Categories: ರಾಜ್ಯ

ರಾಜ್ಯದಲ್ಲಿ “ಕುಸುಮ್- ಎ” ಜಾರಿ ಕುರಿತು ಕೇಂದ್ರದ ಜತೆ ಮಾತುಕತೆ- ಸಚಿವ ಕೆ.ಜೆ.ಜಾರ್ಜ್

ಜನರೇ ವಿದ್ಯುತ್ ಉತ್ಪಾದಿಸಿ ಬಳಸಲು ಉತ್ತೇಜನ ನೀಡುವ ಕುಸುಮ್-ಎ (ಪ್ರಧಾನ ಮಂತ್ರಿ ಕಿಸಾನ್ ಉರ್ಜಾ ಸುರಕ್ಷಾ ಏವಮ್ ಉತ್ಥಾನ ಮಹಾಭಿಯಾನ್) ಯೋಜನೆಯನ್ನು ರಾಜ್ಯದಲ್ಲಿ ಜಾರಿಗೆ ತರುವ ಕುರಿತು ಕೇಂದ್ರ ಸರ್ಕಾರದೊಂದಿಗೆ ಮಾತುಕತೆ ನಡೆಸಲು ಉದ್ದೇಶಿಸಲಾಗಿದೆ ಎಂದು ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿಯನ್ನೂ ಹೊಂದಿರುವ ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ.

ಕಡೂರು ಪಟ್ಟಣದ ಟಿಎಪಿಸಿಎಂಎಸ್ ಕಚೇರಿ ಆವರಣದಲ್ಲಿ ಮಂಗಳವಾರ ಟಿಎಪಿಸಿಎಂಎಸ್‌ನ ಅಮೃತ ಮಹೋತ್ಸವ ಹಾಗೂ ರೈತ ಬಜಾರ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, “ಈಗಾಗಲೇ ರಾಜ್ಯದಲ್ಲಿ ಕುಸುಮ್- ಬಿ (ರೈತರಿಗೆ ಸೋಲಾರ್ ಕೃಷಿ ಪಂಪ್ ಸೆಟ್) ಮತ್ತು ಕುಸುಮ್-ಸಿ (ಕೃಷಿ ಫೀಡರ್ ಗಳ ಸೌರೀಕರಣ) ಯೋಜನೆ ಅನುಷ್ಠಾನದಲ್ಲಿದೆ. ಇದರೊಂದಿಗೆ ಕುಸುಮ್- ಎ ಯೋಜನೆಯನ್ನೂ ಜಾರಿಗೊಳಿಸುವ ಕುರಿತು ಯೋಚಿಸಲಾಗಿದೆ”, ಎಂದರು.

“ಕುಸುಮ್- ಎ ಯೋಜನೆಯಡಿ ರೈತರು, ರೈತರ ಗುಂಪುಗಳು, ಸಹಕಾರಿ ಸಂಸ್ಥೆಗಳು, ಪಂಚಾಯತ್‌ಗಳು, ರೈತ ಉತ್ಪಾದಕರ ಸಂಸ್ಥೆಗಳು, ನೀರು ಬಳಕೆದಾರರ ಸಂಘಗಳು ವಿದ್ಯುತ್ ಉಪ ಕೇಂದ್ರಗಳಿಂದ 5 ಕಿ.ಮೀ. ಒಳಗೆ 500 ಕಿಲೋ ವ್ಯಾಟ್ ನಿಂದ ಗರಿಷ್ಠ 2 ಮೆಗಾ ವ್ಯಾಟ್ ವರೆಗೆ ಸೌರ ವಿದ್ಯುತ್ ಸ್ಥಾವರಗಳನ್ನು ಸ್ಥಾಪಿಸಬಹುದು. ಅಲ್ಲಿ ಉತ್ಪಾದನೆಯಾಗುವ ವಿದ್ಯುತ್ತನ್ನು ಅವರೇ ಬಳಸಿಕೊಳ್ಳಬಹುದು. ಹೆಚ್ಚುವರಿ ವಿದ್ಯುತ್ತನ್ನು ಸರ್ಕಾರ ಖರೀದಿಸುತ್ತದೆ. ಇದರಿಂದ ವಿದ್ಯುತ್ ಸಮಸ್ಯೆಗೆ ಪರಿಹಾರ ಸಿಗುತ್ತದೆ. ರೈತರಿಗೂ ಆದಾಯ ಬರುತ್ತದೆ. ಈ ಹಿನ್ನೆಲೆಯಲ್ಲಿ ಕುಸುಮ್- ಎ ಯೋಜನೆ ಜಾರಿಗೊಳಿಸುವ ಬಗ್ಗೆ ಕೇಂದ್ರ ಸಚಿವರೊಂದಿಗೆ ಮಾತುಕತೆ ನಡೆಸಲಾಗುವುದು”, ಎಂದು ತಿಳಿಸಿದರು.

“ರೈತರಿಗೆ ಸಬ್ಸಿಡಿ ಮೂಲಕ ಸೋಲಾರ್ ಪಂಪ್ ಸೆಟ್ ನೀಡುವ ಕುಸುಮ್- ಬಿ ಯೋಜನೆ ಈಗಾಗಲೇ ಜಾರಿಯಲ್ಲಿದೆ. ರೈತರು ಬೋರ್ ವೆಲ್ ಕೊರೆಸಿ ಅದರಲ್ಲಿ ನೀರು ಲಭ್ಯವಾದರೆ ಆನ್ ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕು. ಈ ಪ್ರಕ್ರಿಯೆ ಪರಿಶೀಲನೆ ನಡೆಸಿ ಯೋಜನೆ ಕಾರ್ಯರೂಪಕ್ಕೆ ತರಲು 12 ಮಂದಿ ಗುತ್ತಿಗೆದಾರರನ್ನು ಗುರುತು ಮಾಡಲಾಗಿದೆ. ಅವರುಗಳು ಬೋರ್‌ವೆಲ್‌ಗೆ ಮೋಟಾರ್, ಪ್ಯಾನಲ್ ಹಾಗೂ ಪೈಪ್ ಅಳವಡಿಸಲಿದ್ದಾರೆ. ಇದಕ್ಕೆ ತಗಲುವ ವೆಚ್ಚದಲ್ಲಿ ಶೇ. 20 ರಷ್ಟು ಹಣವನ್ನು ರೈತರು ಭರಿಸಬೇಕು, ಇನ್ನುಳಿದ ಶೇ. 50 ರಷ್ಟು ಹಣ ರಾಜ್ಯ ಸರ್ಕಾರ ಭರಿಸುತ್ತದೆ. ಇನ್ನುಳಿಕೆ ಹಣವನ್ನು ಕೇಂದ್ರ ಸರ್ಕಾರ ಭರಿಸಲಿದೆ ಡಿಸೆಂಬರ್ ಅಂತ್ಯದವರೆಗೆ 40 ಸಾವಿರ ಪಂಪ್ ಸೆಟ್‌ ಅಳವಡಿಸಲು ಕೇಂದ್ರ ಸರ್ಕಾರ ಅನುಮತಿ ನೀಡಿದೆ”, ಎಂದರು.

ಕಡೂರು ಶಾಸಕ ಕೆ.ಎಸ್.ಆನಂದ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಭದ್ರಾ- ಕಾಡಾ ಅಧ್ಯಕ್ಷ ಡಾ.ಅಂಶುಮಂತ್, ಪುರಸಭೆ ಅಧ್ಯಕ್ಷ ಭಂಡಾರಿ ಶ್ರೀನಿವಾಸ್ ಹಾಗೂ ಪುರಸಭೆ ಸದಸ್ಯರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಬಗರ್ ಹುಕ್ಕುಂ ಸಮಿತಿ ಸಭೆ ವಿಳಂಬ: ಹಕ್ಕುಪತ್ರಕ್ಕಾಗಿ ರೈತರ ಅಲೆದಾಟ: ಅರ್ಜಿ ಸಲ್ಲಿಸಿ ವರ್ಷಗಳಾದರೂ ಸಾಗುವಳಿ ಚೀಟಿ ಇಲ್ಲ: ಆತಂಕದಲ್ಲಿ ರೈತ

ಗ್ರಾಮೀಣ ಭಾಗದಲ್ಲಿ ಜೀವನ ನಡೆಸಲು ಸರ್ಕಾರಿ ಜಮೀನುಗಳಲ್ಲಿ ಉಳುಮೆ ಮಾಡಿಕೊಂಡು ಜೀವನೋಪಾಯ ರೂಪಿಸಿಕೊಂಡಿರುವ ರೈತಾಪಿ ವರ್ಗದ ಜನರಿಗಾಗಿ ಸರ್ಕಾರ ಸಾಗುವಳಿ…

5 hours ago

ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ 4 ತಾಲ್ಲೂಕುಗಳ ಸಮಗ್ರ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿಯಿರುವ 56…

20 hours ago

ಮಹತ್ವಾಕಾಂಕ್ಷಿ ಕ್ವಿನ್ ಸಿಟಿಗೆ ಮೊದಲ ಬೃಹತ್ ಹೂಡಿಕೆ ಒಪ್ಪಂದ

ಬೆಂಗಳೂರು ಗ್ರಾಮಾಂತರ: ಡಾಬಸಪೇಟೆ-ದೊಡ್ಡಬಳ್ಳಾಪುರ ನಡುವೆ ರಾಜ್ಯ ಸರ್ಕಾರ ಅಭಿವೃದ್ಧಿಪಡಿಸುತ್ತಿರುವ ಮಹತ್ವಾಕಾಂಕ್ಷಿ ‘ಕ್ವಿನ್ ಸಿಟಿ’ (KWINCity) ಯೋಜನೆಗೆ ಮೊದಲ ಬೃಹತ್ ಹೂಡಿಕೆ…

1 day ago

108 ಅರೋಗ್ಯ ಕವಚ ಕೇಂದ್ರೀಕೃತ ಕಮಾಂಡ್ ಮತ್ತು ಕಂಟ್ರೋಲ್ ಕೇಂದ್ರ ಉದ್ಘಾಟನೆ

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಆ್ಯಂಬುಲೆನ್ಸ್ ಸೇವೆ ಲಭ್ಯವಾಗಲಿದ್ದು, ಈ ಸೇವೆ ಪರಿಣಾಮಕಾರಿಯಾಗಿ ಜನರಿಗೆ ತಲುಪಬೇಕು ಎನ್ನುವುದು ನನ್ನ…

1 day ago

SIR ಜಾಗೃತಿ ಹಾಗೂ ಮತದಾರರ ಪಟ್ಟಿಯ ಸಂರಕ್ಷಣೆ ಕಾರ್ಯಕ್ಕೆ ಆದ್ಯತೆ: ಡಿಸಿಎಂ ಡಿ.ಕೆ. ಶಿವಕುಮಾರ್

ದೇವನಹಳ್ಳಿ: ಮತದಾರರ ವಿಶೇಷ ತೀವ್ರ ಪಟ್ಟಿ ಪರಿಷ್ಕರಣೆ (SIR) ಹಾಗೂ ಜಿಬಿಎ ಚುನಾವಣೆ ಸಂಬಂಧ ಪಕ್ಷದ ಎಲ್ಲಾ ಮುಖಂಡರು ಮತ್ತು…

2 days ago

ಸಚಿವ ಸ್ಥಾನ ತ್ಯಾಗ ಮಾಡುವ ವಿಚಾರ “ಹೈಕಮಾಂಡ್ ತೀರ್ಮಾನಕ್ಕೆ ಬದ್ದ”- ಸಚಿವ ಕೆ.ಎಚ್ ಮುನಿಯಪ್ಪ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಕೆ.ಎಚ್ ಮುನಿಯಪ್ಪ ಮಹತ್ವದ ರಾಜಕೀಯ ಹಾಗೂ ಅನ್ನಭಾಗ್ಯ ಯೋಜನೆ…

2 days ago