ಅನಾರೋಗ್ಯದಿಂದ ಬಳಲುತ್ತಿದ್ದ ನಟ ಶಿವರಾಜ್ ಕುಮಾರ್ ಅವರಿಗೆ ಅಮೆರಿಕಾದಲ್ಲಿ ನಡೆದ ಸರ್ಜರಿ ಯಶಸ್ವಿಯಾಗಿ ನಡೆದಿದೆ. ಕ್ಯಾನ್ಸರ್ ಹಿನ್ನೆಲೆ ನಟ ಶಿವರಾಜ್ಕುಮಾರ್ ಅಮೆರಿಕದಲ್ಲಿ ಯಶಸ್ವಿಯಾಗಿ ಕ್ಯಾನ್ಸರ್ ಚಿಕಿತ್ಸೆ ಮುಗಿಸಿಕೊಂಡು ಇಂದು(ಭಾನುವಾರ) ಬೆಳಗ್ಗೆ ಬೆಂಗಳೂರಿಗೆ ಆಗಮಿಸಿದ್ದಾರೆ.
ಡಿ.18ರಂದು ಚಿಕಿತ್ಸೆಗಾಗಿ ಅಮೆರಿಕಗೆ ತೆರಳಿದ್ದ ಶಿವರಾಜ್ಕುಮಾರ್ ಅವರಿಗೆ ಚಿಕಿತ್ಸೆ ಯಶಸ್ವಿಯಾಗಿದೆ. ಚಿಕಿತ್ಸೆಯ ನಂತರವೂ ಕೆಲ ದಿನಗಳ ಕಾಲ ಅಮೆರಿಕಾದಲ್ಲೇ ವಿಶ್ರಾಂತಿ ತೆಗೆದುಕೊಳ್ಳುತ್ತಿದ್ದರು. ಸುಮಾರು ಒಂದು ತಿಂಗಳ ನಂತರ ಇಂದು ಬೆಂಗಳೂರಿಗೆ ಮರಳಿದ್ದಾರೆ.
ಶಿವಣ್ಣ ಅವರ ಆಗಮನಕ್ಕೆ ಅಭಿಮಾನಿಗಳು ಭರ್ಜರಿ ತಯಾರಿಯನ್ನ ಮಾಡಿಕೊಂಡಿದ್ದಾರೆ. ಬೆಂಗಳೂರು ವಿಮಾನ ನಿಲ್ದಾಣ ರಸ್ತೆಗಳು, ಶಿವಣ್ಣನ ಮನೆ ಸಮೀಪದಲ್ಲಿ “ಕಿಂಗ್ ಈಸ್ ಬ್ಯಾಕ್” ಎಂಬ ಬರಹದ ಕೌಟೌಟ್ಗಳು ರಾರಾಜಿಸುತ್ತಿವೆ. ಕಟೌಟ್ಗಳಲ್ಲಿ ಶಿವರಾಜ್ ಕುಮಾರ್ ಜತೆ ಗೀತಾ ಶಿವರಾಜ್ ಕುಮಾರ್ ಫೋಟೋ ಕೂಡ ರಾರಾಜಿಸುತ್ತಿದೆ.
ಕರ್ನಾಟಕದ ಮಾನ್ಯ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರ 100ನೇ ದಿನದ ಸಾಧನಾ ಸಂಭ್ರಮದ ಕಾರ್ಯಕ್ರಮ ವಿಧಾನಸೌಧದ ಬ್ಯಾಂಕ್ವೆಟ್ ಹಾಲಿನಲ್ಲಿ…
ದೊಡ್ಡಬಳ್ಳಾಪುರ: ಮಳೆ ಕೈಕೊಟ್ಟ ಪರಿಣಾಮ ಬಿತ್ತಿದ್ದ ರಾಗಿ ಬೆಳೆ ಒಣಗಿ, ಕೈಗೆ ಬಾರದ ಸ್ಥಿತಿಗೆ ತಲುಪಿದ ಹಿನ್ನೆಲೆಯಲ್ಲಿ ಬೇಸರಗೊಂಡ ರೈತರೊಬ್ಬರು…
ಕೋಲಾರ: ತಾಲೂಕಿನ ವಕ್ಕಲೇರಿ ಹೋಬಳಿಯ ಚಿಕ್ಕನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘವು 2025–26ನೇ ಸಾಲಿನಲ್ಲಿ ₹2.07 ಲಕ್ಷ ನಿವ್ವಳ ಲಾಭ…
ಬೆಂಗಳೂರು ಗ್ರಾಮಾಂತರ: ಪೋಕ್ಸೋ ಕಾಯ್ದೆಯಡಿ ದಾಖಲಾಗಿದ್ದ ಅತ್ಯಾಚಾರ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗೆ 20 ವರ್ಷಗಳ ಕಠಿಣ ಕಾರಾಗೃಹ…
ಕೋಲಾರ: ಬರದಿಂದ ತತ್ತರಿಸಿರುವ ರೈತರ ಬೆಳೆಗಳನ್ನು ರಕ್ಷಿಸಲು ಕೃಷಿ ಪಂಪ್ಸೆಟ್ಗಳಿಗೆ ಪ್ರತಿದಿನ 10 ತಾಸು ಗುಣಮಟ್ಟದ ವಿದ್ಯುತ್ ಪೂರೈಸಬೇಕು. ಬೆಸ್ಕಾಂ…
ದೊಡ್ಡಬಳ್ಳಾಪುರ: ತಾಲೂಕಿನ ಪ್ರಸಿದ್ಧ ಪುಣ್ಯಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದ ಮುಂಭಾಗದ ತೇರಿನಬೀದಿಯಲ್ಲಿ ಹಲವು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಅಂಗಡಿ ಮಳಿಗೆಗಳನ್ನು ಒತ್ತುವರಿ…