ರಾಜ್ಯಕ್ಕೆ ಕಳೆದ ಐದು ವರ್ಷಗಳಿಂದ ವಿಶೇಷ ಅನುದಾನ ಹಾಗೂ ತೆರಿಗೆ ಹಂಚಿಕೆಯಲ್ಲಿ 80,000 ಕೋಟಿ ಅನುದಾನ ಕಡಿಮೆ- ಸಿಎಂ ಸಿದ್ದರಾಮಯ್ಯ

ರಾಜ್ಯಕ್ಕೆ ಕಳೆದ ಐದು ವರ್ಷಗಳಿಂದ ವಿಶೇಷ ಅನುದಾನ ಹಾಗೂ ತೆರಿಗೆ ಹಂಚಿಕೆಯಲ್ಲಿ 80,000 ಕೋಟಿ ಅನುದಾನ ಕಡಿಮೆಯಾಗಿದೆ. ಇದನ್ನು ಸರಿಪಡಿಸಬೇಕೆಂದು 16ನೇ ಹಣಕಾಸು ಆಯೋಗವನ್ನು ಕೋರಲಾಗಿದ್ದು, ಆಯೋಗವು ಸಕಾರಾತ್ಮಕವಾಗಿ ಸ್ಪಂದಿಸಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

16ನೇ ಹಣಕಾಸು ಆಯೋಗದವರೊಂದಿಗೆ ಸಭೆಯ ಬಳಿಕ ಅವರು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದರು.

ಡಿವಿಸಿಬಲ್ ಪೂಲ್ ಗೆ ಸೆಸ್ ಮತ್ತು ಸರ್ಜಾಜ್ ನ್ನು ಸೇರಿಸಬೇಕೆಂದು ಹಾಗೂ ಭಾರತ ಸರ್ಕಾರಕ್ಕೆ ಬರುವ ತೆರಿಗೆಯೇತರ ಆದಾಯವನ್ನೂ ಸಹ ಡಿವಿಸಿಬಲ್ ಪೂಲ್ ಗೆ ಸೇರಿಸಬೇಕೆಂದು ಕೋರಲಾಗಿದೆ. ಕಲ್ಯಾಣ ಕರ್ನಾಟಕ ಪ್ರದೇಶಕ್ಕೆ ರಾಜ್ಯ ಸರ್ಕಾರ ಪ್ರತಿ ವರ್ಷ ₹5,000 ಕೋಟಿ ಯಂತೆ ಐದು ವರ್ಷಕ್ಕೆ ₹25,000 ಕೋಟಿ ಖರ್ಚು ಮಾಡಲಾಗುತ್ತಿದ್ದು, ಕೇಂದ್ರ ಸರ್ಕಾರವೂ ಇದಕ್ಕೆ ಅನುರೂಪದ ಅನುದಾನ ನೀಡಬೇಕೆಂದು ಕೋರಲಾಗಿದೆ. ಬೆಂಗಳೂರು ಅಭಿವೃದ್ಧಿಗೆ ಸುಮಾರು ₹55,000 ಕೋಟಿ ವೆಚ್ಚವಾಗಲಿದ್ದು, ಈ ಮೊತ್ತದಲ್ಲಿ ಅರ್ಧದಷ್ಟಾದರೂ ಅನುದಾನ ನೀಡಬೇಕೆಂದು ಕೋರಲಾಗಿದೆ ಎಂದರು.

ಪಶ್ಚಿಮ ಘಟ್ಟ ವಿಪತ್ತು ನಿರ್ವಹಣೆಗೆ ಹೆಚ್ಚಿನ ಅನುದಾನ ನೀಡಲು ಕೋರಲಾಯಿತು. ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿರುವ ರಾಜ್ಯಗಳಿಗೆ ದಂಡವಿಧಿಸಬಾರದು. ದೇಶದ ಜಿಡಿಪಿಗೆ ನಮ್ಮ ರಾಜ್ಯದಿಂದ ಶೇ.9 ರಷ್ಟು ಕೊಡುಗೆ ನೀಡುತ್ತಿದ್ದು, ಅದರಲ್ಲಿ ನಮಗೆ ಕೇವಲ ಶೇ. 1.5 ರಷ್ಟು ಮಾತ್ರ ರಾಜ್ಯದ ಪಾಲಿಗೆ ಬರುತ್ತಿದೆ. ಇದನ್ನು ಸರಿಪಡಿಸಲು ಕೋರಲಾಗಿದೆ. 14ನೇ ಹಣಕಾಸು ಆಯೋಗದಲ್ಲಿ ರಾಜ್ಯಕ್ಕೆ 4.713  ಪ್ರಮಾಣದ ತೆರಿಗೆ ಹಂಚಿಕೆಯಾಗುತ್ತಿತ್ತು. ಆದರೆ 15ನೇ ಹಣಕಾಸು ಆಯೋಗದಲ್ಲಿ ಈ ಪ್ರಮಾಣ 3.647 ಕ್ಕೆ ಇಳಿದಿದ್ದು, ಈ ಪ್ರಮಾಣವನ್ನೂ ಸರಿಪಡಿಸಬೇಕೆಂದು ಕೋರಲಾಗಿದೆ. ತೆರಿಗೆ ಪ್ರಮಾಣದಲ್ಲಿ 1.66% ಕಡಿಮೆಯಾಗಿರುವ ಬಗ್ಗೆ ಆಯೋಗಕ್ಕೆ ವಿವರಣೆ ನೀಡಲಾಗಿದೆ ಎಂದು ತಿಳಿಸಿದರು.

ಗುಜರಾತಿನ ಮುಖ್ಯಮಂತ್ರಿಯಾಗಿದ್ದಾಗ ನರೇಂದ್ರ ಮೋದಿ ಅವರು ತೆರಿಗೆ ಹಂಚಿಕೆಯಲ್ಲಿ ಶೇ. 50 ರಷ್ಟು ಪಾಲಿಗೆ ಬೇಡಿಕೆಯಿಟ್ಟಿದ್ದರು. ಅನೇಕ ರಾಜ್ಯಗಳು ಈ ರೀತಿ ಬೇಡಿಕೆ ಸಲ್ಲಿಸಿರುವುದರಿಂದ, ಕರ್ನಾಟಕದ ಬೇಡಿಕೆಯನ್ನು ಈಡೇರಿಸಬಹುದೆಂಬ ವಿಶ್ವಾಸ ನನಗಿದೆ ಎಂದರು.

Ramesh Babu

Journalist

Recent Posts

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಗೂಡ್ಸ್ ವಾಹನ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…

1 hour ago

ಮದ್ಯಪಾನ, ಡ್ರಗ್ಸ್ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ- ಸಚಿವ ಕೆ.ಎಚ್ ಮುನಿಯಪ್ಪ

ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…

1 hour ago

ಅನ್ನದಾಸೋಹ ಮಾಡುವ ಮೂಲಕ ಸಂದೀಪ್ ಹುಟ್ಟುಹಬ್ಬ ಆಚರಿಸಿದ ಅಭಿಮಾನಿಗಳು

ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್‌ಬುಕ್, ಸಿಹಿ,…

4 hours ago

ರೈಲ್ವೆ ನಿಲ್ದಾಣದ ಬಳಿ ನವಜಾತ ಶಿಶುವಿನ ಮೃತದೇಹ ಪತ್ತೆ; ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ

ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…

5 hours ago

ರಾಹುಲ್ ಗಾಂಧಿ ಕುರಿತು ಅವಹೇಳನಕಾರಿ ಹೇಳಿಕೆ ಖಂಡನೆ: ಶಾಸಕ ಯಶ್ ಪಾಲ್ ಆನಂದ್ ಸುವರ್ಣ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…

9 hours ago

ಮಳೆ ಕೈಕೊಟ್ಟು ಮುಂಗಾರು ಬಿತ್ತನೆ ಕುಂಠಿತ: ಶೇ.66ರಷ್ಟು ಮಳೆ ಕೊರತೆ; ಗುರಿಯ ಶೇ.3ರಷ್ಟು ಮಾತ್ರ ಬಿತ್ತನೆ ಪೂರ್ಣ

ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…

13 hours ago