ರಾಜ್ಯದಲ್ಲಿ ಡ್ರಗ್ಸ್ ಜಾಲದ ಬೇರುಗಳನ್ನೇ ಕತ್ತರಿಸಲು ತೀರ್ಮಾನ ಮಾಡಿದ್ದೇವೆ. ಡ್ರಗ್ಸ್ ಮುಕ್ತ ಕರ್ನಾಟಕ ನಮ್ಮ ಗುರಿ, ಇದಕ್ಕಾಗಿ ಇನ್ನಷ್ಟು ಕಠಿಣ, ನಿರ್ದಾಕ್ಷಿಣ್ಯವಾದ ಕ್ರಮಗಳನ್ನು ಕೈಗೊಳ್ಳಲು ಇಂದು ನಿರ್ಧರಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ರಾಜ್ಯದಲ್ಲಿ ಡ್ರಗ್ಸ್ ಹಾವಳಿ ನಿಯಂತ್ರಣ ಸಂಬಂಧ ವಿವಿಧ ಇಲಾಖೆಗಳ ಸಚಿವರು ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ಸಭೆ ನಡೆಸಿ, ನಂತರ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು.
ಗೃಹ ಸಚಿವರ ನೇತೃತ್ವದಲ್ಲಿ ಟಾಸ್ಕ್ ಫೋರ್ಸ್ ರಚನೆ ಮಾಡಲಾಗಿದ್ದು, ಮೇಲಿಂದ ಮೇಲೆ ಸಭೆಗಳನ್ನು ನಡೆಸಿ, ಅಗತ್ಯ ಕಾರ್ಯತಂತ್ರ ರೂಪಿಸಲು ಸೂಚನೆ ನೀಡಲಾಗಿದೆ. ಟಾಸ್ಕ್ ಫೋರ್ಸ್ ನಲ್ಲಿ ಆರೋಗ್ಯ ಸಚಿವರು, ಶಿಕ್ಷಣ ಸಚಿವರು, ವೈದ್ಯಕೀಯ ಶಿಕ್ಷಣ ಸಚಿವರು ಇರುತ್ತಾರೆ ಎಂದರು.
ಠಾಣಾಧಿಕಾರಿಗಳಿಗೆ ಗೊತ್ತಿಲ್ಲದೆ ಡ್ರಗ್ಸ್ ದಂಧೆ ನಡೆಯಲು ಸಾಧ್ಯವಿಲ್ಲ. ಹೀಗಾಗಿ ಠಾಣಾಧಿಕಾರಿ ಡಿವೈಎಸ್ಪಿ, ಎಸಿಪಿ ಮತ್ತು ಎಸ್.ಪಿ ಗಳನ್ನು ಹೊಣೆ ಮಾಡಲು ತೀರ್ಮಾನಿಸಿದ್ದೇವೆ. ಕರ್ತವ್ಯಲೋಪವಾದಲ್ಲಿ ಇವರ ವಿರುದ್ಧ ಕ್ರಮ ಖಚಿತ ಎಂದು ತಿಳಿಸಿದರು.
ಪೆಡ್ಲರ್ ಗಳಿಗೆ ಜೀವಾವಧಿ ಶಿಕ್ಷೆಯವರೆಗೂ ಕಠಿಣ ಶಿಕ್ಷೆ ವಿಧಿಸಲು ಕಾನೂನು ತಿದ್ದುಪಡಿಗೆ ಕ್ರಮ ವಹಿಸಲಾಗುವುದು. ಈಗ ಜಾರಿ ಇರುವ ಕಾನೂನನ್ನು ಇನ್ನಷ್ಟು ಪರಿಣಾಮಕಾರಿಯಾಗಿಸುವ ನಿಟ್ಟಿನಲ್ಲಿ ಮೊದಲು ಪ್ರಯತ್ನ ಮಾಡುತ್ತೇವೆ. ಇದರ ಬಳಿಕವೂ ಅಗತ್ಯಬಿದ್ದರೆ ಹೊಸ ಕಾನೂನು ಮಾಡುತ್ತೇವೆ ಎಂದರು.
ಎನ್.ಸಿ.ಸಿ, ಎನ್.ಜಿ.ಒ ಗಳನ್ನು ಬಲಗೊಳಿಸುವುದನ್ನು ಗುರಿಯಾಗಿಸಿಕೊಂಡಿದ್ದೇವೆ. ಪುನರ್ವಸತಿ ಕೇಂದ್ರಗಳನ್ನು ಹೆಚ್ಚಿಸಲು, ಸಮರ್ಪಕಗೊಳಿಸಲು ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಹೇಳಿದರು.
ಡ್ರಗ್ಸ್ ಹಾವಳಿ ತೊಡೆದು ಹಾಕಲು ಕ್ಷಿಪ್ರ ಮತ್ತು ತೀಕ್ಷ್ಣ ಕ್ರಮ ಕೈಗೊಳ್ಳುತ್ತೇವೆ. ವಿದ್ಯಾರ್ಥಿ, ಯುವ ಜನರ ಮೇಲೆ, ಕುಟುಂಬಗಳ ಮೇಲೆ ಕೆಟ್ಟ ಪರಿಣಾಮ ಬೀರುತ್ತಿರುವುದನ್ನು ತಡೆಯಲು ಕ್ರಮ ವಹಿಸಲಾಗುವುದು ಎಂದು ತಿಳಿಸಿದರು.
ಡ್ರಗ್ಸ್ ಸೇವಿಸಿ ಅಪರಾಧ ಕೃತ್ಯಗಳಲ್ಲಿ ತೊಡಗಿಸಿಕೊಳ್ಳುವ ಪ್ರಕರಣಗಳಿಗೆ ಬ್ರೇಕ್ ಹಾಕುತ್ತೇವೆ. ಪೊಲೀಸರಿಗೆ ಪೂರ್ಣ ಸ್ವಾತಂತ್ರ್ಯ ಕೊಡುವ ಜೊತೆಗೆ ಅವರನ್ನೇ ಹೊಣೆ ಮಾಡಿ ಕ್ರಮ ಕೂಡ ತೆಗೆದುಕೊಳ್ಳುತ್ತೇವೆ ಎಂದರು.
ಗೃಹ ಇಲಾಖೆ, ಆರೋಗ್ಯ ಇಲಾಖೆ, ವೈದ್ಯಕೀಯ ಶಿಕ್ಷಣ ಇಲಾಖೆ, ಗ್ರಾಮೀಣಾಭಿವೃದ್ಧಿ, ಸಮಾಜ ಕಲ್ಯಾಣ ಇಲಾಖೆ ಸೇರಿ ಹಲವು ಇಲಾಖೆಗಳ ಸಚಿವರು, ಅಧಿಕಾರಿಗಳ ಜೊತೆ ಉನ್ನತ ಮಟ್ಟದ ಸಭೆ ನಡೆಸಿ ಹಲವು ಕ್ಷಿಪ್ರ ತೀರ್ಮಾನಗಳನ್ನು ಕೈಗೊಂಡಿದ್ದೇವೆ ಎಂದು ಹೇಳಿದರು.
ವಿದ್ಯಾರ್ಥಿ-ಯುವ ಜನರ, ಪೋಷಕರ ಸಹಭಾಗಿತ್ವದಲ್ಲಿ ಮಾಹಿತಿ ಸಂಗ್ರಹಿಸಿ ಡ್ರಗ್ಸ್ ಹಾವಳಿಗೆ ಬ್ರೇಕ್ ಹಾಕುವ ಬಗ್ಗೆ ಗಂಭೀರ ಚರ್ಚೆ ನಡೆಸಿದ್ದೇವೆ. ಈಗಾಗಲೇ ಇರುವ ರಾಜ್ಯ ಮಟ್ಟದ ಸಮಿತಿಯಿಂದ ಮಾಹಿತಿ, ಅಭಿಪ್ರಾಯ ಸಂಗ್ರಹಿಸಿದ್ದೇವೆ ಎಂದು ತಿಳಿಸಿದರು.
ಬೆಂಗಳೂರು EAST ವಿಭಾಗದಲ್ಲಿ ಡ್ರಗ್ಸ್ ಹಾವಳಿ ತೀವ್ರವಾಗಿದೆ ಎನ್ನುವ ಮಾಹಿತಿ ಸಿಕ್ಕಿದೆ. ಇದಕ್ಕೆ ಬಲಿ ಹಾಕಲು ನಿರ್ಣಯ ಮಾಡಿದ್ದೇವೆ. ಒರಿಸ್ಸಾ, ಆಂಧ್ರ, ಉತ್ತರ ಪ್ರದೇಶ ಸೇರಿ ಹಲವು ರಾಜ್ಯಗಳಿಂದ ಮಾದಕ ವಸ್ತು ರಾಜ್ಯಕ್ಕೆ ಪೂರೈಕೆ ಆಗುತ್ತಿದೆ. ಇದನ್ನು ತಡೆಯಲು ಹೊಸ ಕಾರ್ಯತಂತ್ರ ರೂಪಿಸುತ್ತಿದ್ದೇವೆ ಎಂದರು.
ಜಾಗೃತಿ ಮತ್ತು ಕಾರ್ಯಾಚರಣೆಯನ್ನು ಇನ್ನಷ್ಟು ತೀವ್ರವಾಗಿ ನಡೆಸಲು ಸ್ಪಷ್ಟ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.
ಸಮಾಜವನ್ನು ಇನ್ನಿಲ್ಲದಂತೆ ಕಾಡುತ್ತಿರುವ ಮಾದಕ ದ್ರವ್ಯ ಪಿಡುಗಿಗೆ ಕೊನೆಹಾಡುವ ಸಂಕಲ್ಪದೊಂದಿಗೆ ಗೃಹ ಸಚಿವರಾದ ಡಾ.ಜಿ. ಪರಮೇಶ್ವರ ಅವರ ಅಧ್ಯಕ್ಷತೆಯಲ್ಲಿ ಹಲವು ಸಚಿವರನ್ನು ಒಳಗೊಂಡ ಕಾರ್ಯಪಡೆಯನ್ನು ರಚಿಸಿ, ಆದೇಶ ಹೊರಡಿಸಲಾಗಿದೆ ಎಂದರು.
ಡ್ರಗ್ಸ್ ಹಾವಳಿ ನಿರ್ಮೂಲನೆಯ ಹೊಣೆ ಕೇವಲ ನಮ್ಮೊಬ್ಬರದ್ದಲ್ಲ, ಇದು ಸಮುದಾಯಿಕ ಜವಾಬ್ದಾರಿ. ಡ್ರಗ್ಸ್ ಮಾರಾಟ ಮತ್ತು ಸೇವನೆ ಕಂಡುಬಂದಲ್ಲಿ ಸಮೀಪದ ಪೊಲೀಸ್ ಠಾಣೆಗೆ ಮಾಹಿತಿ ನೀಡಿ, ನಮ್ಮ ಪ್ರಯತ್ನಕ್ಕೆ ಬೆಂಬಲವಾಗಿ ನಿಲ್ಲಿ. ಮಾಹಿತಿ ನೀಡಿದವರ ಹೆಸರನ್ನು ಗೌಪ್ಯವಾಗಿಡಲಾಗುವುದು ಎಂದರು.
ನಾವು – ನೀವು ಜೊತೆಗೂಡಿ ಡ್ರಗ್ಸ್ ಮುಕ್ತ – ಸ್ವಸ್ಥ ಕರ್ನಾಟಕ ನಿರ್ಮಿಸೋಣ ಎಂದು ಹೇಳಿದ್ದಾರೆ.
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…
ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…
ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…