ರಾಜ್ಯದಲ್ಲಿ ಅಧಿಕಾರ ಚುಕ್ಕಾಣಿ ಹಿಡಿದಿರುವ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವು ರಾಜ್ಯದ ಜನರ ಆಶೋತ್ತರ, ಸಮಸ್ಯೆಗಳಿಗೆ ಪರಿಹರ ನೀಡುವಲ್ಲಿ ವಿಫಲವಾಗುತ್ತಿದೆ. ಕಾಂಗ್ರೆಸ್ ಸರ್ಕಾರವು ಒಂದು ರೀತಿಯಲ್ಲಿ ಡಿಸ್ಕೋ ಡ್ಯಾನ್ಸ್ ಆಡುತ್ತಿದೆ. ಅನ್ನದಾತರು ಬೆಳೆ ಬೆಳೆಯಲು ಕನಿಷ್ಠ ಎರಡು ತಾಸು ವಿದ್ಯುತ್ ಸಹ ನೀಡಲು ಸರ್ಕಾರ ಕೈಯಲ್ಲಿ ಆಗುತ್ತಿಲ್ಲ, ಉಚಿತ ಗ್ಯಾರೆಂಟಿ ಯೋಜನೆಗಳು ಜನರನ್ನ ಸೂಕ್ತ ರೀತಿಯಲ್ಲಿ ತಲುಪುತ್ತಿಲ್ಲ. ಕೇವಲ ಆರ್ಭಟದ ಅಧಿಕಾರ ನಡೆಯುತ್ತಿದೆ ಅಷ್ಟೇ, ಇದಕ್ಕೆಲ್ಲಾ ಎಂಪಿ ಚುನಾವಣೆಯಲ್ಲಿ ಜನರಿಂದ ಉತ್ತರ ಪಡೆಯಲಿದ್ದಾರೆ ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್.ಎಂ ಹರೀಶ್ ಗೌಡ ಅವರು ಕಿಡಿಕಾರಿದರು.
ಕುಮಾರಸ್ವಾಮಿ ಅವರು ಸಾಲಮನ್ನಾ ಮಾಡಿದ್ದಾರೆ, ಜನ ಅದನ್ನ ಗಮನಿಸಲಿಲ್ಲ, ಆದರೂ ಜನಸೇವೆ ಮಾಡುವುದನ್ನ ಯಾವುದೇ ಕಾರಣಕ್ಕೂ ನಮ್ಮ ಪಕ್ಷ ನಿಲ್ಲಿಸುವುದಿಲ್ಲ. ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವ ಮೆಚ್ಚಿ ಎನ್ ಡಿಎ ಜೊತೆ ಜೆಡಿಎಸ್ ಮೈತ್ರಿ ಮಾಡಿಕಳ್ಳಲಾಗಿದೆ. ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಅವರು, ಕುಮಾರಸ್ವಾಮಿ ಮಾರ್ಗದರ್ಶನದಲ್ಲಿ ರಾಜ್ಯಾದ್ಯಂತ ಪ್ರವಾಸ ಕೈಗೊಂಡು ಬರ ಪರಿಸ್ಥಿತಿ ಅವಲೋಕಿಸಿ ಸರ್ಕಾರದ ವತಿಯಿಂದ ಬರ ಪರಿಹಾರ ಕೊಡಿಸುವಲ್ಲಿ ಕಾರ್ಯಪ್ರವೃತ್ತರಾಗುತ್ತೇವೆ ಎಂದರು.
ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ ಪಕ್ಷವನ್ನ ತಳ ಮಟ್ಟದಿಂದ ಬಲಪಡಿಸಲು ಸತತ ಪ್ರಯತ್ನ ಮಾಡಲಾಗುವುದು, ತಾಲೂಕಿನಲ್ಲಿ ಜೆಡಿಎಸ್ ಪಕ್ಷ ಸದೃಢವಾಗಿದೆ. ಇನ್ನಷ್ಟು ಗಟ್ಟಿಗೊಳಿಸಲು ಎಲ್ಲಾ ಮುಖಂಡರು, ಕಾರ್ಯಕರ್ತರ ಜೊತೆಗೂಡಿ ಕೆಲಸ ಮಾಡಲಾಗುವುದು, ಪಕ್ಷ ತೀರ್ಮಾನಕ್ಕೆ ನಾನು ಬದ್ಧನಾಗಿದ್ದೇನೆ ಎಂದು ತಿಳಿಸಿದರು.
ಮಾಜಿ ಶಾಸಕರಾದ ಟಿ.ವೆಂಕಟರಮಣಯ್ಯನವರು ಈ ತಾಲೂಕಿನಲ್ಲಿ ಹತ್ತು ವರ್ಷಗಳ ಕಾಲ ಆಡಳಿತ ನಡೆಸಿದ್ದಾರೆ. ಎಲ್ಲಿ ಏನು ಸಮಸ್ಯೆ ಇದೆ ಎಂಬುದು ಗೊತ್ತಿದೆ. ಅದನ್ನ ಎಲ್ಲರ ಗಮನಕ್ಕೆ ತಂದು ತಾಲೂಕಿನ ಅಭಿವೃದ್ಧಿಗೆ ಕೈಜೋಡಿಸಬೇಕು. ಕೇವಲ ಅಧಿಕಾರ ಇದ್ದರೆ ಮಾತ್ರ ತಾಲೂಕಿನ ಅಭಿವೃದ್ಧಿ ಬಗ್ಗೆ ಯೋಚನೆ ಮಾಡುವುದಲ್ಲ, ಅಧಿಕಾರ ಇಲ್ಲದಿದ್ದರೂ ಕ್ಷೇತ್ರದ ಬಗ್ಗೆ ಕಾಳಜಿ ವಹಿಸಬೇಕು ಎಂದು ಹೇಳಿದರು.
ಹಾಲಿ ಶಾಸಕ ಧೀರಜ್ ಮುನಿರಾಜ್ ಅವರು ಕ್ಷೇತ್ರ ಪ್ರವಾಸ ಕೈಗೊಂಡು ಬರ ಪರಿಸ್ಥಿತಿ ಪರಿಶೀಲಿಸಿ ಅಂಕಿಅಂಶಗಳನ್ನ ಸರ್ಕಾರ ಗಮನಕ್ಕೆ ತಂದು ಸೂಕ್ತ ಪರಿಹಾರ ಒದಗಿಸುವಲ್ಲಿ ಕೆಲಸ ನಿರ್ವಹಿಸಬೇಕು, ನಗರ ಹಾಗೂ ಗ್ರಾಮೀಣ ಭಾಗದಲ್ಲಿರುವ ಜ್ವಲಂತ ಸಮಸ್ಯೆಗಳಿಗೆ ಸಾಧ್ಯವಾದಷ್ಟು ಪರಿಹಾರ ನೀಡುವಲ್ಲಿ ಕಾರ್ಯೋನ್ಮುಖರಾಗಬೇಕು ಎಂದು ಸಲಹೆ ನೀಡಿದರು.
ಒಂದೇ ಊರಿನ ಎದುರು ಬದರು ಮನೆ ವಾಸಿಗಳು. ಜೊತೆಯಾಗಿ ರಿಯಲ್ ಎಸ್ಟೇಟ್ ವ್ಯವಹಾರ ಮಾಡಿಕೊಂಡಿದ್ದರು. ಆದ್ರೆ ಕಳೆದ ಹತ್ತು ವರ್ಷದಿಂದ…
ಭಾರತದ ವಿದೇಶಾಂಗ ನೀತಿ ವ್ಯಾವಹಾರಿಕವೇ ?ಮೌಲ್ಯಯುತವೇ ? ಸೈದ್ದಾಂತಿಕವೇ ? ಅವಕಾಶವಾದಿತನವೇ ? ವ್ಯಕ್ತಿಗತವೇ ? ಸಾಂದರ್ಭಿಕ ತೀರ್ಮಾನಗಳೇ ?…
ತಾಲ್ಲೂಕಿನ ಕಾಡತಿಪ್ಪೂರು ಗ್ರಾಮದಲ್ಲಿನ ಇತಿಹಾಸ ಪ್ರಸಿದ್ಧ ಅರಸೇಶ್ವರಿ ದೇಗುಲದ ಇನಾಮ್ತಿ ಜಮೀನನ್ನು ಕಂದಾಯ ಇಲಾಖೆ ಅಧಿಕಾರಿಗಳು ಖಾಸಗಿ ವ್ಯಕ್ತಿಗಳ ಜೊತೆ…
ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಕೇಬಲ್ ಕಾರ್ಖಾನೆಗೆ ಬೆಂಕಿ ತಗುಲಿದ್ದು, ಧಗಧಗನೆ ಕಾರ್ಖಾನೆ ಉರಿಯುತ್ತಿದೆ. ಈ ಘಟನೆ ಇಂದು ಸಂಜೆ ಸುಮಾರು…
ಮುಜರಾಯಿ ಇಲಾಖೆಗೆ ಒಳಪಡುವ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ರಾಮ ಲಕ್ಷ್ಮಣರಿಗೆ ಅಳವಡಿಸಿದ್ದ ಬೆಳ್ಳಿ ಕಿರೀಟವನ್ನು ಕಳ್ಳರು ಕದ್ದೊಯ್ದಿರುವ ಘಟನೆ ಕಳೆದ…
ದೊಡ್ಡಬಳ್ಳಾಪುರ ತಾಲೂಕಿನ ಕಲ್ಲುದೇವನಹಳ್ಳಿ ಮಾರಮ್ಮ ದೇವಿ ದೇವಸ್ಥಾನದಲ್ಲಿ ಕಳೆದ ರಾತ್ರಿ ಕಳ್ಳತನ ನಡೆದಿದೆ.. ಕಲ್ಲುದೇವನಹಳ್ಳಿ ಗ್ರಾಮದ ಮಧ್ಯ ಭಾಗದಲ್ಲಿರುವ ಮಾರಮ್ಮ…