ಎಲ್ಲಾ ವಲಯಗಳಿಗೂ ಯಾವುದೇ ಅಡೆತಡೆ ಇಲ್ಲದೆ ಎಲ್.ಪಿ.ಜಿ ಸರಬರಾಜು ಮಾಡಲಾಗುತ್ತಿದೆ ಅಲ್ಲದೇ ವಿಶೇಷವಾಗಿ *ಆಟೋ ಎಲ್.ಪಿ.ಜಿ*.ಗೆ ಯಾವುದೇ ರೀತಿಯ ಕೊರತೆ ಇಲ್ಲ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯು ಪ್ರಕಟಣೆಯಲ್ಲಿ ತಿಳಿಸಿದೆ.
ರಾಜ್ಯದಲ್ಲಿ ಎಲ್ಪಿಜಿ ಸರಬರಾಜು ವ್ಯವಸ್ಥೆಯನ್ನು, ವಿಶೇಷವಾಗಿ ಆಟೋ ಎಲ್ಪಿಜಿ ಪೂರೈಕೆಯನ್ನು ರಾಜ್ಯ ಸರ್ಕಾರವು ನಿಕಟವಾಗಿ ಗಮನಿಸುತ್ತಿದೆ. ಕರ್ನಾಟಕದಾದ್ಯಂತ ಒಟ್ಟು 72 ಆಟೋ ಎಲ್ಪಿಜಿ ಡಿಸ್ಪೆನ್ಸಿಂಗ್ ಸ್ಟೇಷನ್ಗಳು (ALDS) ಕಾರ್ಯನಿರ್ವಹಿಸುತ್ತಿವೆ. ಇವುಗಳಲ್ಲಿ ಕೇವಲ ಬೆಂಗಳೂರು ನಗರವೊಂದರಲ್ಲೇ 31 ಕೇಂದ್ರಗಳು ಲಭ್ಯವಿವೆ.
ಸಾರ್ವಜನಿಕ ವಲಯದ ಪ್ರಮುಖ ತೈಲ ಮಾರಾಟ ಕಂಪನಿಗಳಾದ (OMCs) IOCL, BPCL ಮತ್ತು HPCL ಮೂಲಕ ಆಟೋ ಎಲ್ಪಿಜಿ ಸರಬರಾಜು ಮಾಡಲಾಗುತ್ತಿದೆ. ಪ್ರಸ್ತುತ ಈ ಸಂಸ್ಥೆಗಳು ಪ್ರತಿ ಲೀಟರ್ಗೆ ರೂ. 77.74 ರ ದರದಲ್ಲಿ ಆಟೋ ಎಲ್ಪಿಜಿ ಪೂರೈಸುತ್ತಿವೆ.
ಕಳೆದ ವಾರದಲ್ಲಿ ದಿನಕ್ಕೆ ಸರಾಸರಿ 64.9 ಮೆಟ್ರಿಕ್ ಟನ್ ಆಟೋ ಎಲ್ಪಿಜಿಯನ್ನು ವಿತರಿಸಲಾಗಿದೆ. ಸಂಘರ್ಷದ ಮೊದಲು ಈ ಪ್ರಮಾಣವು ದಿನಕ್ಕೆ 57.6 ಮೆಟ್ರಿಕ್ ಟನ್ ಇತ್ತು. ಇದು ಪೂರೈಕೆಯಲ್ಲಿನ ಗಮನಾರ್ಹ ಹೆಚ್ಚಳವನ್ನು ತೋರಿಸುತ್ತದೆ.
ರಾಜ್ಯದಾದ್ಯಂತ ಪ್ರತಿದಿನ ಸುಮಾರು 4 ಲಕ್ಷ ಗೃಹ ಬಳಕೆ ಎಲ್ಪಿಜಿ ಸಿಲಿಂಡರ್ಗಳು ಹಾಗೂ ಸುಮಾರು 18,000 ವಾಣಿಜ್ಯ ಬಳಕೆ ಸಿಲಿಂಡರ್ಗಳನ್ನು ಪೂರೈಕೆ ಮಾಡಲಾಗುತ್ತಿದೆ.
ಎಲ್ಲಾ ವಲಯಗಳಿಗೂ ಯಾವುದೇ ಅಡೆತಡೆಯಿಲ್ಲದೆ ಎಲ್ಪಿಜಿ ಸರಬರಾಜು ಆಗುವುದನ್ನು ಖಚಿತಪಡಿಸಿಕೊಳ್ಳಲು ರಾಜ್ಯ ಸರ್ಕಾರವು ನಿರಂತರವಾಗಿ ಪರಿಸ್ಥಿತಿಯ ಮೇಲೆ ನಿಗಾ ಇರಿಸಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(KPCC)ಯ ನೂತನ ಅಧ್ಯಕ್ಷರಾಗಿ ಬಿ.ಕೆ ಹರಿಪ್ರಸಾದ್ ಅವರನ್ನು ನೇಮಕ ಮಾಡಲಾಗಿದೆ. ಡಿಕೆ ಶಿವಕುಮಾರ್ ಅವರು ಬುಧವಾರ…
ಡಿ.ಕೆ ಶಿವಕುಮಾರ್ ಅವರು ಬುಧವಾರ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ರಾಜ್ಯದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ.…
ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಜೂನ್ 20 ರಿಂದ ಎಸ್ಐಆರ್ ಪ್ರಕ್ರಿಯೆ ಅಧಿಕೃತವಾಗಿ ಆರಂಭವಾಗಲಿದೆ. ತಾಲ್ಲೂಕಿನಲ್ಲಿ 2,23,457 ಮಂದಿ ಮತದಾರರಿದ್ದಾರೆ. ಈ ಪೈಕಿ…
ಬೆಂಗಳೂರು: ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಡಿ.ಕೆ. ಶಿವಕುಮಾರ್ ಅವರು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಭಾವನಾತ್ಮಕ ಸಂದೇಶ ಹಂಚಿಕೊಂಡಿದ್ದಾರೆ.…
ರಾಜ್ಯದ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಿಸಿದ್ದಾರೆ. ಸಂವಿಧಾನದ ಪುಸ್ತಕ ಹಿಡಿದು, ವೀರ ಗಂಗಾಧರನ ಅಜ್ಜನ ಹೆಸರಿನಲ್ಲಿ…
ರಾಜ್ಯದ 25 ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಿಸಿದ್ದಾರೆ. ವೀರ ಗಂಗಾಧರನ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ…