Categories: ರಾಜ್ಯ

ರಾಜಕೀಯವಾಗಿ ದಿವಾಳಿಯಾದ ಬಿಜೆಪಿಯಿಂದ ‘ಬಾತ್ ರೂಮ್’ ರಾಜಕಾರಣ- ಬಿಜೆಪಿ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಕಾಂಗ್ರೆಸ್ ಕಿಡಿ

ಚುನಾವಣೆಗೂ ಮೊದಲು ಕಾಂಗ್ರೆಸ್ ಪಕ್ಷ ಘೋಷಿಸಿದ್ದ ಗ್ಯಾರಂಟಿ ಯೋಜನೆಗಳು ರಾಜ್ಯದಲ್ಲಿ ಜಾರಿಯಾಗಿದ್ದು, ಜನರು ಇವುಗಳನ್ನು ಆತ್ಮೀಯವಾಗಿ ಬರ ಮಾಡಿಕೊಂಡಿದ್ದಾರೆ. ಹಾದಿ-ಬೀದಿಗಳಲ್ಲಿ ಇವುಗಳ ಬಗ್ಗೆಯೇ ಚರ್ಚಿಸುತ್ತಿದ್ದಾರೆ. ಯೋಜನೆಯ ಪ್ರಯೋಜನ ಪಡೆಯಲು ಪರಸ್ಪರ ನೆರವಾಗುತ್ತಿದ್ದಾರೆ. ಬಿಜೆಪಿಯ ಕೋಮು ರಾಜಕಾರಣದ ನೋವಿಗೆ, ಬೆಲೆ ಏರಿಕೆಯ ಬರೆಯಿಂದಾದ ಗಾಯಕ್ಕೆ ಕಾಂಗ್ರೆಸ್, ಗ್ಯಾರಂಟಿಗಳ ಮುಲಾಮು ಹಚ್ಚಿದೆ. ಸದಾ ನೋವು ನಿರಾಸೆ, ಹತಾಶೆಯಲ್ಲಿದ್ದ ಸಾರ್ವಜನಿಕರು ಗೃಹ ಜ್ಯೋತಿ, ಶಕ್ತಿ, ಅನ್ನ ಭಾಗ್ಯ, ಗೃಹ ಲಕ್ಷ್ಮಿ ಯೋಜನೆಗಳ ಲಾಭ ಪಡೆಯುವ ಮೂಲಕ ನೆಮ್ಮದಿಯ ನಿಟ್ಟುಸಿರು ಬಿಡುತ್ತಿದ್ದಾರೆ. ಗ್ಯಾರಂಟಿ ಕಾರ್ಯಕ್ರಮಗಳ ವಿರುದ್ಧ ಬಿಜೆಪಿ ಸೃಷ್ಟಿಸುತ್ತಿರುವ ಅಪ ಪ್ರಚಾರಗಳಿಗೆ ಅವರು ಕಿವಿಗೊಡದೆ, ತಮ್ಮ ಬದುಕಿನ ನಿರ್ವಹಣೆಯ ಕಡೆಗೆ ಗಮನಹರಿಸುತ್ತಿದ್ದಾರೆ. ಇದರಿಂದ ಬಿಜೆಪಿ ಸಂಪೂರ್ಣವಾಗಿ ವಿಚಲಿತಗೊಂಡು ಇಂಗು ತಿಂದ ಮಂಗನಂತೆ ಆಡುತ್ತಿದೆ ಎಂದು ಬಿಜೆಪಿ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಕಾಂಗ್ರೆಸ್ ಕಿಡಿಕಾರಿದೆ.

ತಲೆಯ ತುಂಬಾ ಕೋಮು ವಿಷವನ್ನೇ ತುಂಬಿಕೊಂಡಿರುವ ಅವರಿಗೆ ಚರ್ಚೆ ಮಾಡುವುದಕ್ಕೆ, ಹೋರಾಟ ಮಾಡುವುದಕ್ಕೆ ವಿಚಾರಗಳೇ ಸಿಗುತ್ತಿಲ್ಲ. ಈ ಕಾರಣದಿಂದಾಗಿಯೇ ಉಡುಪಿಯ ಕಾಲೇಜಿನ ಮಕ್ಕಳ ಹುಡುಗಾಟದ ವಿಚಾರವನ್ನು ‘ಬಾತ್ ರೂಮ್ ರಾಜಕಾರಣ’ವನ್ನಾಗಿ ಪರಿವರ್ತಿಸಿ, ರಾಜ್ಯದ ಜನರ ಮನಸಿನಲ್ಲೂ ಕೋಮು ವಿಷಬೀಜ ಬಿತ್ತಲು ಯತ್ನಿಸುತ್ತಿದೆ. ಇದನ್ನ ಬಿಜೆಪಿಗರ ಮುಖಕ್ಕೆ ರಾಚುವಂತೆ ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ, ಬಿಜೆಪಿ ನಾಯಕಿ ಖುಷ್ಬು ಅವರೇ ಹೇಳಿದ್ದಾರೆ. “ಉಡುಪಿ ಕಾಲೇಜಿನ ಘಟನೆಯು ಷಡ್ಯಂತ್ರವಲ್ಲ, ವಿದ್ಯಾರ್ಥಿನೀಯರ ಮೊಬೈಲ್ ಗಳಲ್ಲಿ ಯಾವುದೇ ವಿಡಿಯೋಗಳು ಪತ್ತೆಯಾಗಿಲ್ಲ, ಸಾಮಾಜಿಕ ಜಾಲತಾಣದಲ್ಲಿ ನಕಲಿ ವಿಡಿಯೋ ಹರಿಬಿಡಲಾಗಿದೆ” ಎಂದು. ಈ ಹೇಳಿಕೆಯ ಮೂಲಕ ಖುಷ್ಬು ಅವರು ಬಿಜೆಪಿಯ ಬಾತ್ ರೂಮ್ ರಾಜಕೀಯವನ್ನು ಬಯಲು ಮಾಡಿದ್ದಾರೆ.

ಬಿಜೆಪಿಗೆ ತಮ್ಮ ಪಕ್ಷಕ್ಕೆ ಸೂಕ್ತ ಅಧ್ಯಕ್ಷರನ್ನು ನೇಮಕ ಮಾಡಿಕೊಳ್ಳಲು ಆಗುತ್ತಿಲ್ಲ, ವಿರೋಧ ಪಕ್ಷದ ನಾಯಕರ ನೇಮಕದ ವಿಚಾರ ಬಂದಾಗಲೆಲ್ಲ ಜೆಡಿಎಸ್ ಕಡೆಗೆ ತಿರುಗಿ ನೋಡುತ್ತಾರೆ, ಹೋರಾಟ-ಚರ್ಚೆ ಎಂದಾಗಲೆಲ್ಲ ಶಾಲಾ ಮಕ್ಕಳ ಹುಡುಗಾಟದಲ್ಲಿ ಬಾತ್ ರೂಮ್ ರಾಜಕಾರಣ ಮಾಡುತ್ತಾರೆ. ಇದೆಲ್ಲವೂ ‘ಬಿಜೆಪಿ ರಾಜಕೀಯವಾಗಿ ಸಂಪೂರ್ಣವಾಗಿ ದಿವಾಳಿಯಾಗಿದೆ’ ಎಂಬುದನ್ನು ಸಾಬೀತು ಮಾಡುತ್ತಿವೆ ಎಂದು ಬಿಜೆಪಿ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ.

Ramesh Babu

Journalist

Recent Posts

ಇ-ಸ್ವತ್ತು ಅರ್ಜಿ ಸಲ್ಲಿಕೆಗೆ ಬಾಪೂಜಿ ಸೇವಾ ಕೇಂದ್ರ (ಗ್ರಾಮ ಒನ್), ಕರ್ನಾಟಕ ಒನ್, ಬೆಂಗಳೂರು ಒನ್ ಕೇಂದ್ರಗಳಲ್ಲೂ ಸೌಲಭ್ಯ

ನಾಗರಿಕರಿಗೆ ಇನ್ನಷ್ಟು ಹತ್ತಿರದಲ್ಲಿ ಸರ್ಕಾರಿ ಸೇವೆಗಳನ್ನು ಒದಗಿಸುವ ಉದ್ದೇಶದಿಂದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹಾಗೂ ಇ-ಆಡಳಿತ ಇಲಾಖೆಯ…

4 hours ago

Effektives Schreiben einer Facharbeit_ Ein Leitfaden

Das Schreiben einer Facharbeit stellt für viele Schüler und Studenten eine große Herausforderung dar. Der…

4 hours ago

ಡಾಕ್ಟರ್ ರಾಜ್ ಕುಮಾರ್ ಅವರಿಗೆ ಜನ್ಮದಿನದ ಶುಭಾಶಯಗಳು

ಏಪ್ರಿಲ್ ಧಮಾಕಾ....... ಕನ್ನಡ ಸಿನಿಮಾದ ಡಾಕ್ಟರ್ ರಾಜಕುಮಾರ್ ಏಪ್ರಿಲ್ 24, ಇಂಗ್ಲೀಷ್ ಸಾಹಿತ್ಯದ ವಿಲಿಯಂ ಶೇಕ್ಸ್ಪಿಯರ್ ಏಪ್ರಿಲ್ 23, ವಿಶ್ವ…

8 hours ago

ಎಸ್ಸೆಸ್ಸೆಲ್ಸಿ ಪರೀಕ್ಷೆ-01 ಫಲಿತಾಂಶ ಪ್ರಕಟ: ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ 11ನೇ ಸ್ಥಾನ

2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ರ ಫಲಿತಾಂಶ ಪ್ರಕಟಗೊಂಡಿದ್ದು ಬೆಂಗಳೂರು ಗ್ರಾಮಾಂತರ ಜಿಲ್ಲೆಯು ಶೇ. 95.62% ರಷ್ಟು ಫಲಿತಾಂಶ ಪಡೆಯುವ…

20 hours ago

ಭಗೀರಥ ಜಯಂತಿ ಆಚರಣೆ

ದೊಡ್ಡಬಳ್ಳಾಪುರ: ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಮತ್ತು ತಾಲೂಕು ಆಡಳಿತದ ವತಿಯಿಂದ ತಹಶಿಲ್ದಾರ್ ಮಲ್ಲಪ್ಪ ಎರಗೋಡ ನೇತೃತ್ವದಲ್ಲಿ ತಾಲ್ಲೂಕು ಕಚೇರಿ…

23 hours ago

ಯಲಹಂಕದ ಮಣಿಪಾಲ್ ಆಸ್ಪತ್ರೆಯಲ್ಲಿ ಸಕಾಲಿಕ ಮತ್ತು ತಜ್ಞ ಆರೈಕೆಯಿಂದ ಆಕಸ್ಮಿಕವಾಗಿ 2 ನೇ ಮಹಡಿಯಿಂದ ಬಿದ್ದ 2 ವರ್ಷದ ಮಗುವಿಗೆ ಜೀವದಾನ

ಜೀವನ ಕೆಲವೊಮ್ಮೆ ಕ್ಷಣಾರ್ಧದಲ್ಲಿ ಬದಲಾಗುತ್ತದೆ. ಒಂದು ಕ್ಷಣದಲ್ಲಿ ಎಲ್ಲವೂ ಸಹಜವಾಗಿರುತ್ತದೆ, ಮುಂದಿನ ಕ್ಷಣದಲ್ಲಿ ಅನಿಶ್ಚಿತತೆ ಆವರಿಸುತ್ತದೆ. ಅಪಘಾತಗಳು ಯಾವುದೇ ಮುನ್ನೆಚ್ಚರಿಕೆ…

1 day ago