ರಾಜಕೀಯ ಕಾರ್ಯಕ್ರಮಗಳು, ಸಾರ್ವಜನಿಕ ಮೆರವಣಿಗೆಗಳು ಹಾಗೂ ಮದುವೆ ಸಮಾರಂಭಗಳಲ್ಲಿ ಪಟಾಕಿ ನಿಷೇಧಿಸುವ ನಿಯಮ ರೂಪಿಸಿ, ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗುವುದು. ಇದರ ಜೊತೆಗೆ ಮಾನ್ಯ ಸುಪ್ರೀಂ ಕೋರ್ಟ್ನ ಆದೇಶದಂತೆ ಹಸಿರು ಪಟಾಕಿಗಳನ್ನು ಮಾತ್ರ ಮಾರಾಟ ಮಾಡಬೇಕು, ಸರ್ವೋಚ್ಚ ನ್ಯಾಯಾಲಯದ ಮಾರ್ಗಸೂಚಿಗಳನ್ನು ಉಲ್ಲಂಘಿಸುವವರ ಮೇಲೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಅತ್ತಿಬೆಲೆ ಪ್ರಕರಣದಲ್ಲಿ ತಹಶೀಲ್ದಾರ್, ಇನ್ಸ್ ಪೆಕ್ಟರ್ ಮತ್ತು ರೀಜನಲ್ ಫೈರ್ ಆಫೀಸರ್ಗಳನ್ನು ಅಮಾನತು ಮಾಡಬೇಕು ಎಂದು ಸೂಚಿಸಿದರು.
ಸರ್ಕಾರ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ಅಧಿಕಾರಿಗಳು ಎಲ್ಲ ಮುನ್ನೆಚ್ಚರಿಕೆಯ ಕ್ರಮ ಕೈಗೊಳ್ಳಬೇಕು. ಎಕ್ಸ್ಪ್ಲೋಸಿವ್ ಆಕ್ಟ್ ನಲ್ಲಿ ಲೈಸೆನ್ಸ್ ಕೊಡುವಾಗ ಅಧಿಕಾರಿಗಳು ಎಚ್ಚರಿಕೆ ವಹಿಸಬೇಕು. ಹದಿನಾಲ್ಕು ಜನರ ಜೀವ ಕಳೆದುಕೊಂಡಿದ್ದಕ್ಕೆ ಯಾರು ಹೊಣೆಗಾರರು? ಕಾಯ್ದೆ ಓದಿದ್ದೀರಾ? ಅವರು ಅದರಲ್ಲಿರುವ ಎಲ್ಲ ಮಾನದಂಡಗಳನ್ನು ಪೂರೈಸಿದ್ದಾರೆಯೇ ಎಂದು ನೋಡಬೇಕು. ತಳಹಂತದ ಅಧಿಕಾರಿಗಳು ಸಲ್ಲಿಸಿದ ವರದಿ ಸರಿಯಿದೆಯೇ ಎಂದು ಜಿಲ್ಲಾಧಿಕಾರಿಗಳು ಪರಿಶೀಲಿಸಬೇಕು ಎಂದು ತಿಳಿಸಿದರು.
ತಪಾಸಣಾ ವರದಿ ಸರಿಯಾಗಿದೆಯೇ ಎಂದು ಪರಿಶೀಲಿಸಿಯೇ ಲೈಸನ್ಸ್ ನೀಡುವ ಬಗ್ಗೆ ತೀರ್ಮಾನಿಸಬೇಕು. ಈ ಪ್ರಕರಣದಲ್ಲಿ ಗೋಡೌನ್ಗೆ ಅನುಮತಿ ನೀಡಿರಲಿಲ್ಲ. ಮಾರಾಟಕ್ಕೆ ಮಾತ್ರ ಅನುಮತಿ ನೀಡಲಾಗಿತ್ತು. ರಾಜ್ಯದೆಲ್ಲೆಡೆ ತಪಾಸಣೆ ನಡೆಸಿ, ಸುರಕ್ಷತಾ ಕ್ರಮಗಳನ್ನು ಕೈಗೊಳ್ಳದ ಎಲ್ಲ ಗೋಡೌನ್ಗಳು ಹಾಗೂ ಮಳಿಗೆಗಳ ವಿರುದ್ಧ ಕ್ರಮ ಕೈಗೊಳ್ಳಬೇಕು, ಅವುಗಳ ಪರವಾನಗಿ ರದ್ದುಪಡಿಸಬೇಕು ಎಂದು ಹೇಳಿದರು.
ಬೆಂಗಳೂರು ನಗರದಲ್ಲಿ ಎರಡು ರೀತಿಯ ಪರವಾನಗಿಗಳಿವೆ. ಶಾಶ್ವತ ಮಳಿಗೆಗಳು ಹಾಗೂ ತಾತ್ಕಾಲಿಕ ಮಳಿಗೆಗಳಿಗೆ ಪರವಾನಗಿ ನೀಡಲಾಗುತ್ತಿದೆ. ಬಿಬಿಎಂಪಿ, ವಿದ್ಯುತ್, ಅಗ್ನಿಶಾಮಕ, ಟ್ರಾಫಿಕ್ ಮತ್ತು ಕಾನೂನು-ಸುವ್ಯವಸ್ಥೇ ವಿಭಾಗದ ನಿರಾಕ್ಷೇಪಣಾ ಪತ್ರ ಪಡೆದು ಲೈಸನ್ಸ್ ನೀಡಲಾಗುತ್ತದೆ. ಇದು ಐದು ವರ್ಷಕ್ಕೊಮ್ಮೆ ನೀಡಲಾಗುತ್ತಿದೆ. ನವೀಕರಣಕ್ಕೆ ನಿರಾಕ್ಷೇಪಣಾ ಪತ್ರದ ಅಗತ್ಯವಿರುವುದಿಲ್ಲ. ಸ್ಫೋಟಕಗಳ ನಿಯಂತ್ರಕರು ನವೀಕರಿಸುತ್ತಾರೆ. ಈ ಕುರಿತು ನಿಯಮಾವಳಿಗಳ ತಿದ್ದುಪಡಿ ಅಗತ್ಯವಿದೆ. ಈ ಕುರಿತು ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಬೇಕು. ರಾಜ್ಯಕ್ಕೆ ಅನ್ವಯಿಸುವಂತೆ ನಿಯಮ ಬದಲಾವಣೆ ಆಗಬೇಕು. ನಿಗದಿ ಮಾನದಂಡ ಪೂರೈಸದಿದ್ದರೂ, ತಪಾಸಣಾ ವರದಿ ನೀಡಿ ಶಿಫಾರಸು ಮಾಡಿದ ಸರ್ಕಲ್ ಇನ್ಸ್ಪೆಕ್ಟರ್, ತಹಸೀಲ್ದಾರ್, ಪ್ರಾದೇಶಿಕ ಅಗ್ನಿಶಾಮಕ ಅಧಿಕಾರಿಗಳನ್ನು ಅಮಾನತು ಮಾಡಬೇಕು ಎಂದರು.
ಅತ್ತಿಬೆಲೆ- ಹೊಸೂರು ಗಡಿ ಭಾಗದಲ್ಲಿ ಬರುವ ಪಟಾಕಿಗಳ ಕುರಿತು ತೀವ್ರ ನಿಗಾ ವಹಿಸಬೇಕು. ಈ ಕುರಿತು ನ್ಯಾಯಾಲಯಗಳ ಆದೇಶಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ಎಲ್ಲ ರೀತಿಯ ಕ್ರಮ ಕೈಗೊಳ್ಳಬೇಕು. ಹಸಿರು ಪಟಾಕಿಗಳ ಮಾರಾಟವನ್ನೂ ಖಾತರಿಪಡಿಸಿಕೊಳ್ಳಿ ಎಂದು ತಿಳಿಸಿದರು.
ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…
ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…