ಚುನಾವಣೆಗೂ ಮೊದಲು ಕಾಂಗ್ರೆಸ್ ಪಕ್ಷ ಘೋಷಿಸಿದ್ದ ಗ್ಯಾರಂಟಿ ಯೋಜನೆಗಳು ರಾಜ್ಯದಲ್ಲಿ ಜಾರಿಯಾಗಿದ್ದು, ಜನರು ಇವುಗಳನ್ನು ಆತ್ಮೀಯವಾಗಿ ಬರ ಮಾಡಿಕೊಂಡಿದ್ದಾರೆ. ಹಾದಿ-ಬೀದಿಗಳಲ್ಲಿ ಇವುಗಳ ಬಗ್ಗೆಯೇ ಚರ್ಚಿಸುತ್ತಿದ್ದಾರೆ. ಯೋಜನೆಯ ಪ್ರಯೋಜನ ಪಡೆಯಲು ಪರಸ್ಪರ ನೆರವಾಗುತ್ತಿದ್ದಾರೆ. ಬಿಜೆಪಿಯ ಕೋಮು ರಾಜಕಾರಣದ ನೋವಿಗೆ, ಬೆಲೆ ಏರಿಕೆಯ ಬರೆಯಿಂದಾದ ಗಾಯಕ್ಕೆ ಕಾಂಗ್ರೆಸ್, ಗ್ಯಾರಂಟಿಗಳ ಮುಲಾಮು ಹಚ್ಚಿದೆ. ಸದಾ ನೋವು ನಿರಾಸೆ, ಹತಾಶೆಯಲ್ಲಿದ್ದ ಸಾರ್ವಜನಿಕರು ಗೃಹ ಜ್ಯೋತಿ, ಶಕ್ತಿ, ಅನ್ನ ಭಾಗ್ಯ, ಗೃಹ ಲಕ್ಷ್ಮಿ ಯೋಜನೆಗಳ ಲಾಭ ಪಡೆಯುವ ಮೂಲಕ ನೆಮ್ಮದಿಯ ನಿಟ್ಟುಸಿರು ಬಿಡುತ್ತಿದ್ದಾರೆ. ಗ್ಯಾರಂಟಿ ಕಾರ್ಯಕ್ರಮಗಳ ವಿರುದ್ಧ ಬಿಜೆಪಿ ಸೃಷ್ಟಿಸುತ್ತಿರುವ ಅಪ ಪ್ರಚಾರಗಳಿಗೆ ಅವರು ಕಿವಿಗೊಡದೆ, ತಮ್ಮ ಬದುಕಿನ ನಿರ್ವಹಣೆಯ ಕಡೆಗೆ ಗಮನಹರಿಸುತ್ತಿದ್ದಾರೆ. ಇದರಿಂದ ಬಿಜೆಪಿ ಸಂಪೂರ್ಣವಾಗಿ ವಿಚಲಿತಗೊಂಡು ಇಂಗು ತಿಂದ ಮಂಗನಂತೆ ಆಡುತ್ತಿದೆ ಎಂದು ಬಿಜೆಪಿ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಕಾಂಗ್ರೆಸ್ ಕಿಡಿಕಾರಿದೆ.
ತಲೆಯ ತುಂಬಾ ಕೋಮು ವಿಷವನ್ನೇ ತುಂಬಿಕೊಂಡಿರುವ ಅವರಿಗೆ ಚರ್ಚೆ ಮಾಡುವುದಕ್ಕೆ, ಹೋರಾಟ ಮಾಡುವುದಕ್ಕೆ ವಿಚಾರಗಳೇ ಸಿಗುತ್ತಿಲ್ಲ. ಈ ಕಾರಣದಿಂದಾಗಿಯೇ ಉಡುಪಿಯ ಕಾಲೇಜಿನ ಮಕ್ಕಳ ಹುಡುಗಾಟದ ವಿಚಾರವನ್ನು ‘ಬಾತ್ ರೂಮ್ ರಾಜಕಾರಣ’ವನ್ನಾಗಿ ಪರಿವರ್ತಿಸಿ, ರಾಜ್ಯದ ಜನರ ಮನಸಿನಲ್ಲೂ ಕೋಮು ವಿಷಬೀಜ ಬಿತ್ತಲು ಯತ್ನಿಸುತ್ತಿದೆ. ಇದನ್ನ ಬಿಜೆಪಿಗರ ಮುಖಕ್ಕೆ ರಾಚುವಂತೆ ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ, ಬಿಜೆಪಿ ನಾಯಕಿ ಖುಷ್ಬು ಅವರೇ ಹೇಳಿದ್ದಾರೆ. “ಉಡುಪಿ ಕಾಲೇಜಿನ ಘಟನೆಯು ಷಡ್ಯಂತ್ರವಲ್ಲ, ವಿದ್ಯಾರ್ಥಿನೀಯರ ಮೊಬೈಲ್ ಗಳಲ್ಲಿ ಯಾವುದೇ ವಿಡಿಯೋಗಳು ಪತ್ತೆಯಾಗಿಲ್ಲ, ಸಾಮಾಜಿಕ ಜಾಲತಾಣದಲ್ಲಿ ನಕಲಿ ವಿಡಿಯೋ ಹರಿಬಿಡಲಾಗಿದೆ” ಎಂದು. ಈ ಹೇಳಿಕೆಯ ಮೂಲಕ ಖುಷ್ಬು ಅವರು ಬಿಜೆಪಿಯ ಬಾತ್ ರೂಮ್ ರಾಜಕೀಯವನ್ನು ಬಯಲು ಮಾಡಿದ್ದಾರೆ.
ಬಿಜೆಪಿಗೆ ತಮ್ಮ ಪಕ್ಷಕ್ಕೆ ಸೂಕ್ತ ಅಧ್ಯಕ್ಷರನ್ನು ನೇಮಕ ಮಾಡಿಕೊಳ್ಳಲು ಆಗುತ್ತಿಲ್ಲ, ವಿರೋಧ ಪಕ್ಷದ ನಾಯಕರ ನೇಮಕದ ವಿಚಾರ ಬಂದಾಗಲೆಲ್ಲ ಜೆಡಿಎಸ್ ಕಡೆಗೆ ತಿರುಗಿ ನೋಡುತ್ತಾರೆ, ಹೋರಾಟ-ಚರ್ಚೆ ಎಂದಾಗಲೆಲ್ಲ ಶಾಲಾ ಮಕ್ಕಳ ಹುಡುಗಾಟದಲ್ಲಿ ಬಾತ್ ರೂಮ್ ರಾಜಕಾರಣ ಮಾಡುತ್ತಾರೆ. ಇದೆಲ್ಲವೂ ‘ಬಿಜೆಪಿ ರಾಜಕೀಯವಾಗಿ ಸಂಪೂರ್ಣವಾಗಿ ದಿವಾಳಿಯಾಗಿದೆ’ ಎಂಬುದನ್ನು ಸಾಬೀತು ಮಾಡುತ್ತಿವೆ ಎಂದು ಬಿಜೆಪಿ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ.
ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…