ರಾಜ್ಯದಲ್ಲಿ ಪ್ರತಿದಿನ 1 ಕೋಟಿ ಲೀಟರ್ ಹಾಲು ಉತ್ಪಾದನೆ- ಸಿಎಂ ಸಿದ್ದರಾಮಯ್ಯ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ 72ನೇ ಅಖಿಲ ಭಾರತ ‌ಸಹಕಾರ ಸಪ್ತಾಹದ ಪೂರ್ವಭಾವಿ ಸಭೆ ನಡೆಯಿತು.

ಸಭೆಯಲ್ಲಿ ಮುಖ್ಯಮಂತ್ರಿಗಳ ಮಾತುಗಳು

*ಕರ್ನಾಟಕ ಸಹಕಾರಿ ರತ್ನ* ಪ್ರಶಸ್ತಿಯನ್ನು ರಾಜ್ಯೋತ್ಸವ ಪ್ರಶಸ್ತಿ ಮಾದರಿಯಲ್ಲಿ ನೀಡಿದರೆ ಒಳ್ಳೆಯದು ಎನ್ನುವುದು ನನ್ನ ಅಭಿಪ್ರಾಯ. ಮೊದಲೆಲ್ಲಾ ನೂರಾರು ಪ್ರಶಸ್ತಿ ಕೊಡಲಾಗುತ್ತಿತ್ತು. ಈಗ ಎಷ್ಟನೇ ವರ್ಷದ ಆಚರಣೆಯೋ ಅಷ್ಟೇ ಪ್ರಶಸ್ತಿಗಳನ್ನು ನೀಡಲಾಗುತ್ತಿದೆ ಅಥವಾ ಜಿಲ್ಲೆಗೆ ಒಂದರಂತೆ ಪ್ರಶಸ್ತಿ ನೀಡಿದರೆ ಸೂಕ್ತ. ಬೆಂಗಳೂರಿಗೆ ಅಗತ್ಯವಿದ್ದರೆ ಎರಡರಿಂದ ಐದು ಪ್ರಶಸ್ತಿಗಳನ್ನು ನೀಡಬಹುದು.

ಸಹಕಾರಿ ಕ್ಷೇತ್ರವನ್ನು ಮೊದಲಿನಿಂದಲೂ ಬೆಂಬಲಿಸಿಕೊಂಡು ಬಂದಿದ್ದೇನೆ. ಸಹಕಾರಿ ಕ್ಷೇತ್ರದಲ್ಲಿ ಒಕ್ಕೂಟಗಳನ್ನು ಇನ್ನಷ್ಟು ಬಲಗೊಳಿಸಲು ನಮ್ಮ ಸರ್ಕಾರ ಬದ್ಧವಾಗಿದೆ.

ನಾನು ಶಾಸಕನಾಗಿದ್ದ ಸಂದರ್ಭದಲ್ಲಿ ಹಾಲು ಉತ್ಪಾದಕರ ಸಂಘಗಳು ರೈತರ ಅಧೀನದಲ್ಲಿಯೇ ನಡೆಯಬೇಕು ಎಂದು ಒತ್ತಾಯಿಸಿದ್ದೆ. ಈಗಲೂ ಅದರಂತೆ ನಡೆಯುತ್ತಿದೆ.
ಮೊದಲಿನಿಂದಲೂ ಈ ಕ್ಷೇತ್ರವನ್ನು ಬೆಂಬಲಿಸಿಕೊಂಡೇ ಬಂದಿದ್ದೇನೆ.

ರಾಜ್ಯದಲ್ಲಿ ಪ್ರತಿದಿನ 1 ಕೋಟಿ ಲೀಟರ್ ಹಾಲು ಉತ್ಪಾದನೆ ಆಗುತ್ತಿರುವುದು ಅತ್ಯಂತ ಹೆಮ್ಮೆಯ ವಿಷಯ. ಸಹಕಾರ ತತ್ವದಡಿ ಬರುವ ಎಲ್ಲಾ ಸಂಘ ಸಂಸ್ಥೆಗಳನ್ನು ಸಬಲೀಕರಣಗೊಳಿಸಲಾಗುವುದು.

ರೈತರ ಸಾಲಮನ್ನಾ ವಿಷಯಕ್ಕೆ ಸಂಬಂಧಿಸಿದಂತೆ
ರಾಜ್ಯದ ಬಹುತೇಕ ರೈತರ ಸಾಲಮನ್ನಾ ಮಾಡಲಾಗಿದೆ.
ರಾಜ್ಯದ ನೇಕಾರ, ಬಡಗಿ, ಮೀನುಗಾರರ ಸೊಸೈಟಿಗಳಂತಹ ವೃತ್ತಿಮೂಲ ಸಂಘಗಳನ್ನು ಹಂತ ಹಂತವಾಗಿ ಸಬಲಗೊಳಿಸಲಾಗುವುದು.

ಸಹಕಾರ ಸಪ್ತಾಹದ ಘೋಷವಾಕ್ಯಗಳನ್ನು ಕೇಂದ್ರ ಸರ್ಕಾರದ ಬದಲಿಗೆ ಆಯಾ ರಾಜ್ಯಗಳೇ ಘೋಷಿಸಬೇಕು ಎನ್ನುವುದು ನನ್ನ ಅಭಿಪ್ರಾಯ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

Ramesh Babu

Journalist

Recent Posts

ಜನರನ್ನು ತಾಲೂಕು ಕಚೇರಿಗೆ ಅಲೆದಾಟ ತಪ್ಪಿಸಿ ಸ್ಥಳದಲ್ಲೇ ಸಮಸ್ಯೆ ಪರಿಹರಿಸಿ- ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…

3 hours ago

ಭಾರತಕ್ಕೆ ಕ್ಸಿ ಜಿನ್‌ಪಿಂಗ್ ಭೇಟಿ: ಮೋದಿ–ಕ್ಸಿ ದ್ವಿಪಕ್ಷೀಯ ಮಾತುಕತೆ ಇಂದು

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…

7 hours ago

ಮಧುರೆ ದೇವಾಲಯದ ಬಳಿ ಮೇಲ್ಸೇತುವೆ ಅವ್ಯವಸ್ಥೆ: ಮೇಲಕ್ಕೆ ಚಾಚಿರುವ ಕಂಬಿಗಳಿಂದ ವಾಹನ ಸವಾರರಿಗೆ ತೊಂದರೆ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…

14 hours ago

ನಾಯಿ ಕಡಿತದ ಆತಂಕಕ್ಕೆ ಲಸಿಕೆಯ ಕವಚ: ರೇಬೀಸ್ ನಿಯಂತ್ರಣಕ್ಕೆ 32 ಸಾವಿರ ಲಸಿಕೆ

ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…

15 hours ago

2028ರ ಚುನಾವಣೆಗೆ ಜಾಲತಾಣವೇ ಅಸ್ತ್ರ- ಸಿಎಂಆರ್ ಶ್ರೀನಾಥ್

ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…

1 day ago

ಗಣೇಶ ವಿಸರ್ಜನೆ ವೇಳೆ ಮುಂಜಾಗ್ರತೆ ವಹಿಸಲು ರೈತ ಸಂಘ ಒತ್ತಾಯ: ಕೃಷಿ ಹೊಂಡ, ಕೆರೆ-ಕುಂಟೆಗಳಲ್ಲಿ ವಿಸರ್ಜನೆಗೆ ಕಡಿವಾಣ ಹಾಕಿ: ಜಿಲ್ಲಾಧಿಕಾರಿಗೆ ಮನವಿ

ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…

1 day ago