ರಾಜ್ಯಕ್ಕೆ ಶಿವಣ್ಣ ಆಗಮನ: ಚಿಕಿತ್ಸೆಗಾಗಿ ಅಮೆರಿಕಾಗೆ ತೆರಳಿದ್ದ ಶಿವಣ್ಣ: ಒಂದು ತಿಂಗಳ ನಂತರ ರಾಜ್ಯಕ್ಕೆ ಆಗಮಿಸಿದ ಶಿವಣ್ಣ: ನೆಚ್ಚಿನ ನಟನನ್ನ ಸ್ವಾಗತಿಸಲು ಅಭಿಮಾನಿಗಳ ಸಜ್ಜು

ಅನಾರೋಗ್ಯದಿಂದ ಬಳಲುತ್ತಿದ್ದ ನಟ ಶಿವರಾಜ್‌ ಕುಮಾರ್‌ ಅವರಿಗೆ ಅಮೆರಿಕಾದಲ್ಲಿ ನಡೆದ ಸರ್ಜರಿ ಯಶಸ್ವಿಯಾಗಿ ನಡೆದಿದೆ. ಕ್ಯಾನ್ಸರ್ ಹಿನ್ನೆಲೆ ನಟ ಶಿವರಾಜ್‌ಕುಮಾ‌ರ್ ಅಮೆರಿಕದಲ್ಲಿ ಯಶಸ್ವಿಯಾಗಿ ಕ್ಯಾನ್ಸ‌ರ್ ಚಿಕಿತ್ಸೆ ಮುಗಿಸಿಕೊಂಡು ಇಂದು(ಭಾನುವಾರ) ಬೆಳಗ್ಗೆ ಬೆಂಗಳೂರಿಗೆ ಆಗಮಿಸಿದ್ದಾರೆ.

ಶಿವಣ್ಣ ಹಾಗೂ ಗೀತಾ ಶಿವರಾಜ್‌ ಕುಮಾರ್‌ ಅವರು ಅಮೇರಿಕಾದಿಂದ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದಾರೆ. ಒಂದು ತಿಂಗಳ ನಂತರ ಶಿವಣ್ಣ ರಾಜ್ಯಕ್ಕೆ ಆಗಮಿಸಿದ್ದಾರೆ.

ಡಿ.18ರಂದು ಚಿಕಿತ್ಸೆಗಾಗಿ ಅಮೆರಿಕಗೆ ತೆರಳಿದ್ದ ಶಿವರಾಜ್‌ಕುಮಾರ್‌ ಅವರಿಗೆ ಚಿಕಿತ್ಸೆ ಯಶಸ್ವಿಯಾಗಿದೆ. ಚಿಕಿತ್ಸೆಯ ನಂತರವೂ ಕೆಲ ದಿನಗಳ ಕಾಲ ಅಮೆರಿಕಾದಲ್ಲೇ ವಿಶ್ರಾಂತಿ ತೆಗೆದುಕೊಳ್ಳುತ್ತಿದ್ದರು. ಸುಮಾರು ಒಂದು ತಿಂಗಳ ನಂತರ ಇಂದು ಬೆಂಗಳೂರಿಗೆ ಮರಳಿದ್ದಾರೆ.

ಶಿವಣ್ಣ ಅವರ ಆಗಮನಕ್ಕೆ ಅಭಿಮಾನಿಗಳು ಭರ್ಜರಿ ತಯಾರಿಯನ್ನ ಮಾಡಿಕೊಂಡಿದ್ದಾರೆ. ಬೆಂಗಳೂರು ವಿಮಾನ ನಿಲ್ದಾಣ ರಸ್ತೆಗಳು, ಶಿವಣ್ಣನ ಮನೆ ಸಮೀಪದಲ್ಲಿ “ಕಿಂಗ್‌ ಈಸ್‌ ಬ್ಯಾಕ್‌” ಎಂಬ ಬರಹದ ಕೌಟೌಟ್‌ಗಳು ರಾರಾಜಿಸುತ್ತಿವೆ. ಕಟೌಟ್‌ಗಳಲ್ಲಿ ಶಿವರಾಜ್‌ ಕುಮಾರ್‌ ಜತೆ ಗೀತಾ ಶಿವರಾಜ್‌ ಕುಮಾರ್‌ ಫೋಟೋ ಕೂಡ ರಾರಾಜಿಸುತ್ತಿದೆ.

Ramesh Babu

Journalist

Recent Posts

ಡಿಕೆ 100 ದಿನ, ನೆನಪಾದ ಮೋದಿ…

ಕರ್ನಾಟಕದ ಮಾನ್ಯ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರ 100ನೇ ದಿನದ ಸಾಧನಾ ಸಂಭ್ರಮದ ಕಾರ್ಯಕ್ರಮ ವಿಧಾನಸೌಧದ ಬ್ಯಾಂಕ್ವೆಟ್ ಹಾಲಿನಲ್ಲಿ…

5 hours ago

ಮಳೆ ಕೈಕೊಟ್ಟಿತು, ರಾಗಿ ಕೈಬಿಟ್ಟಿತು: ಬೆಳೆಗೇ ಟ್ರ್ಯಾಕ್ಟರ್ ಹರಿಸಿದ ರೈತ: ದೊಡ್ಡಬಳ್ಳಾಪುರವನ್ನೂ ಬರಪೀಡಿತ ತಾಲೂಕು ಎಂದು ಘೋಷಿಸಲು ಆಗ್ರಹ: 3.5 ಎಕರೆ ರಾಗಿ ಬೆಳೆ ನಾಶ

ದೊಡ್ಡಬಳ್ಳಾಪುರ: ಮಳೆ ಕೈಕೊಟ್ಟ ಪರಿಣಾಮ ಬಿತ್ತಿದ್ದ ರಾಗಿ ಬೆಳೆ ಒಣಗಿ, ಕೈಗೆ ಬಾರದ ಸ್ಥಿತಿಗೆ ತಲುಪಿದ ಹಿನ್ನೆಲೆಯಲ್ಲಿ ಬೇಸರಗೊಂಡ ರೈತರೊಬ್ಬರು…

15 hours ago

ಚಿಕ್ಕನಹಳ್ಳಿ ಡೇರಿಗೆ 2.07 ಲಕ್ಷ ನಿವ್ವಳ ಲಾಭ: ಹೈನುಗಾರಿಕೆ ರೈತರ ಆರ್ಥಿಕ ಮೂಲ- ಸಿ.ಅಮರೇಶ್

ಕೋಲಾರ: ತಾಲೂಕಿನ ವಕ್ಕಲೇರಿ ಹೋಬಳಿಯ ಚಿಕ್ಕನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘವು 2025–26ನೇ ಸಾಲಿನಲ್ಲಿ ₹2.07 ಲಕ್ಷ ನಿವ್ವಳ ಲಾಭ…

20 hours ago

ಅಪ್ರಾಪ್ತೆಯ ಮೇಲೆ ಅತ್ಯಾಚಾರ: ಅಪರಾಧಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಬೆಂಗಳೂರು ಗ್ರಾಮಾಂತರ: ಪೋಕ್ಸೋ ಕಾಯ್ದೆಯಡಿ ದಾಖಲಾಗಿದ್ದ ಅತ್ಯಾಚಾರ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗೆ 20 ವರ್ಷಗಳ ಕಠಿಣ ಕಾರಾಗೃಹ…

2 days ago

ಬೆಸ್ಕಾಂ ವಿರುದ್ಧ ರೈತರ ಆಕ್ರೋಶ: 10 ತಾಸು ಗುಣಮಟ್ಟದ ವಿದ್ಯುತ್‌ಗೆ ಆಗ್ರಹ: ನಷ್ಟ ಬೆಳೆ, ಮೆಣಸಿನಕಾಯಿ ಹಾಗೂ ಜಾನುವಾರುಗಳ ಸಮೇತ ಪ್ರತಿಭಟನೆ

ಕೋಲಾರ: ಬರದಿಂದ ತತ್ತರಿಸಿರುವ ರೈತರ ಬೆಳೆಗಳನ್ನು ರಕ್ಷಿಸಲು ಕೃಷಿ ಪಂಪ್‌ಸೆಟ್‌ಗಳಿಗೆ ಪ್ರತಿದಿನ 10 ತಾಸು ಗುಣಮಟ್ಟದ ವಿದ್ಯುತ್ ಪೂರೈಸಬೇಕು. ಬೆಸ್ಕಾಂ…

2 days ago

ಘಾಟಿ ತೇರಿನಬೀದಿ ಒತ್ತುವರಿ ತೆರವು; ವ್ಯಾಪಾರಸ್ಥರಲ್ಲಿ ಆತಂಕ

ದೊಡ್ಡಬಳ್ಳಾಪುರ: ತಾಲೂಕಿನ ಪ್ರಸಿದ್ಧ ಪುಣ್ಯಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದ ಮುಂಭಾಗದ ತೇರಿನಬೀದಿಯಲ್ಲಿ ಹಲವು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಅಂಗಡಿ ಮಳಿಗೆಗಳನ್ನು ಒತ್ತುವರಿ…

2 days ago