Categories: ರಾಜ್ಯ

ರಾಜಕೀಯವಾಗಿ ದಿವಾಳಿಯಾದ ಬಿಜೆಪಿಯಿಂದ ‘ಬಾತ್ ರೂಮ್’ ರಾಜಕಾರಣ- ಬಿಜೆಪಿ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಕಾಂಗ್ರೆಸ್ ಕಿಡಿ

ಚುನಾವಣೆಗೂ ಮೊದಲು ಕಾಂಗ್ರೆಸ್ ಪಕ್ಷ ಘೋಷಿಸಿದ್ದ ಗ್ಯಾರಂಟಿ ಯೋಜನೆಗಳು ರಾಜ್ಯದಲ್ಲಿ ಜಾರಿಯಾಗಿದ್ದು, ಜನರು ಇವುಗಳನ್ನು ಆತ್ಮೀಯವಾಗಿ ಬರ ಮಾಡಿಕೊಂಡಿದ್ದಾರೆ. ಹಾದಿ-ಬೀದಿಗಳಲ್ಲಿ ಇವುಗಳ ಬಗ್ಗೆಯೇ ಚರ್ಚಿಸುತ್ತಿದ್ದಾರೆ. ಯೋಜನೆಯ ಪ್ರಯೋಜನ ಪಡೆಯಲು ಪರಸ್ಪರ ನೆರವಾಗುತ್ತಿದ್ದಾರೆ. ಬಿಜೆಪಿಯ ಕೋಮು ರಾಜಕಾರಣದ ನೋವಿಗೆ, ಬೆಲೆ ಏರಿಕೆಯ ಬರೆಯಿಂದಾದ ಗಾಯಕ್ಕೆ ಕಾಂಗ್ರೆಸ್, ಗ್ಯಾರಂಟಿಗಳ ಮುಲಾಮು ಹಚ್ಚಿದೆ. ಸದಾ ನೋವು ನಿರಾಸೆ, ಹತಾಶೆಯಲ್ಲಿದ್ದ ಸಾರ್ವಜನಿಕರು ಗೃಹ ಜ್ಯೋತಿ, ಶಕ್ತಿ, ಅನ್ನ ಭಾಗ್ಯ, ಗೃಹ ಲಕ್ಷ್ಮಿ ಯೋಜನೆಗಳ ಲಾಭ ಪಡೆಯುವ ಮೂಲಕ ನೆಮ್ಮದಿಯ ನಿಟ್ಟುಸಿರು ಬಿಡುತ್ತಿದ್ದಾರೆ. ಗ್ಯಾರಂಟಿ ಕಾರ್ಯಕ್ರಮಗಳ ವಿರುದ್ಧ ಬಿಜೆಪಿ ಸೃಷ್ಟಿಸುತ್ತಿರುವ ಅಪ ಪ್ರಚಾರಗಳಿಗೆ ಅವರು ಕಿವಿಗೊಡದೆ, ತಮ್ಮ ಬದುಕಿನ ನಿರ್ವಹಣೆಯ ಕಡೆಗೆ ಗಮನಹರಿಸುತ್ತಿದ್ದಾರೆ. ಇದರಿಂದ ಬಿಜೆಪಿ ಸಂಪೂರ್ಣವಾಗಿ ವಿಚಲಿತಗೊಂಡು ಇಂಗು ತಿಂದ ಮಂಗನಂತೆ ಆಡುತ್ತಿದೆ ಎಂದು ಬಿಜೆಪಿ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಕಾಂಗ್ರೆಸ್ ಕಿಡಿಕಾರಿದೆ.

ತಲೆಯ ತುಂಬಾ ಕೋಮು ವಿಷವನ್ನೇ ತುಂಬಿಕೊಂಡಿರುವ ಅವರಿಗೆ ಚರ್ಚೆ ಮಾಡುವುದಕ್ಕೆ, ಹೋರಾಟ ಮಾಡುವುದಕ್ಕೆ ವಿಚಾರಗಳೇ ಸಿಗುತ್ತಿಲ್ಲ. ಈ ಕಾರಣದಿಂದಾಗಿಯೇ ಉಡುಪಿಯ ಕಾಲೇಜಿನ ಮಕ್ಕಳ ಹುಡುಗಾಟದ ವಿಚಾರವನ್ನು ‘ಬಾತ್ ರೂಮ್ ರಾಜಕಾರಣ’ವನ್ನಾಗಿ ಪರಿವರ್ತಿಸಿ, ರಾಜ್ಯದ ಜನರ ಮನಸಿನಲ್ಲೂ ಕೋಮು ವಿಷಬೀಜ ಬಿತ್ತಲು ಯತ್ನಿಸುತ್ತಿದೆ. ಇದನ್ನ ಬಿಜೆಪಿಗರ ಮುಖಕ್ಕೆ ರಾಚುವಂತೆ ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ, ಬಿಜೆಪಿ ನಾಯಕಿ ಖುಷ್ಬು ಅವರೇ ಹೇಳಿದ್ದಾರೆ. “ಉಡುಪಿ ಕಾಲೇಜಿನ ಘಟನೆಯು ಷಡ್ಯಂತ್ರವಲ್ಲ, ವಿದ್ಯಾರ್ಥಿನೀಯರ ಮೊಬೈಲ್ ಗಳಲ್ಲಿ ಯಾವುದೇ ವಿಡಿಯೋಗಳು ಪತ್ತೆಯಾಗಿಲ್ಲ, ಸಾಮಾಜಿಕ ಜಾಲತಾಣದಲ್ಲಿ ನಕಲಿ ವಿಡಿಯೋ ಹರಿಬಿಡಲಾಗಿದೆ” ಎಂದು. ಈ ಹೇಳಿಕೆಯ ಮೂಲಕ ಖುಷ್ಬು ಅವರು ಬಿಜೆಪಿಯ ಬಾತ್ ರೂಮ್ ರಾಜಕೀಯವನ್ನು ಬಯಲು ಮಾಡಿದ್ದಾರೆ.

ಬಿಜೆಪಿಗೆ ತಮ್ಮ ಪಕ್ಷಕ್ಕೆ ಸೂಕ್ತ ಅಧ್ಯಕ್ಷರನ್ನು ನೇಮಕ ಮಾಡಿಕೊಳ್ಳಲು ಆಗುತ್ತಿಲ್ಲ, ವಿರೋಧ ಪಕ್ಷದ ನಾಯಕರ ನೇಮಕದ ವಿಚಾರ ಬಂದಾಗಲೆಲ್ಲ ಜೆಡಿಎಸ್ ಕಡೆಗೆ ತಿರುಗಿ ನೋಡುತ್ತಾರೆ, ಹೋರಾಟ-ಚರ್ಚೆ ಎಂದಾಗಲೆಲ್ಲ ಶಾಲಾ ಮಕ್ಕಳ ಹುಡುಗಾಟದಲ್ಲಿ ಬಾತ್ ರೂಮ್ ರಾಜಕಾರಣ ಮಾಡುತ್ತಾರೆ. ಇದೆಲ್ಲವೂ ‘ಬಿಜೆಪಿ ರಾಜಕೀಯವಾಗಿ ಸಂಪೂರ್ಣವಾಗಿ ದಿವಾಳಿಯಾಗಿದೆ’ ಎಂಬುದನ್ನು ಸಾಬೀತು ಮಾಡುತ್ತಿವೆ ಎಂದು ಬಿಜೆಪಿ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ.

Ramesh Babu

Journalist

Recent Posts

ಪ್ರಶ್ನೆ ಪತ್ರಿಕೆ ಬಯಲಾಗುತ್ತಲೇ ಇದೆ….

ನೀಟ್ ಪ್ರಶ್ನೆ ಪತ್ರಿಕೆ ಬಯಲು.... ಪ್ರಶ್ನೆ ಪತ್ರಿಕೆ ಬಯಲಾಗುತ್ತಲೇ ಇದೆ. ನನಗೆ ಇದೇನು ದೊಡ್ಡ ಆಶ್ಚರ್ಯವಲ್ಲ. ಇಡೀ ಸಮಾಜದ ನಡೆಯುತ್ತಿರುವುದೇ…

46 minutes ago

ಹವಾಮಾನ ವೈಪರಿತ್ಯಕ್ಕೆ ತತ್ತರಿಸಿದ ಕೃಷಿ: ಮಾವು, ದ್ರಾಕ್ಷಿ, ತರಕಾರಿ ಬೆಳೆಗಳಿಗೆ ಭಾರೀ ಹೊಡೆತ

ರಾಜ್ಯದ ಹಲವು ಭಾಗಗಳಲ್ಲಿ ಈ ಬಾರಿ ತೀವ್ರ ಬೇಸಿಗೆ ಮತ್ತು ಮಳೆ ಕೊರತೆಯಿಂದ ಕೃಷಿ ಚಟುವಟಿಕೆಗಳು ಸಂಕಷ್ಟಕ್ಕೆ ಸಿಲುಕಿವೆ. 2026-27ನೇ…

3 hours ago

ಸೈಕಲ್‌ಗೆ ಡಿಕ್ಕಿ ಹೊಡೆದು ನಿಯಂತ್ರಣ ತಪ್ಪಿದ ಬೈಕ್: ಮಹಿಳೆ ಸಾವು

ದೇವನಹಳ್ಳಿ: ರಸ್ತೆಯಲ್ಲಿ ತೆರಳುತ್ತಿದ್ದ ಸೈಕಲ್‌ಗೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದು, ಬಳಿಕ ಬೈಕ್ ಡಿವೈಡರ್‌ಗೆ ಅಪ್ಪಳಿಸಿದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟಿರುವ…

14 hours ago

ಬೆಳೆಗಳಿಗೆ ಅಸಮರ್ಪಕ ರಸಗೊಬ್ಬರ ಬಳಕೆ: ಪರಿಸರದ ಮೇಲೆ ವ್ಯತಿರಿಕ್ತ ಪರಿಣಾಮ- ಮಣ್ಣು ವಿಜ್ಞಾನಿ ಡಾ. ಬಾಲಾಜಿ ನಾಯ್ಕ್

ಕೃಷಿ ವಿಜ್ಞಾನ ಕೇಂದ್ರದ ವತಿಯಿಂದ ದೊಡ್ಡಬಳ್ಳಾಪುರ ತಾಲ್ಲೂಕಿನ ಹಾದ್ರಿಪುರ ಗ್ರಾಮದಲ್ಲಿ ಸಮತೋಲಿತ ರಸಗೊಬ್ಬರಗಳ ಬಳಕೆ ಜಾಗೃತಿ ಅಭಿಯಾನ ಕಾರ್ಯಕ್ರಮವನ್ನು ಕೃಷಿ…

18 hours ago

ಬಾಲ್ಯ ವಿವಾಹ ತಡೆದ ಅಧಿಕಾರಿಗಳು: 16 ವರ್ಷದ ಬಾಲಕಿ ರಕ್ಷಣೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನಡೆಯುತ್ತಿದ್ದ ಬಾಲ್ಯ ವಿವಾಹವನ್ನು ಅಧಿಕಾರಿಗಳು ತಡೆದು 16 ವರ್ಷದ ಬಾಲಕಿಯನ್ನು ರಕ್ಷಿಸಿದ ಘಟನೆ ನಡೆದಿದೆ.…

20 hours ago

ರಾಜ್ಯದಲ್ಲಿ ಹೆಚ್ಚಿದ ಸನ್ ಸ್ಟ್ರೋಕ್‌ ಪ್ರಕರಣ : ಉರಿ ಬಿಸಿಲಿಗೆ ತತ್ತರಿಸಿದ ಜನಜೀವನ

ರಾಜ್ಯದಲ್ಲಿ ದಿನದಿಂದ ದಿನಕ್ಕೆ ಏರುತ್ತಿರುವ ಉಷ್ಣಾಂಶ ಜನಜೀವನದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ಮೇ ತಿಂಗಳ ಉರಿ ಬಿಸಿಲು ಜನರನ್ನು…

22 hours ago