Categories: ರಾಜ್ಯ

ರಾಜ್ಯದಲ್ಲಿ “ಕುಸುಮ್- ಎ” ಜಾರಿ ಕುರಿತು ಕೇಂದ್ರದ ಜತೆ ಮಾತುಕತೆ- ಸಚಿವ ಕೆ.ಜೆ.ಜಾರ್ಜ್

ಜನರೇ ವಿದ್ಯುತ್ ಉತ್ಪಾದಿಸಿ ಬಳಸಲು ಉತ್ತೇಜನ ನೀಡುವ ಕುಸುಮ್-ಎ (ಪ್ರಧಾನ ಮಂತ್ರಿ ಕಿಸಾನ್ ಉರ್ಜಾ ಸುರಕ್ಷಾ ಏವಮ್ ಉತ್ಥಾನ ಮಹಾಭಿಯಾನ್) ಯೋಜನೆಯನ್ನು ರಾಜ್ಯದಲ್ಲಿ ಜಾರಿಗೆ ತರುವ ಕುರಿತು ಕೇಂದ್ರ ಸರ್ಕಾರದೊಂದಿಗೆ ಮಾತುಕತೆ ನಡೆಸಲು ಉದ್ದೇಶಿಸಲಾಗಿದೆ ಎಂದು ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿಯನ್ನೂ ಹೊಂದಿರುವ ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ.

ಕಡೂರು ಪಟ್ಟಣದ ಟಿಎಪಿಸಿಎಂಎಸ್ ಕಚೇರಿ ಆವರಣದಲ್ಲಿ ಮಂಗಳವಾರ ಟಿಎಪಿಸಿಎಂಎಸ್‌ನ ಅಮೃತ ಮಹೋತ್ಸವ ಹಾಗೂ ರೈತ ಬಜಾರ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, “ಈಗಾಗಲೇ ರಾಜ್ಯದಲ್ಲಿ ಕುಸುಮ್- ಬಿ (ರೈತರಿಗೆ ಸೋಲಾರ್ ಕೃಷಿ ಪಂಪ್ ಸೆಟ್) ಮತ್ತು ಕುಸುಮ್-ಸಿ (ಕೃಷಿ ಫೀಡರ್ ಗಳ ಸೌರೀಕರಣ) ಯೋಜನೆ ಅನುಷ್ಠಾನದಲ್ಲಿದೆ. ಇದರೊಂದಿಗೆ ಕುಸುಮ್- ಎ ಯೋಜನೆಯನ್ನೂ ಜಾರಿಗೊಳಿಸುವ ಕುರಿತು ಯೋಚಿಸಲಾಗಿದೆ”, ಎಂದರು.

“ಕುಸುಮ್- ಎ ಯೋಜನೆಯಡಿ ರೈತರು, ರೈತರ ಗುಂಪುಗಳು, ಸಹಕಾರಿ ಸಂಸ್ಥೆಗಳು, ಪಂಚಾಯತ್‌ಗಳು, ರೈತ ಉತ್ಪಾದಕರ ಸಂಸ್ಥೆಗಳು, ನೀರು ಬಳಕೆದಾರರ ಸಂಘಗಳು ವಿದ್ಯುತ್ ಉಪ ಕೇಂದ್ರಗಳಿಂದ 5 ಕಿ.ಮೀ. ಒಳಗೆ 500 ಕಿಲೋ ವ್ಯಾಟ್ ನಿಂದ ಗರಿಷ್ಠ 2 ಮೆಗಾ ವ್ಯಾಟ್ ವರೆಗೆ ಸೌರ ವಿದ್ಯುತ್ ಸ್ಥಾವರಗಳನ್ನು ಸ್ಥಾಪಿಸಬಹುದು. ಅಲ್ಲಿ ಉತ್ಪಾದನೆಯಾಗುವ ವಿದ್ಯುತ್ತನ್ನು ಅವರೇ ಬಳಸಿಕೊಳ್ಳಬಹುದು. ಹೆಚ್ಚುವರಿ ವಿದ್ಯುತ್ತನ್ನು ಸರ್ಕಾರ ಖರೀದಿಸುತ್ತದೆ. ಇದರಿಂದ ವಿದ್ಯುತ್ ಸಮಸ್ಯೆಗೆ ಪರಿಹಾರ ಸಿಗುತ್ತದೆ. ರೈತರಿಗೂ ಆದಾಯ ಬರುತ್ತದೆ. ಈ ಹಿನ್ನೆಲೆಯಲ್ಲಿ ಕುಸುಮ್- ಎ ಯೋಜನೆ ಜಾರಿಗೊಳಿಸುವ ಬಗ್ಗೆ ಕೇಂದ್ರ ಸಚಿವರೊಂದಿಗೆ ಮಾತುಕತೆ ನಡೆಸಲಾಗುವುದು”, ಎಂದು ತಿಳಿಸಿದರು.

“ರೈತರಿಗೆ ಸಬ್ಸಿಡಿ ಮೂಲಕ ಸೋಲಾರ್ ಪಂಪ್ ಸೆಟ್ ನೀಡುವ ಕುಸುಮ್- ಬಿ ಯೋಜನೆ ಈಗಾಗಲೇ ಜಾರಿಯಲ್ಲಿದೆ. ರೈತರು ಬೋರ್ ವೆಲ್ ಕೊರೆಸಿ ಅದರಲ್ಲಿ ನೀರು ಲಭ್ಯವಾದರೆ ಆನ್ ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕು. ಈ ಪ್ರಕ್ರಿಯೆ ಪರಿಶೀಲನೆ ನಡೆಸಿ ಯೋಜನೆ ಕಾರ್ಯರೂಪಕ್ಕೆ ತರಲು 12 ಮಂದಿ ಗುತ್ತಿಗೆದಾರರನ್ನು ಗುರುತು ಮಾಡಲಾಗಿದೆ. ಅವರುಗಳು ಬೋರ್‌ವೆಲ್‌ಗೆ ಮೋಟಾರ್, ಪ್ಯಾನಲ್ ಹಾಗೂ ಪೈಪ್ ಅಳವಡಿಸಲಿದ್ದಾರೆ. ಇದಕ್ಕೆ ತಗಲುವ ವೆಚ್ಚದಲ್ಲಿ ಶೇ. 20 ರಷ್ಟು ಹಣವನ್ನು ರೈತರು ಭರಿಸಬೇಕು, ಇನ್ನುಳಿದ ಶೇ. 50 ರಷ್ಟು ಹಣ ರಾಜ್ಯ ಸರ್ಕಾರ ಭರಿಸುತ್ತದೆ. ಇನ್ನುಳಿಕೆ ಹಣವನ್ನು ಕೇಂದ್ರ ಸರ್ಕಾರ ಭರಿಸಲಿದೆ ಡಿಸೆಂಬರ್ ಅಂತ್ಯದವರೆಗೆ 40 ಸಾವಿರ ಪಂಪ್ ಸೆಟ್‌ ಅಳವಡಿಸಲು ಕೇಂದ್ರ ಸರ್ಕಾರ ಅನುಮತಿ ನೀಡಿದೆ”, ಎಂದರು.

ಕಡೂರು ಶಾಸಕ ಕೆ.ಎಸ್.ಆನಂದ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಭದ್ರಾ- ಕಾಡಾ ಅಧ್ಯಕ್ಷ ಡಾ.ಅಂಶುಮಂತ್, ಪುರಸಭೆ ಅಧ್ಯಕ್ಷ ಭಂಡಾರಿ ಶ್ರೀನಿವಾಸ್ ಹಾಗೂ ಪುರಸಭೆ ಸದಸ್ಯರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಸುಮಾರು 500 ಕೋಟಿ ಮೌಲ್ಯದ ಜಮೀನು ಖಾತೆ ಬದಲಾವಣೆ ಆರೋಪ: ದೊಡ್ಡಬಳ್ಳಾಪುರ ಉಪವಿಭಾಗದ ಹಿಂದಿನ ಎಸಿ ದುರ್ಗಾಶ್ರೀ ಹಾಗೂ ಕಚೇರಿ ಸಿಬ್ಬಂದಿ ವಿರುದ್ದ ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲು

ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…

11 hours ago

ಹೂ ಕೀಳುವಾಗ ಹಾವು ಕಚ್ಚಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…

11 hours ago

ದೇವರಾಜ ಅರಸು ಅವರ ಆಶಯಗಳಿಗೆ ಧ್ವನಿಯಾಗೋಣ-ಡಿಸಿ ಡಾ. ಕೆ.ಎನ್ ಅನುರಾಧ

ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…

13 hours ago

ಅಂಗನವಾಡಿ ಕಟ್ಟಡ ಅರ್ಧಕ್ಕೆ; ಬಾಡಿಗೆ ಮನೆಯಲ್ಲಿ 30 ಕಂದಮ್ಮಗಳ ಪರದಾಟ: 17.50 ಲಕ್ಷ ವೆಚ್ಚದ ಕಾಮಗಾರಿ ಪೂರ್ಣಗೊಳಿಸದೆ ನಿರ್ಲಕ್ಷ್ಯ ಆರೋಪ

ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…

13 hours ago

ಮೀಸಲಾತಿ ಘೋಷಣೆ ಬೆನ್ನಲ್ಲೇ ಗ್ರಾಮಾಂತರದಲ್ಲಿ ಚುನಾವಣಾ ಕಾವು: ಹಳ್ಳಿಗಳಲ್ಲಿ ಚುರುಕಾದ ರಾಜಕೀಯ ಚಟುವಟಿಕೆ: ಆಕಾಂಕ್ಷಿಗಳಿಂದ ಲೆಕ್ಕಾಚಾರ ಆರಂಭ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…

20 hours ago

ಹೆದ್ದಾರಿ ಸರ್ವೀಸ್ ರಸ್ತೆಗಳಲ್ಲಿ ಭಾರೀ ವಾಹನಗಳ ಅನಧಿಕೃತ ನಿಲುಗಡೆ: ಸಾರ್ವಜನಿಕರ ಜೀವದೊಂದಿಗೆ ಚೆಲ್ಲಾಟ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…

2 days ago