ರಾಜ್ಯಕ್ಕೆ ತೆರಿಗೆ ಹಂಚಿಕೆಯಲ್ಲಿ ಕೇಂದ್ರ ಮಾಡಿರುವ ಅನ್ಯಾಯದ ವಿರುದ್ಧ ನವದೆಹಲಿಯಲ್ಲಿ ಪ್ರತಿಭಟನೆ

ಕೇಂದ್ರ ಸರ್ಕಾರ ರಾಜ್ಯಕ್ಕೆ ತೆರಿಗೆ ಹಂಚಿಕೆಯಲ್ಲಿ ಮಾಡಿರುವ ಅನ್ಯಾಯದ ವಿರುದ್ಧ ಇಂದು ನವದೆಹಲಿಯ ಜಂತರ್ ಮಂತರ್ ನಲ್ಲಿ ಹಮ್ಮಿಕೊಂಡಿರುವ ಹೋರಾಟ ಕರ್ನಾಟಕದ, ಕನ್ನಡಿಗರ ಹಿತ ಕಾಪಾಡುವ ಚಳವಳಿಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ನವದೆಹಲಿಯ ಜಂತರ್ ಮಂತರ್ ನಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಹಮ್ಮಿಕೊಂಡಿರುವ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವ ಮುನ್ನ ಮಾಧ್ಯಮದವರೊಂದಿಗೆ ಮಾತನಾಡಿದರು.

ಇದು ರಾಜಕೀಯ ಚಳವಳಿ ಅಲ್ಲ

ಕಳೆದ ಐದಾರು ವರ್ಷಗಳಲ್ಲಿ 1,87,000 ಕೋಟಿ ರೂ.ಗಳಷ್ಟು ನ್ಯಾಯಯುತವಾಗಿ ಬರಬೇಕಾಗಿದ್ದ ಅನುದಾನವನ್ನು ರಾಜ್ಯಕ್ಕೆ ನೀಡಲಾಗಿಲ್ಲ. ಈ ಅನ್ಯಾಯದ ವಿರುದ್ಧ ಪ್ರತಿಭಟನೆಯನ್ನು ಮಾಡಲಾಗುತ್ತಿದೆ.ಜಂತರ್ ಮಂತರ್ ಐತಿಹಾಸಿಕ ಸ್ಥಳವಾಗಿದ್ದು, ಅನೇಕ ಚಳವಳಿಗೆ ಸಾಕ್ಷಿಯಾದ ಸ್ಥಳ. ಇಂತಹ ಜಾಗದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಸೇರಿದಂತೆ ಎಲ್ಲ ಸಚಿವರು, ಶಾಸಕರು ಈ ಹೋರಾಟದಲ್ಲಿ ಭಾಗವಹಿಸಿದ್ದಾರೆ. ಇದು ರಾಜಕೀಯ ಚಳವಳಿ ಅಲ್ಲ. ಕೇಂದ್ರ ಸರ್ಕಾರದ ವಿರುದ್ಧದ ಈ ಹೋರಾಟವನ್ನು ಪಕ್ಷಾತೀತವಾಗಿ ಮಾಡಬೇಕೆಂಬ ಮನವಿಯನ್ನು ರಾಜ್ಯ ಬಿಜೆಪಿಯ ನಾಯಕರಿಗೂ ಮಾಡಲಾಗಿದೆ ಎಂದರು.

100 ರೂ. ಗಳಲ್ಲಿ ರಾಜ್ಯಕ್ಕೆ ಕೇವಲ 12 ರಿಂದ 13 ರೂ.

ಇದು ಐತಿಹಾಸಿಕವಾದ ಪ್ರತಿಭಟನೆ. 14 ನೇ ಹಣಕಾಸು ಆಯೋಗದಲ್ಲಿ ರಾಜ್ಯಕ್ಕೆ ತೆರಿಗೆ ಪಾಲು 4.71 % ಬಂದಿತ್ತು. 15 ನೇ ಹಣಕಾಸು ಆಯೋಗದಲ್ಲಿ 3.64 % ಕ್ಕೆ ಇಳಿಯಿತು. ಇದರಿಂದ ರಾಜ್ಯಕ್ಕೆ ಬರುವ ತೆರಿಗೆಯಲ್ಲಿ ಶೇ. 40 ರಿಂದ 45 ರವರೆಗೆ ಕಡಿತವಾಗಿದೆ. ಒಟ್ಟಾರೆಯಾಗಿ  14 ನೇ ಹಣಕಾಸು ಆಯೋಗದ ಶಿಫಾರಸ್ಸನ್ನೇ 15 ನೇ ಹಣಕಾಸು ಆಯೋಗದಲ್ಲಿ ಅನುಸರಿಸಿದ್ದರೆ, ರಾಜ್ಯಕ್ಕೆ 62,098 ಕೋಟಿ ರೂ. ರಾಜ್ಯಕ್ಕೆ ಬರುತ್ತಿತ್ತು.  ರಾಜ್ಯದಿಂದ ಒಟ್ಟು 4,30,000 ಕೋಟಿ ತೆರಿಗೆ ಮೊತ್ತವನ್ನು ಕೇಂದ್ರಕ್ಕೆ ನೀಡಲಾಗುತ್ತದೆ. ಅಂದರೆ 100 ರೂ. ತೆರಿಗೆಯಲ್ಲಿ ರಾಜ್ಯಕ್ಕೆ ಕೇವಲ 12 ರಿಂದ 13 ರೂ. ದೊರೆಯುತ್ತಿದೆ. ಇದು ಕರ್ನಾಟಕ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯ. ಕರ್ನಾಟಕದಿಂದ 25 ಸಂಸದರು ಆಯ್ಕೆಯಾಗಿದ್ದು, ಒಬ್ಬರೂ ಈ ಬಗ್ಗೆ ಕೇಂದ್ರ ಮುಂದೆ ಮಾತನಾಡಿಲ್ಲ. ಅಲ್ಲದೆ ರಾಜ್ಯದ ಮಾಜಿ ಮುಖ್ಯಮಂತ್ರಿಗಳಾದ ಯಡಿಯೂರಪ್ಪ ಅಥವಾ ಬಸವರಾಜ ಬೊಮ್ಮಾಯಿಯವರು ಈ ಅನ್ಯಾಯವನ್ನು ಸರಿಪಡಿಸುವ ಮನವಿ ಮಾಡಿರುವುದಿಲ್ಲ. ಈ ಎಲ್ಲ ಕಾರಣಗಳಿಗಾಗಿ ಇಂದು ನವದೆಹಲಿಯಲ್ಲಿ ಹೋರಾಟ ಮಾಡಲಾಗುತ್ತಿದೆ ಎಂದು ಮುಖ್ಯಮಂತ್ರಿಗಳು ವಿವರಿಸಿದರು.

ಉತ್ತರಪ್ರದೇಶ ರಾಜ್ಯಕ್ಕೆ 2,80,000 ಕೋಟಿ ರೂ. ಕೇಂದ್ರ ನೀಡುತ್ತಿದೆ. ಅಂತೆಯೇ, ಬಿಹಾರ, ಮಧ್ಯಪ್ರದೇಶ, ರಾಜಸ್ಥಾನಗಳಿಗೂ ನೀಡಲಾಗುತ್ತಿದೆ. ಈ ಯಾವ ರಾಜ್ಯಗಳೂ ಜನಸಂಖ್ಯಾ ನಿಯಂತ್ರಣದ ಬಗ್ಗೆ ಕ್ರಮ ಕೈಗೊಂಡಿಲ್ಲ.  ಜನಸಂಖ್ಯೆ, ತಲಾ ಆದಾಯ, ಸಮುದಾಯಗಳ ಅಭಿವೃದ್ಧಿ ಸೇರಿದಂತೆ ಹಲವು ಮಾನದಂಡಗಳಿಂದ ಅನುದಾನ ಹಂಚಿಕೆಯನ್ನು ನಿರ್ಧರಿಸಲಾಗುತ್ತದೆ. 15 ನೇ ಹಣಕಾಸು ಆಯೋಗದಲ್ಲಿ 2011ರ ಜನಗಣತಿಯನ್ನು ಪರಿಗಣಿಸುತ್ತಿದ್ದಾರೆ ಎಂದು ತಿಳಿಸಿದರು.

Ramesh Babu

Journalist

Recent Posts

ಗುರುಭವನದಲ್ಲಿ ಅದ್ಧೂರಿ ವಿಶ್ವ ಮಹಿಳಾ ದಿನಾಚರಣೆ

ಸೇವೆಗಾಗಿ ಬಾಳು ಭಾರತ ಸೇವಾದಳ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಭಾರತ ಸೇವಾದಳ ದೇವನಹಳ್ಳಿ ತಾಲೂಕು ಘಟಕ, ಕರ್ನಾಟಕ ರಾಜ್ಯ ಪ್ರಾಥಮಿಕ…

3 hours ago

ಭೂದಾಖಲೆಗಳ ತಿದ್ದುಪಡಿಗಾಗಿ ಸಾರ್ವಜನಿಕರಿಂದ ಲಂಚಕ್ಕೆ ಬೇಡಿಕೆ: ಲೋಕಾ ಬಲೆಗೆ ಬಿದ್ದ ಭ್ರಷ್ಟ ಗ್ರಾಮ ಆಡಳಿತಾಧಿಕಾರಿ

ಭೂದಾಖಲೆಗಳ ತಿದ್ದುಪಡಿಗಾಗಿ ಸಾರ್ವಜನಿಕರಿಂದ ಹಣಕ್ಕೆ ಬೇಡಿಕೆಯಿಟ್ಟಿದ್ದ ಗ್ರಾಮ ಆಡಳಿತಾಧಿಕಾರಿಯೊಬ್ಬರು ಲೋಕಾಯುಕ್ತ ಪೊಲೀಸರ ಕಾರ್ಯಾಚರಣೆಯಲ್ಲಿ ಸಿಕ್ಕಿಬಿದ್ದಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ…

4 hours ago

ಯುಗಾದಿ ಸಮಯದಲ್ಲಿ ಮತ್ತೆ ಚಿಗುರಿದ ಪ್ರೀತಿ: ವಿಚ್ಚೇದನಕ್ಕೆ ಅರ್ಜಿ ಸಲ್ಲಿಸಿದ್ದವರು ಕಟೆಕಟೆಯಲ್ಲಿ ಒಂದಾದರು: ಒಂದಾದ ದಂಪತಿಗೆ ಪ್ರೀತಿಯ ಪಾಠ ಹೇಳಿದ ನ್ಯಾಯಾಧೀಶರು

ಸಣ್ಣಪುಟ್ಟ ಜಗಳಗಳಿಂದ ಕೋರ್ಟಿನ ಮೆಟ್ಟಿಲೇರಿ ದೂರಾವಾಗಲು ನಿರ್ಧರಿಸಿದ್ದ ನಾಲ್ವರು ದಂಪತಿಗಳನ್ನು ಶನಿವಾರ ನಡೆದ ಲೋಕಾಅದಾಲತ್ ನಲ್ಲಿ ನ್ಯಾಯಾಧೀಶರುಗಳು ಹೇಳಿದ ಬುದ್ಧಿಮಾತಿನಿಂದ…

6 hours ago

ವಾರದೊಳಗೆ ಸಹಜ ಸ್ಥಿತಿಗೆ ಗ್ಯಾಸ್ ಸಿಲಿಂಡರ್ ಪೂರೈಕೆ- ಆಹಾರ ಸಚಿವ ಕೆ.ಎಚ್ ಮುನಿಯಪ್ಪ

ಕೊಲ್ಲಿ ದೇಶಗಳಲ್ಲಿ ಯುದ್ಧದ ಪರಿಸ್ಥಿತಿ ಹಿನ್ನೆಲೆಯಲ್ಲಿ ಉಂಟಾದ ಗೃಹ ಬಳಕೆ ಹಾಗೂ ವಾಣಿಜ್ಯ ಬಳಕೆ ಗ್ಯಾಸ್ ಸಿಲಿಂಡರ್ ಗಳ ಪೂರೈಕೆ…

6 hours ago

“ಗೃಹಬಳಕೆ ಸಿಲಿಂಡರ್ ವಾಣಿಜ್ಯ ಉದ್ದೇಶಕ್ಕಾಗಿ ಬಳಸಿದ್ದಲ್ಲಿ ಸೂಕ್ತ ಕಾನೂನು ಕ್ರಮ”

ಗೃಹಬಳಕೆ ಸಿಲಿಂಡರ್ ಅನ್ನು ವಾಣಿಜ್ಯ ಉದ್ದೇಶಕ್ಕಾಗಿ ಬಳಸಿದ್ದಲ್ಲಿ ಸೂಕ್ತ ಕಾನೂನುಕ್ರಮ ಕೈಗೊಳ್ಳಲು ಆಹಾರ ಸಚಿವರು ಸೂಚಿಸಿದ್ದು, ಅದರಂತೆ ಗೃಹ ಬಳಕೆ…

7 hours ago

ವಾಣಿಜ್ಯ ಗ್ಯಾಸ್ ಸಿಲಿಂಡರ್ ಸಮಸ್ಯೆ: ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಏನಂದ್ರು ಗೊತ್ತಾ….?

ವಾಣಿಜ್ಯ ಗ್ಯಾಸ್ ಸಿಲಿಂಡರ್ ಸಮಸ್ಯೆ ಹಿನ್ನೆಲೆ ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಪ್ರತಿಕ್ರಿಯೆ. ಈ ಸಮಸ್ಯೆ ಇನ್ನು ಒಂದು ವಾರಗಳ ಕಾಲ…

8 hours ago