ಜನರೇ ವಿದ್ಯುತ್ ಉತ್ಪಾದಿಸಿ ಬಳಸಲು ಉತ್ತೇಜನ ನೀಡುವ ಕುಸುಮ್-ಎ (ಪ್ರಧಾನ ಮಂತ್ರಿ ಕಿಸಾನ್ ಉರ್ಜಾ ಸುರಕ್ಷಾ ಏವಮ್ ಉತ್ಥಾನ ಮಹಾಭಿಯಾನ್) ಯೋಜನೆಯನ್ನು ರಾಜ್ಯದಲ್ಲಿ ಜಾರಿಗೆ ತರುವ ಕುರಿತು ಕೇಂದ್ರ ಸರ್ಕಾರದೊಂದಿಗೆ ಮಾತುಕತೆ ನಡೆಸಲು ಉದ್ದೇಶಿಸಲಾಗಿದೆ ಎಂದು ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿಯನ್ನೂ ಹೊಂದಿರುವ ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ.
ಕಡೂರು ಪಟ್ಟಣದ ಟಿಎಪಿಸಿಎಂಎಸ್ ಕಚೇರಿ ಆವರಣದಲ್ಲಿ ಮಂಗಳವಾರ ಟಿಎಪಿಸಿಎಂಎಸ್ನ ಅಮೃತ ಮಹೋತ್ಸವ ಹಾಗೂ ರೈತ ಬಜಾರ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, “ಈಗಾಗಲೇ ರಾಜ್ಯದಲ್ಲಿ ಕುಸುಮ್- ಬಿ (ರೈತರಿಗೆ ಸೋಲಾರ್ ಕೃಷಿ ಪಂಪ್ ಸೆಟ್) ಮತ್ತು ಕುಸುಮ್-ಸಿ (ಕೃಷಿ ಫೀಡರ್ ಗಳ ಸೌರೀಕರಣ) ಯೋಜನೆ ಅನುಷ್ಠಾನದಲ್ಲಿದೆ. ಇದರೊಂದಿಗೆ ಕುಸುಮ್- ಎ ಯೋಜನೆಯನ್ನೂ ಜಾರಿಗೊಳಿಸುವ ಕುರಿತು ಯೋಚಿಸಲಾಗಿದೆ”, ಎಂದರು.
“ಕುಸುಮ್- ಎ ಯೋಜನೆಯಡಿ ರೈತರು, ರೈತರ ಗುಂಪುಗಳು, ಸಹಕಾರಿ ಸಂಸ್ಥೆಗಳು, ಪಂಚಾಯತ್ಗಳು, ರೈತ ಉತ್ಪಾದಕರ ಸಂಸ್ಥೆಗಳು, ನೀರು ಬಳಕೆದಾರರ ಸಂಘಗಳು ವಿದ್ಯುತ್ ಉಪ ಕೇಂದ್ರಗಳಿಂದ 5 ಕಿ.ಮೀ. ಒಳಗೆ 500 ಕಿಲೋ ವ್ಯಾಟ್ ನಿಂದ ಗರಿಷ್ಠ 2 ಮೆಗಾ ವ್ಯಾಟ್ ವರೆಗೆ ಸೌರ ವಿದ್ಯುತ್ ಸ್ಥಾವರಗಳನ್ನು ಸ್ಥಾಪಿಸಬಹುದು. ಅಲ್ಲಿ ಉತ್ಪಾದನೆಯಾಗುವ ವಿದ್ಯುತ್ತನ್ನು ಅವರೇ ಬಳಸಿಕೊಳ್ಳಬಹುದು. ಹೆಚ್ಚುವರಿ ವಿದ್ಯುತ್ತನ್ನು ಸರ್ಕಾರ ಖರೀದಿಸುತ್ತದೆ. ಇದರಿಂದ ವಿದ್ಯುತ್ ಸಮಸ್ಯೆಗೆ ಪರಿಹಾರ ಸಿಗುತ್ತದೆ. ರೈತರಿಗೂ ಆದಾಯ ಬರುತ್ತದೆ. ಈ ಹಿನ್ನೆಲೆಯಲ್ಲಿ ಕುಸುಮ್- ಎ ಯೋಜನೆ ಜಾರಿಗೊಳಿಸುವ ಬಗ್ಗೆ ಕೇಂದ್ರ ಸಚಿವರೊಂದಿಗೆ ಮಾತುಕತೆ ನಡೆಸಲಾಗುವುದು”, ಎಂದು ತಿಳಿಸಿದರು.
“ರೈತರಿಗೆ ಸಬ್ಸಿಡಿ ಮೂಲಕ ಸೋಲಾರ್ ಪಂಪ್ ಸೆಟ್ ನೀಡುವ ಕುಸುಮ್- ಬಿ ಯೋಜನೆ ಈಗಾಗಲೇ ಜಾರಿಯಲ್ಲಿದೆ. ರೈತರು ಬೋರ್ ವೆಲ್ ಕೊರೆಸಿ ಅದರಲ್ಲಿ ನೀರು ಲಭ್ಯವಾದರೆ ಆನ್ ಲೈನ್ನಲ್ಲಿ ಅರ್ಜಿ ಸಲ್ಲಿಸಬೇಕು. ಈ ಪ್ರಕ್ರಿಯೆ ಪರಿಶೀಲನೆ ನಡೆಸಿ ಯೋಜನೆ ಕಾರ್ಯರೂಪಕ್ಕೆ ತರಲು 12 ಮಂದಿ ಗುತ್ತಿಗೆದಾರರನ್ನು ಗುರುತು ಮಾಡಲಾಗಿದೆ. ಅವರುಗಳು ಬೋರ್ವೆಲ್ಗೆ ಮೋಟಾರ್, ಪ್ಯಾನಲ್ ಹಾಗೂ ಪೈಪ್ ಅಳವಡಿಸಲಿದ್ದಾರೆ. ಇದಕ್ಕೆ ತಗಲುವ ವೆಚ್ಚದಲ್ಲಿ ಶೇ. 20 ರಷ್ಟು ಹಣವನ್ನು ರೈತರು ಭರಿಸಬೇಕು, ಇನ್ನುಳಿದ ಶೇ. 50 ರಷ್ಟು ಹಣ ರಾಜ್ಯ ಸರ್ಕಾರ ಭರಿಸುತ್ತದೆ. ಇನ್ನುಳಿಕೆ ಹಣವನ್ನು ಕೇಂದ್ರ ಸರ್ಕಾರ ಭರಿಸಲಿದೆ ಡಿಸೆಂಬರ್ ಅಂತ್ಯದವರೆಗೆ 40 ಸಾವಿರ ಪಂಪ್ ಸೆಟ್ ಅಳವಡಿಸಲು ಕೇಂದ್ರ ಸರ್ಕಾರ ಅನುಮತಿ ನೀಡಿದೆ”, ಎಂದರು.
ಕಡೂರು ಶಾಸಕ ಕೆ.ಎಸ್.ಆನಂದ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಭದ್ರಾ- ಕಾಡಾ ಅಧ್ಯಕ್ಷ ಡಾ.ಅಂಶುಮಂತ್, ಪುರಸಭೆ ಅಧ್ಯಕ್ಷ ಭಂಡಾರಿ ಶ್ರೀನಿವಾಸ್ ಹಾಗೂ ಪುರಸಭೆ ಸದಸ್ಯರು ಉಪಸ್ಥಿತರಿದ್ದರು.
ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…
ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…
ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್ಬುಕ್, ಸಿಹಿ,…
ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…
ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…