ಜನರೇ ವಿದ್ಯುತ್ ಉತ್ಪಾದಿಸಿ ಬಳಸಲು ಉತ್ತೇಜನ ನೀಡುವ ಕುಸುಮ್-ಎ (ಪ್ರಧಾನ ಮಂತ್ರಿ ಕಿಸಾನ್ ಉರ್ಜಾ ಸುರಕ್ಷಾ ಏವಮ್ ಉತ್ಥಾನ ಮಹಾಭಿಯಾನ್) ಯೋಜನೆಯನ್ನು ರಾಜ್ಯದಲ್ಲಿ ಜಾರಿಗೆ ತರುವ ಕುರಿತು ಕೇಂದ್ರ ಸರ್ಕಾರದೊಂದಿಗೆ ಮಾತುಕತೆ ನಡೆಸಲು ಉದ್ದೇಶಿಸಲಾಗಿದೆ ಎಂದು ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿಯನ್ನೂ ಹೊಂದಿರುವ ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ.
ಕಡೂರು ಪಟ್ಟಣದ ಟಿಎಪಿಸಿಎಂಎಸ್ ಕಚೇರಿ ಆವರಣದಲ್ಲಿ ಮಂಗಳವಾರ ಟಿಎಪಿಸಿಎಂಎಸ್ನ ಅಮೃತ ಮಹೋತ್ಸವ ಹಾಗೂ ರೈತ ಬಜಾರ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, “ಈಗಾಗಲೇ ರಾಜ್ಯದಲ್ಲಿ ಕುಸುಮ್- ಬಿ (ರೈತರಿಗೆ ಸೋಲಾರ್ ಕೃಷಿ ಪಂಪ್ ಸೆಟ್) ಮತ್ತು ಕುಸುಮ್-ಸಿ (ಕೃಷಿ ಫೀಡರ್ ಗಳ ಸೌರೀಕರಣ) ಯೋಜನೆ ಅನುಷ್ಠಾನದಲ್ಲಿದೆ. ಇದರೊಂದಿಗೆ ಕುಸುಮ್- ಎ ಯೋಜನೆಯನ್ನೂ ಜಾರಿಗೊಳಿಸುವ ಕುರಿತು ಯೋಚಿಸಲಾಗಿದೆ”, ಎಂದರು.
“ಕುಸುಮ್- ಎ ಯೋಜನೆಯಡಿ ರೈತರು, ರೈತರ ಗುಂಪುಗಳು, ಸಹಕಾರಿ ಸಂಸ್ಥೆಗಳು, ಪಂಚಾಯತ್ಗಳು, ರೈತ ಉತ್ಪಾದಕರ ಸಂಸ್ಥೆಗಳು, ನೀರು ಬಳಕೆದಾರರ ಸಂಘಗಳು ವಿದ್ಯುತ್ ಉಪ ಕೇಂದ್ರಗಳಿಂದ 5 ಕಿ.ಮೀ. ಒಳಗೆ 500 ಕಿಲೋ ವ್ಯಾಟ್ ನಿಂದ ಗರಿಷ್ಠ 2 ಮೆಗಾ ವ್ಯಾಟ್ ವರೆಗೆ ಸೌರ ವಿದ್ಯುತ್ ಸ್ಥಾವರಗಳನ್ನು ಸ್ಥಾಪಿಸಬಹುದು. ಅಲ್ಲಿ ಉತ್ಪಾದನೆಯಾಗುವ ವಿದ್ಯುತ್ತನ್ನು ಅವರೇ ಬಳಸಿಕೊಳ್ಳಬಹುದು. ಹೆಚ್ಚುವರಿ ವಿದ್ಯುತ್ತನ್ನು ಸರ್ಕಾರ ಖರೀದಿಸುತ್ತದೆ. ಇದರಿಂದ ವಿದ್ಯುತ್ ಸಮಸ್ಯೆಗೆ ಪರಿಹಾರ ಸಿಗುತ್ತದೆ. ರೈತರಿಗೂ ಆದಾಯ ಬರುತ್ತದೆ. ಈ ಹಿನ್ನೆಲೆಯಲ್ಲಿ ಕುಸುಮ್- ಎ ಯೋಜನೆ ಜಾರಿಗೊಳಿಸುವ ಬಗ್ಗೆ ಕೇಂದ್ರ ಸಚಿವರೊಂದಿಗೆ ಮಾತುಕತೆ ನಡೆಸಲಾಗುವುದು”, ಎಂದು ತಿಳಿಸಿದರು.
“ರೈತರಿಗೆ ಸಬ್ಸಿಡಿ ಮೂಲಕ ಸೋಲಾರ್ ಪಂಪ್ ಸೆಟ್ ನೀಡುವ ಕುಸುಮ್- ಬಿ ಯೋಜನೆ ಈಗಾಗಲೇ ಜಾರಿಯಲ್ಲಿದೆ. ರೈತರು ಬೋರ್ ವೆಲ್ ಕೊರೆಸಿ ಅದರಲ್ಲಿ ನೀರು ಲಭ್ಯವಾದರೆ ಆನ್ ಲೈನ್ನಲ್ಲಿ ಅರ್ಜಿ ಸಲ್ಲಿಸಬೇಕು. ಈ ಪ್ರಕ್ರಿಯೆ ಪರಿಶೀಲನೆ ನಡೆಸಿ ಯೋಜನೆ ಕಾರ್ಯರೂಪಕ್ಕೆ ತರಲು 12 ಮಂದಿ ಗುತ್ತಿಗೆದಾರರನ್ನು ಗುರುತು ಮಾಡಲಾಗಿದೆ. ಅವರುಗಳು ಬೋರ್ವೆಲ್ಗೆ ಮೋಟಾರ್, ಪ್ಯಾನಲ್ ಹಾಗೂ ಪೈಪ್ ಅಳವಡಿಸಲಿದ್ದಾರೆ. ಇದಕ್ಕೆ ತಗಲುವ ವೆಚ್ಚದಲ್ಲಿ ಶೇ. 20 ರಷ್ಟು ಹಣವನ್ನು ರೈತರು ಭರಿಸಬೇಕು, ಇನ್ನುಳಿದ ಶೇ. 50 ರಷ್ಟು ಹಣ ರಾಜ್ಯ ಸರ್ಕಾರ ಭರಿಸುತ್ತದೆ. ಇನ್ನುಳಿಕೆ ಹಣವನ್ನು ಕೇಂದ್ರ ಸರ್ಕಾರ ಭರಿಸಲಿದೆ ಡಿಸೆಂಬರ್ ಅಂತ್ಯದವರೆಗೆ 40 ಸಾವಿರ ಪಂಪ್ ಸೆಟ್ ಅಳವಡಿಸಲು ಕೇಂದ್ರ ಸರ್ಕಾರ ಅನುಮತಿ ನೀಡಿದೆ”, ಎಂದರು.
ಕಡೂರು ಶಾಸಕ ಕೆ.ಎಸ್.ಆನಂದ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಭದ್ರಾ- ಕಾಡಾ ಅಧ್ಯಕ್ಷ ಡಾ.ಅಂಶುಮಂತ್, ಪುರಸಭೆ ಅಧ್ಯಕ್ಷ ಭಂಡಾರಿ ಶ್ರೀನಿವಾಸ್ ಹಾಗೂ ಪುರಸಭೆ ಸದಸ್ಯರು ಉಪಸ್ಥಿತರಿದ್ದರು.
ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…
ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…
ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…
ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…
ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…