Categories: Home

ರಾಜ್ಯದಲ್ಲಿ ಪ್ರತಿದಿನ 92 ರಿಂದ 93 ಲಕ್ಷ ಲೀ. ಹಾಲು ಉತ್ಪಾದನೆ: ರೈತರಿಂದ ಲೀ. ಗೆ 32 ರೂ.ಗಳಿಗೆ ಹಾಲು ಖರೀದಿ-ಹಾಲು ಉತ್ಪಾದಕರಿಗೆ ಪ್ರತಿ ಲೀಟರಿಗೆ 5 ರೂ.ಗಳ ಪ್ರೋತ್ಸಾಹಧನ- ಸಿಎಂ ಸಿದ್ದರಾಮಯ್ಯ

ದೇಶದ ಹಾಲು ಉತ್ಪಾದನೆಯಲ್ಲಿ ಗುಜರಾತ್ ಮೊದಲ ಸ್ಥಾನದಲ್ಲಿದ್ದರೆ, ಕರ್ನಾಟಕ ಎರಡನೇ ಸ್ಥಾನದಲ್ಲಿದೆ. ದೆಹಲಿ ನಗರದಲ್ಲಿ ಕೆ.ಎಂ.ಎಫ್ ಮತ್ತು ಮಂಡ್ಯ ಹಾಲು ಒಕ್ಕೂಟಗಳು ಸೇರಿಕೊಂಡು ವಿವಿಧ ಶ್ರೇಣಿಯ ಹಾಲನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಿವೆ. ದೆಹಲಿಯ ನಿವಾಸಿಗಳಿಂದ ನಂದಿನಿ ಉತ್ಪನ್ನಗಳಿಗೆ ಅತ್ಯುತ್ತಮ ಸ್ಪಂದನೆ ದೊರೆಯಲಿದೆ ಎಂಬ ವಿಶ್ವಾಸ ನನಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಇಡೀ ದೇಶದಲ್ಲಿ ರೈತರ ಉಪಕಸುಬು ಪಶುಸಂಗೋಪನೆ. ಗುಜರಾತ್ ನಲ್ಲಿ ಕುರಿಯನ್ ಅವರು ಹಾಲು ಉತ್ಪಾದಕರ ಸಂಘವನ್ನು ಪ್ರಾರಂಭ ಮಾಡಿದರು. ಹಿಂದೆ ನಾನೂ ಕೂಡ ಪಶುಸಂಗೋಪನಾ ಸಚಿವನಾಗಿದ್ದೆ, ಒಂದು ವರ್ಷ ಕಾಲ ಕರ್ನಾಟಕ ಹಾಲು ಮಹಾಮಂಡಲದ ಅಧ್ಯಕ್ಷನೂ ಆಗಿದ್ದೆ. ಪಶುಸಂಗೋಪನಾ ಸಚಿವನಾಗಿದ್ದಾಗಲೇ ಹಾಲು ಉತ್ಪಾದಕರಿಗೆ ಶೋಷಣೆಯಾಗುತ್ತಿದ್ದುದ್ದನ್ನು ಮನಗಂಡು ಶಾಶ್ವತ ಮಾರುಕಟ್ಟೆ ಕಲ್ಪಿಸಲು ಹಾಲು ಉತ್ಪಾದಕರ ಸಂಘಗಳನ್ನು ರಚಿಸಿದ್ದೆ ತಿಳಿಸಿದರು.

ರಾಜ್ಯದಲ್ಲಿ ಪ್ರತಿದಿನ 92 ರಿಂದ 93 ಲಕ್ಷ ಲೀ. ಹಾಲು ಉತ್ಪಾದನೆಯಾಗುತ್ತಿದೆ. ರೈತರಿಂದ ಲೀ. ಗೆ 32 ರೂ.ಗಳಿಗೆ ಹಾಲು ಖರೀದಿಸಲಾಗುತ್ತಿದ್ದು, ರಾಜ್ಯ ಸರ್ಕಾರ ಕ್ಷೀರಧಾರೆ ಯೋಜನೆಯಡಿ ಹಾಲು ಉತ್ಪಾದಕರಿಗೆ ಪ್ರತಿ ಲೀಟರಿಗೆ 5 ರೂ.ಗಳ ಪ್ರೋತ್ಸಾಹಧನವನ್ನು ನೀಡುತ್ತಿದೆ. ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಕಾಲದಲ್ಲಿ 2 ರೂ. ಇದ್ದ ಪ್ರೋತ್ಸಾಹಧನ, ನಂತರ 3 ರೂ. ಆಯಿತು. ನಾನು ಮುಖ್ಯಮಂತ್ರಿಯಾದ ನಂತರ ಇದನ್ನು 5 ರೂ.ಗಳಿಗೆ ಹೆಚ್ಚಿಸಿದ್ದೆ. ಪ್ರೋತ್ಸಾಹಧನಕ್ಕಾಗಿ ಪ್ರತಿ ದಿನ 5 ಕೋಟಿ ರೂ.ಗಳನ್ನು ಸರ್ಕಾರ ವೆಚ್ಚ ಮಾಡುತ್ತಿದೆ ಎಂದರು.

ರಾಜ್ಯದಲ್ಲಿ ಒಟ್ಟು 16 ಮಿಲ್ಕ್ ಯೂನಿಯನ್‌ಗಳಿವೆ. ರಾಜ್ಯದಲ್ಲಿ ಅಂದಾಜು 1 ಕೋಟಿ ಲೀಟರ್ ಹಾಲು ಉತ್ಪಾದನೆಯಾಗುತ್ತಿದ್ದು, ಆಂಧ್ರಪ್ರದೇಶ, ಮಹಾರಾಷ್ಟ್ರಕ್ಕೆ ನಿತ್ಯ ತಲಾ 2.5 ಲಕ್ಷ ಲೀ.ಟರ್ ಹಾಲು ಪೂರೈಕೆಯಾಗುತ್ತಿದೆ. ಇದೀಗ ಆರಂಭಿಕ ಹಂತದಲ್ಲಿ 2.5 ಲಕ್ಷ ಲೀಟರ್ ಹಾಲು ನವದೆಹಲಿಗೆ ಪೂರೈಸುವ ಯೋಜನೆ ರೂಪಿಸಲಾಗಿದೆ. ಇನ್ನು ಆರು ತಿಂಗಳೊಳಗೆ 5 ಲಕ್ಷ ಲೀಟರ್ ಗೆ ಏರಿಸುವ ಗುರಿ ನಮ್ಮದಾಗಿದೆ ಎಂದು ಹೇಳಿದ್ದಾರೆ.

Ramesh Babu

Journalist

Recent Posts

ಏ.12ರಂದು ದೊಡ್ಡಬಳ್ಳಾಪುರ ನಗರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ ನಗರದಲ್ಲಿ ಏ.12 ರಂದು 220/66/11ಕೆವಿ ಕೆಐಎಡಿಬಿ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F02-Birla Super ಫೀಡರ್‌ನಲ್ಲಿ ವಿದ್ಯುತ್ ಕಾಮಗಾರಿಗಳು…

5 hours ago

ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರ ಸಾವು

ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರವಾಗಿ ಸಾವನ್ನಪ್ಪಿರುವ ಘಟನೆ ಹೆಬ್ಬಾಳ ಪೊಲೀಸ್ ಠಾಣಾ ವ್ಯಾಪ್ತಿಯ ಮನೋರಾಯನಪಾಳ್ಯದಲ್ಲಿ ನಡೆದಿದೆ.. 17 ವರ್ಷದ…

10 hours ago

ಲೋಕಾಯುಕ್ತ ಬಲೆಗೆ ಬಿದ್ದ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ

ರಾಯಚೂರು ಸಿರವಾರ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಸುರೇಶ್ ಶೆಟ್ಟಿ ಲೋಕಾಯುಕ್ತರ ಬಲೆಗೆ ಬಿದ್ದ ಮುಖ್ಯಾಧಿಕಾರಿ. ರಾಘವೇಂದ್ರ…

10 hours ago

ಹುಚ್ಚನೊಬ್ಬನ ಕನಸು….

ದೇಶದ ಎಲ್ಲಾ ದಲಿತ ಕೇರಿಗಳನ್ನು ನಾಶ ಮಾಡಬೇಕು. ಅಲ್ಲಿನ ಎಲ್ಲರಿಗೂ ಊರ ಒಳಗಿನ ಸ್ಥಳದಲ್ಲಿ ವಾಸಕ್ಕೆ ಅವಕಾಶ ಕಲ್ಪಿಸಬೇಕು. ಬ್ರಾಹ್ಮಣರ…

15 hours ago

PUC Result: ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ….ಈ ಕಥೆ ಕೇಳಿದರೆ ಎಂಥವರ ಕಣ್ಣಲ್ಲೂ ನೀರು ಬರುವುದು ಗ್ಯಾರಂಟಿ

600ಕ್ಕೆ 600 ಅಂಕ ತೆಗೆದು ರಾಜ್ಯಕ್ಕೆ ಟಾಪರ್ ಆದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ. ಮೂರು…

1 day ago

ತೂಬಗೆರೆ ಸರ್ಕಾರಿ ಪಿಯು ಕಾಲೇಜಿಗೆ ಮತ್ತೊಮ್ಮೆ ಮೆರುಗು: ಶೇ.95.45 ಫಲಿತಾಂಶ

ದೊಡ್ಡಬಳ್ಳಾಪುರ (ತೂಬಗೆರೆ): ಗ್ರಾಮಾಂತರ ಭಾಗದಲ್ಲಿದ್ದರೂ ಶೈಕ್ಷಣಿಕ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜು…

1 day ago