ರಾಜಘಟ್ಟ ಆಂಜನೇಯಸ್ವಾಮಿ ವಿಜೃಂಭಣೆಯ ರಥೋತ್ಸವ; ಮೂರು ದಿನಗಳ ಕಾಲ ನಡೆಯುವ ಜಾತ್ರಾ ಮಹೋತ್ಸವ; ಕೊಪ್ಪರಿಗೆ ಮುದ್ದೆ, ಕಾಳು ಸಾರು ಸವಿದ ಭಕ್ತಾಧಿಗಳು

ತಾಲ್ಲೂಕಿನ ಕಸಬಾ ಹೋಬಳಿ ರಾಜಘಟ್ಟ ಗ್ರಾಮದಲ್ಲಿನ ಇತಿಹಾಸ ಪ್ರಸಿದ್ಧ ಶ್ರೀಆಂಜನೇಯ ಸ್ವಾಮಿ ದೇವಾಲಯದ ರಥೋತ್ಸವವು ಸಹಸ್ರಾರು ಭಕ್ತರ ಸಮ್ಮುಖದಲ್ಲಿ ಅದ್ಧೂರಿಯಾಗಿ ನೆರವೇರಿತು.

ಬೆಳಗ್ಗೆ ಹೋಮ ಹಾಗೂ ಶ್ರೀಸ್ವಾಮಿಯ ರಥಾರೋಹಣ ನೆರವೇರಿತು. ಮಧ್ಯಾಹ್ನ 12ಕ್ಕೆ ಜರುಗಿದ ಮಹಾರಥೋತ್ಸವದಲ್ಲಿ ನೆರೆದಿದ್ದ ಭಕ್ತರು ರಥಕ್ಕೆ ಬಾಳೆಹಣ್ಣು, ಕರಿಮೆಣಸು ಎರಚಿ ರಥ ಎಳೆದರು.

ಪ್ರಸಿದ್ಧ ಕೊಪ್ಪರಿಗೆ ಮುದ್ದೆ, ಕಾಳು ಸಾಂಬರ್

ಅನಾದಿಕಾಲದಿಂದಲೂ ಇಲ್ಲಿನ ನಡೆಯುವ ಜಾತ್ರಾ ಮಹೋತ್ಸವದಲ್ಲಿ ಭಕ್ತರಿಗೆ ಕೊಪ್ಪರಿಗೆಯಲ್ಲಿ ಮಾಡಲಾಗಿದ್ದ ಮುದ್ದೆ ಕಾಳು ಸಾಂಬರ್ ಅತ್ಯಂತ ಹೆಚ್ಚಿನ ಪ್ರಸಿದ್ಧಿ ಪಡೆದಿದೆ. ಇತ್ತೀಚಿನ ದಿನಗಳಲ್ಲಿ ಮರೆಯಾಗುತ್ತಿರುವ ಬೃಹತ್ ಕೊಪ್ಪರಿಗೆಯಲ್ಲಿ ಒಮ್ಮೆಗೆ ಒಂದೂವರೆ ಸಾವಿರ ಮುದ್ದೆ ಮಾಡುವ ಶೈಲಿ ಎಲ್ಲರ ಗಮನ ಸೆಳೆಯಿತು. ಎರಡು ದಿನಗಳಿಂದ ನಡೆದ‌ ಕೊಪ್ಪರಿಗೆ ಊಟವನ್ನು ಸಾವಿರಾರು ಮಂದಿಗೆ ಉಣಬಡಿಡಲಾಗಿದೆ ಎಂದು ಎನ್ನಲಾಗಿದೆ.

ನಂತರ ಭಕ್ತರಿಗೆ ಅನ್ನ ಸಂತರ್ಪಣೆ, ಪ್ರಸಾದ ವಿನಿಯೋಗ ಜರುಗಿತು. ಪಾನಕ, ಕೋಸಂಬರಿ, ಮಜ್ಜಿಗೆ ವಿತರಣೆ ಎಲ್ಲೆಡೆ ಹಂಚಲಾಯಿತು.

ಒಟ್ಟಾರೆ ಗ್ರಾಮದಲ್ಲಿ ಶ್ರೀರಾಮ ನವಮಿ‌ ಹಬ್ಬದ ಪ್ರಯುಕ್ತ ಹಬ್ಬದ ವಾತಾವರಣನಿರ್ಮಾಣವಾಗಿತ್ತು.

Ramesh Babu

Journalist

Recent Posts

185 ವರ್ಷಗಳ ಹಳೆಯ ಪೊಲೀಸ್ ಬಿಲ್ಲೆ ಪತ್ತೆ: ಇತಿಹಾಸ ಸಂರಕ್ಷಣೆಯಲ್ಲಿ ಇನ್ಸ್‌ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ವಿಶಿಷ್ಟ ಹೆಜ್ಜೆ

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…

1 hour ago

ಸಿದ್ದರಾಮಯ್ಯ ಸಹಕಾರದಿಂದ 2028ಕ್ಕೆ ಡಿಕೆಶಿ ಮತ್ತೆ ಸಿಎಂ ಆಗ್ತಾರೆ – ಗೌರಿ-ಗಣೇಶ ಹಬ್ಬದಂದು ಮಳೆ ಬರಲಿ ಎಂದು ಪ್ರಾರ್ಥನೆ ಮಾಡೋಣ – ಸಚಿವ ಚಲುವರಾಯಸ್ವಾಮಿ

ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…

3 hours ago

ಮನೆ ಮಾಲೀಕರ ಮುಂದೆಯೇ ಮನೆ ದೋಚಿ ಪರಾರಿಯಾಗಿದ್ದ ಕಳ್ಳ ಲಾಕ್‌!

ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…

3 hours ago

ಕೋಳಿಫಾರ್ಮ್‌ಗೆ ಚಿರತೆ ದಾಳಿ ಶಂಕೆ: 950ಕ್ಕೂ ಅಧಿಕ ಕೋಳಿಮರಿಗಳು ಬಲಿ!

  ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್‌ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…

3 hours ago

ಯೋಜನಾ ಪ್ರಾಧಿಕಾರಕ್ಕೆ ಮುನಿರಾಜು ಆಯ್ಕೆ: ಯುವ ಕಾಂಗ್ರೆಸ್‌ನಿಂದ ಆತ್ಮೀಯ ಅಭಿನಂದನೆ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…

8 hours ago

ವಿಯೆಟ್ನಾಂನಿಂದ 1.38 ಕೋಟಿ ಮೌಲ್ಯದ ಹೈಡ್ರೋಫೋನಿಕ್ ಗಾಂಜಾ ಸಾಗಾಟ: ಆರೋಪಿ ಬಂಧನ

ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…

9 hours ago