ಚುನಾವಣೆಗೂ ಮೊದಲು ಕಾಂಗ್ರೆಸ್ ಪಕ್ಷ ಘೋಷಿಸಿದ್ದ ಗ್ಯಾರಂಟಿ ಯೋಜನೆಗಳು ರಾಜ್ಯದಲ್ಲಿ ಜಾರಿಯಾಗಿದ್ದು, ಜನರು ಇವುಗಳನ್ನು ಆತ್ಮೀಯವಾಗಿ ಬರ ಮಾಡಿಕೊಂಡಿದ್ದಾರೆ. ಹಾದಿ-ಬೀದಿಗಳಲ್ಲಿ ಇವುಗಳ ಬಗ್ಗೆಯೇ ಚರ್ಚಿಸುತ್ತಿದ್ದಾರೆ. ಯೋಜನೆಯ ಪ್ರಯೋಜನ ಪಡೆಯಲು ಪರಸ್ಪರ ನೆರವಾಗುತ್ತಿದ್ದಾರೆ. ಬಿಜೆಪಿಯ ಕೋಮು ರಾಜಕಾರಣದ ನೋವಿಗೆ, ಬೆಲೆ ಏರಿಕೆಯ ಬರೆಯಿಂದಾದ ಗಾಯಕ್ಕೆ ಕಾಂಗ್ರೆಸ್, ಗ್ಯಾರಂಟಿಗಳ ಮುಲಾಮು ಹಚ್ಚಿದೆ. ಸದಾ ನೋವು ನಿರಾಸೆ, ಹತಾಶೆಯಲ್ಲಿದ್ದ ಸಾರ್ವಜನಿಕರು ಗೃಹ ಜ್ಯೋತಿ, ಶಕ್ತಿ, ಅನ್ನ ಭಾಗ್ಯ, ಗೃಹ ಲಕ್ಷ್ಮಿ ಯೋಜನೆಗಳ ಲಾಭ ಪಡೆಯುವ ಮೂಲಕ ನೆಮ್ಮದಿಯ ನಿಟ್ಟುಸಿರು ಬಿಡುತ್ತಿದ್ದಾರೆ. ಗ್ಯಾರಂಟಿ ಕಾರ್ಯಕ್ರಮಗಳ ವಿರುದ್ಧ ಬಿಜೆಪಿ ಸೃಷ್ಟಿಸುತ್ತಿರುವ ಅಪ ಪ್ರಚಾರಗಳಿಗೆ ಅವರು ಕಿವಿಗೊಡದೆ, ತಮ್ಮ ಬದುಕಿನ ನಿರ್ವಹಣೆಯ ಕಡೆಗೆ ಗಮನಹರಿಸುತ್ತಿದ್ದಾರೆ. ಇದರಿಂದ ಬಿಜೆಪಿ ಸಂಪೂರ್ಣವಾಗಿ ವಿಚಲಿತಗೊಂಡು ಇಂಗು ತಿಂದ ಮಂಗನಂತೆ ಆಡುತ್ತಿದೆ ಎಂದು ಬಿಜೆಪಿ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಕಾಂಗ್ರೆಸ್ ಕಿಡಿಕಾರಿದೆ.
ತಲೆಯ ತುಂಬಾ ಕೋಮು ವಿಷವನ್ನೇ ತುಂಬಿಕೊಂಡಿರುವ ಅವರಿಗೆ ಚರ್ಚೆ ಮಾಡುವುದಕ್ಕೆ, ಹೋರಾಟ ಮಾಡುವುದಕ್ಕೆ ವಿಚಾರಗಳೇ ಸಿಗುತ್ತಿಲ್ಲ. ಈ ಕಾರಣದಿಂದಾಗಿಯೇ ಉಡುಪಿಯ ಕಾಲೇಜಿನ ಮಕ್ಕಳ ಹುಡುಗಾಟದ ವಿಚಾರವನ್ನು ‘ಬಾತ್ ರೂಮ್ ರಾಜಕಾರಣ’ವನ್ನಾಗಿ ಪರಿವರ್ತಿಸಿ, ರಾಜ್ಯದ ಜನರ ಮನಸಿನಲ್ಲೂ ಕೋಮು ವಿಷಬೀಜ ಬಿತ್ತಲು ಯತ್ನಿಸುತ್ತಿದೆ. ಇದನ್ನ ಬಿಜೆಪಿಗರ ಮುಖಕ್ಕೆ ರಾಚುವಂತೆ ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ, ಬಿಜೆಪಿ ನಾಯಕಿ ಖುಷ್ಬು ಅವರೇ ಹೇಳಿದ್ದಾರೆ. “ಉಡುಪಿ ಕಾಲೇಜಿನ ಘಟನೆಯು ಷಡ್ಯಂತ್ರವಲ್ಲ, ವಿದ್ಯಾರ್ಥಿನೀಯರ ಮೊಬೈಲ್ ಗಳಲ್ಲಿ ಯಾವುದೇ ವಿಡಿಯೋಗಳು ಪತ್ತೆಯಾಗಿಲ್ಲ, ಸಾಮಾಜಿಕ ಜಾಲತಾಣದಲ್ಲಿ ನಕಲಿ ವಿಡಿಯೋ ಹರಿಬಿಡಲಾಗಿದೆ” ಎಂದು. ಈ ಹೇಳಿಕೆಯ ಮೂಲಕ ಖುಷ್ಬು ಅವರು ಬಿಜೆಪಿಯ ಬಾತ್ ರೂಮ್ ರಾಜಕೀಯವನ್ನು ಬಯಲು ಮಾಡಿದ್ದಾರೆ.
ಬಿಜೆಪಿಗೆ ತಮ್ಮ ಪಕ್ಷಕ್ಕೆ ಸೂಕ್ತ ಅಧ್ಯಕ್ಷರನ್ನು ನೇಮಕ ಮಾಡಿಕೊಳ್ಳಲು ಆಗುತ್ತಿಲ್ಲ, ವಿರೋಧ ಪಕ್ಷದ ನಾಯಕರ ನೇಮಕದ ವಿಚಾರ ಬಂದಾಗಲೆಲ್ಲ ಜೆಡಿಎಸ್ ಕಡೆಗೆ ತಿರುಗಿ ನೋಡುತ್ತಾರೆ, ಹೋರಾಟ-ಚರ್ಚೆ ಎಂದಾಗಲೆಲ್ಲ ಶಾಲಾ ಮಕ್ಕಳ ಹುಡುಗಾಟದಲ್ಲಿ ಬಾತ್ ರೂಮ್ ರಾಜಕಾರಣ ಮಾಡುತ್ತಾರೆ. ಇದೆಲ್ಲವೂ ‘ಬಿಜೆಪಿ ರಾಜಕೀಯವಾಗಿ ಸಂಪೂರ್ಣವಾಗಿ ದಿವಾಳಿಯಾಗಿದೆ’ ಎಂಬುದನ್ನು ಸಾಬೀತು ಮಾಡುತ್ತಿವೆ ಎಂದು ಬಿಜೆಪಿ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ.
ಚಿತ್ರದುರ್ಗಾ: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಯೊಬ್ಬ ಶಾಲಾ ಕಟ್ಟಡದ ಮೇಲಿಂದ ಬಿದ್ದು ಅನುಮಾನಸ್ಪದವಾಗಿ ಸಾ*ವನ್ನಪ್ಪಿದ ಘಟನೆ ವರದಿಯಾಗಿದೆ. ಚಿತ್ರದುರ್ಗ ಜಿಲ್ಲೆಯ ಭರಮಸಾಗರ ಗ್ರಾಮದಲ್ಲಿ…
ದೊಡ್ಡಬಳ್ಳಾಪುರ ತಾಲ್ಲೂಕಿನ ಚಿಕ್ಕಮಂಕಳಾದ ಬಳಿಯ ಬೆಂಗಳೂರು ಕಸದ ವಿಲೇವಾರಿ ಘಟಕ ಎಂಎಸ್ ಜಿಪಿ ಘಟಕಕ್ಕೆ ಮಂಗಳವಾರ ಹೆಚ್ಚುವರಿ ಕಸದ ಲಾರಿಗಳು…
ಶಿವಮೊಗ್ಗ : ರಾಷ್ಟ್ರೀಯ ಹೆದ್ದಾರಿಯ ವಿಶೇಷ ಭೂ ಸ್ವಾಧೀನಾಧಿಕಾರಿ ಹಾಗೂ ಶಿವಮೊಗ್ಗ ಹಿಂದಿನ ಅಪರ ಜಿಲ್ಲಾಧಿಕಾರಿಯಾಗಿದ್ದ ಸಿದ್ದಲಿಂಗ ರೆಡ್ಡಿ ಮತ್ತು…
ಬೈಕ್ -ಖಾಸಗಿ ಕಂಪನಿ ಬಸ್ ನಡುವೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಂದು ಸಂಜೆ ಸುಮಾರು…
ಬೈಕ್ -ಖಾಸಗಿ ಕಂಪನಿ ಬಸ್ ನಡುವೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರನಿಗೆ ಗಂಭೀರ ಗಾಯಗಳಾಗಿರುವ ಘಟನೆ ಇಂದು ಸಂಜೆ ಸುಮಾರು…
2026ನೇ ಸಾಲಿನ ದ್ವಿತೀಯ ಪಿಯುಸಿ ಮತ್ತು ಎಸ್ಎಸ್ಎಲ್ಸಿ ಪರೀಕ್ಷೆಯ ಫಲಿತಾಂಶ ದಿನಾಂಕ ಹಾಗೂ ಪರೀಕ್ಷೆ 2 ರ ವೇಳಾಪಟ್ಟಿಯನ್ನು ಶಿಕ್ಷಣ…