ರಾಜರಾಜೇಶ್ವರಿ ನಗರ ವಲಯದಲ್ಲಿ 118 ಕೋಟಿ ರೂ. ಸರ್ಕಾರಿ ಹಣ ನಷ್ಟ ಸಾಬೀತು ಹಿನ್ನೆಲೆ 8 ಬಿಬಿಎಂಪಿ ಅಧಿಕಾರಿಗಳನ್ನು ಸಸ್ಪೆಂಡ್ ಮಾಡಿರುವ ನಗರಾಭಿವೃದ್ಧಿ ಇಲಾಖೆ.
ಸಂಸದ ಡಿ.ಕೆ.ಸುರೇಶ್ ಅವರು ಈ ಕುರಿತು ಲೋಕಾಯುಕ್ತಕ್ಕೆ ದೂರು ನೀಡಿದ್ದರು. ಪ್ರಕರಣ ಕುರಿತು ತನಿಖೆ ನಡೆಸಿದ್ದ ಲೋಕಾಯುಕ್ತಕ್ಕೆ 118 ಕೋಟಿ ರೂ. ಸರ್ಕಾರಿ ಹಣ ವಿವಿಧ ಕಾಮಗಾರಿ ಹೆಸರಲ್ಲಿ ನಷ್ಟವಾಗಿದ್ದು ಬೆಳಕಿಗೆ ಬಂದಿತ್ತು.
ಎಇಇ ಜಿ.ಎಂ.ಚಂದ್ರನಾಥ( ನಿವೃತ್ತಿ), ಟಿವಿಸಿಸಿ ಕೋಶ ಸಹಾಯಕ ಅಭಿಯಂತರ ಸತೀಶ್ ಕು
ಮಾರ್, ಆರ್ ಆರ್ ನಗರ ವಿಭಾಗದ ಕಾರ್ಯಪಾಲಕ ಎಂಜನಿಯರ್ ಬಸವರಾಜ್, ಸಹಾಯಕ ಕಾರ್ಯಪಾಲಕ ಎಂಜನಿಯರ್ ಸಿದ್ದರಾಮಯ್ಯ, ಸಹಾಯಕ ಅಭಿಯಂತರ ಎಸ್.ಜಿ.ಉಮೇಶ್ , ಅಮಾನತ್ತು ಮಾಡಲಾಗಿದೆ.
2019-20 ನೇ ಸಾಲಿನ ಕೆಆರ್ ಐಡಿಎಲ್ ಗೆ ವಹಿಸಲಾಗಿದ್ದ ಎಲ್ಲಾ ಕಾಮಗಾರಿ ಮಾಡದಿದ್ದರು ಬಿಲ್ ಪಾವತಿ ಆಗಿರುವ ಗಂಭೀರ ಆರೋಪವನ್ನು ಸಂಸದ ಡಿ.ಕೆ ಸುರೇಶ್ ಮಾಡಿದ್ದರು.
ದೂರಿನ ಅನ್ವಯ ಲೋಕಾಯುಕ್ತ ಪ್ರಾಥಮಿಕ ತನಿಖೆ ನಡೆಸಿತ್ತು. ಅದರಲ್ಲಿ 118 ಕೋಟಿ ರೂ ಸರ್ಕಾರದ ಹಣ ನಕಲಿ ಬಿಲ್ ಗೆ ಪಾವತಿ ಆಗಿರೋದು ಬೆಳಕಿಗೆ ಬಂದಿತ್ತು.
2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಮಾರ್ಚ್ 18 ಬುಧವಾರದಿಂದ ಏಪ್ರಿಲ್ 02 ಗುರುವಾರದ ವರೆಗೆ ಬೆಳಿಗ್ಗೆ 10:15 ಗಂಟೆಯಿಂದ ಮಧ್ಯಾಹ್ನ…
ದೊಡ್ಡಬಳ್ಳಾಪುರ: ನಗರದ 4 ನೇ ವಾರ್ಡ್ನ ವಿನಾಯಕ ನಗರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಅಸ್ಟಿಮೊ ಫೈ ಕಂಪನಿಯ…
ಕಾನೂನು ರಕ್ಷಕನೇ ಭಕ್ಷಕನಾದರೆ ಸಾಮಾನ್ಯ ಜನರ ಗತಿ ಏನು? ದೂರು ನೀಡಲು ಬಂದವರನ್ನೇ ಲೈಂಗಿಕವಾಗಿ ಬಳಸಿಕೊಳ್ಳುವ ಕಾಮುಕ ಪೊಲೀಸ್ ಅಧಿಕಾರಿಯೊಬ್ಬನ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಅಲಸಹಳ್ಳಿ ಗೇಟ್ ಸಮೀಪದ ಅರಣ್ಯ ಪ್ರದೇಶದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನೊಬ್ಬನ ಶವ…
ಭಾರತ ಸಾಹಿತ್ಯದ ನೊಬೆಲ್ ಎಂದೇ ಹೆಸರಾದ ಜ್ಞಾನಪೀಠ ಪ್ರಶಸ್ತಿ ಸಾಹಿತ್ಯ ಕ್ಷೇತ್ರದ ಅತ್ಯುನ್ನತ ಪ್ರಶಸ್ತಿ ಮಾತ್ರವಲ್ಲ, ಅದನ್ನು ಪಡೆದ ವ್ಯಕ್ತಿಗಳು…
ಜಿಲ್ಲೆಯಾದ್ಯಂತ ಎಲ್ಪಿಜಿ ಸಿಲಿಂಡರ್ ಪೂರೈಕೆಯಲ್ಲಿ ಸಾರ್ವಜನಿಕ ಕುಂದುಕೊರತೆಗಳು ಕಂಡು ಬಂದಲ್ಲಿ ತಾಲ್ಲೂಕಿನ ಆಹಾರ ಶಾಖೆಯ ಆಹಾರ ನಿರೀಕ್ಷಕರನ್ನು ದೂರವಾಣಿ ಮೂಲಕ…