ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದಿಂದ ಡಿಸ್ಕೋ ಡ್ಯಾನ್ಸ್: ಎಂಪಿ ಚುನಾವಣೆಯಲ್ಲಿ ಸರ್ಕಾರಕ್ಕೆ ತಕ್ಕ ಉತ್ತರ ನೀಡಲಿರುವ ರಾಜ್ಯದ‌ ಜನತೆ- ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್.ಎಂ ಹರೀಶ್ ಗೌಡ

ರಾಜ್ಯದಲ್ಲಿ ಅಧಿಕಾರ ಚುಕ್ಕಾಣಿ ಹಿಡಿದಿರುವ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವು ರಾಜ್ಯದ ಜನರ ಆಶೋತ್ತರ, ಸಮಸ್ಯೆಗಳಿಗೆ ಪರಿಹರ ನೀಡುವಲ್ಲಿ ವಿಫಲವಾಗುತ್ತಿದೆ. ಕಾಂಗ್ರೆಸ್ ಸರ್ಕಾರವು ಒಂದು ರೀತಿಯಲ್ಲಿ ಡಿಸ್ಕೋ ಡ್ಯಾನ್ಸ್ ಆಡುತ್ತಿದೆ. ಅನ್ನದಾತರು ಬೆಳೆ ಬೆಳೆಯಲು ಕನಿಷ್ಠ ಎರಡು ತಾಸು ವಿದ್ಯುತ್ ಸಹ ನೀಡಲು ಸರ್ಕಾರ ಕೈಯಲ್ಲಿ ಆಗುತ್ತಿಲ್ಲ, ಉಚಿತ ಗ್ಯಾರೆಂಟಿ ಯೋಜನೆಗಳು ಜನರನ್ನ ಸೂಕ್ತ ರೀತಿಯಲ್ಲಿ ತಲುಪುತ್ತಿಲ್ಲ. ಕೇವಲ ಆರ್ಭಟದ ಅಧಿಕಾರ ನಡೆಯುತ್ತಿದೆ ಅಷ್ಟೇ, ಇದಕ್ಕೆಲ್ಲಾ ಎಂಪಿ ಚುನಾವಣೆಯಲ್ಲಿ ಜನರಿಂದ ಉತ್ತರ ಪಡೆಯಲಿದ್ದಾರೆ ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ  ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್.ಎಂ ಹರೀಶ್ ಗೌಡ ಅವರು ಕಿಡಿಕಾರಿದರು.

ನಗರದ ಗಾಣಿಗರ ಪೇಟೆಯಲ್ಲಿ ಶ್ರೀ ಮುತ್ಯಾಲಮ್ಮ ಸೇವಾ ಸಮಿತಿ ವತಿಯಿಂದ ಹಮ್ಮಿಕೊಂಡಿದ್ದ 55ನೇ ವರ್ಷದ ಅನ್ನ ಸಂತರ್ಪಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಸರ್ಕಾರದ ನಡತೆಯನ್ನ ಜನರು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ. ಜನರೇ ತಕ್ಕ ಉತ್ತರ ನೀಡಲಿದ್ದಾರೆ ಎಂದರು.

ಕುಮಾರಸ್ವಾಮಿ ಅವರು ಸಾಲಮನ್ನಾ ಮಾಡಿದ್ದಾರೆ, ಜನ ಅದನ್ನ ಗಮನಿಸಲಿಲ್ಲ, ಆದರೂ ಜನಸೇವೆ ಮಾಡುವುದನ್ನ ಯಾವುದೇ ಕಾರಣಕ್ಕೂ ನಮ್ಮ ಪಕ್ಷ ನಿಲ್ಲಿಸುವುದಿಲ್ಲ. ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವ ಮೆಚ್ಚಿ ಎನ್ ಡಿಎ ಜೊತೆ ಜೆಡಿಎಸ್ ಮೈತ್ರಿ ಮಾಡಿಕಳ್ಳಲಾಗಿದೆ. ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಅವರು, ಕುಮಾರಸ್ವಾಮಿ ಮಾರ್ಗದರ್ಶನದಲ್ಲಿ ರಾಜ್ಯಾದ್ಯಂತ ಪ್ರವಾಸ ಕೈಗೊಂಡು ಬರ ಪರಿಸ್ಥಿತಿ ಅವಲೋಕಿಸಿ ಸರ್ಕಾರದ ವತಿಯಿಂದ ಬರ ಪರಿಹಾರ ಕೊಡಿಸುವಲ್ಲಿ ಕಾರ್ಯಪ್ರವೃತ್ತರಾಗುತ್ತೇವೆ ಎಂದರು.

ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ ಪಕ್ಷವನ್ನ ತಳ ಮಟ್ಟದಿಂದ ಬಲಪಡಿಸಲು ಸತತ ಪ್ರಯತ್ನ ಮಾಡಲಾಗುವುದು, ತಾಲೂಕಿನಲ್ಲಿ ಜೆಡಿಎಸ್ ಪಕ್ಷ ಸದೃಢವಾಗಿದೆ. ಇನ್ನಷ್ಟು ಗಟ್ಟಿಗೊಳಿಸಲು ಎಲ್ಲಾ‌‌ ಮುಖಂಡರು, ಕಾರ್ಯಕರ್ತರ ಜೊತೆಗೂಡಿ ಕೆಲಸ ಮಾಡಲಾಗುವುದು, ಪಕ್ಷ ತೀರ್ಮಾನಕ್ಕೆ ನಾನು ಬದ್ಧನಾಗಿದ್ದೇನೆ ಎಂದು ತಿಳಿಸಿದರು.

ಮಾಜಿ ಶಾಸಕರಾದ ಟಿ.ವೆಂಕಟರಮಣಯ್ಯನವರು ಈ ತಾಲೂಕಿನಲ್ಲಿ ಹತ್ತು ವರ್ಷಗಳ ಕಾಲ ಆಡಳಿತ ನಡೆಸಿದ್ದಾರೆ. ಎಲ್ಲಿ ಏನು ಸಮಸ್ಯೆ ಇದೆ ಎಂಬುದು ಗೊತ್ತಿದೆ. ಅದನ್ನ ಎಲ್ಲರ ಗಮನಕ್ಕೆ ತಂದು ತಾಲೂಕಿನ ಅಭಿವೃದ್ಧಿಗೆ ಕೈಜೋಡಿಸಬೇಕು. ಕೇವಲ ಅಧಿಕಾರ ಇದ್ದರೆ ಮಾತ್ರ ತಾಲೂಕಿನ ಅಭಿವೃದ್ಧಿ ಬಗ್ಗೆ ಯೋಚನೆ‌ ಮಾಡುವುದಲ್ಲ, ಅಧಿಕಾರ ಇಲ್ಲದಿದ್ದರೂ ಕ್ಷೇತ್ರದ ಬಗ್ಗೆ ಕಾಳಜಿ ವಹಿಸಬೇಕು ಎಂದು ಹೇಳಿದರು.

ಹಾಲಿ ಶಾಸಕ ಧೀರಜ್ ಮುನಿರಾಜ್ ಅವರು ಕ್ಷೇತ್ರ ಪ್ರವಾಸ ಕೈಗೊಂಡು ಬರ ಪರಿಸ್ಥಿತಿ ಪರಿಶೀಲಿಸಿ ಅಂಕಿಅಂಶಗಳನ್ನ ಸರ್ಕಾರ ಗಮನಕ್ಕೆ ತಂದು ಸೂಕ್ತ ಪರಿಹಾರ ಒದಗಿಸುವಲ್ಲಿ ಕೆಲಸ ನಿರ್ವಹಿಸಬೇಕು, ನಗರ ಹಾಗೂ ಗ್ರಾಮೀಣ ಭಾಗದಲ್ಲಿರುವ ಜ್ವಲಂತ ಸಮಸ್ಯೆಗಳಿಗೆ ಸಾಧ್ಯವಾದಷ್ಟು ಪರಿಹಾರ ನೀಡುವಲ್ಲಿ ಕಾರ್ಯೋನ್ಮುಖರಾಗಬೇಕು ಎಂದು ಸಲಹೆ ನೀಡಿದರು.

Ramesh Babu

Journalist

Recent Posts

ನಿಷೇಧದ ನಡುವೆಯೂ ಡಿಜೆ ಬಳಕೆ: ವಾಹನ ವಶ, ಪ್ರಕರಣ ದಾಖಲು

ದೊಡ್ಡಬಳ್ಳಾಪುರ: ಜಿಲ್ಲೆಯಲ್ಲಿ ಡಿಜೆ ಬಳಕೆಗೆ ನಿಷೇಧವಿದ್ದರೂ ಗಣೇಶೋತ್ಸವ ಮೆರವಣಿಗೆಯಲ್ಲಿ ಡಿಜೆ ಬಳಸಿದ ಆರೋಪದ ಮೇರೆಗೆ ಡಿಜೆ ವಾಹನವನ್ನು ಜಪ್ತಿ ಮಾಡಿರುವ…

12 hours ago

ಲಾಡ್ಜ್‌ನಲ್ಲಿ ಮಹಿಳೆ ಸಾವು ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಕೊಲೆ ಶಂಕಿತ ಪತಿ ಆನಂದ್ ನೇಣಿಗೆ ಶರಣು

ದೊಡ್ಡಬಳ್ಳಾಪುರ: ಪತಿಯೊಂದಿಗೆ ಲಾಡ್ಜ್‌ಗೆ ತೆರಳಿದ್ದ 21 ವರ್ಷದ ಮಹಿಳೆ ಅನುಮಾನಾಸ್ಪದವಾಗಿ ಮೃತಪಟ್ಟ ಪ್ರಕರಣಕ್ಕೆ ಇದೀಗ ಬಿಗ್ ಟ್ವಿಸ್ಟ್ ಸಿಕ್ಕಿದೆ. ಪ್ರಕರಣದಲ್ಲಿ…

14 hours ago

ಕಾಂಗ್ರೆಸ್‌ನಲ್ಲಿ ಒಗ್ಗಟ್ಟು ಅಗತ್ಯ- ಕೆಪಿಸಿಸಿ ಸದಸ್ಯ ಎಸ್.ಆರ್. ಮುನಿರಾಜ್

ದೊಡ್ಡಬಳ್ಳಾಪುರ: ಕಾಂಗ್ರೆಸ್‌ನಲ್ಲಿ ಒಗ್ಗಟ್ಟು ಅಗತ್ಯವಾಗಿದ್ದು, ಮುಖಂಡರು ಹಾಗೂ ಕಾರ್ಯಕರ್ತರು ಒಟ್ಟಾಗಿ ಕೆಲಸ ಮಾಡಿದರೆ ಮುಂಬರುವ ಎಲ್ಲ ಚುನಾವಣೆಗಳಲ್ಲೂ ಪಕ್ಷದ ಗೆಲುವು…

17 hours ago

ಅಂಗನವಾಡಿ ಕಾರ್ಯಕರ್ತೆ/ ಸಹಾಯಕಿ ಹುದ್ದೆಗಳ ತಾತ್ಕಾಲಿಕ ಆಯ್ಕೆಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ತಾತ್ಕಾಲಿಕ ಆಯ್ಕೆ ಪಟ್ಟಿ…

2 days ago

ಬರದ ಬವಣೆಗೆ ಸಿಲುಕಿದ ದೊಡ್ಡಬಳ್ಳಾಪುರ: ಬರಪೀಡಿತ ಪಟ್ಟಿಗೆ ಸೇರ್ಪಡೆ

ಬೆಂಗಳೂರು ಗ್ರಾಮಾಂತರ: ಮಳೆ ಕೊರತೆ ಹಾಗೂ ಬೆಳೆ ನಷ್ಟದಿಂದ ಸಂಕಷ್ಟಕ್ಕೆ ಸಿಲುಕಿದ್ದ ದೊಡ್ಡಬಳ್ಳಾಪುರ ತಾಲೂಕು ಇದೀಗ ಬರಪೀಡಿತ ತಾಲೂಕುಗಳ ಪಟ್ಟಿಗೆ…

2 days ago

50 ಲಕ್ಷ ಲಂಚ ಪಡೆಯುವಾಗ ತಹಶೀಲ್ದಾರ್ ಲೋಕಾಯುಕ್ತ ಬಲೆಗೆ!

ಧಾರವಾಡ: ಭೂಮಿಯ ‘ಅ-ಖರಾಬ್’ ತೆರವುಗೊಳಿಸಲು 1 ಕೋಟಿ ಲಂಚಕ್ಕೆ ಬೇಡಿಕೆ ಇಟ್ಟ ಆರೋಪ ಧಾರವಾಡ ತಹಶೀಲ್ದಾರ್ ಸಚ್ಚಿದಾನಂದ ಕುಚನೂರ್ ವಿರುದ್ಧ…

2 days ago