ರಾಜ್ಯಕ್ಕೆ ಕಳೆದ ಐದು ವರ್ಷಗಳಿಂದ ವಿಶೇಷ ಅನುದಾನ ಹಾಗೂ ತೆರಿಗೆ ಹಂಚಿಕೆಯಲ್ಲಿ 80,000 ಕೋಟಿ ಅನುದಾನ ಕಡಿಮೆ- ಸಿಎಂ ಸಿದ್ದರಾಮಯ್ಯ

ರಾಜ್ಯಕ್ಕೆ ಕಳೆದ ಐದು ವರ್ಷಗಳಿಂದ ವಿಶೇಷ ಅನುದಾನ ಹಾಗೂ ತೆರಿಗೆ ಹಂಚಿಕೆಯಲ್ಲಿ 80,000 ಕೋಟಿ ಅನುದಾನ ಕಡಿಮೆಯಾಗಿದೆ. ಇದನ್ನು ಸರಿಪಡಿಸಬೇಕೆಂದು 16ನೇ ಹಣಕಾಸು ಆಯೋಗವನ್ನು ಕೋರಲಾಗಿದ್ದು, ಆಯೋಗವು ಸಕಾರಾತ್ಮಕವಾಗಿ ಸ್ಪಂದಿಸಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

16ನೇ ಹಣಕಾಸು ಆಯೋಗದವರೊಂದಿಗೆ ಸಭೆಯ ಬಳಿಕ ಅವರು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದರು.

ಡಿವಿಸಿಬಲ್ ಪೂಲ್ ಗೆ ಸೆಸ್ ಮತ್ತು ಸರ್ಜಾಜ್ ನ್ನು ಸೇರಿಸಬೇಕೆಂದು ಹಾಗೂ ಭಾರತ ಸರ್ಕಾರಕ್ಕೆ ಬರುವ ತೆರಿಗೆಯೇತರ ಆದಾಯವನ್ನೂ ಸಹ ಡಿವಿಸಿಬಲ್ ಪೂಲ್ ಗೆ ಸೇರಿಸಬೇಕೆಂದು ಕೋರಲಾಗಿದೆ. ಕಲ್ಯಾಣ ಕರ್ನಾಟಕ ಪ್ರದೇಶಕ್ಕೆ ರಾಜ್ಯ ಸರ್ಕಾರ ಪ್ರತಿ ವರ್ಷ ₹5,000 ಕೋಟಿ ಯಂತೆ ಐದು ವರ್ಷಕ್ಕೆ ₹25,000 ಕೋಟಿ ಖರ್ಚು ಮಾಡಲಾಗುತ್ತಿದ್ದು, ಕೇಂದ್ರ ಸರ್ಕಾರವೂ ಇದಕ್ಕೆ ಅನುರೂಪದ ಅನುದಾನ ನೀಡಬೇಕೆಂದು ಕೋರಲಾಗಿದೆ. ಬೆಂಗಳೂರು ಅಭಿವೃದ್ಧಿಗೆ ಸುಮಾರು ₹55,000 ಕೋಟಿ ವೆಚ್ಚವಾಗಲಿದ್ದು, ಈ ಮೊತ್ತದಲ್ಲಿ ಅರ್ಧದಷ್ಟಾದರೂ ಅನುದಾನ ನೀಡಬೇಕೆಂದು ಕೋರಲಾಗಿದೆ ಎಂದರು.

ಪಶ್ಚಿಮ ಘಟ್ಟ ವಿಪತ್ತು ನಿರ್ವಹಣೆಗೆ ಹೆಚ್ಚಿನ ಅನುದಾನ ನೀಡಲು ಕೋರಲಾಯಿತು. ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿರುವ ರಾಜ್ಯಗಳಿಗೆ ದಂಡವಿಧಿಸಬಾರದು. ದೇಶದ ಜಿಡಿಪಿಗೆ ನಮ್ಮ ರಾಜ್ಯದಿಂದ ಶೇ.9 ರಷ್ಟು ಕೊಡುಗೆ ನೀಡುತ್ತಿದ್ದು, ಅದರಲ್ಲಿ ನಮಗೆ ಕೇವಲ ಶೇ. 1.5 ರಷ್ಟು ಮಾತ್ರ ರಾಜ್ಯದ ಪಾಲಿಗೆ ಬರುತ್ತಿದೆ. ಇದನ್ನು ಸರಿಪಡಿಸಲು ಕೋರಲಾಗಿದೆ. 14ನೇ ಹಣಕಾಸು ಆಯೋಗದಲ್ಲಿ ರಾಜ್ಯಕ್ಕೆ 4.713  ಪ್ರಮಾಣದ ತೆರಿಗೆ ಹಂಚಿಕೆಯಾಗುತ್ತಿತ್ತು. ಆದರೆ 15ನೇ ಹಣಕಾಸು ಆಯೋಗದಲ್ಲಿ ಈ ಪ್ರಮಾಣ 3.647 ಕ್ಕೆ ಇಳಿದಿದ್ದು, ಈ ಪ್ರಮಾಣವನ್ನೂ ಸರಿಪಡಿಸಬೇಕೆಂದು ಕೋರಲಾಗಿದೆ. ತೆರಿಗೆ ಪ್ರಮಾಣದಲ್ಲಿ 1.66% ಕಡಿಮೆಯಾಗಿರುವ ಬಗ್ಗೆ ಆಯೋಗಕ್ಕೆ ವಿವರಣೆ ನೀಡಲಾಗಿದೆ ಎಂದು ತಿಳಿಸಿದರು.

ಗುಜರಾತಿನ ಮುಖ್ಯಮಂತ್ರಿಯಾಗಿದ್ದಾಗ ನರೇಂದ್ರ ಮೋದಿ ಅವರು ತೆರಿಗೆ ಹಂಚಿಕೆಯಲ್ಲಿ ಶೇ. 50 ರಷ್ಟು ಪಾಲಿಗೆ ಬೇಡಿಕೆಯಿಟ್ಟಿದ್ದರು. ಅನೇಕ ರಾಜ್ಯಗಳು ಈ ರೀತಿ ಬೇಡಿಕೆ ಸಲ್ಲಿಸಿರುವುದರಿಂದ, ಕರ್ನಾಟಕದ ಬೇಡಿಕೆಯನ್ನು ಈಡೇರಿಸಬಹುದೆಂಬ ವಿಶ್ವಾಸ ನನಗಿದೆ ಎಂದರು.

Ramesh Babu

Journalist

Recent Posts

ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ: ತೂಬಗೆರೆಯಲ್ಲೂ ಕಳೆಗಟ್ಟಿದ ಗೌರಿ ಗಣೇಶ ಹಬ್ಬದ ಆಚರಣೆ: 20 ಅಡಿ ಗಣೇಶ ಮೂರ್ತಿ ಪ್ರತಿಷ್ಠಾಪನೆ

ದೊಡ್ಡಬಳ್ಳಾಪುರ: ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆಮಾಡಿದ್ದು, ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯಲ್ಲೂ ಹಬ್ಬದ ವಾತಾವರಣ ಕಳೆಗಟ್ಟಿದೆ. ವಿವಿಧೆಡೆ…

13 seconds ago

ಅಕ್ಷರ ಜ್ಞಾನದ ಬೆಳಕಿನಲ್ಲಿ ಗ್ರಾಮಾಂತರ; ಸಂಪೂರ್ಣ ಸಾಕ್ಷರತೆಯತ್ತ ದಾಪುಗಾಲು!

ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…

6 hours ago

185 ವರ್ಷಗಳ ಹಳೆಯ ಪೊಲೀಸ್ ಬಿಲ್ಲೆ ಪತ್ತೆ: ಇತಿಹಾಸ ಸಂರಕ್ಷಣೆಯಲ್ಲಿ ಇನ್ಸ್‌ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ವಿಶಿಷ್ಟ ಹೆಜ್ಜೆ

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…

20 hours ago

ಸಿದ್ದರಾಮಯ್ಯ ಸಹಕಾರದಿಂದ 2028ಕ್ಕೆ ಡಿಕೆಶಿ ಮತ್ತೆ ಸಿಎಂ ಆಗ್ತಾರೆ – ಗೌರಿ-ಗಣೇಶ ಹಬ್ಬದಂದು ಮಳೆ ಬರಲಿ ಎಂದು ಪ್ರಾರ್ಥನೆ ಮಾಡೋಣ – ಸಚಿವ ಚಲುವರಾಯಸ್ವಾಮಿ

ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…

21 hours ago

ಮನೆ ಮಾಲೀಕರ ಮುಂದೆಯೇ ಮನೆ ದೋಚಿ ಪರಾರಿಯಾಗಿದ್ದ ಕಳ್ಳ ಲಾಕ್‌!

ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…

22 hours ago

ಕೋಳಿಫಾರ್ಮ್‌ಗೆ ಚಿರತೆ ದಾಳಿ ಶಂಕೆ: 950ಕ್ಕೂ ಅಧಿಕ ಕೋಳಿಮರಿಗಳು ಬಲಿ!

  ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್‌ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…

22 hours ago