ರಾಜಘಟ್ಟ ಆಂಜನೇಯಸ್ವಾಮಿ ವಿಜೃಂಭಣೆಯ ರಥೋತ್ಸವ; ಮೂರು ದಿನಗಳ ಕಾಲ ನಡೆಯುವ ಜಾತ್ರಾ ಮಹೋತ್ಸವ; ಕೊಪ್ಪರಿಗೆ ಮುದ್ದೆ, ಕಾಳು ಸಾರು ಸವಿದ ಭಕ್ತಾಧಿಗಳು

ತಾಲ್ಲೂಕಿನ ಕಸಬಾ ಹೋಬಳಿ ರಾಜಘಟ್ಟ ಗ್ರಾಮದಲ್ಲಿನ ಇತಿಹಾಸ ಪ್ರಸಿದ್ಧ ಶ್ರೀಆಂಜನೇಯ ಸ್ವಾಮಿ ದೇವಾಲಯದ ರಥೋತ್ಸವವು ಸಹಸ್ರಾರು ಭಕ್ತರ ಸಮ್ಮುಖದಲ್ಲಿ ಅದ್ಧೂರಿಯಾಗಿ ನೆರವೇರಿತು.

ಬೆಳಗ್ಗೆ ಹೋಮ ಹಾಗೂ ಶ್ರೀಸ್ವಾಮಿಯ ರಥಾರೋಹಣ ನೆರವೇರಿತು. ಮಧ್ಯಾಹ್ನ 12ಕ್ಕೆ ಜರುಗಿದ ಮಹಾರಥೋತ್ಸವದಲ್ಲಿ ನೆರೆದಿದ್ದ ಭಕ್ತರು ರಥಕ್ಕೆ ಬಾಳೆಹಣ್ಣು, ಕರಿಮೆಣಸು ಎರಚಿ ರಥ ಎಳೆದರು.

ಪ್ರಸಿದ್ಧ ಕೊಪ್ಪರಿಗೆ ಮುದ್ದೆ, ಕಾಳು ಸಾಂಬರ್

ಅನಾದಿಕಾಲದಿಂದಲೂ ಇಲ್ಲಿನ ನಡೆಯುವ ಜಾತ್ರಾ ಮಹೋತ್ಸವದಲ್ಲಿ ಭಕ್ತರಿಗೆ ಕೊಪ್ಪರಿಗೆಯಲ್ಲಿ ಮಾಡಲಾಗಿದ್ದ ಮುದ್ದೆ ಕಾಳು ಸಾಂಬರ್ ಅತ್ಯಂತ ಹೆಚ್ಚಿನ ಪ್ರಸಿದ್ಧಿ ಪಡೆದಿದೆ. ಇತ್ತೀಚಿನ ದಿನಗಳಲ್ಲಿ ಮರೆಯಾಗುತ್ತಿರುವ ಬೃಹತ್ ಕೊಪ್ಪರಿಗೆಯಲ್ಲಿ ಒಮ್ಮೆಗೆ ಒಂದೂವರೆ ಸಾವಿರ ಮುದ್ದೆ ಮಾಡುವ ಶೈಲಿ ಎಲ್ಲರ ಗಮನ ಸೆಳೆಯಿತು. ಎರಡು ದಿನಗಳಿಂದ ನಡೆದ‌ ಕೊಪ್ಪರಿಗೆ ಊಟವನ್ನು ಸಾವಿರಾರು ಮಂದಿಗೆ ಉಣಬಡಿಡಲಾಗಿದೆ ಎಂದು ಎನ್ನಲಾಗಿದೆ.

ನಂತರ ಭಕ್ತರಿಗೆ ಅನ್ನ ಸಂತರ್ಪಣೆ, ಪ್ರಸಾದ ವಿನಿಯೋಗ ಜರುಗಿತು. ಪಾನಕ, ಕೋಸಂಬರಿ, ಮಜ್ಜಿಗೆ ವಿತರಣೆ ಎಲ್ಲೆಡೆ ಹಂಚಲಾಯಿತು.

ಒಟ್ಟಾರೆ ಗ್ರಾಮದಲ್ಲಿ ಶ್ರೀರಾಮ ನವಮಿ‌ ಹಬ್ಬದ ಪ್ರಯುಕ್ತ ಹಬ್ಬದ ವಾತಾವರಣನಿರ್ಮಾಣವಾಗಿತ್ತು.

Ramesh Babu

Journalist

Recent Posts

ರೋಗಿಗಳೊಂದಿಗೆ ದುರ್ವರ್ತನೆ ಆರೋಪ: ಕೊನಘಟ್ಟ ಸರ್ಕಾರಿ ಆಸ್ಪತ್ರೆ ವೈದ್ಯೆ ವಿರುದ್ಧ ಗ್ರಾಮಸ್ಥರ ಪ್ರತಿಭಟನೆ

ದೊಡ್ಡಬಳ್ಳಾಪುರ: ತಾಲೂಕಿನ ಕೊನಘಟ್ಟ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಫರ್ಹಾನಾ ಅವರ ವಿರುದ್ಧ ರೋಗಿಗಳೊಂದಿಗೆ ಸೂಕ್ತವಾಗಿ ವರ್ತಿಸುತ್ತಿಲ್ಲ…

12 hours ago

ಬಹಿರ್ದೆಸೆಗೆ ಹೋದ ಬಾಲಕನ ಜೀವ ಕಸಿದ ವೇಗದ ಆಟೋ

ಕಲಬುರಗಿ: ಜಿಲ್ಲೆಯ ಚಿಂಚೋಳಿ ತಾಲೂಕಿನ ಐನೋಳಿ ಗ್ರಾಮದಲ್ಲಿ ದುರ್ಘಟನೆಯೊಂದು ಸಂಭವಿಸಿದ್ದು, ರಸ್ತೆ ಪಕ್ಕದಲ್ಲಿ ಬಹಿರ್ದೆಸೆಗೆ ಕುಳಿತಿದ್ದ 6 ವರ್ಷದ ಬಾಲಕನ…

14 hours ago

ವೀಲಿಂಗ್ ಪುಂಡನ ಬೈಕ್ ಡಿಕ್ಕಿ: ಗೃಹ ರಕ್ಷಕ ದಳ ಸಿಬ್ಬಂದಿ ಗಂಭೀರ ಗಾಯ

ದೊಡ್ಡಬಳ್ಳಾಪುರ: ಮೋಟಾರ್ ವಾಹನಗಳ ತಪಾಸಣೆ ವೇಳೆ ವೀಲಿಂಗ್ ಮಾಡುತ್ತಿದ್ದ ಬೈಕ್ ಸವಾರನೊಬ್ಬ ಗೃಹ ರಕ್ಷಕ ದಳದ ಸಿಬ್ಬಂದಿಗೆ ಡಿಕ್ಕಿ ಹೊಡೆದು…

1 day ago

ಡಿಸಿ ಭವನದಲ್ಲಿ ಜಿಲ್ಲಾಧಿಕಾರಿಗಳಿಂದ ರಿಯಾಲಿಟಿ ಚೆಕ್: ಅಧಿಕಾರಿಗಳು ಫುಲ್ ಶಾಕ್: ಸಮಯಕ್ಕೆ ಬಾರದ ಅಧಿಕಾರಿಗಳಿಗೆ ಡಿಸಿ ಕ್ಲಾಸ್

ಬೆಂಗಳೂರು ಗ್ರಾಮಾಂತರ: ಸೋಮವಾರ ಬೆಳಗ್ಗೆ ಎಂದಿನಂತೆ ಅಧಿಕಾರಿಗಳು ಮತ್ತು ಸಿಬ್ಬಂದಿ ಕಚೇರಿಗಳಿಗೆ ಆಗಮಿಸುತ್ತಿದ್ದ ವೇಳೆ, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.…

2 days ago

ನೆಲಮಂಗಲ–ದೊಡ್ಡಬಳ್ಳಾಪುರ ರಸ್ತೆಯಲ್ಲಿ ವಾಹನ ದಟ್ಟಣೆ ಹೆಚ್ಚಳ: ಫ್ಲೈಓವರ್, ರಸ್ತೆ ವಿಸ್ತರಣೆ, ಬಸ್ ನಿಲ್ದಾಣ ನಿರ್ಮಾಣಕ್ಕೆ ಆಗ್ರಹ

ದೊಡ್ಡಬಳ್ಳಾಪುರ: ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿಯ ಹುಲಿಕುಂಟೆ ಟೋಲ್‌ಪ್ಲಾಜಾದಲ್ಲಿ ಶುಲ್ಕ ಪಾವತಿಸುವುದನ್ನು ತಪ್ಪಿಸಲು ವಾಹನಗಳು ಹೆಚ್ಚಿನ ಪ್ರಮಾಣದಲ್ಲಿ ನೆಲಮಂಗಲ–ದೊಡ್ಡಬಳ್ಳಾಪುರ ರಸ್ತೆಯನ್ನು ಪರ್ಯಾಯ…

2 days ago

ಹಳ್ಳಿಗಳಿಂದ ಅಪಾರ್ಟ್‌ಮೆಂಟ್ ವರೆಗೆ ಸಾಗುತ್ತಿರುವ ಆಧುನಿಕ ನಾಗರಿಕ ಸಮಾಜ……

ನಾವೂ ಒಂದು ಪಾತ್ರವಾಗುತ್ತಾ..... ಹಳ್ಳಿಗಳಿಂದ ಅಪಾರ್ಟ್‌ಮೆಂಟ್ ವರೆಗೆ ಸಾಗುತ್ತಿರುವ ಆಧುನಿಕ ನಾಗರಿಕ ಸಮಾಜ......... ಕೆಲ ವರುಷಗಳ ಹಿಂದೆ ಹುಲ್ಲಿನ ಗುಡಿಸಲು,…

2 days ago