Categories: ರಾಜ್ಯ

ರಾಜಕೀಯವಾಗಿ ದಿವಾಳಿಯಾದ ಬಿಜೆಪಿಯಿಂದ ‘ಬಾತ್ ರೂಮ್’ ರಾಜಕಾರಣ- ಬಿಜೆಪಿ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಕಾಂಗ್ರೆಸ್ ಕಿಡಿ

ಚುನಾವಣೆಗೂ ಮೊದಲು ಕಾಂಗ್ರೆಸ್ ಪಕ್ಷ ಘೋಷಿಸಿದ್ದ ಗ್ಯಾರಂಟಿ ಯೋಜನೆಗಳು ರಾಜ್ಯದಲ್ಲಿ ಜಾರಿಯಾಗಿದ್ದು, ಜನರು ಇವುಗಳನ್ನು ಆತ್ಮೀಯವಾಗಿ ಬರ ಮಾಡಿಕೊಂಡಿದ್ದಾರೆ. ಹಾದಿ-ಬೀದಿಗಳಲ್ಲಿ ಇವುಗಳ ಬಗ್ಗೆಯೇ ಚರ್ಚಿಸುತ್ತಿದ್ದಾರೆ. ಯೋಜನೆಯ ಪ್ರಯೋಜನ ಪಡೆಯಲು ಪರಸ್ಪರ ನೆರವಾಗುತ್ತಿದ್ದಾರೆ. ಬಿಜೆಪಿಯ ಕೋಮು ರಾಜಕಾರಣದ ನೋವಿಗೆ, ಬೆಲೆ ಏರಿಕೆಯ ಬರೆಯಿಂದಾದ ಗಾಯಕ್ಕೆ ಕಾಂಗ್ರೆಸ್, ಗ್ಯಾರಂಟಿಗಳ ಮುಲಾಮು ಹಚ್ಚಿದೆ. ಸದಾ ನೋವು ನಿರಾಸೆ, ಹತಾಶೆಯಲ್ಲಿದ್ದ ಸಾರ್ವಜನಿಕರು ಗೃಹ ಜ್ಯೋತಿ, ಶಕ್ತಿ, ಅನ್ನ ಭಾಗ್ಯ, ಗೃಹ ಲಕ್ಷ್ಮಿ ಯೋಜನೆಗಳ ಲಾಭ ಪಡೆಯುವ ಮೂಲಕ ನೆಮ್ಮದಿಯ ನಿಟ್ಟುಸಿರು ಬಿಡುತ್ತಿದ್ದಾರೆ. ಗ್ಯಾರಂಟಿ ಕಾರ್ಯಕ್ರಮಗಳ ವಿರುದ್ಧ ಬಿಜೆಪಿ ಸೃಷ್ಟಿಸುತ್ತಿರುವ ಅಪ ಪ್ರಚಾರಗಳಿಗೆ ಅವರು ಕಿವಿಗೊಡದೆ, ತಮ್ಮ ಬದುಕಿನ ನಿರ್ವಹಣೆಯ ಕಡೆಗೆ ಗಮನಹರಿಸುತ್ತಿದ್ದಾರೆ. ಇದರಿಂದ ಬಿಜೆಪಿ ಸಂಪೂರ್ಣವಾಗಿ ವಿಚಲಿತಗೊಂಡು ಇಂಗು ತಿಂದ ಮಂಗನಂತೆ ಆಡುತ್ತಿದೆ ಎಂದು ಬಿಜೆಪಿ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಕಾಂಗ್ರೆಸ್ ಕಿಡಿಕಾರಿದೆ.

ತಲೆಯ ತುಂಬಾ ಕೋಮು ವಿಷವನ್ನೇ ತುಂಬಿಕೊಂಡಿರುವ ಅವರಿಗೆ ಚರ್ಚೆ ಮಾಡುವುದಕ್ಕೆ, ಹೋರಾಟ ಮಾಡುವುದಕ್ಕೆ ವಿಚಾರಗಳೇ ಸಿಗುತ್ತಿಲ್ಲ. ಈ ಕಾರಣದಿಂದಾಗಿಯೇ ಉಡುಪಿಯ ಕಾಲೇಜಿನ ಮಕ್ಕಳ ಹುಡುಗಾಟದ ವಿಚಾರವನ್ನು ‘ಬಾತ್ ರೂಮ್ ರಾಜಕಾರಣ’ವನ್ನಾಗಿ ಪರಿವರ್ತಿಸಿ, ರಾಜ್ಯದ ಜನರ ಮನಸಿನಲ್ಲೂ ಕೋಮು ವಿಷಬೀಜ ಬಿತ್ತಲು ಯತ್ನಿಸುತ್ತಿದೆ. ಇದನ್ನ ಬಿಜೆಪಿಗರ ಮುಖಕ್ಕೆ ರಾಚುವಂತೆ ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ, ಬಿಜೆಪಿ ನಾಯಕಿ ಖುಷ್ಬು ಅವರೇ ಹೇಳಿದ್ದಾರೆ. “ಉಡುಪಿ ಕಾಲೇಜಿನ ಘಟನೆಯು ಷಡ್ಯಂತ್ರವಲ್ಲ, ವಿದ್ಯಾರ್ಥಿನೀಯರ ಮೊಬೈಲ್ ಗಳಲ್ಲಿ ಯಾವುದೇ ವಿಡಿಯೋಗಳು ಪತ್ತೆಯಾಗಿಲ್ಲ, ಸಾಮಾಜಿಕ ಜಾಲತಾಣದಲ್ಲಿ ನಕಲಿ ವಿಡಿಯೋ ಹರಿಬಿಡಲಾಗಿದೆ” ಎಂದು. ಈ ಹೇಳಿಕೆಯ ಮೂಲಕ ಖುಷ್ಬು ಅವರು ಬಿಜೆಪಿಯ ಬಾತ್ ರೂಮ್ ರಾಜಕೀಯವನ್ನು ಬಯಲು ಮಾಡಿದ್ದಾರೆ.

ಬಿಜೆಪಿಗೆ ತಮ್ಮ ಪಕ್ಷಕ್ಕೆ ಸೂಕ್ತ ಅಧ್ಯಕ್ಷರನ್ನು ನೇಮಕ ಮಾಡಿಕೊಳ್ಳಲು ಆಗುತ್ತಿಲ್ಲ, ವಿರೋಧ ಪಕ್ಷದ ನಾಯಕರ ನೇಮಕದ ವಿಚಾರ ಬಂದಾಗಲೆಲ್ಲ ಜೆಡಿಎಸ್ ಕಡೆಗೆ ತಿರುಗಿ ನೋಡುತ್ತಾರೆ, ಹೋರಾಟ-ಚರ್ಚೆ ಎಂದಾಗಲೆಲ್ಲ ಶಾಲಾ ಮಕ್ಕಳ ಹುಡುಗಾಟದಲ್ಲಿ ಬಾತ್ ರೂಮ್ ರಾಜಕಾರಣ ಮಾಡುತ್ತಾರೆ. ಇದೆಲ್ಲವೂ ‘ಬಿಜೆಪಿ ರಾಜಕೀಯವಾಗಿ ಸಂಪೂರ್ಣವಾಗಿ ದಿವಾಳಿಯಾಗಿದೆ’ ಎಂಬುದನ್ನು ಸಾಬೀತು ಮಾಡುತ್ತಿವೆ ಎಂದು ಬಿಜೆಪಿ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ.

Ramesh Babu

Journalist

Recent Posts

185 ವರ್ಷಗಳ ಹಳೆಯ ಪೊಲೀಸ್ ಬಿಲ್ಲೆ ಪತ್ತೆ: ಇತಿಹಾಸ ಸಂರಕ್ಷಣೆಯಲ್ಲಿ ಇನ್ಸ್‌ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ವಿಶಿಷ್ಟ ಹೆಜ್ಜೆ

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…

5 hours ago

ಸಿದ್ದರಾಮಯ್ಯ ಸಹಕಾರದಿಂದ 2028ಕ್ಕೆ ಡಿಕೆಶಿ ಮತ್ತೆ ಸಿಎಂ ಆಗ್ತಾರೆ – ಗೌರಿ-ಗಣೇಶ ಹಬ್ಬದಂದು ಮಳೆ ಬರಲಿ ಎಂದು ಪ್ರಾರ್ಥನೆ ಮಾಡೋಣ – ಸಚಿವ ಚಲುವರಾಯಸ್ವಾಮಿ

ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…

6 hours ago

ಮನೆ ಮಾಲೀಕರ ಮುಂದೆಯೇ ಮನೆ ದೋಚಿ ಪರಾರಿಯಾಗಿದ್ದ ಕಳ್ಳ ಲಾಕ್‌!

ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…

7 hours ago

ಕೋಳಿಫಾರ್ಮ್‌ಗೆ ಚಿರತೆ ದಾಳಿ ಶಂಕೆ: 950ಕ್ಕೂ ಅಧಿಕ ಕೋಳಿಮರಿಗಳು ಬಲಿ!

  ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್‌ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…

7 hours ago

ಯೋಜನಾ ಪ್ರಾಧಿಕಾರಕ್ಕೆ ಮುನಿರಾಜು ಆಯ್ಕೆ: ಯುವ ಕಾಂಗ್ರೆಸ್‌ನಿಂದ ಆತ್ಮೀಯ ಅಭಿನಂದನೆ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…

11 hours ago

ವಿಯೆಟ್ನಾಂನಿಂದ 1.38 ಕೋಟಿ ಮೌಲ್ಯದ ಹೈಡ್ರೋಫೋನಿಕ್ ಗಾಂಜಾ ಸಾಗಾಟ: ಆರೋಪಿ ಬಂಧನ

ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…

13 hours ago