ರಾಜ್ಯದಲ್ಲಿ ಪ್ರತಿದಿನ 1 ಕೋಟಿ ಲೀಟರ್ ಹಾಲು ಉತ್ಪಾದನೆ- ಸಿಎಂ ಸಿದ್ದರಾಮಯ್ಯ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ 72ನೇ ಅಖಿಲ ಭಾರತ ‌ಸಹಕಾರ ಸಪ್ತಾಹದ ಪೂರ್ವಭಾವಿ ಸಭೆ ನಡೆಯಿತು.

ಸಭೆಯಲ್ಲಿ ಮುಖ್ಯಮಂತ್ರಿಗಳ ಮಾತುಗಳು

*ಕರ್ನಾಟಕ ಸಹಕಾರಿ ರತ್ನ* ಪ್ರಶಸ್ತಿಯನ್ನು ರಾಜ್ಯೋತ್ಸವ ಪ್ರಶಸ್ತಿ ಮಾದರಿಯಲ್ಲಿ ನೀಡಿದರೆ ಒಳ್ಳೆಯದು ಎನ್ನುವುದು ನನ್ನ ಅಭಿಪ್ರಾಯ. ಮೊದಲೆಲ್ಲಾ ನೂರಾರು ಪ್ರಶಸ್ತಿ ಕೊಡಲಾಗುತ್ತಿತ್ತು. ಈಗ ಎಷ್ಟನೇ ವರ್ಷದ ಆಚರಣೆಯೋ ಅಷ್ಟೇ ಪ್ರಶಸ್ತಿಗಳನ್ನು ನೀಡಲಾಗುತ್ತಿದೆ ಅಥವಾ ಜಿಲ್ಲೆಗೆ ಒಂದರಂತೆ ಪ್ರಶಸ್ತಿ ನೀಡಿದರೆ ಸೂಕ್ತ. ಬೆಂಗಳೂರಿಗೆ ಅಗತ್ಯವಿದ್ದರೆ ಎರಡರಿಂದ ಐದು ಪ್ರಶಸ್ತಿಗಳನ್ನು ನೀಡಬಹುದು.

ಸಹಕಾರಿ ಕ್ಷೇತ್ರವನ್ನು ಮೊದಲಿನಿಂದಲೂ ಬೆಂಬಲಿಸಿಕೊಂಡು ಬಂದಿದ್ದೇನೆ. ಸಹಕಾರಿ ಕ್ಷೇತ್ರದಲ್ಲಿ ಒಕ್ಕೂಟಗಳನ್ನು ಇನ್ನಷ್ಟು ಬಲಗೊಳಿಸಲು ನಮ್ಮ ಸರ್ಕಾರ ಬದ್ಧವಾಗಿದೆ.

ನಾನು ಶಾಸಕನಾಗಿದ್ದ ಸಂದರ್ಭದಲ್ಲಿ ಹಾಲು ಉತ್ಪಾದಕರ ಸಂಘಗಳು ರೈತರ ಅಧೀನದಲ್ಲಿಯೇ ನಡೆಯಬೇಕು ಎಂದು ಒತ್ತಾಯಿಸಿದ್ದೆ. ಈಗಲೂ ಅದರಂತೆ ನಡೆಯುತ್ತಿದೆ.
ಮೊದಲಿನಿಂದಲೂ ಈ ಕ್ಷೇತ್ರವನ್ನು ಬೆಂಬಲಿಸಿಕೊಂಡೇ ಬಂದಿದ್ದೇನೆ.

ರಾಜ್ಯದಲ್ಲಿ ಪ್ರತಿದಿನ 1 ಕೋಟಿ ಲೀಟರ್ ಹಾಲು ಉತ್ಪಾದನೆ ಆಗುತ್ತಿರುವುದು ಅತ್ಯಂತ ಹೆಮ್ಮೆಯ ವಿಷಯ. ಸಹಕಾರ ತತ್ವದಡಿ ಬರುವ ಎಲ್ಲಾ ಸಂಘ ಸಂಸ್ಥೆಗಳನ್ನು ಸಬಲೀಕರಣಗೊಳಿಸಲಾಗುವುದು.

ರೈತರ ಸಾಲಮನ್ನಾ ವಿಷಯಕ್ಕೆ ಸಂಬಂಧಿಸಿದಂತೆ
ರಾಜ್ಯದ ಬಹುತೇಕ ರೈತರ ಸಾಲಮನ್ನಾ ಮಾಡಲಾಗಿದೆ.
ರಾಜ್ಯದ ನೇಕಾರ, ಬಡಗಿ, ಮೀನುಗಾರರ ಸೊಸೈಟಿಗಳಂತಹ ವೃತ್ತಿಮೂಲ ಸಂಘಗಳನ್ನು ಹಂತ ಹಂತವಾಗಿ ಸಬಲಗೊಳಿಸಲಾಗುವುದು.

ಸಹಕಾರ ಸಪ್ತಾಹದ ಘೋಷವಾಕ್ಯಗಳನ್ನು ಕೇಂದ್ರ ಸರ್ಕಾರದ ಬದಲಿಗೆ ಆಯಾ ರಾಜ್ಯಗಳೇ ಘೋಷಿಸಬೇಕು ಎನ್ನುವುದು ನನ್ನ ಅಭಿಪ್ರಾಯ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

Ramesh Babu

Journalist

Recent Posts

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

13 hours ago

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

21 hours ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

21 hours ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

2 days ago

ಹೆದ್ದಾರಿ ಸ್ಕೈವಾಕ್‌ಗಳ ಕನಸು ಇನ್ನೂ ಅಪೂರ್ಣ…: ದಾಬಸ್‌ಪೇಟೆ–ಹೊಸಕೋಟೆ ಹೆದ್ದಾರಿಯಲ್ಲಿ ಆಮೆಗತಿಯ ಕಾಮಗಾರಿ: ಜೀವ ಕೈಯಲ್ಲಿ ಹಿಡಿದು ರಸ್ತೆ ದಾಟುವ ಜನರು

ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್‌ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…

2 days ago

ಬೆಂಗಳೂರು ಗ್ರಾಮಾಂತರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಬಿರುಸು: 15,721 ಮೃತರ ಹೆಸರು ಪತ್ತೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…

2 days ago