ರಾಜಸ್ಥಾನ ಮುಖ್ಯಮಂತ್ರಿ ಅಶೋಕ ಗೆಹ್ಲೋಟ್ ಹಾಗೂ ಪಕ್ಷದ ನಾಯಕ ಸಚಿನ್ ಪೈಲಟ್ ನಡುವಿನ ಭಿನ್ನಾಭಿಪ್ರಾಯಕ್ಕೆ ತೇಪೆ ಹಚ್ಚಿರುವ ಕಾಂಗ್ರೆಸ್ ಹೈಕಮಾಂಡ್, ವಿಧಾನಸಭಾ ಚುನಾವಣೆಯನ್ನು ಒಗ್ಗಟ್ಟಿನಿಂದ ಎದುರಿಸುವುದಾಗಿ ಹೇಳಿಕೊಂಡಿದೆ.
ನವೆಂಬರ್ ತಿಂಗಳಲ್ಲಿ ರಾಜಸ್ಥಾನ ವಿಧಾನಸಭಾ ಚುನಾವಣೆ ನಡೆಯಲಿದೆ. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ಪಕ್ಷದ ಕೇಂದ್ರ ಕಚೇರಿಯಲ್ಲಿ ಗುರುವಾರ ನಡೆದ ಚುನಾವಣಾ ತಂತ್ರಗಾರಿಕೆಯ ಸಭೆಯಲ್ಲಿ ನಾಯಕರು ಒಗ್ಗಟ್ಟಿನ ಮಂತ್ರ ಪಠಿಸಿದ್ದಾರೆ.
ಭ್ರಷ್ಟಾಚಾರ ಪ್ರಕರಣಗಳ ತನಿಖೆ ಕುರಿತ ತಮ್ಮ ಬೇಡಿಕೆ ಈಡೇರಿಸಲು ಹೈಕಮಾಂಡ್ ಕ್ರಮ ಕೈಗೊಂಡಿದೆ ಎಂದು ಸಚಿನ್ ಪೈಲಟ್ ತೃಪ್ತಿ ವ್ಯಕ್ತಪಡಿಸಿದರು. ಚುನಾವಣೆಯಲ್ಲಿ ಪಕ್ಷ ಭಾರಿ ಗೆಲುವು ಸಾಧಿಸಲು ನಾವೆಲ್ಲ ಒಗ್ಗಟ್ಟಿನಿಂದ ಕೆಲಸ ಮಾಡುತ್ತೇವೆ ಎಂದೂ ಹೇಳಿದರು. ಅವರನ್ನು ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಥವಾ ರಾಜಸ್ಥಾನ ರಾಜ್ಯ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರನ್ನಾಗಿ ನೇಮಿಸುವ ಸಾಧ್ಯತೆ ಇದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ಸಭೆಯ ಬಳಿಕ ಸುದ್ದಿಗಾರರ ಜತೆಗೆ ಮಾತನಾಡಿದ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಕೆ.ಸಿ.ವೇಣುಗೋಪಾಲ್, ‘ಸೆಪ್ಟೆಂಬರ್ ಮೊದಲ ವಾರದೊಳಗೆ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಲಾಗುವುದು. ಅಭ್ಯರ್ಥಿಗಳ ಆಯ್ಕೆಗೆ ಗೆಲುವೇ ಮಾನದಂಡವಾಗಿರಲಿದೆ’ ಎಂದರು. ‘ರಾಜ್ಯದಲ್ಲಿ ಯಾರ ನೇತೃತ್ವದಲ್ಲಿ ಚುನಾವಣೆ ಎದುರಿಸುತ್ತೀರಿ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ‘ನಾವು ಚುನಾವಣೆಗೆ ಮುನ್ನ ಸಾಮಾನ್ಯವಾಗಿ ಮುಖ್ಯಮಂತ್ರಿ ಅಭ್ಯರ್ಥಿ ಹೆಸರನ್ನು ಘೋಷಿಸುವುದಿಲ್ಲ. ಆದರೆ, ಎಲ್ಲರೂ ಒಗ್ಗಟ್ಟಿನಿಂದ ಚುನಾವಣೆ ಎದುರಿಸುತ್ತೇವೆ’ ಎಂದರು.
‘ಮುಖ್ಯಮಂತ್ರಿ, ಪಕ್ಷದ ರಾಜ್ಯ ಘಟಕದ ಅಧ್ಯಕ್ಷರು ಸೇರಿದಂತೆ 29 ನಾಯಕರು ಸಭೆಯಲ್ಲಿ ಪಾಲ್ಗೊಂಡಿದ್ದರು. ಎಲ್ಲರೂ ಒಗ್ಗೂಡಿ ಪಕ್ಷವನ್ನು ಅಧಿಕಾರಕ್ಕೆ ತರುವ ವಾಗ್ದಾನ ಮಾಡಿದ್ದಾರೆ’ ಎಂದರು.
ಗೆಹ್ಲೋಟ್ ಮತ್ತು ಸಚಿನ್ ನಡುವೆ ಸಂಧಾನ ಸೂತ್ರ ಏರ್ಪಟ್ಟಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಲು ವೇಣುಗೋಪಾಲ್ ನಿರಾಕರಿಸಿದರು. ಕಾಲ್ಬೆರಳುಗಳ ಮೂಳೆ ಮುರಿತದಿಂದ ಚೇತರಿಸಿಕೊಳ್ಳುತ್ತಿರುವ ಗೆಹ್ಲೋಟ್ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆಯಲ್ಲಿ ಪಾಲ್ಗೊಂಡಿದ್ದರು.
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…
ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…
ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…
ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…