ರಾಜಕೀಯ ಕಾರ್ಯಕ್ರಮಗಳು, ಸಾರ್ವಜನಿಕ ಮೆರವಣಿಗೆಗಳು ಹಾಗೂ ಮದುವೆ ಸಮಾರಂಭಗಳಲ್ಲಿ ಪಟಾಕಿ ನಿಷೇಧಿಸುವ ನಿಯಮ ರೂಪಿಸಿ, ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗುವುದು. ಇದರ ಜೊತೆಗೆ ಮಾನ್ಯ ಸುಪ್ರೀಂ ಕೋರ್ಟ್ನ ಆದೇಶದಂತೆ ಹಸಿರು ಪಟಾಕಿಗಳನ್ನು ಮಾತ್ರ ಮಾರಾಟ ಮಾಡಬೇಕು, ಸರ್ವೋಚ್ಚ ನ್ಯಾಯಾಲಯದ ಮಾರ್ಗಸೂಚಿಗಳನ್ನು ಉಲ್ಲಂಘಿಸುವವರ ಮೇಲೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಅತ್ತಿಬೆಲೆ ಪ್ರಕರಣದಲ್ಲಿ ತಹಶೀಲ್ದಾರ್, ಇನ್ಸ್ ಪೆಕ್ಟರ್ ಮತ್ತು ರೀಜನಲ್ ಫೈರ್ ಆಫೀಸರ್ಗಳನ್ನು ಅಮಾನತು ಮಾಡಬೇಕು ಎಂದು ಸೂಚಿಸಿದರು.
ಸರ್ಕಾರ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ಅಧಿಕಾರಿಗಳು ಎಲ್ಲ ಮುನ್ನೆಚ್ಚರಿಕೆಯ ಕ್ರಮ ಕೈಗೊಳ್ಳಬೇಕು. ಎಕ್ಸ್ಪ್ಲೋಸಿವ್ ಆಕ್ಟ್ ನಲ್ಲಿ ಲೈಸೆನ್ಸ್ ಕೊಡುವಾಗ ಅಧಿಕಾರಿಗಳು ಎಚ್ಚರಿಕೆ ವಹಿಸಬೇಕು. ಹದಿನಾಲ್ಕು ಜನರ ಜೀವ ಕಳೆದುಕೊಂಡಿದ್ದಕ್ಕೆ ಯಾರು ಹೊಣೆಗಾರರು? ಕಾಯ್ದೆ ಓದಿದ್ದೀರಾ? ಅವರು ಅದರಲ್ಲಿರುವ ಎಲ್ಲ ಮಾನದಂಡಗಳನ್ನು ಪೂರೈಸಿದ್ದಾರೆಯೇ ಎಂದು ನೋಡಬೇಕು. ತಳಹಂತದ ಅಧಿಕಾರಿಗಳು ಸಲ್ಲಿಸಿದ ವರದಿ ಸರಿಯಿದೆಯೇ ಎಂದು ಜಿಲ್ಲಾಧಿಕಾರಿಗಳು ಪರಿಶೀಲಿಸಬೇಕು ಎಂದು ತಿಳಿಸಿದರು.
ತಪಾಸಣಾ ವರದಿ ಸರಿಯಾಗಿದೆಯೇ ಎಂದು ಪರಿಶೀಲಿಸಿಯೇ ಲೈಸನ್ಸ್ ನೀಡುವ ಬಗ್ಗೆ ತೀರ್ಮಾನಿಸಬೇಕು. ಈ ಪ್ರಕರಣದಲ್ಲಿ ಗೋಡೌನ್ಗೆ ಅನುಮತಿ ನೀಡಿರಲಿಲ್ಲ. ಮಾರಾಟಕ್ಕೆ ಮಾತ್ರ ಅನುಮತಿ ನೀಡಲಾಗಿತ್ತು. ರಾಜ್ಯದೆಲ್ಲೆಡೆ ತಪಾಸಣೆ ನಡೆಸಿ, ಸುರಕ್ಷತಾ ಕ್ರಮಗಳನ್ನು ಕೈಗೊಳ್ಳದ ಎಲ್ಲ ಗೋಡೌನ್ಗಳು ಹಾಗೂ ಮಳಿಗೆಗಳ ವಿರುದ್ಧ ಕ್ರಮ ಕೈಗೊಳ್ಳಬೇಕು, ಅವುಗಳ ಪರವಾನಗಿ ರದ್ದುಪಡಿಸಬೇಕು ಎಂದು ಹೇಳಿದರು.
ಬೆಂಗಳೂರು ನಗರದಲ್ಲಿ ಎರಡು ರೀತಿಯ ಪರವಾನಗಿಗಳಿವೆ. ಶಾಶ್ವತ ಮಳಿಗೆಗಳು ಹಾಗೂ ತಾತ್ಕಾಲಿಕ ಮಳಿಗೆಗಳಿಗೆ ಪರವಾನಗಿ ನೀಡಲಾಗುತ್ತಿದೆ. ಬಿಬಿಎಂಪಿ, ವಿದ್ಯುತ್, ಅಗ್ನಿಶಾಮಕ, ಟ್ರಾಫಿಕ್ ಮತ್ತು ಕಾನೂನು-ಸುವ್ಯವಸ್ಥೇ ವಿಭಾಗದ ನಿರಾಕ್ಷೇಪಣಾ ಪತ್ರ ಪಡೆದು ಲೈಸನ್ಸ್ ನೀಡಲಾಗುತ್ತದೆ. ಇದು ಐದು ವರ್ಷಕ್ಕೊಮ್ಮೆ ನೀಡಲಾಗುತ್ತಿದೆ. ನವೀಕರಣಕ್ಕೆ ನಿರಾಕ್ಷೇಪಣಾ ಪತ್ರದ ಅಗತ್ಯವಿರುವುದಿಲ್ಲ. ಸ್ಫೋಟಕಗಳ ನಿಯಂತ್ರಕರು ನವೀಕರಿಸುತ್ತಾರೆ. ಈ ಕುರಿತು ನಿಯಮಾವಳಿಗಳ ತಿದ್ದುಪಡಿ ಅಗತ್ಯವಿದೆ. ಈ ಕುರಿತು ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಬೇಕು. ರಾಜ್ಯಕ್ಕೆ ಅನ್ವಯಿಸುವಂತೆ ನಿಯಮ ಬದಲಾವಣೆ ಆಗಬೇಕು. ನಿಗದಿ ಮಾನದಂಡ ಪೂರೈಸದಿದ್ದರೂ, ತಪಾಸಣಾ ವರದಿ ನೀಡಿ ಶಿಫಾರಸು ಮಾಡಿದ ಸರ್ಕಲ್ ಇನ್ಸ್ಪೆಕ್ಟರ್, ತಹಸೀಲ್ದಾರ್, ಪ್ರಾದೇಶಿಕ ಅಗ್ನಿಶಾಮಕ ಅಧಿಕಾರಿಗಳನ್ನು ಅಮಾನತು ಮಾಡಬೇಕು ಎಂದರು.
ಅತ್ತಿಬೆಲೆ- ಹೊಸೂರು ಗಡಿ ಭಾಗದಲ್ಲಿ ಬರುವ ಪಟಾಕಿಗಳ ಕುರಿತು ತೀವ್ರ ನಿಗಾ ವಹಿಸಬೇಕು. ಈ ಕುರಿತು ನ್ಯಾಯಾಲಯಗಳ ಆದೇಶಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ಎಲ್ಲ ರೀತಿಯ ಕ್ರಮ ಕೈಗೊಳ್ಳಬೇಕು. ಹಸಿರು ಪಟಾಕಿಗಳ ಮಾರಾಟವನ್ನೂ ಖಾತರಿಪಡಿಸಿಕೊಳ್ಳಿ ಎಂದು ತಿಳಿಸಿದರು.
ದೊಡ್ಡಬಳ್ಳಾಪುರ ತಾಲ್ಲೂಕಿನ ಚಿಕ್ಕಮಂಕಳಾದ ಬಳಿಯ ಬೆಂಗಳೂರು ಕಸದ ವಿಲೇವಾರಿ ಘಟಕ ಎಂಎಸ್ ಜಿಪಿ ಘಟಕಕ್ಕೆ ಮಂಗಳವಾರ ಹೆಚ್ಚುವರಿ ಕಸದ ಲಾರಿಗಳು…
ಶಿವಮೊಗ್ಗ : ರಾಷ್ಟ್ರೀಯ ಹೆದ್ದಾರಿಯ ವಿಶೇಷ ಭೂ ಸ್ವಾಧೀನಾಧಿಕಾರಿ ಹಾಗೂ ಶಿವಮೊಗ್ಗ ಹಿಂದಿನ ಅಪರ ಜಿಲ್ಲಾಧಿಕಾರಿಯಾಗಿದ್ದ ಸಿದ್ದಲಿಂಗ ರೆಡ್ಡಿ ಮತ್ತು…
ಬೈಕ್ -ಖಾಸಗಿ ಕಂಪನಿ ಬಸ್ ನಡುವೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಂದು ಸಂಜೆ ಸುಮಾರು…
ಬೈಕ್ -ಖಾಸಗಿ ಕಂಪನಿ ಬಸ್ ನಡುವೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರನಿಗೆ ಗಂಭೀರ ಗಾಯಗಳಾಗಿರುವ ಘಟನೆ ಇಂದು ಸಂಜೆ ಸುಮಾರು…
2026ನೇ ಸಾಲಿನ ದ್ವಿತೀಯ ಪಿಯುಸಿ ಮತ್ತು ಎಸ್ಎಸ್ಎಲ್ಸಿ ಪರೀಕ್ಷೆಯ ಫಲಿತಾಂಶ ದಿನಾಂಕ ಹಾಗೂ ಪರೀಕ್ಷೆ 2 ರ ವೇಳಾಪಟ್ಟಿಯನ್ನು ಶಿಕ್ಷಣ…
ಆಕೆ ತಂದೆ ತಾಯಿಗೆ ಇದ್ದ ಏಕೈಕ ಮಗಳು. ಹಾಗಾಗಿ ತಂದೆ ತಾಯಿಗೆ ಮಗಳು ಎಂದರೆ ಎಲ್ಲಿಲ್ಲದ ಪ್ರೀತಿ. ಮಗಳು ಚೆನ್ನಾಗಿ…