ರಾಜ್ಯಕ್ಕೆ ಶಿವಣ್ಣ ಆಗಮನ: ಚಿಕಿತ್ಸೆಗಾಗಿ ಅಮೆರಿಕಾಗೆ ತೆರಳಿದ್ದ ಶಿವಣ್ಣ: ಒಂದು ತಿಂಗಳ ನಂತರ ರಾಜ್ಯಕ್ಕೆ ಆಗಮಿಸಿದ ಶಿವಣ್ಣ: ನೆಚ್ಚಿನ ನಟನನ್ನ ಸ್ವಾಗತಿಸಲು ಅಭಿಮಾನಿಗಳ ಸಜ್ಜು

ಅನಾರೋಗ್ಯದಿಂದ ಬಳಲುತ್ತಿದ್ದ ನಟ ಶಿವರಾಜ್‌ ಕುಮಾರ್‌ ಅವರಿಗೆ ಅಮೆರಿಕಾದಲ್ಲಿ ನಡೆದ ಸರ್ಜರಿ ಯಶಸ್ವಿಯಾಗಿ ನಡೆದಿದೆ. ಕ್ಯಾನ್ಸರ್ ಹಿನ್ನೆಲೆ ನಟ ಶಿವರಾಜ್‌ಕುಮಾ‌ರ್ ಅಮೆರಿಕದಲ್ಲಿ ಯಶಸ್ವಿಯಾಗಿ ಕ್ಯಾನ್ಸ‌ರ್ ಚಿಕಿತ್ಸೆ ಮುಗಿಸಿಕೊಂಡು ಇಂದು(ಭಾನುವಾರ) ಬೆಳಗ್ಗೆ ಬೆಂಗಳೂರಿಗೆ ಆಗಮಿಸಿದ್ದಾರೆ.

ಶಿವಣ್ಣ ಹಾಗೂ ಗೀತಾ ಶಿವರಾಜ್‌ ಕುಮಾರ್‌ ಅವರು ಅಮೇರಿಕಾದಿಂದ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದಾರೆ. ಒಂದು ತಿಂಗಳ ನಂತರ ಶಿವಣ್ಣ ರಾಜ್ಯಕ್ಕೆ ಆಗಮಿಸಿದ್ದಾರೆ.

ಡಿ.18ರಂದು ಚಿಕಿತ್ಸೆಗಾಗಿ ಅಮೆರಿಕಗೆ ತೆರಳಿದ್ದ ಶಿವರಾಜ್‌ಕುಮಾರ್‌ ಅವರಿಗೆ ಚಿಕಿತ್ಸೆ ಯಶಸ್ವಿಯಾಗಿದೆ. ಚಿಕಿತ್ಸೆಯ ನಂತರವೂ ಕೆಲ ದಿನಗಳ ಕಾಲ ಅಮೆರಿಕಾದಲ್ಲೇ ವಿಶ್ರಾಂತಿ ತೆಗೆದುಕೊಳ್ಳುತ್ತಿದ್ದರು. ಸುಮಾರು ಒಂದು ತಿಂಗಳ ನಂತರ ಇಂದು ಬೆಂಗಳೂರಿಗೆ ಮರಳಿದ್ದಾರೆ.

ಶಿವಣ್ಣ ಅವರ ಆಗಮನಕ್ಕೆ ಅಭಿಮಾನಿಗಳು ಭರ್ಜರಿ ತಯಾರಿಯನ್ನ ಮಾಡಿಕೊಂಡಿದ್ದಾರೆ. ಬೆಂಗಳೂರು ವಿಮಾನ ನಿಲ್ದಾಣ ರಸ್ತೆಗಳು, ಶಿವಣ್ಣನ ಮನೆ ಸಮೀಪದಲ್ಲಿ “ಕಿಂಗ್‌ ಈಸ್‌ ಬ್ಯಾಕ್‌” ಎಂಬ ಬರಹದ ಕೌಟೌಟ್‌ಗಳು ರಾರಾಜಿಸುತ್ತಿವೆ. ಕಟೌಟ್‌ಗಳಲ್ಲಿ ಶಿವರಾಜ್‌ ಕುಮಾರ್‌ ಜತೆ ಗೀತಾ ಶಿವರಾಜ್‌ ಕುಮಾರ್‌ ಫೋಟೋ ಕೂಡ ರಾರಾಜಿಸುತ್ತಿದೆ.

Ramesh Babu

Journalist

Recent Posts

ಮಳೆಗಾಗಿ ಆಚರಣೆಗಳ ಮೊರೆ: ಬರದ ನಡುವೆ ಭರವಸೆಯ ಸಂಪ್ರದಾಯಗಳು

ಮಳೆ ಎನ್ನುವುದು ರೈತನ ಬದುಕಿನ ಜೀವನಾಡಿ. ಮುಂಗಾರು ವಿಳಂಬವಾದಾಗ ಅಥವಾ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದಿದ್ದರೆ ರೈತರು ಮಾತ್ರವಲ್ಲ, ಗ್ರಾಮೀಣ ಜೀವನವೇ…

1 day ago

ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಾರು–ಅಶೋಕ್ ಲೇಲ್ಯಾಂಡ್ ನಡುವೆ ಅಪಘಾತ

ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…

2 days ago

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

3 days ago

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

3 days ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

3 days ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

4 days ago