Categories: ಕೋಲಾರ

‘ರಾಜಕೀಯ ಪಕ್ಷಗಳಿಂದ ಪರಿಶಿಷ್ಟ ಜಾತಿಯ ಬಲಗೈ ಸಮುದಾಯಕ್ಕೆ ಅನ್ಯಾಯ’ – ಮುಖಂಡರ ಆಕ್ರೋಶ

ಕೋಲಾರ: ಜಿಲ್ಲೆಯಲ್ಲಿ ಎಲ್ಲಾ ರಾಜಕೀಯ ಪಕ್ಷಗಳು ಪರಿಶಿಷ್ಟ ಜಾತಿಯ ಬಲಗೈ ಸಮುದಾಯದ ರೇಣುಕಾ ಯಲ್ಲಮ್ಮ ಬಳಗವನ್ನು ಸಂಪೂರ್ಣವಾಗಿ ನಿರ್ಲಕ್ಷಿಸುತ್ತಿವೆ ಎಂದು ಸಮುದಾಯದ ಮುಖಂಡರು ಆಕ್ರೋಶ ವ್ಯಕ್ತಪಡಿಸಿದರು.

ನಗರ ಹೊರವಲಯದ ಕಲ್ಯಾಣ ಮಂಟಪದಲ್ಲಿ ‌ಮಂಗಳವಾರ ನಡೆದ ‌ಬಲಗೈ ಸಮುದಾಯದ ರೇಣುಕಾ ಯಲ್ಲಮ್ಮದವರ ಸಭೆಯಲ್ಲಿ ಮಾತನಾಡಿದ ಮುಖಂಡರು ಅನ್ಯಾಯವಾಗಿದೆ ಅದು ಮುಂದೆ ಆಗದ ರೀತಿಯಲ್ಲಿ ಎಚ್ಚರಿಕೆ ವಹಿಸಬೇಕು ಕೋಲಾರ ಮೀಸಲು ಲೋಕಸಭಾ ಚುನಾವಣೆಯಲ್ಲಿ ಯಾವ ಪಕ್ಷಕ್ಕೆ ಬೆಂಬಲ ನೀಡಬೇಕೆಂದು ಸದ್ಯದಲ್ಲೇ ನಿರ್ಧಾರ ಕೈಗೊಳ್ಳುವುದಾಗಿ ಸಭೆಯಲ್ಲಿ ಘೋಷಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಮಾಜಿ‌ ಸದಸ್ಯ ರಾಮಚಂದ್ರಪ್ಪ ಮಾತನಾಡಿ ಈ ಬಾರಿ ಕೋಲಾರ ಕ್ಷೇತ್ರದ ಲೋಕಸಭೆ ಟಿಕೆಟ್ ಅನ್ನು ಬಲಗೈ ಸಮುದಾಯಕ್ಕೆ ಕೊಡಬೇಕೆಂದು ಕಾಂಗ್ರೆಸ್ ಹೈಕಮಾಂಡ್ ಬಳಿ ಕೇಳಿದ್ದೆವು. 1952ರಿಂದ ಈ ಕ್ಷೇತ್ರದಲ್ಲಿ ಬಲಗೈ ಸಮುದಾಯದವರಿಗೆ ಟಿಕೆಟ್ ಸಿಕ್ಕಿಲ್ಲ ಯಾವುದೇ ಸ್ಥಾನಮಾನ ‌ನೀಡಿಲ್ಲ ಚಿಕ್ಕತಾಳಿ‌ ಸಮುದಾಯದವರನ್ನು ಗುರುತಿಸುವ ಕೆಲಸ ಮಾಡಿಲ್ಲ. ನಮ್ಮ ಸಮುದಾಯವು ಕ್ಷೇತ್ರದಲ್ಲಿ 3.75 ಲಕ್ಷದಷ್ಟು ಮತಗಳಿವೆ ಟಿಕೆಟ್ ಕೊಡದೆ ಕಾಂಗ್ರೆಸ್‌ ಪಕ್ಷಕ್ಕೆ ಪ್ರತಿ ಬಾರಿ ಬೆಂಬಲಿಸಿದ್ದೇವೆ ಆದರೂ ಈ ಬಾರಿ ನಮಗೆ ಮೋಸ ಮಾಡಿದೆ ಎಂದು ಆರೋಪಿಸಿದರು‌.

ಈ ಸಂದರ್ಭದಲ್ಲಿ ಸಮುದಾಯದ ಮುಖಂಡ ಮಾರ್ಜೇನಹಳ್ಳಿ ಬಾಬು ಮಾತನಾಡಿ ನಮ್ಮ ಸಮುದಾಯಕ್ಕೆ ಕಾಂಗ್ರೆಸ್ ಸೇರಿದಂತೆ ಯಾವುದೇ ಪಕ್ಷ ಅವಕಾಶ ಕೊಡುತ್ತಿಲ್ಲ ಹೀಗಾಗಿ, ಎಲ್ಲರೂ ಒಟ್ಟಾಗಬೇಕು. ಕೋಲಾರ ಕ್ಷೇತ್ರದಲ್ಲಿ ನಮ್ಮ ಸಮುದಾಯದ ಮತಗಳು ಹೆಚ್ಚು ಇವೆ ಮುಳಬಾಗಿಲು, ಕೆಜಿಎಫ್, ಬಂಗಾರಪೇಟೆ ಕ್ಷೇತ್ರದಲ್ಲಿ ನಮ್ಮ ಸಮುದಾಯದ ನಿರ್ಣಾಯಕ ಪಾತ್ರವಿದೆ. ನಮಗೂ ರಾಜಕೀಯ ಅವಕಾಶ ಸಿಗಬೇಕು ಎಂದು ಹೇಳಿದರು.

ಈ ಬಾರಿಯ ಚುನಾವಣೆಯಲ್ಲೂ ಕೋಲಾರ ಕ್ಷೇತ್ರದಲ್ಲಿ ಬಲಗೈ ಸಮುದಾಯದವರಿಗೆ ಸ್ಪರ್ಧಿಸಲು ಅವಕಾಶ ಕೊಡಿ ಎಂದು ಕೇಳಿದೆವು. ಯಾರೂ ಟಿಕೆಟ್ ಕೊಟ್ಟಿಲ್ಲ. ಆದರೆ,‌ ಈ ಸಭೆಯಲ್ಲಿ ಯಾರನ್ನು ಬೆಂಬಲಿಸಬೇಕೆಂದು ರಾಜಕೀಯ ನಿರ್ಣಯ ಕೈಗೊಂಡಿಲ್ಲ ಸದ್ಯದಲ್ಲೇ ನಿರ್ಧಾರ ಪ್ರಕಟಿಸಲಿದ್ದೇವೆ’ ಎಂದರು.

ಗ್ರಾಮ ಪಂಚಾಯಿತಿ ಸದಸ್ಯರ ಒಕ್ಕೂಟದ ಜಿಲ್ಲಾ ಉಪಾಧ್ಯಕ್ಷ ಮಲ್ಲೇಕುಪ್ಪ ಅಂಬರೀಷ್ ಮಾತನಾಡಿ ನಮ್ಮ ಸಮುದಾಯಕ್ಕೆ ಅನ್ಯಾಯವಾಗಿದೆ. ಸಮುದಾಯವನ್ನು ಗುರುತಿಸಬೇಕು. ನಮ್ಮ ಬೇಡಿಕೆಗಳನ್ನು ಈಡೇರಿಸಿಕೊಳ್ಳಲು ಮೊದಲ ಸಮುದಾಯವರು ಒಗ್ಗಟ್ಟು ಪ್ರದರ್ಶಿಸಬೇಕು‌, ಒಂದೆಡೆ ಸೇರಿ ಚರ್ಚಿಸಬೇಕು ಎಂದು ಮನವಿ ಮಾಡಿದರು.

ರತ್ನಮ್ಮ ಮಾತನಾಡಿ ಸಮುದಾಯದವರು ಒಂದೆಡೆ ಸೇರಿ ತಿಂಗಳಿಗೊಮ್ಮೆ ಸಭೆ ಮಾಡಬೇಕು ಚಿಕ್ಕತಾಳಿಯವರು ಎಲ್ಲಾ ಬಡವರು. ಒಗ್ಗಾಟ್ಟದರೆ ಮಾತ್ರ ಸಮುದಾಯದ ಬೇಡಿಕೆಗಳು ಈಡೇರಿಸಿಕೊಳ್ಳಬಹುದು ಎಂದು ಹೇಳಿದರು

ಈ ಸಂದರ್ಭದಲ್ಲಿ ಮುಖಂಡ ಹೂವಸನಹಳ್ಳಿ ರಾಜಪ್ಪ ಮಾತನಾಡಿ ಮೊದಲ ಬಾರಿ ಇಷ್ಟು ಸಂಖ್ಯೆಯಲ್ಲಿ ಸಮುದಾಯದ ಜನ ಸೇರಿದ್ದಾರೆ‌. ನಮ್ಮ ಸಮುದಾಯಕ್ಕೆ ಟಿಕೆಟ್ ನೀಡುವುದಾಗಿ ಹೇಳಿ ಕಾಂಗ್ರೆಸ್ ಪಕ್ಷವು ಸೇರಿದಂತೆ ಕೆ.ಎಚ್.ಮುನಿಯಪ್ಪ ಕೂಡ ಈ ಬಾರಿ ಮೋಸ ಮಾಡಿದರು. ನಮ್ಮನ್ನು ರಾಜಕೀಯವಾಗಿ ನಿರ್ಲಕ್ಷ್ಯ ಮಾಡಿದರೆ ಗೆಲ್ಲುವವರನ್ನು ಸೋಲಿಸುತ್ತೇವೆ ಎಂದು ಎಚ್ಚರಿಕೆ‌ ನೀಡಿದರು‌.

ಸಮುದಾಯದ ಮುಖಂಡರಾದ ಕೆ.ಜಯದೇವ, ಡಾ.ಚಂದ್ರಶೇಖರ್, ಡಿಪಿಎಸ್ ಮುನಿರಾಜು, ಚಂದ್ರಪ್ಪ, ದಲಿತ್ ನಾರಾಯಣಸ್ವಾಮಿ, ಮಾಲೂರು ದಾಸಣ್ಣ, ಕಾರ್ಗಿಲ್ ವೆಂಕಟೇಶ್, ನಾರಾಯಣಸ್ವಾಮಿ, ಸೋಮಣ್ಣ, ದೇವರಾಜ್, ಆವಣಿ ಕೃಷ್ಣಪ್ಪ, ಜಾಗೃತ ಸೇವಾ ಸಮಿತಿ ರಾಜು ಮುಂತಾದವರು ಇದ್ದರು.

Ramesh Babu

Journalist

Recent Posts

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

7 hours ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

11 hours ago

ಸ್ವಾತಂತ್ರ್ಯ ದಿನದಂದೇ ಹೆದ್ದಾರಿಯಲ್ಲಿ ಪುಂಡರ ಡೆಡ್ಲಿ ವ್ಹೀಲಿಂಗ್

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…

11 hours ago

ಸ್ವಾತಂತ್ರ್ಯ ದಿನಾಚರಣೆಯಲ್ಲಿ ಆರೋಗ್ಯ ಕಾಳಜಿ; ಹೀಲಿನ್ ಆಸ್ಪತ್ರೆಯಿಂದ ಉಚಿತ ತಪಾಸಣಾ ಶಿಬಿರ

80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…

14 hours ago

ವಿಬಿ ಜಿ ರಾಮ್ ಜಿ: ಆ.15 ರಿಂದ ಜಾಬ್ ಕಾರ್ಡ್ ಮೇಳ

ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…

1 day ago

ತೂಬಗೆರೆ ಸೊಸೈಟಿ ಅಧ್ಯಕ್ಷರಾಗಿ ವಾಸುದೇವ್, ಉಪಾಧ್ಯಕ್ಷರಾಗಿ ಸತ್ಯನಾರಾಯಣಸ್ವಾಮಿ ಅವಿರೋಧ ಆಯ್ಕೆ

ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್‌ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…

1 day ago