ರಾಜ್ಯಕ್ಕೆ ಕಳೆದ ಐದು ವರ್ಷಗಳಿಂದ ವಿಶೇಷ ಅನುದಾನ ಹಾಗೂ ತೆರಿಗೆ ಹಂಚಿಕೆಯಲ್ಲಿ 80,000 ಕೋಟಿ ಅನುದಾನ ಕಡಿಮೆಯಾಗಿದೆ. ಇದನ್ನು ಸರಿಪಡಿಸಬೇಕೆಂದು 16ನೇ ಹಣಕಾಸು ಆಯೋಗವನ್ನು ಕೋರಲಾಗಿದ್ದು, ಆಯೋಗವು ಸಕಾರಾತ್ಮಕವಾಗಿ ಸ್ಪಂದಿಸಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
16ನೇ ಹಣಕಾಸು ಆಯೋಗದವರೊಂದಿಗೆ ಸಭೆಯ ಬಳಿಕ ಅವರು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದರು.
ಡಿವಿಸಿಬಲ್ ಪೂಲ್ ಗೆ ಸೆಸ್ ಮತ್ತು ಸರ್ಜಾಜ್ ನ್ನು ಸೇರಿಸಬೇಕೆಂದು ಹಾಗೂ ಭಾರತ ಸರ್ಕಾರಕ್ಕೆ ಬರುವ ತೆರಿಗೆಯೇತರ ಆದಾಯವನ್ನೂ ಸಹ ಡಿವಿಸಿಬಲ್ ಪೂಲ್ ಗೆ ಸೇರಿಸಬೇಕೆಂದು ಕೋರಲಾಗಿದೆ. ಕಲ್ಯಾಣ ಕರ್ನಾಟಕ ಪ್ರದೇಶಕ್ಕೆ ರಾಜ್ಯ ಸರ್ಕಾರ ಪ್ರತಿ ವರ್ಷ ₹5,000 ಕೋಟಿ ಯಂತೆ ಐದು ವರ್ಷಕ್ಕೆ ₹25,000 ಕೋಟಿ ಖರ್ಚು ಮಾಡಲಾಗುತ್ತಿದ್ದು, ಕೇಂದ್ರ ಸರ್ಕಾರವೂ ಇದಕ್ಕೆ ಅನುರೂಪದ ಅನುದಾನ ನೀಡಬೇಕೆಂದು ಕೋರಲಾಗಿದೆ. ಬೆಂಗಳೂರು ಅಭಿವೃದ್ಧಿಗೆ ಸುಮಾರು ₹55,000 ಕೋಟಿ ವೆಚ್ಚವಾಗಲಿದ್ದು, ಈ ಮೊತ್ತದಲ್ಲಿ ಅರ್ಧದಷ್ಟಾದರೂ ಅನುದಾನ ನೀಡಬೇಕೆಂದು ಕೋರಲಾಗಿದೆ ಎಂದರು.
ಪಶ್ಚಿಮ ಘಟ್ಟ ವಿಪತ್ತು ನಿರ್ವಹಣೆಗೆ ಹೆಚ್ಚಿನ ಅನುದಾನ ನೀಡಲು ಕೋರಲಾಯಿತು. ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿರುವ ರಾಜ್ಯಗಳಿಗೆ ದಂಡವಿಧಿಸಬಾರದು. ದೇಶದ ಜಿಡಿಪಿಗೆ ನಮ್ಮ ರಾಜ್ಯದಿಂದ ಶೇ.9 ರಷ್ಟು ಕೊಡುಗೆ ನೀಡುತ್ತಿದ್ದು, ಅದರಲ್ಲಿ ನಮಗೆ ಕೇವಲ ಶೇ. 1.5 ರಷ್ಟು ಮಾತ್ರ ರಾಜ್ಯದ ಪಾಲಿಗೆ ಬರುತ್ತಿದೆ. ಇದನ್ನು ಸರಿಪಡಿಸಲು ಕೋರಲಾಗಿದೆ. 14ನೇ ಹಣಕಾಸು ಆಯೋಗದಲ್ಲಿ ರಾಜ್ಯಕ್ಕೆ 4.713 ಪ್ರಮಾಣದ ತೆರಿಗೆ ಹಂಚಿಕೆಯಾಗುತ್ತಿತ್ತು. ಆದರೆ 15ನೇ ಹಣಕಾಸು ಆಯೋಗದಲ್ಲಿ ಈ ಪ್ರಮಾಣ 3.647 ಕ್ಕೆ ಇಳಿದಿದ್ದು, ಈ ಪ್ರಮಾಣವನ್ನೂ ಸರಿಪಡಿಸಬೇಕೆಂದು ಕೋರಲಾಗಿದೆ. ತೆರಿಗೆ ಪ್ರಮಾಣದಲ್ಲಿ 1.66% ಕಡಿಮೆಯಾಗಿರುವ ಬಗ್ಗೆ ಆಯೋಗಕ್ಕೆ ವಿವರಣೆ ನೀಡಲಾಗಿದೆ ಎಂದು ತಿಳಿಸಿದರು.
ಗುಜರಾತಿನ ಮುಖ್ಯಮಂತ್ರಿಯಾಗಿದ್ದಾಗ ನರೇಂದ್ರ ಮೋದಿ ಅವರು ತೆರಿಗೆ ಹಂಚಿಕೆಯಲ್ಲಿ ಶೇ. 50 ರಷ್ಟು ಪಾಲಿಗೆ ಬೇಡಿಕೆಯಿಟ್ಟಿದ್ದರು. ಅನೇಕ ರಾಜ್ಯಗಳು ಈ ರೀತಿ ಬೇಡಿಕೆ ಸಲ್ಲಿಸಿರುವುದರಿಂದ, ಕರ್ನಾಟಕದ ಬೇಡಿಕೆಯನ್ನು ಈಡೇರಿಸಬಹುದೆಂಬ ವಿಶ್ವಾಸ ನನಗಿದೆ ಎಂದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶನಿವಾರ ವಿವಿಧ ದುರ್ಘಟನೆಗಳಲ್ಲಿ ಏಳು ಮಂದಿ ಮೃತಪಟ್ಟಿರುವ ಘಟನೆಗಳು ವರದಿಯಾಗಿವೆ. ದೇವನಹಳ್ಳಿ, ನೆಲಮಂಗಲ, ಹೊಸಕೋಟೆ ಭಾಗಗಳಲ್ಲಿ…
ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಮಕ್ಕಳು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಇಂದು ಮಧ್ಯಾಹ್ನ ಸುಮಾರು 3:30ರ ಸಮಯದಲ್ಲಿ ದೊಡ್ಡಬಳ್ಳಾಪುರ ತಾಲೂಕಿನ…
ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಹಲಸಳ್ಳಿ ಗೇಟ್ ಸಮೀಪದ ಹೊಸಕೋಟೆ–ಕೋಲಾರ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಮತ್ತು ದ್ವಿಚಕ್ರ…
21 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ ಮದ್ಯ ಮಾರಾಟ ಮಾಡುವುದು ಅಥವಾ ಮದ್ಯಪಾನ ಮಾಡಲು ಅನುಮತಿ ನೀಡುವುದು ಕಾನೂನುಬಾಹಿರವಾಗಿದ್ದು, ತಪ್ಪಿದ್ದಲ್ಲಿ, ಪರವಾನಗಿ…
ದೇವನಹಳ್ಳಿ ತಾಲೂಕಿನ ರಾಣಿ ಕ್ರಾಸ್ ಬಳಿ ಡ್ಯೂಕ್ ಬೈಕ್ ಮತ್ತು ಕಂಟೈನರ್ ಲಾರಿ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ…
ಹೊಸಕೋಟೆ: ನೂತನ ಚೆನ್ನೈ ಎಕ್ಸ್ಪ್ರೆಸ್ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಯುವತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೆಂಗಳೂರು ಗ್ರಾಮಾಂತರ…