ರಾಜ್ಯಕ್ಕೆ ಕಳೆದ ಐದು ವರ್ಷಗಳಿಂದ ವಿಶೇಷ ಅನುದಾನ ಹಾಗೂ ತೆರಿಗೆ ಹಂಚಿಕೆಯಲ್ಲಿ 80,000 ಕೋಟಿ ಅನುದಾನ ಕಡಿಮೆ- ಸಿಎಂ ಸಿದ್ದರಾಮಯ್ಯ

ರಾಜ್ಯಕ್ಕೆ ಕಳೆದ ಐದು ವರ್ಷಗಳಿಂದ ವಿಶೇಷ ಅನುದಾನ ಹಾಗೂ ತೆರಿಗೆ ಹಂಚಿಕೆಯಲ್ಲಿ 80,000 ಕೋಟಿ ಅನುದಾನ ಕಡಿಮೆಯಾಗಿದೆ. ಇದನ್ನು ಸರಿಪಡಿಸಬೇಕೆಂದು 16ನೇ ಹಣಕಾಸು ಆಯೋಗವನ್ನು ಕೋರಲಾಗಿದ್ದು, ಆಯೋಗವು ಸಕಾರಾತ್ಮಕವಾಗಿ ಸ್ಪಂದಿಸಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

16ನೇ ಹಣಕಾಸು ಆಯೋಗದವರೊಂದಿಗೆ ಸಭೆಯ ಬಳಿಕ ಅವರು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದರು.

ಡಿವಿಸಿಬಲ್ ಪೂಲ್ ಗೆ ಸೆಸ್ ಮತ್ತು ಸರ್ಜಾಜ್ ನ್ನು ಸೇರಿಸಬೇಕೆಂದು ಹಾಗೂ ಭಾರತ ಸರ್ಕಾರಕ್ಕೆ ಬರುವ ತೆರಿಗೆಯೇತರ ಆದಾಯವನ್ನೂ ಸಹ ಡಿವಿಸಿಬಲ್ ಪೂಲ್ ಗೆ ಸೇರಿಸಬೇಕೆಂದು ಕೋರಲಾಗಿದೆ. ಕಲ್ಯಾಣ ಕರ್ನಾಟಕ ಪ್ರದೇಶಕ್ಕೆ ರಾಜ್ಯ ಸರ್ಕಾರ ಪ್ರತಿ ವರ್ಷ ₹5,000 ಕೋಟಿ ಯಂತೆ ಐದು ವರ್ಷಕ್ಕೆ ₹25,000 ಕೋಟಿ ಖರ್ಚು ಮಾಡಲಾಗುತ್ತಿದ್ದು, ಕೇಂದ್ರ ಸರ್ಕಾರವೂ ಇದಕ್ಕೆ ಅನುರೂಪದ ಅನುದಾನ ನೀಡಬೇಕೆಂದು ಕೋರಲಾಗಿದೆ. ಬೆಂಗಳೂರು ಅಭಿವೃದ್ಧಿಗೆ ಸುಮಾರು ₹55,000 ಕೋಟಿ ವೆಚ್ಚವಾಗಲಿದ್ದು, ಈ ಮೊತ್ತದಲ್ಲಿ ಅರ್ಧದಷ್ಟಾದರೂ ಅನುದಾನ ನೀಡಬೇಕೆಂದು ಕೋರಲಾಗಿದೆ ಎಂದರು.

ಪಶ್ಚಿಮ ಘಟ್ಟ ವಿಪತ್ತು ನಿರ್ವಹಣೆಗೆ ಹೆಚ್ಚಿನ ಅನುದಾನ ನೀಡಲು ಕೋರಲಾಯಿತು. ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿರುವ ರಾಜ್ಯಗಳಿಗೆ ದಂಡವಿಧಿಸಬಾರದು. ದೇಶದ ಜಿಡಿಪಿಗೆ ನಮ್ಮ ರಾಜ್ಯದಿಂದ ಶೇ.9 ರಷ್ಟು ಕೊಡುಗೆ ನೀಡುತ್ತಿದ್ದು, ಅದರಲ್ಲಿ ನಮಗೆ ಕೇವಲ ಶೇ. 1.5 ರಷ್ಟು ಮಾತ್ರ ರಾಜ್ಯದ ಪಾಲಿಗೆ ಬರುತ್ತಿದೆ. ಇದನ್ನು ಸರಿಪಡಿಸಲು ಕೋರಲಾಗಿದೆ. 14ನೇ ಹಣಕಾಸು ಆಯೋಗದಲ್ಲಿ ರಾಜ್ಯಕ್ಕೆ 4.713  ಪ್ರಮಾಣದ ತೆರಿಗೆ ಹಂಚಿಕೆಯಾಗುತ್ತಿತ್ತು. ಆದರೆ 15ನೇ ಹಣಕಾಸು ಆಯೋಗದಲ್ಲಿ ಈ ಪ್ರಮಾಣ 3.647 ಕ್ಕೆ ಇಳಿದಿದ್ದು, ಈ ಪ್ರಮಾಣವನ್ನೂ ಸರಿಪಡಿಸಬೇಕೆಂದು ಕೋರಲಾಗಿದೆ. ತೆರಿಗೆ ಪ್ರಮಾಣದಲ್ಲಿ 1.66% ಕಡಿಮೆಯಾಗಿರುವ ಬಗ್ಗೆ ಆಯೋಗಕ್ಕೆ ವಿವರಣೆ ನೀಡಲಾಗಿದೆ ಎಂದು ತಿಳಿಸಿದರು.

ಗುಜರಾತಿನ ಮುಖ್ಯಮಂತ್ರಿಯಾಗಿದ್ದಾಗ ನರೇಂದ್ರ ಮೋದಿ ಅವರು ತೆರಿಗೆ ಹಂಚಿಕೆಯಲ್ಲಿ ಶೇ. 50 ರಷ್ಟು ಪಾಲಿಗೆ ಬೇಡಿಕೆಯಿಟ್ಟಿದ್ದರು. ಅನೇಕ ರಾಜ್ಯಗಳು ಈ ರೀತಿ ಬೇಡಿಕೆ ಸಲ್ಲಿಸಿರುವುದರಿಂದ, ಕರ್ನಾಟಕದ ಬೇಡಿಕೆಯನ್ನು ಈಡೇರಿಸಬಹುದೆಂಬ ವಿಶ್ವಾಸ ನನಗಿದೆ ಎಂದರು.

Ramesh Babu

Journalist

Recent Posts

ದೊಡ್ಡಬಳ್ಳಾಪುರದಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ

ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…

7 hours ago

ಘಾಟಿ ಕ್ಷೇತ್ರದಲ್ಲಿ ವರಮಹಾಲಕ್ಷ್ಮಿ ಸಂಭ್ರಮ; ಮಹಿಳೆಯರಿಗೆ ಬಳೆ, ಅರಶಿನ–ಕುಂಕುಮ ವಿತರಣೆ

ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…

7 hours ago

ವರಮಹಾಲಕ್ಷ್ಮಿ ಹಬ್ಬ…..

ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…

20 hours ago

ಸುಮಾರು 500 ಕೋಟಿ ಮೌಲ್ಯದ ಜಮೀನು ಖಾತೆ ಬದಲಾವಣೆ ಆರೋಪ: ದೊಡ್ಡಬಳ್ಳಾಪುರ ಉಪವಿಭಾಗದ ಹಿಂದಿನ ಎಸಿ ದುರ್ಗಾಶ್ರೀ ಹಾಗೂ ಕಚೇರಿ ಸಿಬ್ಬಂದಿ ವಿರುದ್ದ ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲು

ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…

1 day ago

ಹೂ ಕೀಳುವಾಗ ಹಾವು ಕಚ್ಚಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…

1 day ago

ದೇವರಾಜ ಅರಸು ಅವರ ಆಶಯಗಳಿಗೆ ಧ್ವನಿಯಾಗೋಣ-ಡಿಸಿ ಡಾ. ಕೆ.ಎನ್ ಅನುರಾಧ

ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…

1 day ago