Categories: ರಾಜ್ಯ

ರಾಜ್ಯದಲ್ಲಿ “ಕುಸುಮ್- ಎ” ಜಾರಿ ಕುರಿತು ಕೇಂದ್ರದ ಜತೆ ಮಾತುಕತೆ- ಸಚಿವ ಕೆ.ಜೆ.ಜಾರ್ಜ್

ಜನರೇ ವಿದ್ಯುತ್ ಉತ್ಪಾದಿಸಿ ಬಳಸಲು ಉತ್ತೇಜನ ನೀಡುವ ಕುಸುಮ್-ಎ (ಪ್ರಧಾನ ಮಂತ್ರಿ ಕಿಸಾನ್ ಉರ್ಜಾ ಸುರಕ್ಷಾ ಏವಮ್ ಉತ್ಥಾನ ಮಹಾಭಿಯಾನ್) ಯೋಜನೆಯನ್ನು ರಾಜ್ಯದಲ್ಲಿ ಜಾರಿಗೆ ತರುವ ಕುರಿತು ಕೇಂದ್ರ ಸರ್ಕಾರದೊಂದಿಗೆ ಮಾತುಕತೆ ನಡೆಸಲು ಉದ್ದೇಶಿಸಲಾಗಿದೆ ಎಂದು ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿಯನ್ನೂ ಹೊಂದಿರುವ ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ.

ಕಡೂರು ಪಟ್ಟಣದ ಟಿಎಪಿಸಿಎಂಎಸ್ ಕಚೇರಿ ಆವರಣದಲ್ಲಿ ಮಂಗಳವಾರ ಟಿಎಪಿಸಿಎಂಎಸ್‌ನ ಅಮೃತ ಮಹೋತ್ಸವ ಹಾಗೂ ರೈತ ಬಜಾರ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, “ಈಗಾಗಲೇ ರಾಜ್ಯದಲ್ಲಿ ಕುಸುಮ್- ಬಿ (ರೈತರಿಗೆ ಸೋಲಾರ್ ಕೃಷಿ ಪಂಪ್ ಸೆಟ್) ಮತ್ತು ಕುಸುಮ್-ಸಿ (ಕೃಷಿ ಫೀಡರ್ ಗಳ ಸೌರೀಕರಣ) ಯೋಜನೆ ಅನುಷ್ಠಾನದಲ್ಲಿದೆ. ಇದರೊಂದಿಗೆ ಕುಸುಮ್- ಎ ಯೋಜನೆಯನ್ನೂ ಜಾರಿಗೊಳಿಸುವ ಕುರಿತು ಯೋಚಿಸಲಾಗಿದೆ”, ಎಂದರು.

“ಕುಸುಮ್- ಎ ಯೋಜನೆಯಡಿ ರೈತರು, ರೈತರ ಗುಂಪುಗಳು, ಸಹಕಾರಿ ಸಂಸ್ಥೆಗಳು, ಪಂಚಾಯತ್‌ಗಳು, ರೈತ ಉತ್ಪಾದಕರ ಸಂಸ್ಥೆಗಳು, ನೀರು ಬಳಕೆದಾರರ ಸಂಘಗಳು ವಿದ್ಯುತ್ ಉಪ ಕೇಂದ್ರಗಳಿಂದ 5 ಕಿ.ಮೀ. ಒಳಗೆ 500 ಕಿಲೋ ವ್ಯಾಟ್ ನಿಂದ ಗರಿಷ್ಠ 2 ಮೆಗಾ ವ್ಯಾಟ್ ವರೆಗೆ ಸೌರ ವಿದ್ಯುತ್ ಸ್ಥಾವರಗಳನ್ನು ಸ್ಥಾಪಿಸಬಹುದು. ಅಲ್ಲಿ ಉತ್ಪಾದನೆಯಾಗುವ ವಿದ್ಯುತ್ತನ್ನು ಅವರೇ ಬಳಸಿಕೊಳ್ಳಬಹುದು. ಹೆಚ್ಚುವರಿ ವಿದ್ಯುತ್ತನ್ನು ಸರ್ಕಾರ ಖರೀದಿಸುತ್ತದೆ. ಇದರಿಂದ ವಿದ್ಯುತ್ ಸಮಸ್ಯೆಗೆ ಪರಿಹಾರ ಸಿಗುತ್ತದೆ. ರೈತರಿಗೂ ಆದಾಯ ಬರುತ್ತದೆ. ಈ ಹಿನ್ನೆಲೆಯಲ್ಲಿ ಕುಸುಮ್- ಎ ಯೋಜನೆ ಜಾರಿಗೊಳಿಸುವ ಬಗ್ಗೆ ಕೇಂದ್ರ ಸಚಿವರೊಂದಿಗೆ ಮಾತುಕತೆ ನಡೆಸಲಾಗುವುದು”, ಎಂದು ತಿಳಿಸಿದರು.

“ರೈತರಿಗೆ ಸಬ್ಸಿಡಿ ಮೂಲಕ ಸೋಲಾರ್ ಪಂಪ್ ಸೆಟ್ ನೀಡುವ ಕುಸುಮ್- ಬಿ ಯೋಜನೆ ಈಗಾಗಲೇ ಜಾರಿಯಲ್ಲಿದೆ. ರೈತರು ಬೋರ್ ವೆಲ್ ಕೊರೆಸಿ ಅದರಲ್ಲಿ ನೀರು ಲಭ್ಯವಾದರೆ ಆನ್ ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕು. ಈ ಪ್ರಕ್ರಿಯೆ ಪರಿಶೀಲನೆ ನಡೆಸಿ ಯೋಜನೆ ಕಾರ್ಯರೂಪಕ್ಕೆ ತರಲು 12 ಮಂದಿ ಗುತ್ತಿಗೆದಾರರನ್ನು ಗುರುತು ಮಾಡಲಾಗಿದೆ. ಅವರುಗಳು ಬೋರ್‌ವೆಲ್‌ಗೆ ಮೋಟಾರ್, ಪ್ಯಾನಲ್ ಹಾಗೂ ಪೈಪ್ ಅಳವಡಿಸಲಿದ್ದಾರೆ. ಇದಕ್ಕೆ ತಗಲುವ ವೆಚ್ಚದಲ್ಲಿ ಶೇ. 20 ರಷ್ಟು ಹಣವನ್ನು ರೈತರು ಭರಿಸಬೇಕು, ಇನ್ನುಳಿದ ಶೇ. 50 ರಷ್ಟು ಹಣ ರಾಜ್ಯ ಸರ್ಕಾರ ಭರಿಸುತ್ತದೆ. ಇನ್ನುಳಿಕೆ ಹಣವನ್ನು ಕೇಂದ್ರ ಸರ್ಕಾರ ಭರಿಸಲಿದೆ ಡಿಸೆಂಬರ್ ಅಂತ್ಯದವರೆಗೆ 40 ಸಾವಿರ ಪಂಪ್ ಸೆಟ್‌ ಅಳವಡಿಸಲು ಕೇಂದ್ರ ಸರ್ಕಾರ ಅನುಮತಿ ನೀಡಿದೆ”, ಎಂದರು.

ಕಡೂರು ಶಾಸಕ ಕೆ.ಎಸ್.ಆನಂದ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಭದ್ರಾ- ಕಾಡಾ ಅಧ್ಯಕ್ಷ ಡಾ.ಅಂಶುಮಂತ್, ಪುರಸಭೆ ಅಧ್ಯಕ್ಷ ಭಂಡಾರಿ ಶ್ರೀನಿವಾಸ್ ಹಾಗೂ ಪುರಸಭೆ ಸದಸ್ಯರು ಉಪಸ್ಥಿತರಿದ್ದರು.

Ramesh Babu

Journalist

Share
Published by
Ramesh Babu

Recent Posts

ರಾಜ್ಯ ಮಟ್ಟದ ಜಾಗೃತಿ ಸಮಿತಿ ಸದಸ್ಯರಾಗಿ ಪುಷ್ಪಲತಾ ಆಯ್ಕೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಮಧುರೆ ಗ್ರಾಮದ ಪುಷ್ಪಲತಾ ಸೋಮಶೇಖರ್ ರವರನ್ನು ರಾಜ್ಯ ಮಟ್ಟದ ಜಾಗೃತಿ ಸಮಿತಿ ಸದಸ್ಯರನ್ನಾಗಿ…

7 hours ago

ಮೆಡಿಕವರ್ ಆಸ್ಪತ್ರೆಯಿಂದ ಸೃಷ್ಟಿ ಗ್ಲೋಬಲ್ ಶಾಲೆಯಲ್ಲಿ ಜೀವ ರಕ್ಷಣೆ (BLS) ತರಬೇತಿ ಕಾರ್ಯಕ್ರಮ

ಬೆಂಗಳೂರು ಕೊಡಿಗೆಹಳ್ಳಿ, : ಮೆಡಿಕವರ್ ಆಸ್ಪತ್ರೆಯು ಕೊಡಿಗೆಹಳ್ಳಿಯ ಸೃಷ್ಟಿ ಗ್ಲೋಬಲ್ ಶಾಲೆಯಲ್ಲಿ 9ನೇ ಮತ್ತು 10ನೇ ತರಗತಿಯ ವಿದ್ಯಾರ್ಥಿಗಳು, ಶಾಲಾ…

8 hours ago

ನಟ ಪ್ರಥಮ್ ವಿರುದ್ದ ಹಲ್ಲೆ ಆರೋಪ: ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು: ಪ್ರಥಮ್ ನೀಡಿದ ದೂರಿನಲ್ಲೇನಿದೆ…? ಯಾರ ಮೇಲೆ ದೂರು ನೀಡಿದ್ದಾರೆ….?

ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…

8 hours ago

ನಾನು ಕೆಲವರು ವಿರುದ್ಧ ದೂರು ಕೊಡಬೇಕಿದೆ. ಯಾರಿಗೆ ಕೊಡಲಿ, ಎಲ್ಲಿ ಕೊಡಲಿ, ತಿಳಿದವರು ದಯವಿಟ್ಟು ಸ್ವಲ್ಪ ಮಾಹಿತಿ ನೀಡಿ…..

ಮಾಡಿದ್ದುಣ್ಣೋ ಮಹಾರಾಯ....... ಬೇವು ಬಿತ್ತಿ ಮಾವಿನ ಫಲವನ್ನು ನಿರೀಕ್ಷಿಸಿದರೆಂತಯ್ಯ....... ನಾನು ಕೆಲವರು ವಿರುದ್ಧ ದೂರು ಕೊಡಬೇಕಿದೆ. ಯಾರಿಗೆ ಕೊಡಲಿ, ಎಲ್ಲಿ…

10 hours ago

ರಸ್ತೆಯಲ್ಲಿ ಅಡ್ಡಾದಿಡ್ಡಿ ಲಾರಿ ಚಾಲನೆ: ವಾಹನ ಸವಾರರಿಗೆ ಕಿರಿಕಿರಿ: ಲಾರಿ ತಡೆದು ಚಾಲಕನಿಗೆ ತರಾಟಗೆ ತೆಗೆದುಕೊಂಡ ಸಾರ್ವಜನಿಕರು

ಲಾರಿಯನ್ನು ಅಡ್ಡಾದಿಡ್ಡಿಯಾಗಿ ಚಾಲಾಯಿಸಿಕೊಂಡು ಬಂದ ಚಾಲಕನು, ರಸ್ತೆಯಲ್ಲಿ ಸಂಚರಿಸುತ್ತಿದ್ದ ಇತರೆ ವಾಹನಗಳಿಗೆ ಡಿಕ್ಕಿ ಹೊಡೆದು ಕಿರಿಕಿರಿ ಉಂಟು ಮಾಡಿರುವ ಘಟನೆ…

21 hours ago

ಅಸಂಘಟಿತ ಕಾರ್ಮಿಕರ ಮಂಡಳಿಗೆ ಪೆಟ್ರೋಲ್, ಡೀಸೆಲ್ ಸೆಸ್ ನಲ್ಲಿ ಪಾಲು- ಕಾರ್ಮಿಕ ಸಚಿವ ಸಂತೋಷ್ ಲಾಡ್

ಕಾರವಾರ:- ರಾಜ್ಯದಲ್ಲಿನ ಅಸಂಘಟಿತ ಕಾರ್ಮಿಕರಿಗೆ ಹೆಚ್ಚಿನ ಸಂಖ್ಯೆಯ ಸಾಮಾಜಿಕ ಭದ್ರತೆ ಯೋಜನೆಗಳನ್ನು ಒದಗಿಸಲು ರಾಜ್ಯದಲ್ಲಿನ ಡೀಸೆಲ್ ಪೆಟ್ರೋಲ್ ಮೇಲೆ ವಿಧಿಸುತ್ತಿರುವ…

22 hours ago