ದೇಶದ ಹಾಲು ಉತ್ಪಾದನೆಯಲ್ಲಿ ಗುಜರಾತ್ ಮೊದಲ ಸ್ಥಾನದಲ್ಲಿದ್ದರೆ, ಕರ್ನಾಟಕ ಎರಡನೇ ಸ್ಥಾನದಲ್ಲಿದೆ. ದೆಹಲಿ ನಗರದಲ್ಲಿ ಕೆ.ಎಂ.ಎಫ್ ಮತ್ತು ಮಂಡ್ಯ ಹಾಲು ಒಕ್ಕೂಟಗಳು ಸೇರಿಕೊಂಡು ವಿವಿಧ ಶ್ರೇಣಿಯ ಹಾಲನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಿವೆ. ದೆಹಲಿಯ ನಿವಾಸಿಗಳಿಂದ ನಂದಿನಿ ಉತ್ಪನ್ನಗಳಿಗೆ ಅತ್ಯುತ್ತಮ ಸ್ಪಂದನೆ ದೊರೆಯಲಿದೆ ಎಂಬ ವಿಶ್ವಾಸ ನನಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಇಡೀ ದೇಶದಲ್ಲಿ ರೈತರ ಉಪಕಸುಬು ಪಶುಸಂಗೋಪನೆ. ಗುಜರಾತ್ ನಲ್ಲಿ ಕುರಿಯನ್ ಅವರು ಹಾಲು ಉತ್ಪಾದಕರ ಸಂಘವನ್ನು ಪ್ರಾರಂಭ ಮಾಡಿದರು. ಹಿಂದೆ ನಾನೂ ಕೂಡ ಪಶುಸಂಗೋಪನಾ ಸಚಿವನಾಗಿದ್ದೆ, ಒಂದು ವರ್ಷ ಕಾಲ ಕರ್ನಾಟಕ ಹಾಲು ಮಹಾಮಂಡಲದ ಅಧ್ಯಕ್ಷನೂ ಆಗಿದ್ದೆ. ಪಶುಸಂಗೋಪನಾ ಸಚಿವನಾಗಿದ್ದಾಗಲೇ ಹಾಲು ಉತ್ಪಾದಕರಿಗೆ ಶೋಷಣೆಯಾಗುತ್ತಿದ್ದುದ್ದನ್ನು ಮನಗಂಡು ಶಾಶ್ವತ ಮಾರುಕಟ್ಟೆ ಕಲ್ಪಿಸಲು ಹಾಲು ಉತ್ಪಾದಕರ ಸಂಘಗಳನ್ನು ರಚಿಸಿದ್ದೆ ತಿಳಿಸಿದರು.
ರಾಜ್ಯದಲ್ಲಿ ಪ್ರತಿದಿನ 92 ರಿಂದ 93 ಲಕ್ಷ ಲೀ. ಹಾಲು ಉತ್ಪಾದನೆಯಾಗುತ್ತಿದೆ. ರೈತರಿಂದ ಲೀ. ಗೆ 32 ರೂ.ಗಳಿಗೆ ಹಾಲು ಖರೀದಿಸಲಾಗುತ್ತಿದ್ದು, ರಾಜ್ಯ ಸರ್ಕಾರ ಕ್ಷೀರಧಾರೆ ಯೋಜನೆಯಡಿ ಹಾಲು ಉತ್ಪಾದಕರಿಗೆ ಪ್ರತಿ ಲೀಟರಿಗೆ 5 ರೂ.ಗಳ ಪ್ರೋತ್ಸಾಹಧನವನ್ನು ನೀಡುತ್ತಿದೆ. ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಕಾಲದಲ್ಲಿ 2 ರೂ. ಇದ್ದ ಪ್ರೋತ್ಸಾಹಧನ, ನಂತರ 3 ರೂ. ಆಯಿತು. ನಾನು ಮುಖ್ಯಮಂತ್ರಿಯಾದ ನಂತರ ಇದನ್ನು 5 ರೂ.ಗಳಿಗೆ ಹೆಚ್ಚಿಸಿದ್ದೆ. ಪ್ರೋತ್ಸಾಹಧನಕ್ಕಾಗಿ ಪ್ರತಿ ದಿನ 5 ಕೋಟಿ ರೂ.ಗಳನ್ನು ಸರ್ಕಾರ ವೆಚ್ಚ ಮಾಡುತ್ತಿದೆ ಎಂದರು.
ರಾಜ್ಯದಲ್ಲಿ ಒಟ್ಟು 16 ಮಿಲ್ಕ್ ಯೂನಿಯನ್ಗಳಿವೆ. ರಾಜ್ಯದಲ್ಲಿ ಅಂದಾಜು 1 ಕೋಟಿ ಲೀಟರ್ ಹಾಲು ಉತ್ಪಾದನೆಯಾಗುತ್ತಿದ್ದು, ಆಂಧ್ರಪ್ರದೇಶ, ಮಹಾರಾಷ್ಟ್ರಕ್ಕೆ ನಿತ್ಯ ತಲಾ 2.5 ಲಕ್ಷ ಲೀ.ಟರ್ ಹಾಲು ಪೂರೈಕೆಯಾಗುತ್ತಿದೆ. ಇದೀಗ ಆರಂಭಿಕ ಹಂತದಲ್ಲಿ 2.5 ಲಕ್ಷ ಲೀಟರ್ ಹಾಲು ನವದೆಹಲಿಗೆ ಪೂರೈಸುವ ಯೋಜನೆ ರೂಪಿಸಲಾಗಿದೆ. ಇನ್ನು ಆರು ತಿಂಗಳೊಳಗೆ 5 ಲಕ್ಷ ಲೀಟರ್ ಗೆ ಏರಿಸುವ ಗುರಿ ನಮ್ಮದಾಗಿದೆ ಎಂದು ಹೇಳಿದ್ದಾರೆ.
ದೊಡ್ಡಬಳ್ಳಾಪುರ ನಗರದ ಕೋರ್ಟ್ ಎದುರಿನ ಕಾರ್ಮಲ್ ಜ್ಯೋತಿ ರಸ್ತೆಯಲ್ಲಿ ಕಳೆದ ಒಂದು ತಿಂಗಳ ಹಿಂದೆಯೇ ಒಳಚರಂಡಿಯ ಹೊಸ ಮ್ಯಾನ್ ಹೋಲ್…
ಜ್ಞಾನದ ಬೆಳಕನ್ನು ಜಗತ್ತಿಗೇ ಸಾರಿದಂತಹ ಮಹಾನ್ ಪುರುಷ ಭಗವಾನ್ ಬುದ್ಧರ ತತ್ವಾದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡು ಒಳ್ಳೆಯ ಸಮಾಜ ನಿರ್ಮಿಸಲು…
ಕಾಲೇಜು ಶಿಕ್ಷಣ ಇಲಾಖೆ, ಡಾ|| ಮನಮೋಹನ್ ಸಿಂಗ್ ಬೆಂಗಳೂರು ನಗರ ವಿಶ್ವವಿದ್ಯಾಲಯ, ಮಲ್ಲೇಶ್ವರಂನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ…
ಗೋಡೆ ಕೊರೆದ ಕಳ್ಳರು ಕೋಟ್ಯಂತರ ರೂ. ಮೌಲ್ಯದ ಚಿನ್ನಾಭರಣ ದೋಚಿ ಎಸ್ಕೇಪ್ ಆಗಿದ್ದಾರೆ. ಗೋಡೆ ಕೊರೆದು 1.20 ಕೋಟಿ ಬೆಲೆ…
ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು ಏಳು ಮಂದಿ ಸಾವು ಪ್ರಕರಣ: ಇಂಜಿನಿಯರ್ ರನ್ನು ಅಮಾನತುಗೊಳಿಸಿ, ಆಸ್ಪತ್ರೆ ಮುಖ್ಯಸ್ಥರಿಗೆ ನೋಟಿಸ್…
ದೊಡ್ಡಬಳ್ಳಾಪುರ ನಗರದ ಚಿಕ್ಕಪೇಟೆಯ ಇತಿಹಾಸ ಪ್ರಸಿದ್ಧ ಶ್ರೀ ಆದಿಶಕ್ತ್ಯಾತ್ಮಕ ದ್ರೌಪದಾದೇವಿ ಕರಗ ಮಹಹೋತ್ಸವ ಅಂಗವಾಗಿ ಹಸಿ ಕರಗ ಉತ್ಸವ ಸಂಭ್ರಮದಿಂದ…