ರಾಜ್ಯಕ್ಕೆ ತೆರಿಗೆ ಹಂಚಿಕೆಯಲ್ಲಿ ಕೇಂದ್ರ ಮಾಡಿರುವ ಅನ್ಯಾಯದ ವಿರುದ್ಧ ನವದೆಹಲಿಯಲ್ಲಿ ಪ್ರತಿಭಟನೆ

ಕೇಂದ್ರ ಸರ್ಕಾರ ರಾಜ್ಯಕ್ಕೆ ತೆರಿಗೆ ಹಂಚಿಕೆಯಲ್ಲಿ ಮಾಡಿರುವ ಅನ್ಯಾಯದ ವಿರುದ್ಧ ಇಂದು ನವದೆಹಲಿಯ ಜಂತರ್ ಮಂತರ್ ನಲ್ಲಿ ಹಮ್ಮಿಕೊಂಡಿರುವ ಹೋರಾಟ ಕರ್ನಾಟಕದ, ಕನ್ನಡಿಗರ ಹಿತ ಕಾಪಾಡುವ ಚಳವಳಿಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ನವದೆಹಲಿಯ ಜಂತರ್ ಮಂತರ್ ನಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಹಮ್ಮಿಕೊಂಡಿರುವ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವ ಮುನ್ನ ಮಾಧ್ಯಮದವರೊಂದಿಗೆ ಮಾತನಾಡಿದರು.

ಇದು ರಾಜಕೀಯ ಚಳವಳಿ ಅಲ್ಲ

ಕಳೆದ ಐದಾರು ವರ್ಷಗಳಲ್ಲಿ 1,87,000 ಕೋಟಿ ರೂ.ಗಳಷ್ಟು ನ್ಯಾಯಯುತವಾಗಿ ಬರಬೇಕಾಗಿದ್ದ ಅನುದಾನವನ್ನು ರಾಜ್ಯಕ್ಕೆ ನೀಡಲಾಗಿಲ್ಲ. ಈ ಅನ್ಯಾಯದ ವಿರುದ್ಧ ಪ್ರತಿಭಟನೆಯನ್ನು ಮಾಡಲಾಗುತ್ತಿದೆ.ಜಂತರ್ ಮಂತರ್ ಐತಿಹಾಸಿಕ ಸ್ಥಳವಾಗಿದ್ದು, ಅನೇಕ ಚಳವಳಿಗೆ ಸಾಕ್ಷಿಯಾದ ಸ್ಥಳ. ಇಂತಹ ಜಾಗದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಸೇರಿದಂತೆ ಎಲ್ಲ ಸಚಿವರು, ಶಾಸಕರು ಈ ಹೋರಾಟದಲ್ಲಿ ಭಾಗವಹಿಸಿದ್ದಾರೆ. ಇದು ರಾಜಕೀಯ ಚಳವಳಿ ಅಲ್ಲ. ಕೇಂದ್ರ ಸರ್ಕಾರದ ವಿರುದ್ಧದ ಈ ಹೋರಾಟವನ್ನು ಪಕ್ಷಾತೀತವಾಗಿ ಮಾಡಬೇಕೆಂಬ ಮನವಿಯನ್ನು ರಾಜ್ಯ ಬಿಜೆಪಿಯ ನಾಯಕರಿಗೂ ಮಾಡಲಾಗಿದೆ ಎಂದರು.

100 ರೂ. ಗಳಲ್ಲಿ ರಾಜ್ಯಕ್ಕೆ ಕೇವಲ 12 ರಿಂದ 13 ರೂ.

ಇದು ಐತಿಹಾಸಿಕವಾದ ಪ್ರತಿಭಟನೆ. 14 ನೇ ಹಣಕಾಸು ಆಯೋಗದಲ್ಲಿ ರಾಜ್ಯಕ್ಕೆ ತೆರಿಗೆ ಪಾಲು 4.71 % ಬಂದಿತ್ತು. 15 ನೇ ಹಣಕಾಸು ಆಯೋಗದಲ್ಲಿ 3.64 % ಕ್ಕೆ ಇಳಿಯಿತು. ಇದರಿಂದ ರಾಜ್ಯಕ್ಕೆ ಬರುವ ತೆರಿಗೆಯಲ್ಲಿ ಶೇ. 40 ರಿಂದ 45 ರವರೆಗೆ ಕಡಿತವಾಗಿದೆ. ಒಟ್ಟಾರೆಯಾಗಿ  14 ನೇ ಹಣಕಾಸು ಆಯೋಗದ ಶಿಫಾರಸ್ಸನ್ನೇ 15 ನೇ ಹಣಕಾಸು ಆಯೋಗದಲ್ಲಿ ಅನುಸರಿಸಿದ್ದರೆ, ರಾಜ್ಯಕ್ಕೆ 62,098 ಕೋಟಿ ರೂ. ರಾಜ್ಯಕ್ಕೆ ಬರುತ್ತಿತ್ತು.  ರಾಜ್ಯದಿಂದ ಒಟ್ಟು 4,30,000 ಕೋಟಿ ತೆರಿಗೆ ಮೊತ್ತವನ್ನು ಕೇಂದ್ರಕ್ಕೆ ನೀಡಲಾಗುತ್ತದೆ. ಅಂದರೆ 100 ರೂ. ತೆರಿಗೆಯಲ್ಲಿ ರಾಜ್ಯಕ್ಕೆ ಕೇವಲ 12 ರಿಂದ 13 ರೂ. ದೊರೆಯುತ್ತಿದೆ. ಇದು ಕರ್ನಾಟಕ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯ. ಕರ್ನಾಟಕದಿಂದ 25 ಸಂಸದರು ಆಯ್ಕೆಯಾಗಿದ್ದು, ಒಬ್ಬರೂ ಈ ಬಗ್ಗೆ ಕೇಂದ್ರ ಮುಂದೆ ಮಾತನಾಡಿಲ್ಲ. ಅಲ್ಲದೆ ರಾಜ್ಯದ ಮಾಜಿ ಮುಖ್ಯಮಂತ್ರಿಗಳಾದ ಯಡಿಯೂರಪ್ಪ ಅಥವಾ ಬಸವರಾಜ ಬೊಮ್ಮಾಯಿಯವರು ಈ ಅನ್ಯಾಯವನ್ನು ಸರಿಪಡಿಸುವ ಮನವಿ ಮಾಡಿರುವುದಿಲ್ಲ. ಈ ಎಲ್ಲ ಕಾರಣಗಳಿಗಾಗಿ ಇಂದು ನವದೆಹಲಿಯಲ್ಲಿ ಹೋರಾಟ ಮಾಡಲಾಗುತ್ತಿದೆ ಎಂದು ಮುಖ್ಯಮಂತ್ರಿಗಳು ವಿವರಿಸಿದರು.

ಉತ್ತರಪ್ರದೇಶ ರಾಜ್ಯಕ್ಕೆ 2,80,000 ಕೋಟಿ ರೂ. ಕೇಂದ್ರ ನೀಡುತ್ತಿದೆ. ಅಂತೆಯೇ, ಬಿಹಾರ, ಮಧ್ಯಪ್ರದೇಶ, ರಾಜಸ್ಥಾನಗಳಿಗೂ ನೀಡಲಾಗುತ್ತಿದೆ. ಈ ಯಾವ ರಾಜ್ಯಗಳೂ ಜನಸಂಖ್ಯಾ ನಿಯಂತ್ರಣದ ಬಗ್ಗೆ ಕ್ರಮ ಕೈಗೊಂಡಿಲ್ಲ.  ಜನಸಂಖ್ಯೆ, ತಲಾ ಆದಾಯ, ಸಮುದಾಯಗಳ ಅಭಿವೃದ್ಧಿ ಸೇರಿದಂತೆ ಹಲವು ಮಾನದಂಡಗಳಿಂದ ಅನುದಾನ ಹಂಚಿಕೆಯನ್ನು ನಿರ್ಧರಿಸಲಾಗುತ್ತದೆ. 15 ನೇ ಹಣಕಾಸು ಆಯೋಗದಲ್ಲಿ 2011ರ ಜನಗಣತಿಯನ್ನು ಪರಿಗಣಿಸುತ್ತಿದ್ದಾರೆ ಎಂದು ತಿಳಿಸಿದರು.

Ramesh Babu

Journalist

Recent Posts

ಯುವ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ನವೀನ್ ಕುಮಾರ್ ಡಿ.ಜಿ. ನೇಮಕ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಸಹ ಆಡಳಿತ ಉಸ್ತುವಾರಿಯಾಗಿ…

15 minutes ago

ಡಿಪಿಎ ಅಧ್ಯಕ್ಷ ಸ್ಥಾನ ಶಿಷ್ಟಾಚಾರಕ್ಕೆ ಅನ್ವಯಿಸುವುದಿಲ್ಲ: ಶಿಷ್ಟಾಚಾರದ ಹೆಸರಿನಲ್ಲಿ ಸರ್ಕಾರಿ ಕಾರ್ಯಕ್ರಮಗಳಿಗೆ ಅಡ್ಡಿ: ಮಾಜಿ ಶಾಸಕ ವೆಂಕಟರಮಣಯ್ಯ ವಿರುದ್ಧ ಶಾಸಕ ಧೀರಜ್ ಮುನಿರಾಜು ಆಕ್ರೋಶ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ (ಡಿಪಿಎ) ಅಧ್ಯಕ್ಷರಾಗಿರುವ ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರು ಶಿಷ್ಟಾಚಾರದ ಹೆಸರಿನಲ್ಲಿ ಸರ್ಕಾರಿ ಕಾರ್ಯಕ್ರಮಗಳಲ್ಲಿ ಅನಗತ್ಯವಾಗಿ…

8 hours ago

ಹಾಲಿನ ದರ 10 ಏರಿಕೆಗೆ ಆಗ್ರಹಿಸಿ ಸೆ.22ರಂದು ಬೃಹತ್ ಹೋರಾಟ

ದೊಡ್ಡಬಳ್ಳಾಪುರ: ರೈತರಿಂದ ಖರೀದಿಸುವ ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್‌ಗೆ 10 ಹೆಚ್ಚಿಸುವಂತೆ ಒತ್ತಾಯಿಸಿ ಬೆಂಗಳೂರು ಹಾಲು ಒಕ್ಕೂಟ (ಬಮೂಲ್)…

9 hours ago

ದೇಶದ ನಿರ್ಮಾಣದಲ್ಲಿ ಎಂಜಿನಿಯರ್‌ಗಳ ಪಾತ್ರ ಅನನ್ಯ – ಸಚಿವ ಎನ್. ಚಲುವರಾಯಸ್ವಾಮಿ ಬಣ್ಣನೆ

ಭಾರತ ರತ್ನ ಡಾ. ಸರ್ ಎಂ. ವಿಶ್ವೇಶ್ವರಯ್ಯನವರ 165ನೇ ಜಯಂತಿ ಅಂಗವಾಗಿ ಮೈಸೂರಿನ ಭಾರತೀಯ ಎಂಜಿನಿಯರ್‌ಗಳ ಸಂಸ್ಥೆ ವತಿಯಿಂದ ಸಂಸ್ಥೆಯ…

1 day ago

ಪ್ರಜಾಪ್ರಭುತ್ವ ಪ್ರತಿಯೊಬ್ಬರ ಆಶಯಗಳಿಗೆ ಧ್ವನಿ- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ

  ಪ್ರಜಾಪ್ರಭುತ್ವ ಹಾಗೂ ಸಂವಿಧಾನ ಕೇವಲ ಪುಸ್ತಕದಲ್ಲಿ ಅಥವಾ ಓದುಗೆ ಸೀಮಿತವಾಗಬಾರದು, ಪ್ರತಿ ಕ್ಷಣ, ಪ್ರತಿ ದಿನ ನಮ್ಮ ಜೀವನದಲ್ಲಿ…

1 day ago

ಮೂರು ವರ್ಷಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ್ದ ರೌಡಿ ಶೀಟರ್ ಅರೆಸ್ಟ್! ದೊಡ್ಡಬಳ್ಳಾಪುರದಲ್ಲಿ ಗಾಂಜಾ ಮಾರಾಟಕ್ಕೆ ಯತ್ನ | 2 ಕೆ.ಜಿ. 64 ಗ್ರಾಂ ಗಾಂಜಾ ವಶ

ದೊಡ್ಡಬಳ್ಳಾಪುರ: ಸುಮಾರು ಮೂರು ವರ್ಷಗಳಿಂದ ಪೊಲೀಸರ ಕಣ್ತಪ್ಪಿಸಿ ತಲೆಮರೆಸಿಕೊಂಡಿದ್ದ ರೌಡಿ ಶೀಟರ್‌ವೊಬ್ಬ ಗಾಂಜಾ ಮಾರಾಟ ಮಾಡಲು ಬಂದಾಗ ಪೊಲೀಸರ ಬಲೆಗೆ…

2 days ago