Categories: ರಾಜ್ಯ

ರಾಜಕೀಯವಾಗಿ ದಿವಾಳಿಯಾದ ಬಿಜೆಪಿಯಿಂದ ‘ಬಾತ್ ರೂಮ್’ ರಾಜಕಾರಣ- ಬಿಜೆಪಿ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಕಾಂಗ್ರೆಸ್ ಕಿಡಿ

ಚುನಾವಣೆಗೂ ಮೊದಲು ಕಾಂಗ್ರೆಸ್ ಪಕ್ಷ ಘೋಷಿಸಿದ್ದ ಗ್ಯಾರಂಟಿ ಯೋಜನೆಗಳು ರಾಜ್ಯದಲ್ಲಿ ಜಾರಿಯಾಗಿದ್ದು, ಜನರು ಇವುಗಳನ್ನು ಆತ್ಮೀಯವಾಗಿ ಬರ ಮಾಡಿಕೊಂಡಿದ್ದಾರೆ. ಹಾದಿ-ಬೀದಿಗಳಲ್ಲಿ ಇವುಗಳ ಬಗ್ಗೆಯೇ ಚರ್ಚಿಸುತ್ತಿದ್ದಾರೆ. ಯೋಜನೆಯ ಪ್ರಯೋಜನ ಪಡೆಯಲು ಪರಸ್ಪರ ನೆರವಾಗುತ್ತಿದ್ದಾರೆ. ಬಿಜೆಪಿಯ ಕೋಮು ರಾಜಕಾರಣದ ನೋವಿಗೆ, ಬೆಲೆ ಏರಿಕೆಯ ಬರೆಯಿಂದಾದ ಗಾಯಕ್ಕೆ ಕಾಂಗ್ರೆಸ್, ಗ್ಯಾರಂಟಿಗಳ ಮುಲಾಮು ಹಚ್ಚಿದೆ. ಸದಾ ನೋವು ನಿರಾಸೆ, ಹತಾಶೆಯಲ್ಲಿದ್ದ ಸಾರ್ವಜನಿಕರು ಗೃಹ ಜ್ಯೋತಿ, ಶಕ್ತಿ, ಅನ್ನ ಭಾಗ್ಯ, ಗೃಹ ಲಕ್ಷ್ಮಿ ಯೋಜನೆಗಳ ಲಾಭ ಪಡೆಯುವ ಮೂಲಕ ನೆಮ್ಮದಿಯ ನಿಟ್ಟುಸಿರು ಬಿಡುತ್ತಿದ್ದಾರೆ. ಗ್ಯಾರಂಟಿ ಕಾರ್ಯಕ್ರಮಗಳ ವಿರುದ್ಧ ಬಿಜೆಪಿ ಸೃಷ್ಟಿಸುತ್ತಿರುವ ಅಪ ಪ್ರಚಾರಗಳಿಗೆ ಅವರು ಕಿವಿಗೊಡದೆ, ತಮ್ಮ ಬದುಕಿನ ನಿರ್ವಹಣೆಯ ಕಡೆಗೆ ಗಮನಹರಿಸುತ್ತಿದ್ದಾರೆ. ಇದರಿಂದ ಬಿಜೆಪಿ ಸಂಪೂರ್ಣವಾಗಿ ವಿಚಲಿತಗೊಂಡು ಇಂಗು ತಿಂದ ಮಂಗನಂತೆ ಆಡುತ್ತಿದೆ ಎಂದು ಬಿಜೆಪಿ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಕಾಂಗ್ರೆಸ್ ಕಿಡಿಕಾರಿದೆ.

ತಲೆಯ ತುಂಬಾ ಕೋಮು ವಿಷವನ್ನೇ ತುಂಬಿಕೊಂಡಿರುವ ಅವರಿಗೆ ಚರ್ಚೆ ಮಾಡುವುದಕ್ಕೆ, ಹೋರಾಟ ಮಾಡುವುದಕ್ಕೆ ವಿಚಾರಗಳೇ ಸಿಗುತ್ತಿಲ್ಲ. ಈ ಕಾರಣದಿಂದಾಗಿಯೇ ಉಡುಪಿಯ ಕಾಲೇಜಿನ ಮಕ್ಕಳ ಹುಡುಗಾಟದ ವಿಚಾರವನ್ನು ‘ಬಾತ್ ರೂಮ್ ರಾಜಕಾರಣ’ವನ್ನಾಗಿ ಪರಿವರ್ತಿಸಿ, ರಾಜ್ಯದ ಜನರ ಮನಸಿನಲ್ಲೂ ಕೋಮು ವಿಷಬೀಜ ಬಿತ್ತಲು ಯತ್ನಿಸುತ್ತಿದೆ. ಇದನ್ನ ಬಿಜೆಪಿಗರ ಮುಖಕ್ಕೆ ರಾಚುವಂತೆ ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ, ಬಿಜೆಪಿ ನಾಯಕಿ ಖುಷ್ಬು ಅವರೇ ಹೇಳಿದ್ದಾರೆ. “ಉಡುಪಿ ಕಾಲೇಜಿನ ಘಟನೆಯು ಷಡ್ಯಂತ್ರವಲ್ಲ, ವಿದ್ಯಾರ್ಥಿನೀಯರ ಮೊಬೈಲ್ ಗಳಲ್ಲಿ ಯಾವುದೇ ವಿಡಿಯೋಗಳು ಪತ್ತೆಯಾಗಿಲ್ಲ, ಸಾಮಾಜಿಕ ಜಾಲತಾಣದಲ್ಲಿ ನಕಲಿ ವಿಡಿಯೋ ಹರಿಬಿಡಲಾಗಿದೆ” ಎಂದು. ಈ ಹೇಳಿಕೆಯ ಮೂಲಕ ಖುಷ್ಬು ಅವರು ಬಿಜೆಪಿಯ ಬಾತ್ ರೂಮ್ ರಾಜಕೀಯವನ್ನು ಬಯಲು ಮಾಡಿದ್ದಾರೆ.

ಬಿಜೆಪಿಗೆ ತಮ್ಮ ಪಕ್ಷಕ್ಕೆ ಸೂಕ್ತ ಅಧ್ಯಕ್ಷರನ್ನು ನೇಮಕ ಮಾಡಿಕೊಳ್ಳಲು ಆಗುತ್ತಿಲ್ಲ, ವಿರೋಧ ಪಕ್ಷದ ನಾಯಕರ ನೇಮಕದ ವಿಚಾರ ಬಂದಾಗಲೆಲ್ಲ ಜೆಡಿಎಸ್ ಕಡೆಗೆ ತಿರುಗಿ ನೋಡುತ್ತಾರೆ, ಹೋರಾಟ-ಚರ್ಚೆ ಎಂದಾಗಲೆಲ್ಲ ಶಾಲಾ ಮಕ್ಕಳ ಹುಡುಗಾಟದಲ್ಲಿ ಬಾತ್ ರೂಮ್ ರಾಜಕಾರಣ ಮಾಡುತ್ತಾರೆ. ಇದೆಲ್ಲವೂ ‘ಬಿಜೆಪಿ ರಾಜಕೀಯವಾಗಿ ಸಂಪೂರ್ಣವಾಗಿ ದಿವಾಳಿಯಾಗಿದೆ’ ಎಂಬುದನ್ನು ಸಾಬೀತು ಮಾಡುತ್ತಿವೆ ಎಂದು ಬಿಜೆಪಿ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ.

Ramesh Babu

Journalist

Recent Posts

ಅತಿವೃಷ್ಟಿ–ಬರ ಎದುರಿಸಲು ಸಚಿವರಿಗೆ ಜಿಲ್ಲೆಗಳ ಉಸ್ತುವಾರಿ: ಯಾವ ಸಚಿವರಿಗೆ ಯಾವ ಜಿಲ್ಲೆ? ಸರ್ಕಾರದಿಂದ ಉಸ್ತುವಾರಿ ಪಟ್ಟಿ ಪ್ರಕಟ

ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…

2 hours ago

ಲಯನ್ಸ್ ಕ್ಲಬ್ ಆಫ್ ಕೊನಘಟ್ಟ ಲೆಜೆಂಡ್ಸ್ ಅಧ್ಯಕ್ಷರಾಗಿ ಜಿ.ಲಕ್ಷ್ಮಿಪತಿ ಆಯ್ಕೆ

ದೊಡ್ಡಬಳ್ಳಾಪುರ: ಸಮಾಜ ಸೇವೆಯೇ ಲಯನ್ಸ್ ಕ್ಲಬ್‌ನ ಮೂಲ ಧ್ಯೇಯವಾಗಿದ್ದು, ನಿರಂತರವಾಗಿ ಸೇವಾ ಕಾರ್ಯಗಳನ್ನು ಮುಂದುವರಿಸಬೇಕು. ಲಯನ್ಸ್ ಕ್ಲಬ್ ಆಫ್ ಕೊನಘಟ್ಟ…

2 hours ago

ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ; ₹5.50 ಲಕ್ಷ ಲಂಚ ಸ್ವೀಕರಿಸುವ ವೇಳೆ ಟ್ರ್ಯಾಪ್

ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…

10 hours ago

ಸಚಿವ ಸಂಪುಟ ವಿಸ್ತರಣೆ: 20 ಮಂದಿಗೆ ಸಚಿವ ಸ್ಥಾನ; ಶರತ್ ಬಚ್ಚೇಗೌಡಗೆ ಮತ್ತೆ ನಿರಾಸೆ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…

21 hours ago

ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡರಿಗೆ ಕೈತಪ್ಪಿದ ಮಂತ್ರಿಗಿರಿ; ಎರಡನೇ ಪಟ್ಟಿಯಲ್ಲಿ 20 ಮಂದಿಗೆ ಅವಕಾಶ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…

1 day ago

ಆಧಾರ್ ಸಮಸ್ಯೆಗೆ ಸಿಲುಕಿದ 16 ಸಾವಿರ ವಿದ್ಯಾರ್ಥಿಗಳು! ಸೌಲಭ್ಯಗಳಿಂದ ವಂಚಿತರಾಗುವ ಆತಂಕ; ವಲಸೆ ಕಾರ್ಮಿಕರ ಮಕ್ಕಳಿಗೇ ಹೆಚ್ಚು ಸಂಕಷ್ಟ

ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…

1 day ago