ಗ್ರಾಮ ಆಡಳಿತಾಧಿಕಾರಿಯೊಬ್ಬರು ಲೋಕಾಯುಕ್ತ ಪೊಲೀಸರ ಕಾರ್ಯಾಚರಣೆಯಲ್ಲಿ ಸಿಕ್ಕಿಬಿದ್ದಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ…

9 hours ago

ಯುಗಾದಿ ಸಮಯದಲ್ಲಿ ಮತ್ತೆ ಚಿಗುರಿದ ಪ್ರೀತಿ: ವಿಚ್ಚೇದನಕ್ಕೆ ಅರ್ಜಿ ಸಲ್ಲಿಸಿದ್ದವರು ಕಟೆಕಟೆಯಲ್ಲಿ ಒಂದಾದರು: ಒಂದಾದ ದಂಪತಿಗೆ ಪ್ರೀತಿಯ ಪಾಠ ಹೇಳಿದ ನ್ಯಾಯಾಧೀಶರು

ಸಣ್ಣಪುಟ್ಟ ಜಗಳಗಳಿಂದ ಕೋರ್ಟಿನ ಮೆಟ್ಟಿಲೇರಿ ದೂರಾವಾಗಲು ನಿರ್ಧರಿಸಿದ್ದ ನಾಲ್ವರು ದಂಪತಿಗಳನ್ನು ಶನಿವಾರ ನಡೆದ ಲೋಕಾಅದಾಲತ್ ನಲ್ಲಿ ನ್ಯಾಯಾಧೀಶರುಗಳು ಹೇಳಿದ ಬುದ್ಧಿಮಾತಿನಿಂದ…

11 hours ago

ವಾರದೊಳಗೆ ಸಹಜ ಸ್ಥಿತಿಗೆ ಗ್ಯಾಸ್ ಸಿಲಿಂಡರ್ ಪೂರೈಕೆ- ಆಹಾರ ಸಚಿವ ಕೆ.ಎಚ್ ಮುನಿಯಪ್ಪ

ಕೊಲ್ಲಿ ದೇಶಗಳಲ್ಲಿ ಯುದ್ಧದ ಪರಿಸ್ಥಿತಿ ಹಿನ್ನೆಲೆಯಲ್ಲಿ ಉಂಟಾದ ಗೃಹ ಬಳಕೆ ಹಾಗೂ ವಾಣಿಜ್ಯ ಬಳಕೆ ಗ್ಯಾಸ್ ಸಿಲಿಂಡರ್ ಗಳ ಪೂರೈಕೆ…

12 hours ago

“ಗೃಹಬಳಕೆ ಸಿಲಿಂಡರ್ ವಾಣಿಜ್ಯ ಉದ್ದೇಶಕ್ಕಾಗಿ ಬಳಸಿದ್ದಲ್ಲಿ ಸೂಕ್ತ ಕಾನೂನು ಕ್ರಮ”

ಗೃಹಬಳಕೆ ಸಿಲಿಂಡರ್ ಅನ್ನು ವಾಣಿಜ್ಯ ಉದ್ದೇಶಕ್ಕಾಗಿ ಬಳಸಿದ್ದಲ್ಲಿ ಸೂಕ್ತ ಕಾನೂನುಕ್ರಮ ಕೈಗೊಳ್ಳಲು ಆಹಾರ ಸಚಿವರು ಸೂಚಿಸಿದ್ದು, ಅದರಂತೆ ಗೃಹ ಬಳಕೆ…

12 hours ago

ವಾಣಿಜ್ಯ ಗ್ಯಾಸ್ ಸಿಲಿಂಡರ್ ಸಮಸ್ಯೆ: ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಏನಂದ್ರು ಗೊತ್ತಾ….?

ವಾಣಿಜ್ಯ ಗ್ಯಾಸ್ ಸಿಲಿಂಡರ್ ಸಮಸ್ಯೆ ಹಿನ್ನೆಲೆ ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಪ್ರತಿಕ್ರಿಯೆ. ಈ ಸಮಸ್ಯೆ ಇನ್ನು ಒಂದು ವಾರಗಳ ಕಾಲ…

13 hours ago