ರಾಜ್ಯದಲ್ಲಿ ಡ್ರಗ್ಸ್ ಜಾಲದ ಬೇರುಗಳನ್ನೇ ಕತ್ತರಿಸಲು ತೀರ್ಮಾನ ಮಾಡಿದ್ದೇವೆ-ಸಿಎಂ ಸಿದ್ದರಾಮಯ್ಯ

ರಾಜ್ಯದಲ್ಲಿ ಡ್ರಗ್ಸ್ ಜಾಲದ ಬೇರುಗಳನ್ನೇ ಕತ್ತರಿಸಲು ತೀರ್ಮಾನ ಮಾಡಿದ್ದೇವೆ. ಡ್ರಗ್ಸ್ ಮುಕ್ತ ಕರ್ನಾಟಕ ನಮ್ಮ ಗುರಿ, ಇದಕ್ಕಾಗಿ ಇನ್ನಷ್ಟು ಕಠಿಣ, ನಿರ್ದಾಕ್ಷಿಣ್ಯವಾದ ಕ್ರಮಗಳನ್ನು ಕೈಗೊಳ್ಳಲು ಇಂದು ನಿರ್ಧರಿಸಲಾಗಿದೆ ಎಂದು‌ ಸಿಎಂ ಸಿದ್ದರಾಮಯ್ಯ ಹೇಳಿದರು.

ರಾಜ್ಯದಲ್ಲಿ ಡ್ರಗ್ಸ್ ಹಾವಳಿ ನಿಯಂತ್ರಣ ಸಂಬಂಧ ವಿವಿಧ ಇಲಾಖೆಗಳ ಸಚಿವರು ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ಸಭೆ ನಡೆಸಿ, ನಂತರ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು.

ಗೃಹ ಸಚಿವರ ನೇತೃತ್ವದಲ್ಲಿ ಟಾಸ್ಕ್ ಫೋರ್ಸ್ ರಚನೆ ಮಾಡಲಾಗಿದ್ದು, ಮೇಲಿಂದ ಮೇಲೆ ಸಭೆಗಳನ್ನು ನಡೆಸಿ, ಅಗತ್ಯ ಕಾರ್ಯತಂತ್ರ ರೂಪಿಸಲು ಸೂಚನೆ ನೀಡಲಾಗಿದೆ. ಟಾಸ್ಕ್ ಫೋರ್ಸ್ ನಲ್ಲಿ ಆರೋಗ್ಯ ಸಚಿವರು, ಶಿಕ್ಷಣ ಸಚಿವರು, ವೈದ್ಯಕೀಯ ಶಿಕ್ಷಣ ಸಚಿವರು ಇರುತ್ತಾರೆ ಎಂದರು.

ಠಾಣಾಧಿಕಾರಿಗಳಿಗೆ ಗೊತ್ತಿಲ್ಲದೆ ಡ್ರಗ್ಸ್ ದಂಧೆ ನಡೆಯಲು ಸಾಧ್ಯವಿಲ್ಲ. ಹೀಗಾಗಿ ಠಾಣಾಧಿಕಾರಿ ಡಿವೈಎಸ್‌ಪಿ, ಎಸಿಪಿ ಮತ್ತು ಎಸ್.ಪಿ ಗಳನ್ನು ಹೊಣೆ ಮಾಡಲು ತೀರ್ಮಾನಿಸಿದ್ದೇವೆ. ಕರ್ತವ್ಯಲೋಪವಾದಲ್ಲಿ ಇವರ ವಿರುದ್ಧ ಕ್ರಮ ಖಚಿತ ಎಂದು ತಿಳಿಸಿದರು.

ಪೆಡ್ಲರ್ ಗಳಿಗೆ ಜೀವಾವಧಿ ಶಿಕ್ಷೆಯವರೆಗೂ ಕಠಿಣ ಶಿಕ್ಷೆ ವಿಧಿಸಲು ಕಾನೂನು ತಿದ್ದುಪಡಿಗೆ ಕ್ರಮ ವಹಿಸಲಾಗುವುದು. ಈಗ ಜಾರಿ ಇರುವ ಕಾನೂನನ್ನು ಇನ್ನಷ್ಟು ಪರಿಣಾಮಕಾರಿಯಾಗಿಸುವ ನಿಟ್ಟಿನಲ್ಲಿ ಮೊದಲು ಪ್ರಯತ್ನ ಮಾಡುತ್ತೇವೆ. ಇದರ ಬಳಿಕವೂ ಅಗತ್ಯಬಿದ್ದರೆ ಹೊಸ ಕಾನೂನು ಮಾಡುತ್ತೇವೆ ಎಂದರು.

ಎನ್.ಸಿ.ಸಿ, ಎನ್.ಜಿ.ಒ ಗಳನ್ನು ಬಲಗೊಳಿಸುವುದನ್ನು ಗುರಿಯಾಗಿಸಿಕೊಂಡಿದ್ದೇವೆ. ಪುನರ್ವಸತಿ ಕೇಂದ್ರಗಳನ್ನು ಹೆಚ್ಚಿಸಲು, ಸಮರ್ಪಕಗೊಳಿಸಲು ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಹೇಳಿದರು.

ಡ್ರಗ್ಸ್ ಹಾವಳಿ ತೊಡೆದು ಹಾಕಲು ಕ್ಷಿಪ್ರ ಮತ್ತು ತೀಕ್ಷ್ಣ ಕ್ರಮ ಕೈಗೊಳ್ಳುತ್ತೇವೆ. ವಿದ್ಯಾರ್ಥಿ, ಯುವ ಜನರ ಮೇಲೆ, ಕುಟುಂಬಗಳ ಮೇಲೆ ಕೆಟ್ಟ ಪರಿಣಾಮ ಬೀರುತ್ತಿರುವುದನ್ನು ತಡೆಯಲು ಕ್ರಮ ವಹಿಸಲಾಗುವುದು ಎಂದು ತಿಳಿಸಿದರು.

ಡ್ರಗ್ಸ್ ಸೇವಿಸಿ ಅಪರಾಧ ಕೃತ್ಯಗಳಲ್ಲಿ ತೊಡಗಿಸಿಕೊಳ್ಳುವ ಪ್ರಕರಣಗಳಿಗೆ ಬ್ರೇಕ್ ಹಾಕುತ್ತೇವೆ. ಪೊಲೀಸರಿಗೆ ಪೂರ್ಣ ಸ್ವಾತಂತ್ರ್ಯ ಕೊಡುವ ಜೊತೆಗೆ ಅವರನ್ನೇ ಹೊಣೆ ಮಾಡಿ ಕ್ರಮ ಕೂಡ ತೆಗೆದುಕೊಳ್ಳುತ್ತೇವೆ ಎಂದರು.

ಗೃಹ ಇಲಾಖೆ, ಆರೋಗ್ಯ ಇಲಾಖೆ, ವೈದ್ಯಕೀಯ ಶಿಕ್ಷಣ ಇಲಾಖೆ, ಗ್ರಾಮೀಣಾಭಿವೃದ್ಧಿ, ಸಮಾಜ‌ ಕಲ್ಯಾಣ ಇಲಾಖೆ ಸೇರಿ ಹಲವು ಇಲಾಖೆಗಳ ಸಚಿವರು, ಅಧಿಕಾರಿಗಳ ಜೊತೆ ಉನ್ನತ ಮಟ್ಟದ ಸಭೆ ನಡೆಸಿ ಹಲವು ಕ್ಷಿಪ್ರ ತೀರ್ಮಾನಗಳನ್ನು ಕೈಗೊಂಡಿದ್ದೇವೆ ಎಂದು ಹೇಳಿದರು.

ವಿದ್ಯಾರ್ಥಿ-ಯುವ ಜನರ, ಪೋಷಕರ ಸಹಭಾಗಿತ್ವದಲ್ಲಿ ಮಾಹಿತಿ ಸಂಗ್ರಹಿಸಿ ಡ್ರಗ್ಸ್ ಹಾವಳಿಗೆ ಬ್ರೇಕ್ ಹಾಕುವ ಬಗ್ಗೆ ಗಂಭೀರ ಚರ್ಚೆ ನಡೆಸಿದ್ದೇವೆ. ಈಗಾಗಲೇ ಇರುವ ರಾಜ್ಯ ಮಟ್ಟದ ಸಮಿತಿಯಿಂದ ಮಾಹಿತಿ, ಅಭಿಪ್ರಾಯ ಸಂಗ್ರಹಿಸಿದ್ದೇವೆ ಎಂದು ತಿಳಿಸಿದರು.

ಬೆಂಗಳೂರು EAST ವಿಭಾಗದಲ್ಲಿ ಡ್ರಗ್ಸ್ ಹಾವಳಿ ತೀವ್ರವಾಗಿದೆ ಎನ್ನುವ ಮಾಹಿತಿ ಸಿಕ್ಕಿದೆ. ಇದಕ್ಕೆ ಬಲಿ‌ ಹಾಕಲು ನಿರ್ಣಯ ಮಾಡಿದ್ದೇವೆ. ಒರಿಸ್ಸಾ, ಆಂಧ್ರ, ಉತ್ತರ ಪ್ರದೇಶ ಸೇರಿ ಹಲವು ರಾಜ್ಯಗಳಿಂದ ಮಾದಕ ವಸ್ತು ರಾಜ್ಯಕ್ಕೆ ಪೂರೈಕೆ ಆಗುತ್ತಿದೆ. ಇದನ್ನು ತಡೆಯಲು ಹೊಸ ಕಾರ್ಯತಂತ್ರ ರೂಪಿಸುತ್ತಿದ್ದೇವೆ ಎಂದರು.

ಜಾಗೃತಿ ಮತ್ತು ಕಾರ್ಯಾಚರಣೆಯನ್ನು ಇನ್ನಷ್ಟು ತೀವ್ರವಾಗಿ ನಡೆಸಲು ಸ್ಪಷ್ಟ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.

ಸಮಾಜವನ್ನು ಇನ್ನಿಲ್ಲದಂತೆ ಕಾಡುತ್ತಿರುವ ಮಾದಕ ದ್ರವ್ಯ ಪಿಡುಗಿಗೆ ಕೊನೆಹಾಡುವ ಸಂಕಲ್ಪದೊಂದಿಗೆ ಗೃಹ ಸಚಿವರಾದ ಡಾ.ಜಿ. ಪರಮೇಶ್ವರ ಅವರ ಅಧ್ಯಕ್ಷತೆಯಲ್ಲಿ ಹಲವು ಸಚಿವರನ್ನು ಒಳಗೊಂಡ ಕಾರ್ಯಪಡೆಯನ್ನು ರಚಿಸಿ, ಆದೇಶ ಹೊರಡಿಸಲಾಗಿದೆ ಎಂದರು.

ಡ್ರಗ್ಸ್ ಹಾವಳಿ ನಿರ್ಮೂಲನೆಯ ಹೊಣೆ ಕೇವಲ ನಮ್ಮೊಬ್ಬರದ್ದಲ್ಲ, ಇದು ಸಮುದಾಯಿಕ ಜವಾಬ್ದಾರಿ. ಡ್ರಗ್ಸ್ ಮಾರಾಟ ಮತ್ತು ಸೇವನೆ ಕಂಡುಬಂದಲ್ಲಿ ಸಮೀಪದ ಪೊಲೀಸ್ ಠಾಣೆಗೆ ಮಾಹಿತಿ ನೀಡಿ, ನಮ್ಮ ಪ್ರಯತ್ನಕ್ಕೆ ಬೆಂಬಲವಾಗಿ ನಿಲ್ಲಿ. ಮಾಹಿತಿ ನೀಡಿದವರ ಹೆಸರನ್ನು ಗೌಪ್ಯವಾಗಿಡಲಾಗುವುದು ಎಂದರು.

ನಾವು – ನೀವು ಜೊತೆಗೂಡಿ ಡ್ರಗ್ಸ್ ಮುಕ್ತ – ಸ್ವಸ್ಥ ಕರ್ನಾಟಕ ನಿರ್ಮಿಸೋಣ ಎಂದು ಹೇಳಿದ್ದಾರೆ.

Ramesh Babu

Journalist

Recent Posts

ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ: ತೂಬಗೆರೆಯಲ್ಲೂ ಕಳೆಗಟ್ಟಿದ ಗೌರಿ ಗಣೇಶ ಹಬ್ಬದ ಆಚರಣೆ: 20 ಅಡಿ ಗಣೇಶ ಮೂರ್ತಿ ಪ್ರತಿಷ್ಠಾಪನೆ

ದೊಡ್ಡಬಳ್ಳಾಪುರ: ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆಮಾಡಿದ್ದು, ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯಲ್ಲೂ ಹಬ್ಬದ ವಾತಾವರಣ ಕಳೆಗಟ್ಟಿದೆ. ವಿವಿಧೆಡೆ…

2 hours ago

ಅಕ್ಷರ ಜ್ಞಾನದ ಬೆಳಕಿನಲ್ಲಿ ಗ್ರಾಮಾಂತರ; ಸಂಪೂರ್ಣ ಸಾಕ್ಷರತೆಯತ್ತ ದಾಪುಗಾಲು!

ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…

8 hours ago

185 ವರ್ಷಗಳ ಹಳೆಯ ಪೊಲೀಸ್ ಬಿಲ್ಲೆ ಪತ್ತೆ: ಇತಿಹಾಸ ಸಂರಕ್ಷಣೆಯಲ್ಲಿ ಇನ್ಸ್‌ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ವಿಶಿಷ್ಟ ಹೆಜ್ಜೆ

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…

22 hours ago

ಸಿದ್ದರಾಮಯ್ಯ ಸಹಕಾರದಿಂದ 2028ಕ್ಕೆ ಡಿಕೆಶಿ ಮತ್ತೆ ಸಿಎಂ ಆಗ್ತಾರೆ – ಗೌರಿ-ಗಣೇಶ ಹಬ್ಬದಂದು ಮಳೆ ಬರಲಿ ಎಂದು ಪ್ರಾರ್ಥನೆ ಮಾಡೋಣ – ಸಚಿವ ಚಲುವರಾಯಸ್ವಾಮಿ

ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…

23 hours ago

ಮನೆ ಮಾಲೀಕರ ಮುಂದೆಯೇ ಮನೆ ದೋಚಿ ಪರಾರಿಯಾಗಿದ್ದ ಕಳ್ಳ ಲಾಕ್‌!

ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…

24 hours ago

ಕೋಳಿಫಾರ್ಮ್‌ಗೆ ಚಿರತೆ ದಾಳಿ ಶಂಕೆ: 950ಕ್ಕೂ ಅಧಿಕ ಕೋಳಿಮರಿಗಳು ಬಲಿ!

  ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್‌ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…

24 hours ago